AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ಕಣಕ್ಕಿಳಿಯುವುದು ಎಲ್ಲಿ?

Vijay Hazare Trophy 2025: ಡಿಸೆಂಬರ್ 24 ರಂದು ಶುರುವಾಗಲಿರುವ ದೆಹಲಿ ಮತ್ತು ಆಂಧ್ರ ಪ್ರದೇಶ್ ನಡುವಣ ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತ. ಈ ಮೂಲಕ ಕೊಹ್ಲಿ 15 ವರ್ಷಗಳ ಬಳಿಕ ದೇಶೀಯ ಟೂರ್ನಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದಕ್ಕೂ ಮುನ್ನ ಅವರು 2010 ರಲ್ಲಿ ಕೊನೆಯ ಬಾರಿ ದೇಶೀಯ ಏಕದಿನ ಪಂದ್ಯವಾಡಿದ್ದರು.

ಝಾಹಿರ್ ಯೂಸುಫ್
|

Updated on: Dec 24, 2025 | 7:53 AM

Share
ವಿಜಯ ಹಝಾರೆ ಟೂರ್ನಿಗೆ ಇಂದಿನಿಂದ ಚಾಲನೆ ದೊರೆಯಲಿದೆ. ಮೊದಲ ದಿನವೇ 32 ತಂಡಗಳು ಕೂಡ ಕಣಕ್ಕಿಳಿಯಲಿವೆ. ಈ ಮೂವತ್ತೆರಡು ತಂಡಗಳಲ್ಲಿ ಎಲ್ಲರ ಕಣ್ಣು ನೆಟ್ಟಿರುವುದು ದೆಹಲಿ ಮತ್ತು ಆಂಧ್ರ ನಡುವಣ ಪಂದ್ಯದ ಮೇಲೆ. ಏಕೆಂದರೆ ಈ ಮ್ಯಾಚ್ ಮೂಲಕ ವಿರಾಟ್ ಕೊಹ್ಲಿ (Virat Kohli) ವಿಜಯ ಹಝಾರೆ ಟೂರ್ನಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದು ಕೂಡ ಬರೋಬ್ಬರಿ 15 ವರ್ಷಗಳ ಬಳಿಕ.

ವಿಜಯ ಹಝಾರೆ ಟೂರ್ನಿಗೆ ಇಂದಿನಿಂದ ಚಾಲನೆ ದೊರೆಯಲಿದೆ. ಮೊದಲ ದಿನವೇ 32 ತಂಡಗಳು ಕೂಡ ಕಣಕ್ಕಿಳಿಯಲಿವೆ. ಈ ಮೂವತ್ತೆರಡು ತಂಡಗಳಲ್ಲಿ ಎಲ್ಲರ ಕಣ್ಣು ನೆಟ್ಟಿರುವುದು ದೆಹಲಿ ಮತ್ತು ಆಂಧ್ರ ನಡುವಣ ಪಂದ್ಯದ ಮೇಲೆ. ಏಕೆಂದರೆ ಈ ಮ್ಯಾಚ್ ಮೂಲಕ ವಿರಾಟ್ ಕೊಹ್ಲಿ (Virat Kohli) ವಿಜಯ ಹಝಾರೆ ಟೂರ್ನಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದು ಕೂಡ ಬರೋಬ್ಬರಿ 15 ವರ್ಷಗಳ ಬಳಿಕ.

1 / 5
ಅಂದರೆ ವಿರಾಟ್ ಕೊಹ್ಲಿ ಕೊನೆಯ ಬಾರಿ ವಿಜಯ ಹಝಾರೆ ಟೂರ್ನಿ ಆಡಿದ್ದು 2010 ರಲ್ಲಿ. ಅಂದು ದೆಹಲಿ ಪರ ಐದು ಮ್ಯಾಚ್​ಗಳಲ್ಲಿ ಬ್ಯಾಟ್ ಬೀಸಿದ್ದ ಕೊಹ್ಲಿ 45.80 ಸರಾಸರಿಯಲ್ಲಿ 229 ರನ್ ಗಳಿಸಿದ್ದರು. ಈ ವೇಳೆ ಎರಡು ಅರ್ಧಶತಕಗಳನ್ನು ಸಹ ಬಾರಿಸಿದ್ದರು. ಇದೀಗ ದಶಕಗಳ ಬಳಿಕ ಮತ್ತೊಮ್ಮೆ ದೆಹಲಿ ಪರ ಬ್ಯಾಟ್ ಬೀಸಲು ಸಜ್ಜಾಗಿದ್ದಾರೆ.

ಅಂದರೆ ವಿರಾಟ್ ಕೊಹ್ಲಿ ಕೊನೆಯ ಬಾರಿ ವಿಜಯ ಹಝಾರೆ ಟೂರ್ನಿ ಆಡಿದ್ದು 2010 ರಲ್ಲಿ. ಅಂದು ದೆಹಲಿ ಪರ ಐದು ಮ್ಯಾಚ್​ಗಳಲ್ಲಿ ಬ್ಯಾಟ್ ಬೀಸಿದ್ದ ಕೊಹ್ಲಿ 45.80 ಸರಾಸರಿಯಲ್ಲಿ 229 ರನ್ ಗಳಿಸಿದ್ದರು. ಈ ವೇಳೆ ಎರಡು ಅರ್ಧಶತಕಗಳನ್ನು ಸಹ ಬಾರಿಸಿದ್ದರು. ಇದೀಗ ದಶಕಗಳ ಬಳಿಕ ಮತ್ತೊಮ್ಮೆ ದೆಹಲಿ ಪರ ಬ್ಯಾಟ್ ಬೀಸಲು ಸಜ್ಜಾಗಿದ್ದಾರೆ.

