AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ವಾರವಿಡೀ ಹಲವು ಪರೀಕ್ಷೆ; ಚಾಂಪಿಯನ್ ಪಟ್ಟಕ್ಕೇರಿದ ಬೆನ್ನಲ್ಲೇ ಆಸ್ಪತ್ರೆಗೆ ತೆರಳಿದ ಧೋನಿ!

Dhoni Knee Injury: ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ದಾಖಲೆಯ 5ನೇ ಬಾರಿಗೆ ಚಾಂಪಿಯನ್ ಮಾಡಿದ ಬೆನ್ನಲ್ಲೇ ಎಂಎಸ್ ಧೋನಿ ಮುಂಬೈನ ಆಸ್ಪತ್ರೆಯಲ್ಲಿ ಮೊಣಕಾಲಿನ ತಪಾಸಣೆ ಮಾಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಪೃಥ್ವಿಶಂಕರ
|

Updated on: May 31, 2023 | 10:57 AM

ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ದಾಖಲೆಯ 5ನೇ ಬಾರಿಗೆ ಚಾಂಪಿಯನ್ ಮಾಡಿದ ಬೆನ್ನಲ್ಲೇ ಎಂಎಸ್ ಧೋನಿ ಮುಂಬೈನ ಆಸ್ಪತ್ರೆಯಲ್ಲಿ ಮೊಣಕಾಲಿನ ತಪಾಸಣೆ ಮಾಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಇಡೀ ಐಪಿಎಲ್​ನಲ್ಲಿ ಧೋನಿ ತಮ್ಮ ಮೊಣಕಾಲು ನೋವಿನಿಂದ ಬಳಲುತ್ತಿದ್ದ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಚಾಂಪಿಯನ್ ಮಾಡಿದ ಬಳಿಕ ಇದೀಗ ಆಸ್ಪತ್ರೆಗೆ ತೆರಳಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ದಾಖಲೆಯ 5ನೇ ಬಾರಿಗೆ ಚಾಂಪಿಯನ್ ಮಾಡಿದ ಬೆನ್ನಲ್ಲೇ ಎಂಎಸ್ ಧೋನಿ ಮುಂಬೈನ ಆಸ್ಪತ್ರೆಯಲ್ಲಿ ಮೊಣಕಾಲಿನ ತಪಾಸಣೆ ಮಾಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಇಡೀ ಐಪಿಎಲ್​ನಲ್ಲಿ ಧೋನಿ ತಮ್ಮ ಮೊಣಕಾಲು ನೋವಿನಿಂದ ಬಳಲುತ್ತಿದ್ದ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಚಾಂಪಿಯನ್ ಮಾಡಿದ ಬಳಿಕ ಇದೀಗ ಆಸ್ಪತ್ರೆಗೆ ತೆರಳಿದ್ದಾರೆ.

1 / 5
ಐಪಿಎಲ್ 2023 ರಲ್ಲಿ, ಮೊದಲ ಪಂದ್ಯದಲ್ಲಿಯೇ ಧೋನಿ ಮೊಣಕಾಲು ಗಾಯಕ್ಕೆ ತುತ್ತಾದರು. ಆದರೆ ಮೊದಲ ಬಾರಿಗೆ ಇದು ಎಲ್ಲರ ಕಣ್ಣಿಗೆ ಬಿದ್ದಿದ್ದು ಏಪ್ರಿಲ್ 12 ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ. ಆ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಖ್ಯ ಕೋಚ್ ಸ್ಟೀಫನ್ ಫ್ಲೆಮಿಂಗ್ ಮತ್ತು ಬ್ಯಾಟಿಂಗ್ ಕೋಚ್ ಮೈಕ್ ಹಸ್ಸಿ ಕೂಡ ಧೋನಿ ಇಂಜುರಿಯ ಬಗ್ಗೆ ಹೇಳಿಕೆ ನೀಡಿದ್ದರು.

ಐಪಿಎಲ್ 2023 ರಲ್ಲಿ, ಮೊದಲ ಪಂದ್ಯದಲ್ಲಿಯೇ ಧೋನಿ ಮೊಣಕಾಲು ಗಾಯಕ್ಕೆ ತುತ್ತಾದರು. ಆದರೆ ಮೊದಲ ಬಾರಿಗೆ ಇದು ಎಲ್ಲರ ಕಣ್ಣಿಗೆ ಬಿದ್ದಿದ್ದು ಏಪ್ರಿಲ್ 12 ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ. ಆ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಖ್ಯ ಕೋಚ್ ಸ್ಟೀಫನ್ ಫ್ಲೆಮಿಂಗ್ ಮತ್ತು ಬ್ಯಾಟಿಂಗ್ ಕೋಚ್ ಮೈಕ್ ಹಸ್ಸಿ ಕೂಡ ಧೋನಿ ಇಂಜುರಿಯ ಬಗ್ಗೆ ಹೇಳಿಕೆ ನೀಡಿದ್ದರು.

