AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dipendra Singh Airee: ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿ ವಿಶ್ವದಾಖಲೆ ಬರೆದ ದೀಪೇಂದ್ರ

Dipendra Singh Airee: ನೇಪಾಳ ತಂಡದ ಆಲ್​ರೌಂಡರ್ ದೀಪೇಂದ್ರ ಸಿಂಗ್ ಐರಿ ಮತ್ತೊಮ್ಮೆ ಸಂಚಲನ ಸೃಷ್ಟಿಸಿದ್ದಾರೆ. ಈ ಬಾರಿ ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸುವ ಮೂಲಕ ಎಂಬುದು ವಿಶೇಷ. ಈ ಹಿಂದೆ 2023 ರಲ್ಲಿ ಮಂಗೋಲಿಯಾ ವಿರುದ್ಧದ ಪಂದ್ಯದಲ್ಲಿ ಐರಿ ಕೇವಲ 9 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಒಂದೇ ಓವರ್​ನಲ್ಲಿ 6 ಸಿಕ್ಸರ್ ಸಿಡಿಸುವ ಮೂಲಕ ಮತ್ತೊಂದು ದಾಖಲೆ ಬರೆದಿದ್ದಾರೆ.

TV9 Web
| Edited By: |

Updated on: Apr 14, 2024 | 7:07 AM

Share
ಒಂದೇ ಓವರ್​ನಲ್ಲಿ 6 ಸಿಕ್ಸ್​ ಬಾರಿಸುವ ಮೂಲಕ ನೇಪಾಳ ಬ್ಯಾಟರ್ ದೀಪೇಂದ್ರ ಸಿಂಗ್ ಐರಿ (Dipendra Singh Airee) ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ವಿಶ್ವದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಒಂದೇ ಓವರ್​ನಲ್ಲಿ 6 ಸಿಕ್ಸ್​ ಬಾರಿಸುವ ಮೂಲಕ ನೇಪಾಳ ಬ್ಯಾಟರ್ ದೀಪೇಂದ್ರ ಸಿಂಗ್ ಐರಿ (Dipendra Singh Airee) ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ವಿಶ್ವದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

1 / 6
ಒಮಾನ್‌ನ ಎಐ ಅಮರತ್ ಕ್ರಿಕೆಟ್ ಮೈದಾನದಲ್ಲಿ ನಡೆದ ಎಸಿಸಿ ಪುರುಷರ ಪ್ರೀಮಿಯರ್ ಕಪ್‌ನ ಏಳನೇ ಪಂದ್ಯದಲ್ಲಿ ಖತಾರ್ ಹಾಗೂ ನೇಪಾಳ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದ 20ನೇ ಓವರ್​ ಎಸೆದ ಕ್ರಮಾನ್ ಖಾನ್ ಎಸೆತಗಳಿಗೆ ಐರಿ ಬ್ಯಾಕ್ ಟು ಬ್ಯಾಕ್ ಸಿಕ್ಸ್ ಸಿಡಿಸಿದರು. ಈ ಮೂಲಕ 6 ಎಸೆತಗಳಲ್ಲಿ 6 ಸಿಕ್ಸ್ ಬಾರಿಸಿದ ವಿಶೇಷ ಸಾಧನೆ ಮಾಡಿದರು.

ಒಮಾನ್‌ನ ಎಐ ಅಮರತ್ ಕ್ರಿಕೆಟ್ ಮೈದಾನದಲ್ಲಿ ನಡೆದ ಎಸಿಸಿ ಪುರುಷರ ಪ್ರೀಮಿಯರ್ ಕಪ್‌ನ ಏಳನೇ ಪಂದ್ಯದಲ್ಲಿ ಖತಾರ್ ಹಾಗೂ ನೇಪಾಳ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದ 20ನೇ ಓವರ್​ ಎಸೆದ ಕ್ರಮಾನ್ ಖಾನ್ ಎಸೆತಗಳಿಗೆ ಐರಿ ಬ್ಯಾಕ್ ಟು ಬ್ಯಾಕ್ ಸಿಕ್ಸ್ ಸಿಡಿಸಿದರು. ಈ ಮೂಲಕ 6 ಎಸೆತಗಳಲ್ಲಿ 6 ಸಿಕ್ಸ್ ಬಾರಿಸಿದ ವಿಶೇಷ ಸಾಧನೆ ಮಾಡಿದರು.

2 / 6
ಇದಕ್ಕೂ ಮುನ್ನ ಟಿ20 ಕ್ರಿಕೆಟ್​ನಲ್ಲಿ ಯುವರಾಜ್ ಸಿಂಗ್ ಹಾಗೂ ಕೀರನ್ ಪೊಲಾರ್ಡ್ 6 ಎಸೆತಗಳಲ್ಲಿ 6 ಸಿಕ್ಸ್ ಬಾರಿಸಿ ಅಬ್ಬರಿಸಿದ್ದರು. 2007 ರಲ್ಲಿ ಇಂಗ್ಲೆಂಡ್ ವೇಗಿ ಸ್ಟುವರ್ಟ್ ಬ್ರಾಡ್ ಎಸೆದ ಒಂದೇ ಓವರ್​ನಲ್ಲಿ 6 ಸಿಕ್ಸರ್ ಸಿಡಿಸುವ ಮೂಲಕ ಯುವಿ ವಿಶ್ವ ದಾಖಲೆ ನಿರ್ಮಿಸಿದ್ದರು.

