AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Duleep Trophy 2024: ಧೋನಿ ದಾಖಲೆ ಸರಿಗಟ್ಟಿದ ಧ್ರುವ್ ಜುರೇಲ್

Dhruv Jurel: ಧ್ರುವ್ ಜುರೇಲ್ ಟೀಮ್ ಇಂಡಿಯಾ ಪರ 3 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 1 ಅರ್ಧಶತಕದೊಂದಿಗೆ ಒಟ್ಟು 90 ರನ್ ಕಲೆಹಾಕಿದ್ದರು. ಇದೀಗ ದೇಶೀಯ ಅಂಗಳದ ಮೊದಲ ಪಂದ್ಯದಲ್ಲೇ ಅದ್ಭುತ ವಿಕೆಟ್ ಕೀಪಿಂಗ್​ನೊಂದಿಗೆ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಮತ್ತೆ ಭಾರತ ತಂಡದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 08, 2024 | 1:53 PM

Share
ದುಲೀಪ್ ಟ್ರೋಫಿಯ ಮೊದಲ ಪಂದ್ಯದಲ್ಲೇ ಯುವ ವಿಕೆಟ್ ಕೀಪರ್ ಧ್ರುವ್ ಜುರೇಲ್ ಹೊಸ ದಾಖಲೆ ಬರೆದಿದ್ದಾರೆ. ಅದು ಸಹ ಲೆಜೆಂಡ್ ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ಧೋನಿಯ ದೇಶೀಯ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

ದುಲೀಪ್ ಟ್ರೋಫಿಯ ಮೊದಲ ಪಂದ್ಯದಲ್ಲೇ ಯುವ ವಿಕೆಟ್ ಕೀಪರ್ ಧ್ರುವ್ ಜುರೇಲ್ ಹೊಸ ದಾಖಲೆ ಬರೆದಿದ್ದಾರೆ. ಅದು ಸಹ ಲೆಜೆಂಡ್ ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ಧೋನಿಯ ದೇಶೀಯ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

1 / 5
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಭಾರತ ಬಿ ವಿರುದ್ಧದ ಪಂದ್ಯದಲ್ಲಿ ಭಾರತ ಎ ಪರ ಕಣಕ್ಕಿಳಿದ ವಿಕೆಟ್ ಕೀಪರ್ ಧ್ರುವ್ ಜುರೇಲ್ ದ್ವಿತೀಯ ಇನಿಂಗ್ಸ್​ನಲ್ಲಿ ಒಟ್ಟು 7 ಕ್ಯಾಚ್​ಗಳನ್ನು ಹಿಡಿದಿದ್ದಾರೆ. ಈ ಮೂಲಕ ದುಲೀಪ್ ಟ್ರೋಫಿಯ ಇನಿಂಗ್ಸ್​ವೊಂದರಲ್ಲಿ ಅತ್ಯಧಿಕ ಕ್ಯಾಚ್ ಹಿಡಿದ ಧೋನಿಯ ದಾಖಲೆಯನ್ನು ಸರಿಗಟ್ಟಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಭಾರತ ಬಿ ವಿರುದ್ಧದ ಪಂದ್ಯದಲ್ಲಿ ಭಾರತ ಎ ಪರ ಕಣಕ್ಕಿಳಿದ ವಿಕೆಟ್ ಕೀಪರ್ ಧ್ರುವ್ ಜುರೇಲ್ ದ್ವಿತೀಯ ಇನಿಂಗ್ಸ್​ನಲ್ಲಿ ಒಟ್ಟು 7 ಕ್ಯಾಚ್​ಗಳನ್ನು ಹಿಡಿದಿದ್ದಾರೆ. ಈ ಮೂಲಕ ದುಲೀಪ್ ಟ್ರೋಫಿಯ ಇನಿಂಗ್ಸ್​ವೊಂದರಲ್ಲಿ ಅತ್ಯಧಿಕ ಕ್ಯಾಚ್ ಹಿಡಿದ ಧೋನಿಯ ದಾಖಲೆಯನ್ನು ಸರಿಗಟ್ಟಿದ್ದಾರೆ.

2 / 5
ಮಹೇಂದ್ರ ಸಿಂಗ್ ಧೋನಿ 2004 ರಲ್ಲಿ ನಡೆದ ದುಲೀಪ್ ಟ್ರೋಫಿ ಟೂರ್ನಿಯಲ್ಲಿ ಈ ಸಾಧನೆ ಮಾಡಿದ್ದರು. ಸೆಂಟ್ರಲ್ ಝೋನ್ ವಿರುದ್ಧದ ಪಂದ್ಯದಲ್ಲಿ ಈಸ್ಟ್ ಝೋನ್ ಪರ ಕಣಕ್ಕಿಳಿದಿದ್ದ ಧೋನಿ ಒಟ್ಟು 7 ಕ್ಯಾಚ್​ಗಳನ್ನು ಹಿಡಿದು ದೇಶೀಯ ಅಂಗಳದಲ್ಲಿ ದಾಖಲೆ ನಿರ್ಮಿಸಿದ್ದರು.

