AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepak Chahar: ಮಲೇಷ್ಯಾ ಏರ್​ಲೈನ್ಸ್​ಗೆ ಮನಬಂದಂತೆ ಬೈದ ದೀಪಕ್ ಚಹರ್: ಮೊದಲ ಏಕದಿನದಿಂದ ಔಟ್?

India vs Bangladesh ODI: ಭಾರತ ಹಾಗೂ ಬಾಂಗ್ಲಾದೇಶ ನಡುವಣ ಏಕದಿನ ಸರಣಿಗೆ ಕ್ಷಣಗಣನೆ ಶುರುವಾಗಿದೆ. ಆದರೆ, ದೀಪಕ್ ಚಹರ್ ಲಗೇಜ್ ಇನ್ನೂ ತಲುಪಿಲ್ಲ. ಈ ಬಗ್ಗೆ ಕೋಪಗೊಂಡ ಚಹರ್ ಟ್ವಿಟರ್​ನಲ್ಲಿ ಮಲೇಷ್ಯಾ ಏರ್​​ಲೈನ್ಸ್​ನ ಕಳಪೆ ಸೇವೆಯ ಬಗ್ಗೆ ಟ್ವೀಟ್ ಮಾಡಿದ್ದಾರೆ.

TV9 Web
| Updated By: Vinay Bhat

Updated on:Dec 03, 2022 | 12:36 PM

ಭಾರತ ಹಾಗೂ ಬಾಂಗ್ಲಾದೇಶ ನಡುವಣ ಏಕದಿನ ಸರಣಿಗೆ ಕ್ಷಣಗಣನೆ ಶುರುವಾಗಿದೆ. ಡಿಸೆಂಬರ್ 4 ಭಾನುವಾರದಂದು ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮೊದಲ ಏಕದಿನ ಪಂದ್ಯ ಆಯೋಜಿಸಲಾಗಿದೆ. ಆದರೆ, ಇದಕ್ಕೂ ಮುನ್ನ ಟೀಮ್ ಇಂಡಿಯಾಕ್ಕೆ ಒಂದರ ಹಿಂದೆ ಒಂದರಂತೆ ಆಘಾತ ಉಂಟಾಗುತ್ತಿದೆ.

ಭಾರತ ಹಾಗೂ ಬಾಂಗ್ಲಾದೇಶ ನಡುವಣ ಏಕದಿನ ಸರಣಿಗೆ ಕ್ಷಣಗಣನೆ ಶುರುವಾಗಿದೆ. ಡಿಸೆಂಬರ್ 4 ಭಾನುವಾರದಂದು ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮೊದಲ ಏಕದಿನ ಪಂದ್ಯ ಆಯೋಜಿಸಲಾಗಿದೆ. ಆದರೆ, ಇದಕ್ಕೂ ಮುನ್ನ ಟೀಮ್ ಇಂಡಿಯಾಕ್ಕೆ ಒಂದರ ಹಿಂದೆ ಒಂದರಂತೆ ಆಘಾತ ಉಂಟಾಗುತ್ತಿದೆ.

1 / 8
ಈಗಾಗಲೇ ಅನುಭವಿ ವೇಗಿ ಮೊಹಮ್ಮದ್ ಶಮಿ ಇಂಜುರಿಯಿಂದಾಗಿ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ. ಇವರ ಜಾಗಕ್ಕೆ ಉಮ್ರಾನ್ ಮಲಿಕ್ ಅವರನ್ನು ಬದಲಿ ಆಟಗಾರನಾಗಿ ಬಿಸಿಸಿಐ ಆಯ್ಕೆ ಮಾಡಿದೆ. ಇದರ ಬೆನ್ನಲ್ಲೇ ಆಲ್ರೌಂಡರ್ ದೀಪಕ್ ಚಹರ್​ಗೂ ದೊಡ್ಡ ಶಾಕ್ ಉಂಟಾಗಿದೆ.