2 / 5
ಸದ್ಯಕ್ಕೆ ಲಭ್ಯವಾಗಿರುವ ಮಾಹಿತಿ ಪ್ರಕಾರ, ಧೋನಿ ಮೊಣಕಾಲಿನ ಚಿಕಿತ್ಸೆಗಾಗಿ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಒಂದು ವೇಳೆ ಶಸ್ತ್ರಚಿಕಿತ್ಸೆ ಅಗತ್ಯವಿದ್ದರೆ, ಧೋನಿ ಅಲ್ಲಿಯ ದಾಖಲಾಗುವ ಸಾಧ್ಯತೆಗಳಿವೆ. ಆದರೆ ಅದಕ್ಕೂ ಮುನ್ನ ಧೋನಿ ಮೊಣಕಾಲಿನ ಗಾಯದ ತೀವ್ರತೆಯ ಬಗ್ಗೆ ತಿಳಿಯಲು ಈ ವಾರ ಅದೇ ಆಸ್ಪತ್ರೆಯಲ್ಲಿ ಹಲವಾರು ಪರೀಕ್ಷೆಗಳಿಗೆ ಒಳಗಾಗಲಿದ್ದಾರೆ ಎಂದು ವರದಿಗಳಲ್ಲಿ ಹೇಳಲಾಗುತ್ತಿದೆ.

ಸದ್ಯಕ್ಕೆ ಲಭ್ಯವಾಗಿರುವ ಮಾಹಿತಿ ಪ್ರಕಾರ, ಧೋನಿ ಮೊಣಕಾಲಿನ ಚಿಕಿತ್ಸೆಗಾಗಿ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಒಂದು ವೇಳೆ ಶಸ್ತ್ರಚಿಕಿತ್ಸೆ ಅಗತ್ಯವಿದ್ದರೆ, ಧೋನಿ ಅಲ್ಲಿಯ ದಾಖಲಾಗುವ ಸಾಧ್ಯತೆಗಳಿವೆ. ಆದರೆ ಅದಕ್ಕೂ ಮುನ್ನ ಧೋನಿ ಮೊಣಕಾಲಿನ ಗಾಯದ ತೀವ್ರತೆಯ ಬಗ್ಗೆ ತಿಳಿಯಲು ಈ ವಾರ ಅದೇ ಆಸ್ಪತ್ರೆಯಲ್ಲಿ ಹಲವಾರು ಪರೀಕ್ಷೆಗಳಿಗೆ ಒಳಗಾಗಲಿದ್ದಾರೆ ಎಂದು ವರದಿಗಳಲ್ಲಿ ಹೇಳಲಾಗುತ್ತಿದೆ.

3 / 5
ವಾಸ್ತವವಾಗಿ ಹಲವು ಐಪಿಎಲ್ ಪಂದ್ಯಗಳ ಸಮಯದಲ್ಲಿ ಧೋನಿ ನಡೆಯಲು ಕಷ್ಟಪಡುತ್ತಿರುವ ಸಾಕಷ್ಟು ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದ್ದವು. ಇದರಿಂದಾಗಿ ಧೋನಿ ವಿಕೆಟ್‌ಗಳ ನಡುವೆ ಓಡಲು ಸಮಸ್ಯೆ ಉಂಟಾಗಿತ್ತು. ಇದೇ ಕಾರಣಕ್ಕೆ ಅವರು ಕೊನೆಯಲ್ಲಿ ಬ್ಯಾಟಿಂಗ್‌ಗೆ ಬರುತ್ತಿದ್ದರು.

ವಾಸ್ತವವಾಗಿ ಹಲವು ಐಪಿಎಲ್ ಪಂದ್ಯಗಳ ಸಮಯದಲ್ಲಿ ಧೋನಿ ನಡೆಯಲು ಕಷ್ಟಪಡುತ್ತಿರುವ ಸಾಕಷ್ಟು ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದ್ದವು. ಇದರಿಂದಾಗಿ ಧೋನಿ ವಿಕೆಟ್‌ಗಳ ನಡುವೆ ಓಡಲು ಸಮಸ್ಯೆ ಉಂಟಾಗಿತ್ತು. ಇದೇ ಕಾರಣಕ್ಕೆ ಅವರು ಕೊನೆಯಲ್ಲಿ ಬ್ಯಾಟಿಂಗ್‌ಗೆ ಬರುತ್ತಿದ್ದರು.

4 / 5
ಆದರೆ ಧೋನಿ ತಮ್ಮ ಮೊಣಕಾಲು ತಪಾಸಣೆಗಾಗಿ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ತೆರಳಿದ್ದರು ಎಂಬುದರ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಇನ್ನು ಈ ಬಾರಿಯ ಐಪಿಎಲ್​ನಲ್ಲಿ 200ಕ್ಕೂ ಅಧಿಕ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ್ದ ಧೋನಿ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಆದರೆ ಧೋನಿ ತಮ್ಮ ಮೊಣಕಾಲು ತಪಾಸಣೆಗಾಗಿ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ತೆರಳಿದ್ದರು ಎಂಬುದರ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಇನ್ನು ಈ ಬಾರಿಯ ಐಪಿಎಲ್​ನಲ್ಲಿ 200ಕ್ಕೂ ಅಧಿಕ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ್ದ ಧೋನಿ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

5 / 5
Follow us
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