AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ರನ್ ಸೋಲುಗಳೊಂದಿಗೆ ಹೀಗೊಂದು ದಾಖಲೆ ಬರೆದ ಡೆಲ್ಲಿ ಕ್ಯಾಪಿಟಲ್ಸ್

IPL 2026 DC vs GT: ಇಂಡಿಯನ್ ಪ್ರೀಮಿಯರ್ ಲೀಗ್​ನ 14ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 210 ರನ್ ಕಲೆಹಾಕಿದ್ದರು. ಈ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ಓವರ್​ಗಳಲ್ಲಿ 209 ರನ್​ಗಳಿಸಿ ಕೇವಲ ಒಂದು ರನ್​​ನಿಂದ ಸೋಲೊಪ್ಪಿಕೊಂಡಿದೆ.

ಝಾಹಿರ್ ಯೂಸುಫ್
|

Updated on: Apr 09, 2026 | 7:57 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 14ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ (GT) ವಿರುದ್ಧದ ಈ ಪಂದ್ಯದಲ್ಲಿ ಒಂದು ರನ್​ನ ಸೋಲಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡವು ವಿಶೇಷ ದಾಖಲೆಯೊಂದನ್ನು ಬರೆದಿದೆ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 14ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ (GT) ವಿರುದ್ಧದ ಈ ಪಂದ್ಯದಲ್ಲಿ ಒಂದು ರನ್​ನ ಸೋಲಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡವು ವಿಶೇಷ ದಾಖಲೆಯೊಂದನ್ನು ಬರೆದಿದೆ.

1 / 6
ಈ ಮ್ಯಾಚ್​ನಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ಶುಭ್​​ಮನ್ ಗಿಲ್ (70), ಜೋಸ್ ಬಟ್ಲರ್ (52) ಹಾಗೂ ವಾಷಿಂಗ್ಟನ್ ಸುಂದರ್​​ (55) ಅವರ ಅರ್ಧಶತಕಗಳ ನೆರವಿನೊಂದಿಗೆ 20 ಓವರ್​ಗಳಲ್ಲಿ 210 ರನ್​ ಕಲೆಹಾಕಿತು.

ಈ ಮ್ಯಾಚ್​ನಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ಶುಭ್​​ಮನ್ ಗಿಲ್ (70), ಜೋಸ್ ಬಟ್ಲರ್ (52) ಹಾಗೂ ವಾಷಿಂಗ್ಟನ್ ಸುಂದರ್​​ (55) ಅವರ ಅರ್ಧಶತಕಗಳ ನೆರವಿನೊಂದಿಗೆ 20 ಓವರ್​ಗಳಲ್ಲಿ 210 ರನ್​ ಕಲೆಹಾಕಿತು.

2 / 6
ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗೆಲ್ಲಲು ಕೊನೆಯ ಓವರ್​ನಲ್ಲಿ 13 ರನ್​ಗಳು ಬೇಕಿದ್ದವು. ಆದರೆ ಅಂತಿಮ ಓವರ್​ನಲ್ಲಿ ಕಲೆಹಾಕಿದ್ದು ಕೇವಲ 11 ರನ್​ಗಳು ಮಾತ್ರ. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಒಂದು ರನ್​​ನಿಂದ ಸೋಲೊಪ್ಪಿಕೊಂಡಿತು.

ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗೆಲ್ಲಲು ಕೊನೆಯ ಓವರ್​ನಲ್ಲಿ 13 ರನ್​ಗಳು ಬೇಕಿದ್ದವು. ಆದರೆ ಅಂತಿಮ ಓವರ್​ನಲ್ಲಿ ಕಲೆಹಾಕಿದ್ದು ಕೇವಲ 11 ರನ್​ಗಳು ಮಾತ್ರ. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಒಂದು ರನ್​​ನಿಂದ ಸೋಲೊಪ್ಪಿಕೊಂಡಿತು.

