AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhruv Jurel: ಧ್ರುವ್ ಜುರೇಲ್ ಟೀಮ್ ಇಂಡಿಯಾ ಆಯ್ಕೆಗೆ ಅರ್ಹರೇ?

Dhruv Jurel: ಏಕೆಂದರೆ ಧ್ರುವ್ ಜುರೇಲ್ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಆಡಿರುವುದು ಕೇವಲ 15 ಪಂದ್ಯಗಳನ್ನು ಮಾತ್ರ. ಅಂದರೆ ಕೇವಲ 15 ಮ್ಯಾಚ್​ಗಳನ್ನು ಆಡಿದ ಅನುಭವವಿರುವ ಆಟಗಾರನನ್ನು ರಾಷ್ಟ್ರೀಯ ತಂಡಕ್ಕೆ ಆಯ್ಕೆ ಮಾಡಿರುವ ಬಗ್ಗೆ ಅಪಸ್ವರಗಳು ಕೇಳಿ ಬರುತ್ತಿವೆ.

TV9 Web
| Updated By: ಝಾಹಿರ್ ಯೂಸುಫ್

Updated on: Jan 14, 2024 | 2:02 PM

ಇಂಗ್ಲೆಂಡ್ ವಿರುದ್ಧದ ಟೆಸ್ಟ್​ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಭಾರತ ತಂಡವನ್ನು ಘೋಷಿಸಲಾಗಿದೆ. 16 ಸದಸ್ಯರ ಈ ಬಳಗದಲ್ಲಿ 22 ವರ್ಷದ ಯುವ ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೇಲ್ ಕಾಣಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಟೆಸ್ಟ್ ತಂಡದ ಆಯ್ಕೆಗೆ ಅವರು ಅರ್ಹರೇ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್​ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಭಾರತ ತಂಡವನ್ನು ಘೋಷಿಸಲಾಗಿದೆ. 16 ಸದಸ್ಯರ ಈ ಬಳಗದಲ್ಲಿ 22 ವರ್ಷದ ಯುವ ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೇಲ್ ಕಾಣಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಟೆಸ್ಟ್ ತಂಡದ ಆಯ್ಕೆಗೆ ಅವರು ಅರ್ಹರೇ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

1 / 7
ಏಕೆಂದರೆ ಧ್ರುವ್ ಜುರೇಲ್ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಆಡಿರುವುದು ಕೇವಲ 15 ಪಂದ್ಯಗಳನ್ನು ಮಾತ್ರ. ಅಂದರೆ ಕೇವಲ 15 ಮ್ಯಾಚ್​ಗಳನ್ನು ಆಡಿದ ಅನುಭವವಿರುವ ಆಟಗಾರನನ್ನು ರಾಷ್ಟ್ರೀಯ ತಂಡಕ್ಕೆ ಆಯ್ಕೆ ಮಾಡಿರುವ ಬಗ್ಗೆ ಅಪಸ್ವರಗಳು ಕೇಳಿ ಬರುತ್ತಿವೆ. ಇದಕ್ಕೆ ಮುಖ್ಯ ಕಾರಣ ಧ್ರುವ್ ಜುರೇಲ್ ಅವರ ಅಂಕಿ ಅಂಶಗಳು.

ಏಕೆಂದರೆ ಧ್ರುವ್ ಜುರೇಲ್ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಆಡಿರುವುದು ಕೇವಲ 15 ಪಂದ್ಯಗಳನ್ನು ಮಾತ್ರ. ಅಂದರೆ ಕೇವಲ 15 ಮ್ಯಾಚ್​ಗಳನ್ನು ಆಡಿದ ಅನುಭವವಿರುವ ಆಟಗಾರನನ್ನು ರಾಷ್ಟ್ರೀಯ ತಂಡಕ್ಕೆ ಆಯ್ಕೆ ಮಾಡಿರುವ ಬಗ್ಗೆ ಅಪಸ್ವರಗಳು ಕೇಳಿ ಬರುತ್ತಿವೆ. ಇದಕ್ಕೆ ಮುಖ್ಯ ಕಾರಣ ಧ್ರುವ್ ಜುರೇಲ್ ಅವರ ಅಂಕಿ ಅಂಶಗಳು.

2 / 7
ಫಸ್ಟ್ ಕ್ಲಾಸ್​ ಕ್ರಿಕೆಟ್​ನಲ್ಲಿ ಧ್ರುವ್ ಜುರೇಲ್ ಕೇವಲ 19 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 1 ಶತಕ ಹಾಗೂ 5 ಅರ್ಧಶತಕಗಳೊಂದಿಗೆ ಒಟ್ಟು 790 ರನ್​ ಕಲೆಹಾಕಿದ್ದಾರೆ. ಅಂದರೆ ಧ್ರುವ್​ ಜುರೇಲ್ 46.47 ಸರಾಸರಿಯಲ್ಲಿ ರನ್​ಗಳಿಸಿದ್ದಾರೆ.

