AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6,6,6,6,6,6: ಸ್ಫೋಟಕ ಸೆಂಚುರಿ ಸಿಡಿಸಿದ ದೇವದತ್ ಪಡಿಕ್ಕಲ್

Syed Mushtaq Ali Trophy 2025: ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯ ಗ್ರೂಪ್ ಡಿ ಪಂದ್ಯದಲ್ಲಿ ತಮಿಳುನಾಡು ವಿರುದ್ಧ ಕರ್ನಾಟಕ ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿರುವ ಕರ್ನಾಟಕ ಪರ ದೇವದತ್ ಪಡಿಕ್ಕಲ್ ಶತಕ ಸಿಡಿಸಿದ್ದು, ಈ ಮೂಲಕ ಕರ್ನಾಟಕ ತಂಡ ಬೃಹತ್ ಮೊತ್ತ ಪೇರಿಸಿದೆ.

ಝಾಹಿರ್ ಯೂಸುಫ್
|

Updated on: Dec 02, 2025 | 11:26 AM

Share
ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಕರ್ನಾಟಕದ ಯುವ ದಾಂಡಿಗ ದೇವದತ್ ಪಡಿಕ್ಕಲ್ (Devdutt Padikkal) ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಕರ್ನಾಟಕ ಮತ್ತು ತಮಿಳುನಾಡು ತಂಡಗಳು ಮುಖಾಮುಖಿಯಾಗಿವೆ.

ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಕರ್ನಾಟಕದ ಯುವ ದಾಂಡಿಗ ದೇವದತ್ ಪಡಿಕ್ಕಲ್ (Devdutt Padikkal) ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಕರ್ನಾಟಕ ಮತ್ತು ತಮಿಳುನಾಡು ತಂಡಗಳು ಮುಖಾಮುಖಿಯಾಗಿವೆ.

1 / 5
ಈ ಪಂದ್ಯದಲ್ಲಿ ಟಾಸ್ ಗೆದ್ದ ತಮಿಳುನಾಡು ತಂಡದ ನಾಯಕ ವರುಣ್ ಚಕ್ರವರ್ತಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ತಂಡಕ್ಕೆ ಮಯಾಂಕ್ ಅಗರ್ವಾಲ್ (24) ಹಾಗೂ ಶರತ್ ಬಿಆರ್​ (53) ಉತ್ತಮ ಆರಂಭ ಒದಗಿಸಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದೇವದತ್ ಪಡಿಕ್ಕಲ್ ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು.

ಈ ಪಂದ್ಯದಲ್ಲಿ ಟಾಸ್ ಗೆದ್ದ ತಮಿಳುನಾಡು ತಂಡದ ನಾಯಕ ವರುಣ್ ಚಕ್ರವರ್ತಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ತಂಡಕ್ಕೆ ಮಯಾಂಕ್ ಅಗರ್ವಾಲ್ (24) ಹಾಗೂ ಶರತ್ ಬಿಆರ್​ (53) ಉತ್ತಮ ಆರಂಭ ಒದಗಿಸಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದೇವದತ್ ಪಡಿಕ್ಕಲ್ ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು.

2 / 5
ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ದೇವದತ್ ಪಡಿಕ್ಕಲ್ ತಮಿಳುನಾಡು ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ಪಡಿಕ್ಕಲ್ ಬ್ಯಾಟ್​ನಿಂದ 6 ಭರ್ಜರಿ ಸಿಕ್ಸರ್ ಹಾಗೂ 10 ಫೋರ್​ಗಳು ಮೂಡಿಬಂದವು. ಈ ಮೂಲಕ ಕೇವಲ 45 ಎಸೆತಗಳಲ್ಲಿ ಶತಕ ಪೂರೈಸಿದರು.

ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ದೇವದತ್ ಪಡಿಕ್ಕಲ್ ತಮಿಳುನಾಡು ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ಪಡಿಕ್ಕಲ್ ಬ್ಯಾಟ್​ನಿಂದ 6 ಭರ್ಜರಿ ಸಿಕ್ಸರ್ ಹಾಗೂ 10 ಫೋರ್​ಗಳು ಮೂಡಿಬಂದವು. ಈ ಮೂಲಕ ಕೇವಲ 45 ಎಸೆತಗಳಲ್ಲಿ ಶತಕ ಪೂರೈಸಿದರು.