3 / 6
ಈ ಸೋಲಿನೊಂದಿಗೆ ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ 1 ರನ್​ನಿಂದ ಸೋತ ತಂಡವೆಂಬ ಹಣೆಪಟ್ಟಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪಾಲಾಗಿದೆ. ಅಂದರೆ ಇದಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ಪಡೆಯು ಮೂರು ಬಾರಿ ಒಂದು ರನ್​ ಅಂತರದಿಂದ ಸೋತ ನಿದರ್ಶನಗಳಿವೆ.

ಈ ಸೋಲಿನೊಂದಿಗೆ ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ 1 ರನ್​ನಿಂದ ಸೋತ ತಂಡವೆಂಬ ಹಣೆಪಟ್ಟಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪಾಲಾಗಿದೆ. ಅಂದರೆ ಇದಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ಪಡೆಯು ಮೂರು ಬಾರಿ ಒಂದು ರನ್​ ಅಂತರದಿಂದ ಸೋತ ನಿದರ್ಶನಗಳಿವೆ.

4 / 6
2015 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಒಂದು ರನ್​ಗಳ ಅಂತರದಿಂದ ಮೊದಲ ಬಾರಿಗೆ ಸೋತಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡವು, 2016 ರಲ್ಲಿ ಗುಜರಾತ್ ಲಯನ್ಸ್ ತಂಡದ ವಿರುದ್ಧ ಒಂದು ರನ್​ನಿಂದನೇ ಸೋಲೊಪ್ಪಿಕೊಂಡಿದ್ದರು. ಇನ್ನು 2021 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 1 ರನ್​ನ ಅಂತರದಿಂದ ಸೋಲನುಭವಿಸಿದ್ದರು. 

2015 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಒಂದು ರನ್​ಗಳ ಅಂತರದಿಂದ ಮೊದಲ ಬಾರಿಗೆ ಸೋತಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡವು, 2016 ರಲ್ಲಿ ಗುಜರಾತ್ ಲಯನ್ಸ್ ತಂಡದ ವಿರುದ್ಧ ಒಂದು ರನ್​ನಿಂದನೇ ಸೋಲೊಪ್ಪಿಕೊಂಡಿದ್ದರು. ಇನ್ನು 2021 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 1 ರನ್​ನ ಅಂತರದಿಂದ ಸೋಲನುಭವಿಸಿದ್ದರು. 

5 / 6
ಇದೀಗ ಗುಜರಾತ್ ಟೈಟಾನ್ಸ್ ವಿರುದ್ಧ ಕೇವಲ 1 ರನ್​​ ಅಂತರದಿಂದ ಸೋಲೊಪ್ಪಿಕೊಂಡಿದೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಒಂದು ರನ್​ ಅಂತರದಿಂದ ಸೋತ ತಂಡವೆಂಬ ದಾಖಲೆಯನ್ನು ನಿರ್ಮಿಸಿದೆ.

ಇದೀಗ ಗುಜರಾತ್ ಟೈಟಾನ್ಸ್ ವಿರುದ್ಧ ಕೇವಲ 1 ರನ್​​ ಅಂತರದಿಂದ ಸೋಲೊಪ್ಪಿಕೊಂಡಿದೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಒಂದು ರನ್​ ಅಂತರದಿಂದ ಸೋತ ತಂಡವೆಂಬ ದಾಖಲೆಯನ್ನು ನಿರ್ಮಿಸಿದೆ.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಹುಡುಗಿಗಾಗಿ ಟವರ್ ಏರಿದ್ದ ಯವಕನನ್ನ ಮನವೊಲಿಸಿ ಕೆಳಗಿಳಿಸಿದ್ಹೇಗೆ?
ಹುಡುಗಿಗಾಗಿ ಟವರ್ ಏರಿದ್ದ ಯವಕನನ್ನ ಮನವೊಲಿಸಿ ಕೆಳಗಿಳಿಸಿದ್ಹೇಗೆ?
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