AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಪ್ಲೇಯಿಂಗ್ 11 ನಲ್ಲಿ ಇಲ್ಲದಿದ್ದರೂ ಇತಿಹಾಸ ಸೃಷ್ಟಿಸಿದ ಧ್ರುವ್ ಜುರೆಲ್

Dhruv Jurel: ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ರಿಷಭ್ ಪಂತ್ ಗಾಯದಿಂದಾಗಿ, ಬದಲಿ ಆಟಗಾರ ಧ್ರುವ ಜುರೆಲ್ ವಿಕೆಟ್ ಕೀಪಿಂಗ್ ಮಾಡಿದರು. ಅವರು ಒಟ್ಟು ನಾಲ್ಕು ಕ್ಯಾಚ್‌ಗಳನ್ನು ಪಡೆದು, ಟೆಸ್ಟ್ ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ಕ್ಯಾಚ್‌ಗಳನ್ನು ಪಡೆದ ಭಾರತೀಯ ಬದಲಿ ವಿಕೆಟ್ ಕೀಪರ್ ಎನಿಸಿಕೊಂಡರು. ಜೋ ರೂಟ್ ಮತ್ತು ಬೆನ್ ಡಕೆಟ್ ಸೇರಿದಂತೆ ಪ್ರಮುಖ ಬ್ಯಾಟ್ಸ್‌ಮನ್‌ಗಳನ್ನು ಔಟ್ ಮಾಡುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು.

ಪೃಥ್ವಿಶಂಕರ
|

Updated on: Jul 26, 2025 | 4:43 PM

Share
ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಹಿಡಿತ ಸಾಧಿಸಿದ್ದು, ಬೃಹತ್ ಮುನ್ನಡೆಯತ್ತ ಸಾಗಿದೆ. ಇತ್ತ ಟೀಂ ಇಂಡಿಯಾ ಏನೆಲ್ಲ ಪ್ರಯತ್ನ ಪಟ್ಟರೂ ಇಂಗ್ಲೆಂಡ್‌ ಬ್ಯಾಟರ್​ಗಳನ್ನು ಕಟ್ಟಿಹಾಕುವಲ್ಲಿ ವಿಫಲವಾಗಿದೆ. ಆದಾಗ್ಯೂ ಇದೆಲ್ಲದರ ನಡುವೆ ಪ್ಲೇಯಿಂಗ್ 11 ನಲ್ಲಿ ಅವಕಾಶ ಪಡೆಯದ ಹೊರತಾಗಿಯೂ ಬದಲಿ ಆಟಗಾರನಾಗಿ ವಿಕೆಟ್ ಕೀಪಿಂಗ್ ಮಾಡಿದ ಧ್ರುವ್ ಜುರೆಲ್ ಇತಿಹಾಸ ಸೃಷ್ಟಿಸಿದ್ದಾರೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಹಿಡಿತ ಸಾಧಿಸಿದ್ದು, ಬೃಹತ್ ಮುನ್ನಡೆಯತ್ತ ಸಾಗಿದೆ. ಇತ್ತ ಟೀಂ ಇಂಡಿಯಾ ಏನೆಲ್ಲ ಪ್ರಯತ್ನ ಪಟ್ಟರೂ ಇಂಗ್ಲೆಂಡ್‌ ಬ್ಯಾಟರ್​ಗಳನ್ನು ಕಟ್ಟಿಹಾಕುವಲ್ಲಿ ವಿಫಲವಾಗಿದೆ. ಆದಾಗ್ಯೂ ಇದೆಲ್ಲದರ ನಡುವೆ ಪ್ಲೇಯಿಂಗ್ 11 ನಲ್ಲಿ ಅವಕಾಶ ಪಡೆಯದ ಹೊರತಾಗಿಯೂ ಬದಲಿ ಆಟಗಾರನಾಗಿ ವಿಕೆಟ್ ಕೀಪಿಂಗ್ ಮಾಡಿದ ಧ್ರುವ್ ಜುರೆಲ್ ಇತಿಹಾಸ ಸೃಷ್ಟಿಸಿದ್ದಾರೆ.

