AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DPL 2024: ಚೊಚ್ಚಲ ಸೆಂಚುರಿ ಸಿಡಿಸಿ ದಾಖಲೆ ಬರೆದ ಆರ್ಯ

Delhi Premier League 2024: ಡೆಲ್ಲಿ ಪ್ರೀಮಿಯರ್ ಲೀಗ್​ ಟೂರ್ನಿಯಲ್ಲಿ 235 ರನ್ ಬಾರಿಸುವ ಮೂಲಕ ಡೆಲ್ಲಿ ಸೂಪರ್ ಸ್ಟಾರ್ಸ್ ತಂಡ ಹೊಸ ದಾಖಲೆ ನಿರ್ಮಿಸಿದೆ. ಈ ಮೂಲಕ ಡಿಪಿಎಲ್​ನಲ್ಲಿ ಅತ್ಯಧಿಕ ಸ್ಕೋರ್​ಗಳಿಸಿದ ತಂಡವೆನಿಸಿಕೊಂಡಿದೆ. ಇದೇ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ಡಿಪಿಎಲ್​ನಲ್ಲಿ ಚೊಚ್ಚಲ ಸೆಂಚುರಿ ಸಿಡಿಸಿದ ದಾಖಲೆಯನ್ನು ಪ್ರಿಯಾಂಶ್ ಆರ್ಯ ತಮ್ಮದಾಗಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Aug 28, 2024 | 11:29 AM

Share
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಪ್ರೀಮಿಯರ್ ಲೀಗ್ ಟಿ20 ಟೂರ್ನಿಯ 15ನೇ ಪಂದ್ಯದಲ್ಲಿ ಎಡಗೈ ದಾಂಡಿಗ ಪ್ರಿಯಾಂಶ್ ಆರ್ಯ ಸ್ಪೋಟಕ ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ಈ ಶತಕದೊಂದಿಗೆ ಡೆಲ್ಲಿ ಪ್ರೀಮಿಯರ್ ಲೀಗ್​ನಲ್ಲಿ ಶತಕ ಬಾರಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಪ್ರೀಮಿಯರ್ ಲೀಗ್ ಟಿ20 ಟೂರ್ನಿಯ 15ನೇ ಪಂದ್ಯದಲ್ಲಿ ಎಡಗೈ ದಾಂಡಿಗ ಪ್ರಿಯಾಂಶ್ ಆರ್ಯ ಸ್ಪೋಟಕ ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ಈ ಶತಕದೊಂದಿಗೆ ಡೆಲ್ಲಿ ಪ್ರೀಮಿಯರ್ ಲೀಗ್​ನಲ್ಲಿ ಶತಕ ಬಾರಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

1 / 5
ಈ ಪಂದ್ಯದಲ್ಲಿ ಟಾಸ್ ಗೆದ್ದ ಪುರಾಣಿ ಡೆಲ್ಲಿ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಸೌತ್ ಡೆಲ್ಲಿ ಸೂಪರ್ ಸ್ಟಾರ್ಸ್ ತಂಡಕ್ಕೆ ಪ್ರಿಯಾಂಶ್ ಆರ್ಯ ಹಾಗೂ ಸಾರ್ಥಕ್ ರೇ ಸ್ಪೋಟಕ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 101 ರನ್​ಗಳ ಜೊತೆಯಾಟವಾಡಿದ ಬಳಿಕ ಸಾರ್ಥಕ್ (49) ವಿಕೆಟ್ ಒಪ್ಪಿಸಿದರು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಪುರಾಣಿ ಡೆಲ್ಲಿ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಸೌತ್ ಡೆಲ್ಲಿ ಸೂಪರ್ ಸ್ಟಾರ್ಸ್ ತಂಡಕ್ಕೆ ಪ್ರಿಯಾಂಶ್ ಆರ್ಯ ಹಾಗೂ ಸಾರ್ಥಕ್ ರೇ ಸ್ಪೋಟಕ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 101 ರನ್​ಗಳ ಜೊತೆಯಾಟವಾಡಿದ ಬಳಿಕ ಸಾರ್ಥಕ್ (49) ವಿಕೆಟ್ ಒಪ್ಪಿಸಿದರು.

2 / 5
ಮತ್ತೊಂದೆಡೆ ಸಿಡಿಲಬ್ಬರ ಮುಂದುವರೆಸಿದ ಪ್ರಿಯಾಂಶ್ ಆರ್ಯ ಪುರಾಣಿ ಡೆಲ್ಲಿ ಬೌಲರ್​ಗಳ ಬೆಂಡೆತ್ತಿದರು. ಕೇವಲ 55 ಎಸೆತಗಳನ್ನು ಎದುರಿಸಿದ ಆರ್ಯ 7 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ ಅಜೇಯ 107 ರನ್​ ಬಾರಿಸಿದರು. ಈ ಸಿಡಿಲಬ್ಬರದ ಶತಕದ ನೆರವಿನಿಂದ ಸೌತ್ ಡೆಲ್ಲಿ ಸೂಪರ್ ಸ್ಟಾರ್ಸ್ ತಂಡವು 20 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 235 ರನ್ ಕಲೆಹಾಕಿತು.