ಈಗಾಗಲೇ ಅನುಭವಿ ವೇಗಿ ಮೊಹಮ್ಮದ್ ಶಮಿ ಇಂಜುರಿಯಿಂದಾಗಿ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ. ಇವರ ಜಾಗಕ್ಕೆ ಉಮ್ರಾನ್ ಮಲಿಕ್ ಅವರನ್ನು ಬದಲಿ ಆಟಗಾರನಾಗಿ ಬಿಸಿಸಿಐ ಆಯ್ಕೆ ಮಾಡಿದೆ. ಇದರ ಬೆನ್ನಲ್ಲೇ ಆಲ್ರೌಂಡರ್ ದೀಪಕ್ ಚಹರ್​ಗೂ ದೊಡ್ಡ ಶಾಕ್ ಉಂಟಾಗಿದೆ.

2 / 8
ದೀಪಕ್ ಚಹರ್ ಏಕದಿನ ಸರಣಿಗಾಗಿ ಬಾಂಗ್ಲಾದೇಶಕ್ಕೆ ಬಂದಿದ್ದಾರೆ. ಆದರೆ, ಇವರ ಲಗೇಜ್ ಇನ್ನೂ ತಲುಪಿಲ್ಲ. ಈ ಬಗ್ಗೆ ಕೋಪಗೊಂಡ ಚಹರ್ ಟ್ವಿಟರ್​ನಲ್ಲಿ ತಾವು ಪ್ರಯಾಣಿಸಿದ ಮಲೇಷ್ಯಾ ಏರ್​​ಲೈನ್ಸ್​ನ ಕಳಪೆ ಸೇವೆಯ ಬಗ್ಗೆ ಟ್ವೀಟ್ ಮಾಡಿದ್ದಾರೆ.

ದೀಪಕ್ ಚಹರ್ ಏಕದಿನ ಸರಣಿಗಾಗಿ ಬಾಂಗ್ಲಾದೇಶಕ್ಕೆ ಬಂದಿದ್ದಾರೆ. ಆದರೆ, ಇವರ ಲಗೇಜ್ ಇನ್ನೂ ತಲುಪಿಲ್ಲ. ಈ ಬಗ್ಗೆ ಕೋಪಗೊಂಡ ಚಹರ್ ಟ್ವಿಟರ್​ನಲ್ಲಿ ತಾವು ಪ್ರಯಾಣಿಸಿದ ಮಲೇಷ್ಯಾ ಏರ್​​ಲೈನ್ಸ್​ನ ಕಳಪೆ ಸೇವೆಯ ಬಗ್ಗೆ ಟ್ವೀಟ್ ಮಾಡಿದ್ದಾರೆ.

3 / 8
''ಮಲೇಷ್ಯಾ ಏರ್​​ಲೈನ್ಸ್​ನಲ್ಲಿ ಪ್ರಯಾಣ ಮಾಡಿದ ನನಗೆ ಕೆಟ್ಟ ಅನುಭವವಾಗಿದೆ. ಮೊದಲಿಗೆ ನಮ್ಮ ಗಮನಕ್ಕೇ ತರದೆ ಫ್ಲೈಟ್ ಅನ್ನು ಬದಲಾಯಿಸಿದರು. ಬ್ಯುಸಿನೆಸ್ ಕ್ಲಾಸ್​ನಲ್ಲಿ ಬಂದಿದ್ದರೂ ಯಾವುದೇ ತಿಂಡಿಗಳು ಇರಲಿಲ್ಲ. ಈಗ ಕಳೆದ 24 ಗಂಟೆಗಳಿಂದ ನನ್ನ ಲಗೆಜ್​ಗಾಗಿ ಕಾಯುತ್ತಿದ್ದೇನೆ. ಯೋಚಿಸಿ ನಾವು ನಾಳೆ ಮೊದಲ ಏಕದಿನ ಪಂದ್ಯವನ್ನು ಆಡಬೇಕಿದೆ,'' ಎಂದು ಬರೆದುಕೊಂಡಿದ್ದಾರೆ.

