AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Devdutt Padikkal IPL Auction 2025: ತವರಿಗೆ ಮರಳಿದ ಕನ್ನಡಿಗ ದೇವದತ್ ಪಡಿಕ್ಕಲ್

Devdutt Padikkal Auction Price: 2 ಕೋಟಿ ಮೂಲ ಬೆಲೆಯೊಂದಿಗೆ ಹರಾಜಿಗೆ ಬಂದಿದ್ದ ದೇವದತ್ ಪಡಿಕ್ಕಲ್ ಅವರನ್ನು ಮೊದಲ ಸುತ್ತಿನಲ್ಲಿ ಯಾವುದೇ ತಂಡ ಖರೀದಿಸಿರಲಿಲ್ಲ. ಹೀಗಾಗಿ ಅವರ ಖರೀದಿಯಾಗದೆ ಉಳಿದಿದ್ದರು. ಆದರೆ ದಿನದ ಕೊನೆಯಲ್ಲಿ ಮತ್ತೆ ಹರಾಜಿಗೆ ಬಂದ ಪಡಿಕ್ಕಲ್​ರನ್ನು ಆರ್​ಸಿಬಿ ಖರೀದಿಸಿತು.

ಪೃಥ್ವಿಶಂಕರ
|

Updated on: Nov 25, 2024 | 10:02 PM

Share
ಐಪಿಎಲ್ ಮೆಗಾ ಹರಾಜಿನ ಎರಡನೇ ದಿನದ ಕೊನೆಯ ಕ್ಷಣದಂದು ಮತ್ತೊಬ್ಬ ಕನ್ನಡಿಗನನ್ನು ಖರೀದಿಸುವಲ್ಲಿ ಆರ್​ಸಿಬಿ ಯಶಸ್ವಿಯಾಗಿದೆ. ತನ್ನ ಐಪಿಎಲ್ ವೃತ್ತಿಜೀವನವನ್ನು ಆರ್​ಸಿಬಿಯಿಂದಲೇ ಆರಂಭಿಸಿದ್ದ ಯುವ ಬ್ಯಾಟರ್ ದೇವದತ್ ಪಡಿಕ್ಕಲ್ ಅವರನ್ನು ಆರ್​ಸಿಬಿ ಮೂಲ ಬೆಲೆ 2 ಕೋಟಿ ರೂ. ನೀಡಿ ಖರೀದಿಸಿದೆ.

ಐಪಿಎಲ್ ಮೆಗಾ ಹರಾಜಿನ ಎರಡನೇ ದಿನದ ಕೊನೆಯ ಕ್ಷಣದಂದು ಮತ್ತೊಬ್ಬ ಕನ್ನಡಿಗನನ್ನು ಖರೀದಿಸುವಲ್ಲಿ ಆರ್​ಸಿಬಿ ಯಶಸ್ವಿಯಾಗಿದೆ. ತನ್ನ ಐಪಿಎಲ್ ವೃತ್ತಿಜೀವನವನ್ನು ಆರ್​ಸಿಬಿಯಿಂದಲೇ ಆರಂಭಿಸಿದ್ದ ಯುವ ಬ್ಯಾಟರ್ ದೇವದತ್ ಪಡಿಕ್ಕಲ್ ಅವರನ್ನು ಆರ್​ಸಿಬಿ ಮೂಲ ಬೆಲೆ 2 ಕೋಟಿ ರೂ. ನೀಡಿ ಖರೀದಿಸಿದೆ.

1 / 6
ಕಳೆದ ಆವೃತ್ತಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ಆಡಿದ್ದ ಪಡಿಕ್ಕಲ್​ಗೆ ಹೆಚ್ಚಿನ ಅವಕಾಶಗಳು ಸಿಕ್ಕಿರಲಿಲ್ಲ. ಇದರ ಜೊತೆಗೆ ಸಿಕ್ಕ ಅವಕಾಶಗಳನ್ನು ಅವರು ಸದುಪಯೋಗಪಡಿಸಿಕೊಂಡಿರಲಿಲ್ಲ. ಹೀಗಾಗಿ ಲಕ್ನೋ ಫ್ರಾಂಚೈಸಿ ಪಡಿಕ್ಕಲ್​ರನ್ನು ತಂಡದಿಂದ ಬಿಡುಗಡೆ ಮಾಡಿತ್ತು.