2 / 5
ಆದರೆ ಈ ಮ್ಯಾಚ್ ನಡೆಯುವುದು ಎಲ್ಲಿ ಪ್ರಶ್ನೆ ಮೂಡುವುದು ಸಹಜ. ಏಕೆಂದರೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಿಗದಿಯಾಗಿದ್ದ ಈ ಪಂದ್ಯವನ್ನು ಸುರಕ್ಷತಾ ಕಾರಣಗಳಿಂದಾಗಿ ಸ್ಥಳಾಂತರ ಮಾಡಲಾಗಿದೆ. ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತದ ನಂತರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಯಾವುದೇ ಪಂದ್ಯಗಳನ್ನು ಆಯೋಜಿಸಲಾಗಿಲ್ಲ.

ಆದರೆ ಈ ಮ್ಯಾಚ್ ನಡೆಯುವುದು ಎಲ್ಲಿ ಪ್ರಶ್ನೆ ಮೂಡುವುದು ಸಹಜ. ಏಕೆಂದರೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಿಗದಿಯಾಗಿದ್ದ ಈ ಪಂದ್ಯವನ್ನು ಸುರಕ್ಷತಾ ಕಾರಣಗಳಿಂದಾಗಿ ಸ್ಥಳಾಂತರ ಮಾಡಲಾಗಿದೆ. ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತದ ನಂತರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಯಾವುದೇ ಪಂದ್ಯಗಳನ್ನು ಆಯೋಜಿಸಲಾಗಿಲ್ಲ.

3 / 5
ಇದಾಗ್ಯೂ ಈ ಬಾರಿಯ ವಿಜಯ ಹಝಾರೆ ಟೂರ್ನಿಯ ಮೂಲಕ ಮತ್ತೆ ಪಂದ್ಯ ಆಯೋಜಿಸಲು ಕೆಎಸ್​ಸಿಎ ಮುಂದಾಗಿತ್ತು. ಅದರಂತೆ ಸೋಮವಾರ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದರು. ಈ ಪರಿಶೀಲನೆಯ ವರದಿಯು ನಕಾರತ್ಮಕವಾಗಿದ್ದ ಕಾರಣ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ದೆಹಲಿ-ಆಂಧ್ರ ನಡುವಣ ಪಂದ್ಯ ಆಯೋಜಿಸಲು ಅನುಮತಿ ನಿರಾಕರಿಸಿದ್ದರು.

ಇದಾಗ್ಯೂ ಈ ಬಾರಿಯ ವಿಜಯ ಹಝಾರೆ ಟೂರ್ನಿಯ ಮೂಲಕ ಮತ್ತೆ ಪಂದ್ಯ ಆಯೋಜಿಸಲು ಕೆಎಸ್​ಸಿಎ ಮುಂದಾಗಿತ್ತು. ಅದರಂತೆ ಸೋಮವಾರ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದರು. ಈ ಪರಿಶೀಲನೆಯ ವರದಿಯು ನಕಾರತ್ಮಕವಾಗಿದ್ದ ಕಾರಣ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ದೆಹಲಿ-ಆಂಧ್ರ ನಡುವಣ ಪಂದ್ಯ ಆಯೋಜಿಸಲು ಅನುಮತಿ ನಿರಾಕರಿಸಿದ್ದರು.

4 / 5
ಇದೀಗ ಈ ಮ್ಯಾಚ್ ಅನ್ನು ಬೆಂಗಳೂರಿನ ಬಂಡೆ ಕೊಡಿಗೆಹಳ್ಳಿಯಲ್ಲಿರುವ ಬಿಸಿಸಿಐ ಸೆಂಟರ್ ಆಫ್ ಎಕ್ಸ್​ಲೆನ್ಸ್ ನಲ್ಲಿರುವ ಮೈದಾನದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಅದರಂತೆ ಇಂದು ವಿರಾಟ್ ಕೊಹ್ಲಿ ವಿಜಯ ಹಝಾರೆ ಟೂರ್ನಿಯ ಪಂದ್ಯಕ್ಕಾಗಿ ಸೆಂಟರ್ ಆಫ್ ಎಕ್ಸ್​ಲೆನ್ಸ್ ಮೈದಾನದಲ್ಲಿ ಕಣಕ್ಕಿಳಿಯಲಿದ್ದಾರೆ. ಅದು ಕೂಡ ಬರೋಬ್ಬರಿ 15 ವರ್ಷಗಳ ಬಳಿಕ ಎಂಬುದು ವಿಶೇಷ.

ಇದೀಗ ಈ ಮ್ಯಾಚ್ ಅನ್ನು ಬೆಂಗಳೂರಿನ ಬಂಡೆ ಕೊಡಿಗೆಹಳ್ಳಿಯಲ್ಲಿರುವ ಬಿಸಿಸಿಐ ಸೆಂಟರ್ ಆಫ್ ಎಕ್ಸ್​ಲೆನ್ಸ್ ನಲ್ಲಿರುವ ಮೈದಾನದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಅದರಂತೆ ಇಂದು ವಿರಾಟ್ ಕೊಹ್ಲಿ ವಿಜಯ ಹಝಾರೆ ಟೂರ್ನಿಯ ಪಂದ್ಯಕ್ಕಾಗಿ ಸೆಂಟರ್ ಆಫ್ ಎಕ್ಸ್​ಲೆನ್ಸ್ ಮೈದಾನದಲ್ಲಿ ಕಣಕ್ಕಿಳಿಯಲಿದ್ದಾರೆ. ಅದು ಕೂಡ ಬರೋಬ್ಬರಿ 15 ವರ್ಷಗಳ ಬಳಿಕ ಎಂಬುದು ವಿಶೇಷ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