''ಮಲೇಷ್ಯಾ ಏರ್​​ಲೈನ್ಸ್​ನಲ್ಲಿ ಪ್ರಯಾಣ ಮಾಡಿದ ನನಗೆ ಕೆಟ್ಟ ಅನುಭವವಾಗಿದೆ. ಮೊದಲಿಗೆ ನಮ್ಮ ಗಮನಕ್ಕೇ ತರದೆ ಫ್ಲೈಟ್ ಅನ್ನು ಬದಲಾಯಿಸಿದರು. ಬ್ಯುಸಿನೆಸ್ ಕ್ಲಾಸ್​ನಲ್ಲಿ ಬಂದಿದ್ದರೂ ಯಾವುದೇ ತಿಂಡಿಗಳು ಇರಲಿಲ್ಲ. ಈಗ ಕಳೆದ 24 ಗಂಟೆಗಳಿಂದ ನನ್ನ ಲಗೆಜ್​ಗಾಗಿ ಕಾಯುತ್ತಿದ್ದೇನೆ. ಯೋಚಿಸಿ ನಾವು ನಾಳೆ ಮೊದಲ ಏಕದಿನ ಪಂದ್ಯವನ್ನು ಆಡಬೇಕಿದೆ,'' ಎಂದು ಬರೆದುಕೊಂಡಿದ್ದಾರೆ.

4 / 8
ದೀಪಕ್ ಚಹರ್ ಕಿಟ್ ಹಾಗೂ ಎಲ್ಲ ಸಾಮಗ್ರಿಗಳು ಇನ್ನೂ ಅವರ ಕೈಸೇರಿಲ್ಲ. ಹೀಗಾಗಿ ಅಭ್ಯಾಸ ಕೂಡ ಮಾಡಲು ಸಾಧ್ಯವಾಗಿಲ್ಲ. ಇಂದುಕೂಡ ಅವರ ಲಗೆಜ್ ಬಾರದಿದ್ದಲ್ಲಿ ಮೊದಲ ಏಕದಿನ ಪಂದ್ಯದಲ್ಲಿ ಆಡುವುದು ಅನುಮಾನ ಎನ್ನಲಾಗುತ್ತಿದೆ. ಚಹರ್ ಟ್ವೀಟ್​ಗೆ ಟ್ವಿಟರ್​ನಲ್ಲಿ ಸಾಕಷ್ಟು ಪ್ರತಿಕ್ರಿಯೆಗಳು ಕೇಳಿಬರುತ್ತಿದೆ.

ದೀಪಕ್ ಚಹರ್ ಕಿಟ್ ಹಾಗೂ ಎಲ್ಲ ಸಾಮಗ್ರಿಗಳು ಇನ್ನೂ ಅವರ ಕೈಸೇರಿಲ್ಲ. ಹೀಗಾಗಿ ಅಭ್ಯಾಸ ಕೂಡ ಮಾಡಲು ಸಾಧ್ಯವಾಗಿಲ್ಲ. ಇಂದುಕೂಡ ಅವರ ಲಗೆಜ್ ಬಾರದಿದ್ದಲ್ಲಿ ಮೊದಲ ಏಕದಿನ ಪಂದ್ಯದಲ್ಲಿ ಆಡುವುದು ಅನುಮಾನ ಎನ್ನಲಾಗುತ್ತಿದೆ. ಚಹರ್ ಟ್ವೀಟ್​ಗೆ ಟ್ವಿಟರ್​ನಲ್ಲಿ ಸಾಕಷ್ಟು ಪ್ರತಿಕ್ರಿಯೆಗಳು ಕೇಳಿಬರುತ್ತಿದೆ.