ಫಸ್ಟ್ ಕ್ಲಾಸ್​ ಕ್ರಿಕೆಟ್​ನಲ್ಲಿ ಧ್ರುವ್ ಜುರೇಲ್ ಕೇವಲ 19 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 1 ಶತಕ ಹಾಗೂ 5 ಅರ್ಧಶತಕಗಳೊಂದಿಗೆ ಒಟ್ಟು 790 ರನ್​ ಕಲೆಹಾಕಿದ್ದಾರೆ. ಅಂದರೆ ಧ್ರುವ್​ ಜುರೇಲ್ 46.47 ಸರಾಸರಿಯಲ್ಲಿ ರನ್​ಗಳಿಸಿದ್ದಾರೆ.

3 / 7
ಇದು ವಿಕೆಟ್ ಕೀಪರ್ ಬ್ಯಾಟರ್​ಗಳಾದ ಸರ್ಫರಾಝ್ ಖಾನ್ ಹಾಗೂ ಶೆಲ್ಡನ್ ಜಾಕ್ಸನ್ ಅವರ ಸರಾಸರಿಗಿಂತ ಕಡಿಮೆ ಎಂಬುದು ಇಲ್ಲಿ ಉಲ್ಲೇಖಾರ್ಹ. ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 153 ಇನಿಂಗ್ಸ್​ ಆಡಿರುವ ಶೆಲ್ಡನ್ ಜಾಕ್ಸನ್ 20 ಶತಕ ಹಾಗೂ 37 ಅರ್ಧಶತಕಗಳೊಂದಿಗೆ 6678 ರನ್ ಪೇರಿಸಿದ್ದಾರೆ. ಇದಾಗ್ಯೂ ಅವರಿಗೆ ಒಮ್ಮೆಯೂ ಭಾರತ ಟೆಸ್ಟ್​ ತಂಡದಲ್ಲಿ ಚಾನ್ಸ್ ನೀಡಲಾಗಿಲ್ಲ.

ಇದು ವಿಕೆಟ್ ಕೀಪರ್ ಬ್ಯಾಟರ್​ಗಳಾದ ಸರ್ಫರಾಝ್ ಖಾನ್ ಹಾಗೂ ಶೆಲ್ಡನ್ ಜಾಕ್ಸನ್ ಅವರ ಸರಾಸರಿಗಿಂತ ಕಡಿಮೆ ಎಂಬುದು ಇಲ್ಲಿ ಉಲ್ಲೇಖಾರ್ಹ. ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 153 ಇನಿಂಗ್ಸ್​ ಆಡಿರುವ ಶೆಲ್ಡನ್ ಜಾಕ್ಸನ್ 20 ಶತಕ ಹಾಗೂ 37 ಅರ್ಧಶತಕಗಳೊಂದಿಗೆ 6678 ರನ್ ಪೇರಿಸಿದ್ದಾರೆ. ಇದಾಗ್ಯೂ ಅವರಿಗೆ ಒಮ್ಮೆಯೂ ಭಾರತ ಟೆಸ್ಟ್​ ತಂಡದಲ್ಲಿ ಚಾನ್ಸ್ ನೀಡಲಾಗಿಲ್ಲ.

4 / 7
ಮತ್ತೊಂದೆಡೆ ಸರ್ಫರಾಝ್ ಖಾನ್ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ರನ್ ಪ್ರವಾಹವೇ ಹರಿಸಿದ್ದಾರೆ. ಫಸ್ಟ್ ಕ್ಲಾಸ್​ ಕ್ರಿಕೆಟ್​ನಲ್ಲಿ 63 ಇನಿಂಗ್ಸ್ ಆಡಿರುವ ಸರ್ಫರಾಝ್ 13 ಶತಕ ಹಾಗೂ 10 ಅರ್ಧಶತಕಗಳೊಂದಿಗೆ ಒಟ್ಟು 3692 ರನ್ ಪೇರಿಸಿದ್ದಾರೆ. ಅಂದರೆ 69.66 ಸರಾಸರಿಯಲ್ಲಿ ರನ್ ಪೇರಿಸಿರುವ ವಿಕೆಟ್ ಕೀಪರ್ ಬ್ಯಾಟರ್​ ಸರ್ಫರಾಝ್ ಭಾರತ ತಂಡದ ಆಯ್ಕೆಗೆ ಅರ್ಹರಾಗಿದ್ದರು.

