AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Devdutt Padikkal IPL Auction 2025: ತವರಿಗೆ ಮರಳಿದ ಕನ್ನಡಿಗ ದೇವದತ್ ಪಡಿಕ್ಕಲ್

Devdutt Padikkal Auction Price: 2 ಕೋಟಿ ಮೂಲ ಬೆಲೆಯೊಂದಿಗೆ ಹರಾಜಿಗೆ ಬಂದಿದ್ದ ದೇವದತ್ ಪಡಿಕ್ಕಲ್ ಅವರನ್ನು ಮೊದಲ ಸುತ್ತಿನಲ್ಲಿ ಯಾವುದೇ ತಂಡ ಖರೀದಿಸಿರಲಿಲ್ಲ. ಹೀಗಾಗಿ ಅವರ ಖರೀದಿಯಾಗದೆ ಉಳಿದಿದ್ದರು. ಆದರೆ ದಿನದ ಕೊನೆಯಲ್ಲಿ ಮತ್ತೆ ಹರಾಜಿಗೆ ಬಂದ ಪಡಿಕ್ಕಲ್​ರನ್ನು ಆರ್​ಸಿಬಿ ಖರೀದಿಸಿತು.

ಪೃಥ್ವಿಶಂಕರ
|

Updated on: Nov 25, 2024 | 10:02 PM

Share
ಐಪಿಎಲ್ ಮೆಗಾ ಹರಾಜಿನ ಎರಡನೇ ದಿನದ ಕೊನೆಯ ಕ್ಷಣದಂದು ಮತ್ತೊಬ್ಬ ಕನ್ನಡಿಗನನ್ನು ಖರೀದಿಸುವಲ್ಲಿ ಆರ್​ಸಿಬಿ ಯಶಸ್ವಿಯಾಗಿದೆ. ತನ್ನ ಐಪಿಎಲ್ ವೃತ್ತಿಜೀವನವನ್ನು ಆರ್​ಸಿಬಿಯಿಂದಲೇ ಆರಂಭಿಸಿದ್ದ ಯುವ ಬ್ಯಾಟರ್ ದೇವದತ್ ಪಡಿಕ್ಕಲ್ ಅವರನ್ನು ಆರ್​ಸಿಬಿ ಮೂಲ ಬೆಲೆ 2 ಕೋಟಿ ರೂ. ನೀಡಿ ಖರೀದಿಸಿದೆ.

ಐಪಿಎಲ್ ಮೆಗಾ ಹರಾಜಿನ ಎರಡನೇ ದಿನದ ಕೊನೆಯ ಕ್ಷಣದಂದು ಮತ್ತೊಬ್ಬ ಕನ್ನಡಿಗನನ್ನು ಖರೀದಿಸುವಲ್ಲಿ ಆರ್​ಸಿಬಿ ಯಶಸ್ವಿಯಾಗಿದೆ. ತನ್ನ ಐಪಿಎಲ್ ವೃತ್ತಿಜೀವನವನ್ನು ಆರ್​ಸಿಬಿಯಿಂದಲೇ ಆರಂಭಿಸಿದ್ದ ಯುವ ಬ್ಯಾಟರ್ ದೇವದತ್ ಪಡಿಕ್ಕಲ್ ಅವರನ್ನು ಆರ್​ಸಿಬಿ ಮೂಲ ಬೆಲೆ 2 ಕೋಟಿ ರೂ. ನೀಡಿ ಖರೀದಿಸಿದೆ.

1 / 6
ಕಳೆದ ಆವೃತ್ತಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ಆಡಿದ್ದ ಪಡಿಕ್ಕಲ್​ಗೆ ಹೆಚ್ಚಿನ ಅವಕಾಶಗಳು ಸಿಕ್ಕಿರಲಿಲ್ಲ. ಇದರ ಜೊತೆಗೆ ಸಿಕ್ಕ ಅವಕಾಶಗಳನ್ನು ಅವರು ಸದುಪಯೋಗಪಡಿಸಿಕೊಂಡಿರಲಿಲ್ಲ. ಹೀಗಾಗಿ ಲಕ್ನೋ ಫ್ರಾಂಚೈಸಿ ಪಡಿಕ್ಕಲ್​ರನ್ನು ತಂಡದಿಂದ ಬಿಡುಗಡೆ ಮಾಡಿತ್ತು.