ಕಳೆದ ಆವೃತ್ತಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ಆಡಿದ್ದ ಪಡಿಕ್ಕಲ್​ಗೆ ಹೆಚ್ಚಿನ ಅವಕಾಶಗಳು ಸಿಕ್ಕಿರಲಿಲ್ಲ. ಇದರ ಜೊತೆಗೆ ಸಿಕ್ಕ ಅವಕಾಶಗಳನ್ನು ಅವರು ಸದುಪಯೋಗಪಡಿಸಿಕೊಂಡಿರಲಿಲ್ಲ. ಹೀಗಾಗಿ ಲಕ್ನೋ ಫ್ರಾಂಚೈಸಿ ಪಡಿಕ್ಕಲ್​ರನ್ನು ತಂಡದಿಂದ ಬಿಡುಗಡೆ ಮಾಡಿತ್ತು.

2 / 6
ಆದಾಗ್ಯೂ 2 ಕೋಟಿ ಮೂಲ ಬೆಲೆಯೊಂದಿಗೆ ಹರಾಜಿಗೆ ಬಂದಿದ್ದ ದೇವದತ್ ಪಡಿಕ್ಕಲ್ ಅವರನ್ನು ಮೊದಲ ಸುತ್ತಿನಲ್ಲಿ ಯಾವುದೇ ತಂಡ ಖರೀದಿಸಿರಲಿಲ್ಲ. ಹೀಗಾಗಿ ಅವರ ಖರೀದಿಯಾಗದೆ ಉಳಿದಿದ್ದರು. ಆದರೆ ದಿನದ ಕೊನೆಯಲ್ಲಿ ಮತ್ತೆ ಹರಾಜಿಗೆ ಬಂದ ಪಡಿಕ್ಕಲ್​ರನ್ನು ಆರ್​ಸಿಬಿ ಖರೀದಿಸಿತು.

ಆದಾಗ್ಯೂ 2 ಕೋಟಿ ಮೂಲ ಬೆಲೆಯೊಂದಿಗೆ ಹರಾಜಿಗೆ ಬಂದಿದ್ದ ದೇವದತ್ ಪಡಿಕ್ಕಲ್ ಅವರನ್ನು ಮೊದಲ ಸುತ್ತಿನಲ್ಲಿ ಯಾವುದೇ ತಂಡ ಖರೀದಿಸಿರಲಿಲ್ಲ. ಹೀಗಾಗಿ ಅವರ ಖರೀದಿಯಾಗದೆ ಉಳಿದಿದ್ದರು. ಆದರೆ ದಿನದ ಕೊನೆಯಲ್ಲಿ ಮತ್ತೆ ಹರಾಜಿಗೆ ಬಂದ ಪಡಿಕ್ಕಲ್​ರನ್ನು ಆರ್​ಸಿಬಿ ಖರೀದಿಸಿತು.

3 / 6
ವಾಸ್ತವವಾಗಿ ದೇವದತ್ ಪಡಿಕ್ಕಲ್​ ಆರ್​ಸಿಬಿ ಸೇರುತ್ತಿರುವುದು ಇದೇ ಮೊದಲಲ್ಲ. 2020 ರ ಐಪಿಎಲ್‌ನಲ್ಲಿ ಮೊದಲ ಬಾರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡಿದ್ದ ಪಡಿಕ್ಕಲ್, ತನ್ನ ಚೊಚ್ಚಲ ಐಪಿಎಲ್ ಋತುವಿನಲ್ಲಿಯೇ ಐದು ಅರ್ಧ ಶತಕಗಳ ಸಹಾಯದಿಂದ 473 ರನ್ಗಳನ್ನು ಸಿಡಿಸಿದ್ದರು.

ವಾಸ್ತವವಾಗಿ ದೇವದತ್ ಪಡಿಕ್ಕಲ್​ ಆರ್​ಸಿಬಿ ಸೇರುತ್ತಿರುವುದು ಇದೇ ಮೊದಲಲ್ಲ. 2020 ರ ಐಪಿಎಲ್‌ನಲ್ಲಿ ಮೊದಲ ಬಾರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡಿದ್ದ ಪಡಿಕ್ಕಲ್, ತನ್ನ ಚೊಚ್ಚಲ ಐಪಿಎಲ್ ಋತುವಿನಲ್ಲಿಯೇ ಐದು ಅರ್ಧ ಶತಕಗಳ ಸಹಾಯದಿಂದ 473 ರನ್ಗಳನ್ನು ಸಿಡಿಸಿದ್ದರು.