3 / 5
ಅಂತಿಮವಾಗಿ 46 ಎಸೆತಗಳನ್ನು ಎದುರಿಸಿದ ದೇವದತ್ ಪಡಿಕ್ಕಲ್ 10 ಫೋರ್ ಹಾಗೂ 6 ಸಿಕ್ಸ್​ಗಳೊಂದಿಗೆ ಅಜೇಯ 102 ರನ್ ಬಾರಿಸಿದರು. ಪಡಿಕ್ಕಲ್ ಅವರ ಈ ವಿಸ್ಫೋಟಕ ಸೆಂಚುರಿ ನೆರವಿನೊಂದಿಗೆ ಕರ್ನಾಟಕ ತಂಡವು 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 245 ರನ್ ಕಲೆಹಾಕಿದೆ.

ಅಂತಿಮವಾಗಿ 46 ಎಸೆತಗಳನ್ನು ಎದುರಿಸಿದ ದೇವದತ್ ಪಡಿಕ್ಕಲ್ 10 ಫೋರ್ ಹಾಗೂ 6 ಸಿಕ್ಸ್​ಗಳೊಂದಿಗೆ ಅಜೇಯ 102 ರನ್ ಬಾರಿಸಿದರು. ಪಡಿಕ್ಕಲ್ ಅವರ ಈ ವಿಸ್ಫೋಟಕ ಸೆಂಚುರಿ ನೆರವಿನೊಂದಿಗೆ ಕರ್ನಾಟಕ ತಂಡವು 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 245 ರನ್ ಕಲೆಹಾಕಿದೆ.

4 / 5
ಅಂದಹಾಗೆ ಇದು ಟಿ20 ಕ್ರಿಕೆಟ್​ನಲ್ಲಿ ದೇವದತ್ ಪಡಿಕ್ಕಲ್ ಅವರ 4ನೇ ಶತಕ. ಇದಕ್ಕೂ ಮುನ್ನ ಆರಂಭಿಕನಾಗಿ ಎರಡು ಸೆಂಚುರಿಗಳನ್ನು ಸಿಡಿಸಿದ್ದರು. ಆ ಬಳಿಕ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಒಂದು ಶತಕ ಬಾರಿಸಿದ್ದರು. ಇದೀಗ ಮೂರನೇ ಕ್ರಮಾಂಕದಲ್ಲೂ ಬ್ಯಾಟ್ ಬೀಸಿ ಮೂರಂಕಿ ರನ್​ಗಳಿಸಲು ಯಶಸ್ವಿಯಾಗಿದ್ದಾರೆ.

ಅಂದಹಾಗೆ ಇದು ಟಿ20 ಕ್ರಿಕೆಟ್​ನಲ್ಲಿ ದೇವದತ್ ಪಡಿಕ್ಕಲ್ ಅವರ 4ನೇ ಶತಕ. ಇದಕ್ಕೂ ಮುನ್ನ ಆರಂಭಿಕನಾಗಿ ಎರಡು ಸೆಂಚುರಿಗಳನ್ನು ಸಿಡಿಸಿದ್ದರು. ಆ ಬಳಿಕ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಒಂದು ಶತಕ ಬಾರಿಸಿದ್ದರು. ಇದೀಗ ಮೂರನೇ ಕ್ರಮಾಂಕದಲ್ಲೂ ಬ್ಯಾಟ್ ಬೀಸಿ ಮೂರಂಕಿ ರನ್​ಗಳಿಸಲು ಯಶಸ್ವಿಯಾಗಿದ್ದಾರೆ.

5 / 5
ಗವಿ ಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು ಗೊತ್ತೇ?
ಗವಿ ಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು ಗೊತ್ತೇ?
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ಅಶ್ವಿನಿ ಫಿದಾ
ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ಅಶ್ವಿನಿ ಫಿದಾ
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು
ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು
ಬೆಂಗಳೂರು: ಅಕ್ಷಯನಗರ ಸ್ಕ್ರಾಪ್​ ಗೋಡೌನ್​ನಲ್ಲಿ ಭಾರಿ ಅಗ್ನಿ ಅವಘಡ
ಬೆಂಗಳೂರು: ಅಕ್ಷಯನಗರ ಸ್ಕ್ರಾಪ್​ ಗೋಡೌನ್​ನಲ್ಲಿ ಭಾರಿ ಅಗ್ನಿ ಅವಘಡ