ಕಳೆದ ಆವೃತ್ತಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ಆಡಿದ್ದ ಪಡಿಕ್ಕಲ್​ಗೆ ಹೆಚ್ಚಿನ ಅವಕಾಶಗಳು ಸಿಕ್ಕಿರಲಿಲ್ಲ. ಇದರ ಜೊತೆಗೆ ಸಿಕ್ಕ ಅವಕಾಶಗಳನ್ನು ಅವರು ಸದುಪಯೋಗಪಡಿಸಿಕೊಂಡಿರಲಿಲ್ಲ. ಹೀಗಾಗಿ ಲಕ್ನೋ ಫ್ರಾಂಚೈಸಿ ಪಡಿಕ್ಕಲ್​ರನ್ನು ತಂಡದಿಂದ ಬಿಡುಗಡೆ ಮಾಡಿತ್ತು.

2 / 6
ಆದಾಗ್ಯೂ 2 ಕೋಟಿ ಮೂಲ ಬೆಲೆಯೊಂದಿಗೆ ಹರಾಜಿಗೆ ಬಂದಿದ್ದ ದೇವದತ್ ಪಡಿಕ್ಕಲ್ ಅವರನ್ನು ಮೊದಲ ಸುತ್ತಿನಲ್ಲಿ ಯಾವುದೇ ತಂಡ ಖರೀದಿಸಿರಲಿಲ್ಲ. ಹೀಗಾಗಿ ಅವರ ಖರೀದಿಯಾಗದೆ ಉಳಿದಿದ್ದರು. ಆದರೆ ದಿನದ ಕೊನೆಯಲ್ಲಿ ಮತ್ತೆ ಹರಾಜಿಗೆ ಬಂದ ಪಡಿಕ್ಕಲ್​ರನ್ನು ಆರ್​ಸಿಬಿ ಖರೀದಿಸಿತು.

ಆದಾಗ್ಯೂ 2 ಕೋಟಿ ಮೂಲ ಬೆಲೆಯೊಂದಿಗೆ ಹರಾಜಿಗೆ ಬಂದಿದ್ದ ದೇವದತ್ ಪಡಿಕ್ಕಲ್ ಅವರನ್ನು ಮೊದಲ ಸುತ್ತಿನಲ್ಲಿ ಯಾವುದೇ ತಂಡ ಖರೀದಿಸಿರಲಿಲ್ಲ. ಹೀಗಾಗಿ ಅವರ ಖರೀದಿಯಾಗದೆ ಉಳಿದಿದ್ದರು. ಆದರೆ ದಿನದ ಕೊನೆಯಲ್ಲಿ ಮತ್ತೆ ಹರಾಜಿಗೆ ಬಂದ ಪಡಿಕ್ಕಲ್​ರನ್ನು ಆರ್​ಸಿಬಿ ಖರೀದಿಸಿತು.

3 / 6
ವಾಸ್ತವವಾಗಿ ದೇವದತ್ ಪಡಿಕ್ಕಲ್​ ಆರ್​ಸಿಬಿ ಸೇರುತ್ತಿರುವುದು ಇದೇ ಮೊದಲಲ್ಲ. 2020 ರ ಐಪಿಎಲ್‌ನಲ್ಲಿ ಮೊದಲ ಬಾರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡಿದ್ದ ಪಡಿಕ್ಕಲ್, ತನ್ನ ಚೊಚ್ಚಲ ಐಪಿಎಲ್ ಋತುವಿನಲ್ಲಿಯೇ ಐದು ಅರ್ಧ ಶತಕಗಳ ಸಹಾಯದಿಂದ 473 ರನ್ಗಳನ್ನು ಸಿಡಿಸಿದ್ದರು.

ವಾಸ್ತವವಾಗಿ ದೇವದತ್ ಪಡಿಕ್ಕಲ್​ ಆರ್​ಸಿಬಿ ಸೇರುತ್ತಿರುವುದು ಇದೇ ಮೊದಲಲ್ಲ. 2020 ರ ಐಪಿಎಲ್‌ನಲ್ಲಿ ಮೊದಲ ಬಾರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡಿದ್ದ ಪಡಿಕ್ಕಲ್, ತನ್ನ ಚೊಚ್ಚಲ ಐಪಿಎಲ್ ಋತುವಿನಲ್ಲಿಯೇ ಐದು ಅರ್ಧ ಶತಕಗಳ ಸಹಾಯದಿಂದ 473 ರನ್ಗಳನ್ನು ಸಿಡಿಸಿದ್ದರು.