1 / 5
ವಾಸ್ತವವಾಗಿ ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯದ ಸಮಯದಲ್ಲಿ ಬ್ಯಾಟಿಂಗ್ ಮಾಡುವಾಗ ರಿಷಭ್ ಪಂತ್ ಕಾಲಿಗೆ ಗಾಯವಾಯಿತು. ಹೀಗಾಗಿ ಕೇವಲ ಬ್ಯಾಟರ್ ಆಗಿ ಆಡುತ್ತಿರುವ ಪಂತ್ ಬದಲಿಗೆ ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್ ಮಾಡುತ್ತಿದ್ದು, ಟೆಸ್ಟ್ ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ಕ್ಯಾಚ್‌ಗಳನ್ನು ಪಡೆದ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ. ಧ್ರುವ್ ಇದುವರೆಗೆ ಒಟ್ಟು 4 ಬ್ಯಾಟ್ಸ್‌ಮನ್‌ಗಳನ್ನು ಪೆವಿಲಿಯನ್‌ಗೆ ಕಳುಹಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ವಾಸ್ತವವಾಗಿ ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯದ ಸಮಯದಲ್ಲಿ ಬ್ಯಾಟಿಂಗ್ ಮಾಡುವಾಗ ರಿಷಭ್ ಪಂತ್ ಕಾಲಿಗೆ ಗಾಯವಾಯಿತು. ಹೀಗಾಗಿ ಕೇವಲ ಬ್ಯಾಟರ್ ಆಗಿ ಆಡುತ್ತಿರುವ ಪಂತ್ ಬದಲಿಗೆ ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್ ಮಾಡುತ್ತಿದ್ದು, ಟೆಸ್ಟ್ ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ಕ್ಯಾಚ್‌ಗಳನ್ನು ಪಡೆದ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ. ಧ್ರುವ್ ಇದುವರೆಗೆ ಒಟ್ಟು 4 ಬ್ಯಾಟ್ಸ್‌ಮನ್‌ಗಳನ್ನು ಪೆವಿಲಿಯನ್‌ಗೆ ಕಳುಹಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

2 / 5
ಧ್ರುವ್ ಜುರೆಲ್ ಮೊದಲಿಗೆ ವಾಷಿಂಗ್ಟನ್ ಸುಂದರ್ ಅವರ ಎಸೆತದಲ್ಲಿ ಹ್ಯಾರಿ ಬ್ರೂಕ್ ಅವರನ್ನು ಸ್ಟಂಪ್ ಮಾಡಿದರು. ಆ ಬಳಿಕ ರವೀಂದ್ರ ಜಡೇಜಾ ಅವರ ಎಸೆತದಲ್ಲಿ ಜೋ ರೂಟ್ ಅವರನ್ನು ಸಹ ಸ್ಟಂಪ್‌ ಔಟ್ ಮಾಡಿದರು. ಇದರಿಂದಾಗಿ, ರೂಟ್ ಅವರ 150 ರನ್‌ಗಳ ಅದ್ಭುತ ಇನ್ನಿಂಗ್ಸ್ ಕೊನೆಗೊಂಡಿತು.

ಧ್ರುವ್ ಜುರೆಲ್ ಮೊದಲಿಗೆ ವಾಷಿಂಗ್ಟನ್ ಸುಂದರ್ ಅವರ ಎಸೆತದಲ್ಲಿ ಹ್ಯಾರಿ ಬ್ರೂಕ್ ಅವರನ್ನು ಸ್ಟಂಪ್ ಮಾಡಿದರು. ಆ ಬಳಿಕ ರವೀಂದ್ರ ಜಡೇಜಾ ಅವರ ಎಸೆತದಲ್ಲಿ ಜೋ ರೂಟ್ ಅವರನ್ನು ಸಹ ಸ್ಟಂಪ್‌ ಔಟ್ ಮಾಡಿದರು. ಇದರಿಂದಾಗಿ, ರೂಟ್ ಅವರ 150 ರನ್‌ಗಳ ಅದ್ಭುತ ಇನ್ನಿಂಗ್ಸ್ ಕೊನೆಗೊಂಡಿತು.