ಮತ್ತೊಂದೆಡೆ ಸಿಡಿಲಬ್ಬರ ಮುಂದುವರೆಸಿದ ಪ್ರಿಯಾಂಶ್ ಆರ್ಯ ಪುರಾಣಿ ಡೆಲ್ಲಿ ಬೌಲರ್​ಗಳ ಬೆಂಡೆತ್ತಿದರು. ಕೇವಲ 55 ಎಸೆತಗಳನ್ನು ಎದುರಿಸಿದ ಆರ್ಯ 7 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ ಅಜೇಯ 107 ರನ್​ ಬಾರಿಸಿದರು. ಈ ಸಿಡಿಲಬ್ಬರದ ಶತಕದ ನೆರವಿನಿಂದ ಸೌತ್ ಡೆಲ್ಲಿ ಸೂಪರ್ ಸ್ಟಾರ್ಸ್ ತಂಡವು 20 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 235 ರನ್ ಕಲೆಹಾಕಿತು.

3 / 5
236 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಪುರಾಣಿ ಡೆಲ್ಲಿ ತಂಡಕ್ಕೆ ಅರ್ನವ್ (36) ಹಾಗೂ ಅರ್ಪಿತ್ ರಾಣಾ (29) ಉತ್ತಮ ಆರಂಭ ನೀಡಿದ್ದರು. ಆದರೆ ಆ ಬಳಿಕ ಬಂದ ಬ್ಯಾಟರ್​ಗಳು ಕ್ರೀಸ್ ಕಚ್ಚಿ ನಿಲ್ಲುವಲ್ಲಿ ವಿಫಲರಾದರು. ಪರಿಣಾಮ ಪುರಾಣಿ ಡೆಲ್ಲಿ ತಂಡವು 20 ಓವರ್​ಗಳಲ್ಲಿ 9 ವಿಕೆಟ್​ ಕಳೆದುಕೊಂಡು 147 ರನ್ ಗಳಿಸಲಷ್ಟೇ ಶಕ್ತರಾದರು.

236 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಪುರಾಣಿ ಡೆಲ್ಲಿ ತಂಡಕ್ಕೆ ಅರ್ನವ್ (36) ಹಾಗೂ ಅರ್ಪಿತ್ ರಾಣಾ (29) ಉತ್ತಮ ಆರಂಭ ನೀಡಿದ್ದರು. ಆದರೆ ಆ ಬಳಿಕ ಬಂದ ಬ್ಯಾಟರ್​ಗಳು ಕ್ರೀಸ್ ಕಚ್ಚಿ ನಿಲ್ಲುವಲ್ಲಿ ವಿಫಲರಾದರು. ಪರಿಣಾಮ ಪುರಾಣಿ ಡೆಲ್ಲಿ ತಂಡವು 20 ಓವರ್​ಗಳಲ್ಲಿ 9 ವಿಕೆಟ್​ ಕಳೆದುಕೊಂಡು 147 ರನ್ ಗಳಿಸಲಷ್ಟೇ ಶಕ್ತರಾದರು.

4 / 5
ಈ ಮೂಲಕ ಆಯುಷ್ ಬದೋನಿ ನಾಯಕತ್ವದ ಡೆಲ್ಲಿ ಸೂಪರ್ ಸ್ಟಾರ್ಸ್ ತಂಡವು 88 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಅಲ್ಲದೆ ಈ ಪಂದ್ಯದಲ್ಲಿ 107 ರನ್​ಗಳನ್ನು ಬಾರಿಸಿದ ಎಡಗೈ ಬ್ಯಾಟರ್ ಪ್ರಿಯಾಂಶ್ ಆರ್ಯ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಈ ಮೂಲಕ ಆಯುಷ್ ಬದೋನಿ ನಾಯಕತ್ವದ ಡೆಲ್ಲಿ ಸೂಪರ್ ಸ್ಟಾರ್ಸ್ ತಂಡವು 88 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಅಲ್ಲದೆ ಈ ಪಂದ್ಯದಲ್ಲಿ 107 ರನ್​ಗಳನ್ನು ಬಾರಿಸಿದ ಎಡಗೈ ಬ್ಯಾಟರ್ ಪ್ರಿಯಾಂಶ್ ಆರ್ಯ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!