4 / 6
ನಂತರದ ಆವೃತ್ತಿಯಲ್ಲೂ ಆರ್​ಸಿಬಿ ಪರ ಅಬ್ಬರಿಸಿದ್ದ ಪಡಿಕ್ಕಲ್, ಒಂದು ಶತಕ ಮತ್ತು ಅರ್ಧಶತಕ ಸೇರಿದಂತೆ ಒಟ್ಟು 411 ರನ್‌ಗಳನ್ನು ಗಳಿಸಿದ್ದರು.ಆರ್​ಸಿಬಿ ಪರ ಆಡಿದ್ದ ಎರಡು ಸೀಸನ್‌ಗಳಲ್ಲಿ ಪಡಿಕ್ಕಲ್ ಉತ್ತಮ ಪ್ರದರ್ಶನ ನೀಡಿದ್ದರೂ ಸಹ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಅವರನ್ನು 2022 ರ ಮೆಗಾ ಹರಾಜಿಗೂ ಮೊದಲು ತಂಡದಿಂದ ಬಿಡುಗಡೆ ಮಾಡಲು ನಿರ್ಧರಿಸಿತ್ತು.

ನಂತರದ ಆವೃತ್ತಿಯಲ್ಲೂ ಆರ್​ಸಿಬಿ ಪರ ಅಬ್ಬರಿಸಿದ್ದ ಪಡಿಕ್ಕಲ್, ಒಂದು ಶತಕ ಮತ್ತು ಅರ್ಧಶತಕ ಸೇರಿದಂತೆ ಒಟ್ಟು 411 ರನ್‌ಗಳನ್ನು ಗಳಿಸಿದ್ದರು.ಆರ್​ಸಿಬಿ ಪರ ಆಡಿದ್ದ ಎರಡು ಸೀಸನ್‌ಗಳಲ್ಲಿ ಪಡಿಕ್ಕಲ್ ಉತ್ತಮ ಪ್ರದರ್ಶನ ನೀಡಿದ್ದರೂ ಸಹ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಅವರನ್ನು 2022 ರ ಮೆಗಾ ಹರಾಜಿಗೂ ಮೊದಲು ತಂಡದಿಂದ ಬಿಡುಗಡೆ ಮಾಡಲು ನಿರ್ಧರಿಸಿತ್ತು.

5 / 6
ಆ ಬಳಿಕ ರಾಜಸ್ಥಾನ ರಾಯಲ್ಸ್‌ ತಂಡವನ್ನು ಸೇರಿಕೊಂಡಿದ್ದ ಪಡಿಕ್ಕಲ್, ಮೊದಲ ಋತುವಿನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. 2022 ರ ಐಪಿಎಲ್​ನಲ್ಲಿ 376 ರನ್ ಬಾರಿಸಿದ್ದ ಪಡಿಕ್ಕಲ್, ಐಪಿಎಲ್ 2023 ರಲ್ಲಿ 261 ರನ್ ಕಲೆಹಾಕಿದ್ದರು. ಆದಾಗ್ಯೂ 2024 ರಲ್ಲಿ ಲಕ್ನೋ ತಂಡವನ್ನು ಸೇರಿಕೊಂಡಿದ್ದ ಪಡಿಕ್ಕಲ್ 7 ಪಂದ್ಯಗಳನ್ನು ಆಡಿ ಕೇವಲ 38 ರನ್ ಗಳಿಸಲಷ್ಟೇ ಶಕ್ತರಾಗಿದ್ದರು.

ಆ ಬಳಿಕ ರಾಜಸ್ಥಾನ ರಾಯಲ್ಸ್‌ ತಂಡವನ್ನು ಸೇರಿಕೊಂಡಿದ್ದ ಪಡಿಕ್ಕಲ್, ಮೊದಲ ಋತುವಿನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. 2022 ರ ಐಪಿಎಲ್​ನಲ್ಲಿ 376 ರನ್ ಬಾರಿಸಿದ್ದ ಪಡಿಕ್ಕಲ್, ಐಪಿಎಲ್ 2023 ರಲ್ಲಿ 261 ರನ್ ಕಲೆಹಾಕಿದ್ದರು. ಆದಾಗ್ಯೂ 2024 ರಲ್ಲಿ ಲಕ್ನೋ ತಂಡವನ್ನು ಸೇರಿಕೊಂಡಿದ್ದ ಪಡಿಕ್ಕಲ್ 7 ಪಂದ್ಯಗಳನ್ನು ಆಡಿ ಕೇವಲ 38 ರನ್ ಗಳಿಸಲಷ್ಟೇ ಶಕ್ತರಾಗಿದ್ದರು.

6 / 6
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!