Dinesh Karthik: ಆರ್​ಸಿಬಿಗೆ ದೊಡ್ಡ ಆಘಾತ: ದಿನೇಶ್ ಕಾರ್ತಿಕ್ ಆರೋಗ್ಯದಲ್ಲಿ ಏರುಪೇರು

Updated on: May 11, 2023 | 9:41 AM

RCB, IPL 2023: ಸಂಕಷ್ಟದಲ್ಲಿರುವ ಆರ್​ಸಿಬಿಗೆ ಮತ್ತೊಂದು ಆಘಾತ ಉಂಟಾಗಿದೆ. ತಂಡದ ಪ್ರಮುಖ ವಿಕೆಟ್ ಕೀಪರ್, ಬ್ಯಾಟರ್ ದಿನೇಶ್ ಕಾರ್ತಿಕ್ ಆರೋಗ್ಯದಲ್ಲಿ ಏರು-ಪೇರಾಗಿದೆ. ಅನಾರೋಗ್ಯದಿಂದ ಕಾರ್ತಿಕ್ ಬಳಲುತ್ತಿದ್ದಾರೆ.

1 / 7
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೈಫಲ್ಯ ಮುಂದುವರೆದಿದೆ. ಆಡಿರುವ 11 ಪಂದ್ಯಗಳಲ್ಲಿ ಐದು ಗೆಲುವು ಹಾಗೂ ಆರು ಪಂದ್ಯಗಳಲ್ಲಿ ಸೋಲು ಕಂಡು 10 ಅಂಕದೊಂದಿಗೆ ಏಳನೇ ಸ್ಥಾನದಲ್ಲಿದೆ.

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೈಫಲ್ಯ ಮುಂದುವರೆದಿದೆ. ಆಡಿರುವ 11 ಪಂದ್ಯಗಳಲ್ಲಿ ಐದು ಗೆಲುವು ಹಾಗೂ ಆರು ಪಂದ್ಯಗಳಲ್ಲಿ ಸೋಲು ಕಂಡು 10 ಅಂಕದೊಂದಿಗೆ ಏಳನೇ ಸ್ಥಾನದಲ್ಲಿದೆ.

2 / 7
ಪಾಯಿಂಟ್ ಟೇಬಲ್​ನಲ್ಲಿ ಮೈನಸ್ ರನ್​ರೇಟ್​ನಲ್ಲಿರುವ ಆರ್​ಸಿಬಿಗೆ ಪ್ಲೇ ಆಫ್ ಹಾದಿ ದುರ್ಗಮವಾಗಿದೆ. ಉಳಿದಿರುವ ಮೂರು ಪಂದ್ಯಗಳಲ್ಲಿ ದೊಡ್ಡ ಅಂತರದ ಗೆಲುವು ಸಾಧಿಸಿದರೆ ಮಾತ್ರ ಮುಂದಿನ ಹಂತಕ್ಕೆ ತೇರ್ಗಡೆ ಸಾಧ್ಯ. ಇದರ ಜೊತೆಗೆ ಇತರೆ ತಂಡಗಳ ಫಲಿತಾಂಶ ಕೂಡ ಮುಖ್ಯವಾಗುತ್ತದೆ.

ಪಾಯಿಂಟ್ ಟೇಬಲ್​ನಲ್ಲಿ ಮೈನಸ್ ರನ್​ರೇಟ್​ನಲ್ಲಿರುವ ಆರ್​ಸಿಬಿಗೆ ಪ್ಲೇ ಆಫ್ ಹಾದಿ ದುರ್ಗಮವಾಗಿದೆ. ಉಳಿದಿರುವ ಮೂರು ಪಂದ್ಯಗಳಲ್ಲಿ ದೊಡ್ಡ ಅಂತರದ ಗೆಲುವು ಸಾಧಿಸಿದರೆ ಮಾತ್ರ ಮುಂದಿನ ಹಂತಕ್ಕೆ ತೇರ್ಗಡೆ ಸಾಧ್ಯ. ಇದರ ಜೊತೆಗೆ ಇತರೆ ತಂಡಗಳ ಫಲಿತಾಂಶ ಕೂಡ ಮುಖ್ಯವಾಗುತ್ತದೆ.