5 / 8
ದೀಪಕ್ ಚಹರ್ ಟ್ವೀಟ್ ಬೆನ್ನಲ್ಲೇ ಮಲೇಷ್ಯಾ ಏರ್​​ಲೈನ್ಸ್​ ಇದಕ್ಕೆ ಪ್ರತಿಕ್ರಿಯೆ ನೀಡಿದ್ದು ಕ್ಷಮೆ ಕೋರಿದೆ. ''ನಮ್ಮನ್ನು ಸಂಪರ್ಕಿಸಿದ್ದಕ್ಕೆ ಧನ್ಯವಾದ. ನಿಮಗೆ ಈರೀತಿಯ ಅನುಭವ ಆಗಿದ್ದಕ್ಕೆ ಕ್ಷಮೆ ಕೋರುತ್ತೇವೆ. ಮಲೇಷಿಯಾ ಏರ್‌ಲೈನ್ಸ್​ನ ಎಲ್ಲಾ ವಿಮಾನಗಳು ಸರಿಯಾದ ಸಮಯಕ್ಕೆ ಕಾರ್ಯನಿರ್ವಹಿಸುತ್ತದೆಯೇ ಎಂದು ಖಚಿತಪಡಿಸಿಕೊಳ್ಳಲು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತೇವೆ. ಆದಾಗ್ಯೂ, ನಮ್ಮ ತಂಡದಿಂದ ತಪ್ಪಾಗಿದೆ,'' ಎಂದು ಹೇಳಿದೆ.

ದೀಪಕ್ ಚಹರ್ ಟ್ವೀಟ್ ಬೆನ್ನಲ್ಲೇ ಮಲೇಷ್ಯಾ ಏರ್​​ಲೈನ್ಸ್​ ಇದಕ್ಕೆ ಪ್ರತಿಕ್ರಿಯೆ ನೀಡಿದ್ದು ಕ್ಷಮೆ ಕೋರಿದೆ. ''ನಮ್ಮನ್ನು ಸಂಪರ್ಕಿಸಿದ್ದಕ್ಕೆ ಧನ್ಯವಾದ. ನಿಮಗೆ ಈರೀತಿಯ ಅನುಭವ ಆಗಿದ್ದಕ್ಕೆ ಕ್ಷಮೆ ಕೋರುತ್ತೇವೆ. ಮಲೇಷಿಯಾ ಏರ್‌ಲೈನ್ಸ್​ನ ಎಲ್ಲಾ ವಿಮಾನಗಳು ಸರಿಯಾದ ಸಮಯಕ್ಕೆ ಕಾರ್ಯನಿರ್ವಹಿಸುತ್ತದೆಯೇ ಎಂದು ಖಚಿತಪಡಿಸಿಕೊಳ್ಳಲು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತೇವೆ. ಆದಾಗ್ಯೂ, ನಮ್ಮ ತಂಡದಿಂದ ತಪ್ಪಾಗಿದೆ,'' ಎಂದು ಹೇಳಿದೆ.

6 / 8
ವಿಮಾನದಲ್ಲಿ ಪ್ರಯಾಣಿಸುವವರಿಗೆ ಈರೀತಿಯ ಅನುಭವ ಆಗುತ್ತಿರುವುದು ಇದೇ ಮೊದಲೇನಲ್ಲ. ಸಾಮಾನ್ಯ ಪ್ರಯಾಣಿಕರು ಪ್ರತಿದಿನ ಇಂಥಹ ಸಮಸ್ಯೆ ಎದುರಿಸುತ್ತಾರೆ. ಆದರೆ, ಸೆಲೆಬ್ರಿಟಿಗಳು ಈ ಬಗ್ಗೆ ಧ್ವನಿ ಎತ್ತಿ ಹೇಳಿದಾಗ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತದೆ.

ವಿಮಾನದಲ್ಲಿ ಪ್ರಯಾಣಿಸುವವರಿಗೆ ಈರೀತಿಯ ಅನುಭವ ಆಗುತ್ತಿರುವುದು ಇದೇ ಮೊದಲೇನಲ್ಲ. ಸಾಮಾನ್ಯ ಪ್ರಯಾಣಿಕರು ಪ್ರತಿದಿನ ಇಂಥಹ ಸಮಸ್ಯೆ ಎದುರಿಸುತ್ತಾರೆ. ಆದರೆ, ಸೆಲೆಬ್ರಿಟಿಗಳು ಈ ಬಗ್ಗೆ ಧ್ವನಿ ಎತ್ತಿ ಹೇಳಿದಾಗ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತದೆ.