3 / 5
ಇದಕ್ಕೂ ಮುನ್ನ 94 ರನ್ ಬಾರಿಸಿ ಆಡುತ್ತಿದ್ದ ಬೆನ್ ಡಕೆಟ್, ಅನ್ಶುಲ್ ಕಾಂಬೋಜ್ ಅವರ ಎಸೆತದಲ್ಲಿ ಕೀಪರ್ ಜುರೆಲ್​ಗೆ ಕ್ಯಾಚಿತ್ತು ಔಟಾದರು. ನಂತರ ಬುಮ್ರಾ ಬೌಲಿಂಗ್‌ನಲ್ಲಿ ಜೇಮಿ ಸ್ಮಿತ್ ನೀಡಿದ ಕ್ಯಾಚ್ ಅನ್ನು ಹಿಡಿಯುವ ಮೂಲಕ ಜುರೆಲ್ 4 ವಿಕೆಟ್ ಉರುಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.

ಇದಕ್ಕೂ ಮುನ್ನ 94 ರನ್ ಬಾರಿಸಿ ಆಡುತ್ತಿದ್ದ ಬೆನ್ ಡಕೆಟ್, ಅನ್ಶುಲ್ ಕಾಂಬೋಜ್ ಅವರ ಎಸೆತದಲ್ಲಿ ಕೀಪರ್ ಜುರೆಲ್​ಗೆ ಕ್ಯಾಚಿತ್ತು ಔಟಾದರು. ನಂತರ ಬುಮ್ರಾ ಬೌಲಿಂಗ್‌ನಲ್ಲಿ ಜೇಮಿ ಸ್ಮಿತ್ ನೀಡಿದ ಕ್ಯಾಚ್ ಅನ್ನು ಹಿಡಿಯುವ ಮೂಲಕ ಜುರೆಲ್ 4 ವಿಕೆಟ್ ಉರುಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.

4 / 5
ಇದಕ್ಕೂ ಮುನ್ನ ನಡೆದಿದ್ದ ಲಾರ್ಡ್ಸ್ ಟೆಸ್ಟ್‌ನಲ್ಲಿಯೂ ಧ್ರುವ್ ಜುರೆಲ್ ಬದಲಿ ವಿಕೆಟ್ ಕೀಪರ್ ಆಗಿ ಕಾಣಿಸಿಕೊಂಡಿದ್ದರು. ಆ ಪಂದ್ಯದಲ್ಲಿ ಅವರು ವಿಕೆಟ್ ಕೀಪರ್ ಆಗಿ 3 ವಿಕೆಟ್ ಕಬಳಿಸಿದರು. 2021 ರಲ್ಲಿ ಕಾನ್ಪುರದಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಕೆಎಸ್ ಭರತ್ ಬದಲಿ ವಿಕೆಟ್ ಕೀಪರ್ ಆಗಿ ಆಡಿ 3 ವಿಕೆಟ್ ಕಬಳಿಸಿದ್ದರು. ಈಗ ಜುರೆಲ್, ಭರತ್ ಅವರನ್ನು ಹಿಂದಿಕ್ಕಿದ್ದಾರೆ.

ಇದಕ್ಕೂ ಮುನ್ನ ನಡೆದಿದ್ದ ಲಾರ್ಡ್ಸ್ ಟೆಸ್ಟ್‌ನಲ್ಲಿಯೂ ಧ್ರುವ್ ಜುರೆಲ್ ಬದಲಿ ವಿಕೆಟ್ ಕೀಪರ್ ಆಗಿ ಕಾಣಿಸಿಕೊಂಡಿದ್ದರು. ಆ ಪಂದ್ಯದಲ್ಲಿ ಅವರು ವಿಕೆಟ್ ಕೀಪರ್ ಆಗಿ 3 ವಿಕೆಟ್ ಕಬಳಿಸಿದರು. 2021 ರಲ್ಲಿ ಕಾನ್ಪುರದಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಕೆಎಸ್ ಭರತ್ ಬದಲಿ ವಿಕೆಟ್ ಕೀಪರ್ ಆಗಿ ಆಡಿ 3 ವಿಕೆಟ್ ಕಬಳಿಸಿದ್ದರು. ಈಗ ಜುರೆಲ್, ಭರತ್ ಅವರನ್ನು ಹಿಂದಿಕ್ಕಿದ್ದಾರೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