3 / 7
ಹೀಗೆ ಸಂಕಷ್ಟದಲ್ಲಿರುವ ಆರ್​ಸಿಬಿಗೆ ಮತ್ತೊಂದು ಆಘಾತ ಉಂಟಾಗಿದೆ. ತಂಡದ ಪ್ರಮುಖ ವಿಕೆಟ್ ಕೀಪರ್, ಬ್ಯಾಟರ್ ದಿನೇಶ್ ಕಾರ್ತಿಕ್ ಆರೋಗ್ಯದಲ್ಲಿ ಏರು-ಪೇರಾಗಿದೆ. ಅನಾರೋಗ್ಯದಿಂದ ಕಾರ್ತಿಕ್ ಬಳಲುತ್ತಿದ್ದಾರೆ.

ಹೀಗೆ ಸಂಕಷ್ಟದಲ್ಲಿರುವ ಆರ್​ಸಿಬಿಗೆ ಮತ್ತೊಂದು ಆಘಾತ ಉಂಟಾಗಿದೆ. ತಂಡದ ಪ್ರಮುಖ ವಿಕೆಟ್ ಕೀಪರ್, ಬ್ಯಾಟರ್ ದಿನೇಶ್ ಕಾರ್ತಿಕ್ ಆರೋಗ್ಯದಲ್ಲಿ ಏರು-ಪೇರಾಗಿದೆ. ಅನಾರೋಗ್ಯದಿಂದ ಕಾರ್ತಿಕ್ ಬಳಲುತ್ತಿದ್ದಾರೆ.

4 / 7
ಕಳೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ತಂಡಕ್ಕೆ ಉಪಯುಕ್ತ ಕಾಣಿಕೆ ನೀಡಿದ್ದರು. 18 ಎಸೆತಗಳಲ್ಲಿ 4 ಫೋರ್, 1 ಸಿಕ್ಸರ್​ನಿಂದ 30 ರನ್ ಗಳಿಸಿದ್ದರು. ಇಲ್ಲಿ ಔಟಾಗಿ ಪೆವಿಲಿಯನ್​ನತ್ತ ತೆರಳುತ್ತಿರುವಾಗ ಕಾರ್ತಿಕ್ ಜೋರಾಗಿ ಕೆಮ್ಮುತ್ತಿರುವುದು ಕಂಡುಬಂದಿದೆ.

ಕಳೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ತಂಡಕ್ಕೆ ಉಪಯುಕ್ತ ಕಾಣಿಕೆ ನೀಡಿದ್ದರು. 18 ಎಸೆತಗಳಲ್ಲಿ 4 ಫೋರ್, 1 ಸಿಕ್ಸರ್​ನಿಂದ 30 ರನ್ ಗಳಿಸಿದ್ದರು. ಇಲ್ಲಿ ಔಟಾಗಿ ಪೆವಿಲಿಯನ್​ನತ್ತ ತೆರಳುತ್ತಿರುವಾಗ ಕಾರ್ತಿಕ್ ಜೋರಾಗಿ ಕೆಮ್ಮುತ್ತಿರುವುದು ಕಂಡುಬಂದಿದೆ.

5 / 7
ಮುಂಬೈ ವಿರುದ್ಧದ ಪಂದ್ಯದ ಮಧ್ಯೆಯೇ ಕಾರ್ತಿಕ್ ಅವರ ಆರೋಗ್ಯದಲ್ಲಿ ತೊಂದರೆ ಉಂಟಾಗಿದೆ. ಹೀಗಾಗಿ ಅವರು ಆರ್​ಸಿಬಿ ಫೀಲ್ಡಿಂಗ್ ಮಾಡುವಾಗ ಮೈದಾನಕ್ಕೆ ಬರಲಿಲ್ಲ. ಈ ಬಗ್ಗೆ ತಂಡದ ಮುಖ್ಯ ಕೋಚ್ ಸಂಜಯ್ ಬಂಗಾರ್ ಮಾಹಿತಿ ನೀಡಿದ್ದಾರೆ.