4 / 6
ನಂತರದ ಆವೃತ್ತಿಯಲ್ಲೂ ಆರ್​ಸಿಬಿ ಪರ ಅಬ್ಬರಿಸಿದ್ದ ಪಡಿಕ್ಕಲ್, ಒಂದು ಶತಕ ಮತ್ತು ಅರ್ಧಶತಕ ಸೇರಿದಂತೆ ಒಟ್ಟು 411 ರನ್‌ಗಳನ್ನು ಗಳಿಸಿದ್ದರು.ಆರ್​ಸಿಬಿ ಪರ ಆಡಿದ್ದ ಎರಡು ಸೀಸನ್‌ಗಳಲ್ಲಿ ಪಡಿಕ್ಕಲ್ ಉತ್ತಮ ಪ್ರದರ್ಶನ ನೀಡಿದ್ದರೂ ಸಹ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಅವರನ್ನು 2022 ರ ಮೆಗಾ ಹರಾಜಿಗೂ ಮೊದಲು ತಂಡದಿಂದ ಬಿಡುಗಡೆ ಮಾಡಲು ನಿರ್ಧರಿಸಿತ್ತು.

ನಂತರದ ಆವೃತ್ತಿಯಲ್ಲೂ ಆರ್​ಸಿಬಿ ಪರ ಅಬ್ಬರಿಸಿದ್ದ ಪಡಿಕ್ಕಲ್, ಒಂದು ಶತಕ ಮತ್ತು ಅರ್ಧಶತಕ ಸೇರಿದಂತೆ ಒಟ್ಟು 411 ರನ್‌ಗಳನ್ನು ಗಳಿಸಿದ್ದರು.ಆರ್​ಸಿಬಿ ಪರ ಆಡಿದ್ದ ಎರಡು ಸೀಸನ್‌ಗಳಲ್ಲಿ ಪಡಿಕ್ಕಲ್ ಉತ್ತಮ ಪ್ರದರ್ಶನ ನೀಡಿದ್ದರೂ ಸಹ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಅವರನ್ನು 2022 ರ ಮೆಗಾ ಹರಾಜಿಗೂ ಮೊದಲು ತಂಡದಿಂದ ಬಿಡುಗಡೆ ಮಾಡಲು ನಿರ್ಧರಿಸಿತ್ತು.

5 / 6
ಆ ಬಳಿಕ ರಾಜಸ್ಥಾನ ರಾಯಲ್ಸ್‌ ತಂಡವನ್ನು ಸೇರಿಕೊಂಡಿದ್ದ ಪಡಿಕ್ಕಲ್, ಮೊದಲ ಋತುವಿನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. 2022 ರ ಐಪಿಎಲ್​ನಲ್ಲಿ 376 ರನ್ ಬಾರಿಸಿದ್ದ ಪಡಿಕ್ಕಲ್, ಐಪಿಎಲ್ 2023 ರಲ್ಲಿ 261 ರನ್ ಕಲೆಹಾಕಿದ್ದರು. ಆದಾಗ್ಯೂ 2024 ರಲ್ಲಿ ಲಕ್ನೋ ತಂಡವನ್ನು ಸೇರಿಕೊಂಡಿದ್ದ ಪಡಿಕ್ಕಲ್ 7 ಪಂದ್ಯಗಳನ್ನು ಆಡಿ ಕೇವಲ 38 ರನ್ ಗಳಿಸಲಷ್ಟೇ ಶಕ್ತರಾಗಿದ್ದರು.

ಆ ಬಳಿಕ ರಾಜಸ್ಥಾನ ರಾಯಲ್ಸ್‌ ತಂಡವನ್ನು ಸೇರಿಕೊಂಡಿದ್ದ ಪಡಿಕ್ಕಲ್, ಮೊದಲ ಋತುವಿನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. 2022 ರ ಐಪಿಎಲ್​ನಲ್ಲಿ 376 ರನ್ ಬಾರಿಸಿದ್ದ ಪಡಿಕ್ಕಲ್, ಐಪಿಎಲ್ 2023 ರಲ್ಲಿ 261 ರನ್ ಕಲೆಹಾಕಿದ್ದರು. ಆದಾಗ್ಯೂ 2024 ರಲ್ಲಿ ಲಕ್ನೋ ತಂಡವನ್ನು ಸೇರಿಕೊಂಡಿದ್ದ ಪಡಿಕ್ಕಲ್ 7 ಪಂದ್ಯಗಳನ್ನು ಆಡಿ ಕೇವಲ 38 ರನ್ ಗಳಿಸಲಷ್ಟೇ ಶಕ್ತರಾಗಿದ್ದರು.

6 / 6
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್