ಇದಕ್ಕೂ ಮುನ್ನ ಟಿ20 ಕ್ರಿಕೆಟ್​ನಲ್ಲಿ ಯುವರಾಜ್ ಸಿಂಗ್ ಹಾಗೂ ಕೀರನ್ ಪೊಲಾರ್ಡ್ 6 ಎಸೆತಗಳಲ್ಲಿ 6 ಸಿಕ್ಸ್ ಬಾರಿಸಿ ಅಬ್ಬರಿಸಿದ್ದರು. 2007 ರಲ್ಲಿ ಇಂಗ್ಲೆಂಡ್ ವೇಗಿ ಸ್ಟುವರ್ಟ್ ಬ್ರಾಡ್ ಎಸೆದ ಒಂದೇ ಓವರ್​ನಲ್ಲಿ 6 ಸಿಕ್ಸರ್ ಸಿಡಿಸುವ ಮೂಲಕ ಯುವಿ ವಿಶ್ವ ದಾಖಲೆ ನಿರ್ಮಿಸಿದ್ದರು.

3 / 6
ಇದಾದ ಬಳಿಕ 2021 ರಲ್ಲಿ ಶ್ರೀಲಂಕಾ ಸ್ಪಿನ್ನರ್​ ಅಕಿಲ ಧನಂಜಯ ಓವರ್​ನಲ್ಲಿ ವೆಸ್ಟ್ ಇಂಡೀಸ್ ದಾಂಡಿಗ ಕೀರನ್ ಪೊಲಾರ್ಡ್ 6 ಸಿಕ್ಸ್ ಸಿಡಿಸಿದ್ದರು. ಈ ಮೂಲಕ ಯುವರಾಜ್ ಸಿಂಗ್ ದಾಖಲೆಯನ್ನು ಸರಿಗಟ್ಟಿದ್ದರು.

ಇದಾದ ಬಳಿಕ 2021 ರಲ್ಲಿ ಶ್ರೀಲಂಕಾ ಸ್ಪಿನ್ನರ್​ ಅಕಿಲ ಧನಂಜಯ ಓವರ್​ನಲ್ಲಿ ವೆಸ್ಟ್ ಇಂಡೀಸ್ ದಾಂಡಿಗ ಕೀರನ್ ಪೊಲಾರ್ಡ್ 6 ಸಿಕ್ಸ್ ಸಿಡಿಸಿದ್ದರು. ಈ ಮೂಲಕ ಯುವರಾಜ್ ಸಿಂಗ್ ದಾಖಲೆಯನ್ನು ಸರಿಗಟ್ಟಿದ್ದರು.

4 / 6
ಇದೀಗ ಖತಾರ್ ವೇಗಿ ಕಮ್ರಾನ್ ಖಾನ್ ಓವರ್​ನಲ್ಲಿ ಬ್ಯಾಕ್ ಟು ಬ್ಯಾಕ್ 6 ಸಿಕ್ಸ್​ಗಳನ್ನು ಬಾರಿಸುವ ಮೂಲಕ ದೀಪೇಂದ್ರ ಸಿಂಗ್ ಐರಿ ಟಿ20 ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ವಿಶ್ವದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದೀಗ ಖತಾರ್ ವೇಗಿ ಕಮ್ರಾನ್ ಖಾನ್ ಓವರ್​ನಲ್ಲಿ ಬ್ಯಾಕ್ ಟು ಬ್ಯಾಕ್ 6 ಸಿಕ್ಸ್​ಗಳನ್ನು ಬಾರಿಸುವ ಮೂಲಕ ದೀಪೇಂದ್ರ ಸಿಂಗ್ ಐರಿ ಟಿ20 ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ವಿಶ್ವದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 6
ಇನ್ನು ಈ ಪಂದ್ಯದಲ್ಲಿ 21 ಎಸೆತಗಳನ್ನು ಎದುರಿಸಿದ ದೀಪೇಂದ್ರ ಸಿಂಗ್ ಐರಿ 7 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ ಅಜೇಯ 64 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನಿಂದ ನೇಪಾಳ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 210 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಖತಾರ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 178 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ನೇಪಾಳ ತಂಡವು 32 ರನ್​ಗಳ ಜಯ ಸಾಧಿಸಿದೆ.

ಇನ್ನು ಈ ಪಂದ್ಯದಲ್ಲಿ 21 ಎಸೆತಗಳನ್ನು ಎದುರಿಸಿದ ದೀಪೇಂದ್ರ ಸಿಂಗ್ ಐರಿ 7 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ ಅಜೇಯ 64 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನಿಂದ ನೇಪಾಳ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 210 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಖತಾರ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 178 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ನೇಪಾಳ ತಂಡವು 32 ರನ್​ಗಳ ಜಯ ಸಾಧಿಸಿದೆ.

6 / 6
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್