ಮಹೇಂದ್ರ ಸಿಂಗ್ ಧೋನಿ 2004 ರಲ್ಲಿ ನಡೆದ ದುಲೀಪ್ ಟ್ರೋಫಿ ಟೂರ್ನಿಯಲ್ಲಿ ಈ ಸಾಧನೆ ಮಾಡಿದ್ದರು. ಸೆಂಟ್ರಲ್ ಝೋನ್ ವಿರುದ್ಧದ ಪಂದ್ಯದಲ್ಲಿ ಈಸ್ಟ್ ಝೋನ್ ಪರ ಕಣಕ್ಕಿಳಿದಿದ್ದ ಧೋನಿ ಒಟ್ಟು 7 ಕ್ಯಾಚ್​ಗಳನ್ನು ಹಿಡಿದು ದೇಶೀಯ ಅಂಗಳದಲ್ಲಿ ದಾಖಲೆ ನಿರ್ಮಿಸಿದ್ದರು.

3 / 5
ಇದೀಗ 20 ವರ್ಷಗಳ ಬಳಿಕ ಈ ದಾಖಲೆಯನ್ನು ಸರಿಗಟ್ಟುವಲ್ಲಿ ಧ್ರುವ್ ಜುರೇಲ್ ಯಶಸ್ವಿಯಾಗಿದ್ದಾರೆ. ಭಾರತ ಎ ತಂಡದ ಪರ ಅತ್ಯುತ್ತಮ ಕೀಪಿಂಗ್ ಪ್ರದರ್ಶಿಸಿದ ಧ್ರುವ್ ಒಟ್ಟು 7 ಕ್ಯಾಚ್​ಗಳನ್ನು ಹಿಡಿದು ಭಾರತ ಬಿ ತಂಡವು 184 ರನ್​ಗಳಿಗೆ ಆಲೌಟ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದರು.

ಇದೀಗ 20 ವರ್ಷಗಳ ಬಳಿಕ ಈ ದಾಖಲೆಯನ್ನು ಸರಿಗಟ್ಟುವಲ್ಲಿ ಧ್ರುವ್ ಜುರೇಲ್ ಯಶಸ್ವಿಯಾಗಿದ್ದಾರೆ. ಭಾರತ ಎ ತಂಡದ ಪರ ಅತ್ಯುತ್ತಮ ಕೀಪಿಂಗ್ ಪ್ರದರ್ಶಿಸಿದ ಧ್ರುವ್ ಒಟ್ಟು 7 ಕ್ಯಾಚ್​ಗಳನ್ನು ಹಿಡಿದು ಭಾರತ ಬಿ ತಂಡವು 184 ರನ್​ಗಳಿಗೆ ಆಲೌಟ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದರು.

4 / 5
ಇನ್ನು ಧ್ರುವ್ ಜುರೇಲ್ ಹಿಡಿದ 7 ಕ್ಯಾಚ್​ಗಳಲ್ಲಿ 4 ಕ್ಯಾಚ್​ಗಳು ಆಕಾಶ್ ದೀಪ್ ಓವರ್​ನಲ್ಲಿ ಮೂಡಿಬಂದಿದ್ದು ವಿಶೇಷ. ಈ ಜುಗಲ್​ಬಂಧಿಯೊಂದಿಗೆ ಆಕಾಶ್ ದೀಪ್ ಇದೇ ಇನಿಂಗ್ಸ್​ನಲ್ಲಿ 14 ಓವರ್​ಗಳಲ್ಲಿ 56 ರನ್ ನೀಡಿ 5 ವಿಕೆಟ್​ಗಳ ಸಾಧನೆಯನ್ನು ಸಹ ಮಾಡಿದರು.

ಇನ್ನು ಧ್ರುವ್ ಜುರೇಲ್ ಹಿಡಿದ 7 ಕ್ಯಾಚ್​ಗಳಲ್ಲಿ 4 ಕ್ಯಾಚ್​ಗಳು ಆಕಾಶ್ ದೀಪ್ ಓವರ್​ನಲ್ಲಿ ಮೂಡಿಬಂದಿದ್ದು ವಿಶೇಷ. ಈ ಜುಗಲ್​ಬಂಧಿಯೊಂದಿಗೆ ಆಕಾಶ್ ದೀಪ್ ಇದೇ ಇನಿಂಗ್ಸ್​ನಲ್ಲಿ 14 ಓವರ್​ಗಳಲ್ಲಿ 56 ರನ್ ನೀಡಿ 5 ವಿಕೆಟ್​ಗಳ ಸಾಧನೆಯನ್ನು ಸಹ ಮಾಡಿದರು.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