7 / 8
ಬಾಂಗ್ಲಾದೇಶ ವಿರುದ್ಧ ಭಾರತ ಮೂರು ಪಂದ್ಯಗಳ ಏಕದಿನ ಮತ್ತು ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಡಿಸೆಂಬರ್ 4 ರಂದು ಮೊದಲ ಏಕದಿನ ಪಂದ್ಯ ನಡೆಯಲಿದೆ. ರೋಹಿತ್ ಶರ್ಮಾ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿದ್ದು ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಧವನ್​ರಂತಹ ಸ್ಟಾರ್ ಆಟಗಾರರಿದ್ದಾರೆ. ಈ ಸರಣಿಯಿಂದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡಲಾಗಿದೆ.

ಬಾಂಗ್ಲಾದೇಶ ವಿರುದ್ಧ ಭಾರತ ಮೂರು ಪಂದ್ಯಗಳ ಏಕದಿನ ಮತ್ತು ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಡಿಸೆಂಬರ್ 4 ರಂದು ಮೊದಲ ಏಕದಿನ ಪಂದ್ಯ ನಡೆಯಲಿದೆ. ರೋಹಿತ್ ಶರ್ಮಾ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿದ್ದು ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಧವನ್​ರಂತಹ ಸ್ಟಾರ್ ಆಟಗಾರರಿದ್ದಾರೆ. ಈ ಸರಣಿಯಿಂದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡಲಾಗಿದೆ.

8 / 8

Published On - 12:36 pm, Sat, 3 December 22

Follow us
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ರಾಜಶೇಖರ್
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ರಾಜಶೇಖರ್
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
‘ಥಗ್ ಲೈಫ್’ ಬಿಡುಗಡೆ ಆದರೆ, ಪರೋಕ್ಷ ಎಚ್ಚರಿಕೆ ಕೊಟ್ಟ ಪ್ರವೀಣ್ ಶೆಟ್ಟಿ
‘ಥಗ್ ಲೈಫ್’ ಬಿಡುಗಡೆ ಆದರೆ, ಪರೋಕ್ಷ ಎಚ್ಚರಿಕೆ ಕೊಟ್ಟ ಪ್ರವೀಣ್ ಶೆಟ್ಟಿ
ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ವಂಚನೆ ಮಾಡಿದ ಆರೋಪ
ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ವಂಚನೆ ಮಾಡಿದ ಆರೋಪ
ರಾಮೋಜಿ ಫಿಲ್ಮ್​ಸಿಟಿಯಲ್ಲಿ 16 ಮಹಾನಟಿಯರ ಭರ್ಜರಿ ಫೋಟೋಶೂಟ್
ರಾಮೋಜಿ ಫಿಲ್ಮ್​ಸಿಟಿಯಲ್ಲಿ 16 ಮಹಾನಟಿಯರ ಭರ್ಜರಿ ಫೋಟೋಶೂಟ್
ಸಕಲೇಶಪುರ: ರಸ್ತೆಯಲ್ಲೇ ಕಾಡಾನೆಗಳ ಪರೇಡ್! ಬೆಚ್ಚಿಬಿದ್ದ ಗ್ರಾಮಸ್ಥರು
ಸಕಲೇಶಪುರ: ರಸ್ತೆಯಲ್ಲೇ ಕಾಡಾನೆಗಳ ಪರೇಡ್! ಬೆಚ್ಚಿಬಿದ್ದ ಗ್ರಾಮಸ್ಥರು
ಸಚಿವ ಶಿವರಾಜ್ ತಂಗಡಗಿ ಬೆಂಗಾವಲು ಪಡೆ ವಾಹನ ಅಪಘಾತ, ಇಬ್ಬರಿಗೆ ಗಾಯ
ಸಚಿವ ಶಿವರಾಜ್ ತಂಗಡಗಿ ಬೆಂಗಾವಲು ಪಡೆ ವಾಹನ ಅಪಘಾತ, ಇಬ್ಬರಿಗೆ ಗಾಯ
Daily Devotional: ಈ 5 ವಿಷಯಗಳನ್ನ ಯಾರಿಗೂ ಹೇಳಬಾರದು
Daily Devotional: ಈ 5 ವಿಷಯಗಳನ್ನ ಯಾರಿಗೂ ಹೇಳಬಾರದು