ಮುಂಬೈ ವಿರುದ್ಧದ ಪಂದ್ಯದ ಮಧ್ಯೆಯೇ ಕಾರ್ತಿಕ್ ಅವರ ಆರೋಗ್ಯದಲ್ಲಿ ತೊಂದರೆ ಉಂಟಾಗಿದೆ. ಹೀಗಾಗಿ ಅವರು ಆರ್​ಸಿಬಿ ಫೀಲ್ಡಿಂಗ್ ಮಾಡುವಾಗ ಮೈದಾನಕ್ಕೆ ಬರಲಿಲ್ಲ. ಈ ಬಗ್ಗೆ ತಂಡದ ಮುಖ್ಯ ಕೋಚ್ ಸಂಜಯ್ ಬಂಗಾರ್ ಮಾಹಿತಿ ನೀಡಿದ್ದಾರೆ.

6 / 7
''ಪಂದ್ಯದ ಮಧ್ಯೆ ದಿನೇಶ್ ಕಾರ್ತಿಕ್ ಅವರು ಅಸ್ವಸ್ಥರಾಗಿದ್ದರು. ಹೊಟ್ಟೆಯಲ್ಲಿ ಸಮಸ್ಯೆ ಉಂಟಾಗಿತ್ತು. ಔಟಾಗಿ ವಾಪಸು ಬರುವಾಗ ವಾಂತಿ ಕೂಡ ಮಾಡಿಕೊಂಡರು. ಔಷಧಿ ನೀಡಲಾಗಿದೆ. ಅವರು ನಮ್ಮ ತಂಡದ ಪ್ರಮುಖ ಸದಸ್ಯರರು. ಪಂದ್ಯದಲ್ಲಿ ಅವರು ದೊಡ್ಡ ಪಾತ್ರವನ್ನು ವಹಿಸುತ್ತಾರೆ," ಎಂದು ಬಂಗಾರ್ ಹೇಳಿದ್ದಾರೆ.

''ಪಂದ್ಯದ ಮಧ್ಯೆ ದಿನೇಶ್ ಕಾರ್ತಿಕ್ ಅವರು ಅಸ್ವಸ್ಥರಾಗಿದ್ದರು. ಹೊಟ್ಟೆಯಲ್ಲಿ ಸಮಸ್ಯೆ ಉಂಟಾಗಿತ್ತು. ಔಟಾಗಿ ವಾಪಸು ಬರುವಾಗ ವಾಂತಿ ಕೂಡ ಮಾಡಿಕೊಂಡರು. ಔಷಧಿ ನೀಡಲಾಗಿದೆ. ಅವರು ನಮ್ಮ ತಂಡದ ಪ್ರಮುಖ ಸದಸ್ಯರರು. ಪಂದ್ಯದಲ್ಲಿ ಅವರು ದೊಡ್ಡ ಪಾತ್ರವನ್ನು ವಹಿಸುತ್ತಾರೆ," ಎಂದು ಬಂಗಾರ್ ಹೇಳಿದ್ದಾರೆ.

7 / 7
ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ರಾಜಸ್ಥಾನ್ ರಾಯಲ್ಸ್ ವಿರುದ್ಧ ಆಡಲಿದೆ. ಜೈಪುರದ ಸವಾಯ್ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ಈ ಪಂದ್ಯ ಏರ್ಪಡಿಸಲಾಗಿದ್ದು, ಮಧ್ಯಾಹ್ನ 3.30ಕ್ಕೆ ಶುರುವಾಗಲಿದೆ. ಈ ಹೊತ್ತಿಗೆ ಕಾರ್ತಿಕ್ ಗುಣಮುಖರಾಗುತ್ತಾ ನೋಡಬೇಕು.

ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ರಾಜಸ್ಥಾನ್ ರಾಯಲ್ಸ್ ವಿರುದ್ಧ ಆಡಲಿದೆ. ಜೈಪುರದ ಸವಾಯ್ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ಈ ಪಂದ್ಯ ಏರ್ಪಡಿಸಲಾಗಿದ್ದು, ಮಧ್ಯಾಹ್ನ 3.30ಕ್ಕೆ ಶುರುವಾಗಲಿದೆ. ಈ ಹೊತ್ತಿಗೆ ಕಾರ್ತಿಕ್ ಗುಣಮುಖರಾಗುತ್ತಾ ನೋಡಬೇಕು.

Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us