ಮತ್ತೊಂದೆಡೆ ಸರ್ಫರಾಝ್ ಖಾನ್ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ರನ್ ಪ್ರವಾಹವೇ ಹರಿಸಿದ್ದಾರೆ. ಫಸ್ಟ್ ಕ್ಲಾಸ್​ ಕ್ರಿಕೆಟ್​ನಲ್ಲಿ 63 ಇನಿಂಗ್ಸ್ ಆಡಿರುವ ಸರ್ಫರಾಝ್ 13 ಶತಕ ಹಾಗೂ 10 ಅರ್ಧಶತಕಗಳೊಂದಿಗೆ ಒಟ್ಟು 3692 ರನ್ ಪೇರಿಸಿದ್ದಾರೆ. ಅಂದರೆ 69.66 ಸರಾಸರಿಯಲ್ಲಿ ರನ್ ಪೇರಿಸಿರುವ ವಿಕೆಟ್ ಕೀಪರ್ ಬ್ಯಾಟರ್​ ಸರ್ಫರಾಝ್ ಭಾರತ ತಂಡದ ಆಯ್ಕೆಗೆ ಅರ್ಹರಾಗಿದ್ದರು.

5 / 7
ಇದಾಗ್ಯೂ ಫಸ್ಟ್ ಕ್ಲಾಸ್ ಕ್ರಿಕೆಟ್​ನಲ್ಲಿ ಕೇವಲ 790 ರನ್ ಕಲೆಹಾಕಿರುವ ಧ್ರುವ್ ಜುರೇಲ್ ಅವರನ್ನು ಬಿಸಿಸಿಐ ಯಾವ ಮಾನದಂಡದ ಮೇಲೆ  ಆಯ್ಕೆ ಮಾಡಿದೆ ಎಂಬುದೇ ಇಲ್ಲಿ ದೊಡ್ಡ ಪ್ರಶ್ನೆ. ಒಟ್ಟಿನಲ್ಲಿ ದೇಶೀಯ ಅಂಗಳದಲ್ಲಿ ಕೆಲ ಆಟಗಾರರು ಬೆವರು ಸುರಿಸಿ ರನ್ ಮಳೆ ಹರಿಸಿದರೂ ಪ್ರತಿಭೆಗೆ ತಕ್ಕ ಫಲ ಸಿಗುತ್ತಿಲ್ಲ ಎಂಬುದಕ್ಕೆ ಇದುವೇ ಸಾಕ್ಷಿ.

ಇದಾಗ್ಯೂ ಫಸ್ಟ್ ಕ್ಲಾಸ್ ಕ್ರಿಕೆಟ್​ನಲ್ಲಿ ಕೇವಲ 790 ರನ್ ಕಲೆಹಾಕಿರುವ ಧ್ರುವ್ ಜುರೇಲ್ ಅವರನ್ನು ಬಿಸಿಸಿಐ ಯಾವ ಮಾನದಂಡದ ಮೇಲೆ ಆಯ್ಕೆ ಮಾಡಿದೆ ಎಂಬುದೇ ಇಲ್ಲಿ ದೊಡ್ಡ ಪ್ರಶ್ನೆ. ಒಟ್ಟಿನಲ್ಲಿ ದೇಶೀಯ ಅಂಗಳದಲ್ಲಿ ಕೆಲ ಆಟಗಾರರು ಬೆವರು ಸುರಿಸಿ ರನ್ ಮಳೆ ಹರಿಸಿದರೂ ಪ್ರತಿಭೆಗೆ ತಕ್ಕ ಫಲ ಸಿಗುತ್ತಿಲ್ಲ ಎಂಬುದಕ್ಕೆ ಇದುವೇ ಸಾಕ್ಷಿ.

6 / 7
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ ), ಶುಭ್‌ಮನ್‌ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್‌ ಅಯ್ಯರ್, ಕೆಎಲ್ ರಾಹುಲ್ (ವಿಕೇಟ್ ಕೀಪರ್), ಕೆಎಸ್ ಭರತ್ (ವಿಕೇಟ್ ಕೀಪರ್), ಧ್ರುವ್ ಜುರೇಲ್ (ವಿಕೇಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ ), ಶುಭ್‌ಮನ್‌ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್‌ ಅಯ್ಯರ್, ಕೆಎಲ್ ರಾಹುಲ್ (ವಿಕೇಟ್ ಕೀಪರ್), ಕೆಎಸ್ ಭರತ್ (ವಿಕೇಟ್ ಕೀಪರ್), ಧ್ರುವ್ ಜುರೇಲ್ (ವಿಕೇಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್.

7 / 7
Follow us
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್