AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dwayne Bravo: ವಿಶ್ವ ದಾಖಲೆಯೊಂದಿಗೆ ವಿದಾಯ ಹೇಳಿದ ಡ್ವೇನ್ ಬ್ರಾವೊ

Dwayne Bravo: ಟಿ20 ಕ್ರಿಕೆಟ್​ನಲ್ಲಿ ಡ್ವೇನ್ ಬ್ರಾವೊ ಒಟ್ಟು 582 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 6970 ರನ್ ಕಲೆಹಾಕಿದರೆ, 631 ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ. ಹಾಗೆಯೇ 275 ಕ್ಯಾಚ್​ಗಳನ್ನು ಸಹ ಹಿಡಿದಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಪಂದ್ಯಗಳನ್ನಾಡಿದ ವಿಶ್ವದ 2ನೇ ಆಟಗಾರ ಎನಿಸಿಕೊಂಡಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು 684 ಪಂದ್ಯಗಳನ್ನಾಡಿರುವ ಕೀರನ್ ಪೋಲಾರ್ಡ್.

ಝಾಹಿರ್ ಯೂಸುಫ್
|

Updated on: Sep 28, 2024 | 8:03 AM

ವೆಸ್ಟ್ ಇಂಡೀಸ್ ದಿಗ್ಗಜ ಡ್ವೇನ್ ಬ್ರಾವೊ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಚಾಂಪಿಯನ್ ಆಟಗಾರನ ಯುಗಾಂತ್ಯವಾಗಿದೆ. ಅದು ಸಹ ವಿಶ್ವ ದಾಖಲೆಯ 17 ಟ್ರೋಫಿಗಳೊಂದಿಗೆ ಎಂಬುದು ವಿಶೇಷ.

ವೆಸ್ಟ್ ಇಂಡೀಸ್ ದಿಗ್ಗಜ ಡ್ವೇನ್ ಬ್ರಾವೊ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಚಾಂಪಿಯನ್ ಆಟಗಾರನ ಯುಗಾಂತ್ಯವಾಗಿದೆ. ಅದು ಸಹ ವಿಶ್ವ ದಾಖಲೆಯ 17 ಟ್ರೋಫಿಗಳೊಂದಿಗೆ ಎಂಬುದು ವಿಶೇಷ.

1 / 5
ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಟ್ರೋಫಿಗಳನ್ನು ಎತ್ತಿ ಹಿಡಿದ ವಿಶ್ವ ದಾಖಲೆಯೊಂದು ಡ್ವೇನ್ ಬ್ರಾವೊ ಹೆಸರಿನಲ್ಲಿದೆ. ವೆಸ್ಟ್ ಇಂಡೀಸ್ ತಂಡವಲ್ಲದೇ ವಿಶ್ವದ ಹಲವು ಪ್ರಮುಖ ಲೀಗ್​ನಲ್ಲಿ ಕಾಣಿಸಿಕೊಂಡಿರುವ ಬ್ರಾವೊ ಒಟ್ಟು 17 ಬಾರಿ ಚಾಂಪಿಯನ್ ತಂಡದ ಭಾಗವಾಗಿದ್ದರು. ಈ ಮೂಲಕ ಟಿ20 ಕ್ರಿಎಕಟ್​ನಲ್ಲಿ ಅತ್ಯಧಿಕ ಟ್ರೋಫಿಗಳನ್ನು ಎತ್ತಿ ಹಿಡಿದ ಆಟಗಾರ ಎನಿಸಿಕೊಂಡಿದ್ದಾರೆ.

ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಟ್ರೋಫಿಗಳನ್ನು ಎತ್ತಿ ಹಿಡಿದ ವಿಶ್ವ ದಾಖಲೆಯೊಂದು ಡ್ವೇನ್ ಬ್ರಾವೊ ಹೆಸರಿನಲ್ಲಿದೆ. ವೆಸ್ಟ್ ಇಂಡೀಸ್ ತಂಡವಲ್ಲದೇ ವಿಶ್ವದ ಹಲವು ಪ್ರಮುಖ ಲೀಗ್​ನಲ್ಲಿ ಕಾಣಿಸಿಕೊಂಡಿರುವ ಬ್ರಾವೊ ಒಟ್ಟು 17 ಬಾರಿ ಚಾಂಪಿಯನ್ ತಂಡದ ಭಾಗವಾಗಿದ್ದರು. ಈ ಮೂಲಕ ಟಿ20 ಕ್ರಿಎಕಟ್​ನಲ್ಲಿ ಅತ್ಯಧಿಕ ಟ್ರೋಫಿಗಳನ್ನು ಎತ್ತಿ ಹಿಡಿದ ಆಟಗಾರ ಎನಿಸಿಕೊಂಡಿದ್ದಾರೆ.

2 / 5
ಡ್ವೇನ್ ಬ್ರಾವೊ 2012 ಮತ್ತು 2016 ರಲ್ಲಿ ಟಿ20 ವಿಶ್ವಕಪ್ ಗೆದ್ದ ವೆಸ್ಟ್ ಇಂಡೀಸ್ ತಂಡದ ಭಾಗವಾಗಿದ್ದರು. ಇನ್ನು ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ (2015, 2017, 2018, 2020, 2021) ಬ್ರಾವೊ ಇದ್ದ ತಂಡವು 5 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಹಾಗೆಯೇ ಐಪಿಎಲ್​ನಲ್ಲಿ (2011, 2018, 2021) ಮೂರು ಬಾರಿ ಚಾಂಪಿಯನ್ ತಂಡದ ಭಾಗವಾಗಿದ್ದಾರೆ.

ಡ್ವೇನ್ ಬ್ರಾವೊ 2012 ಮತ್ತು 2016 ರಲ್ಲಿ ಟಿ20 ವಿಶ್ವಕಪ್ ಗೆದ್ದ ವೆಸ್ಟ್ ಇಂಡೀಸ್ ತಂಡದ ಭಾಗವಾಗಿದ್ದರು. ಇನ್ನು ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ (2015, 2017, 2018, 2020, 2021) ಬ್ರಾವೊ ಇದ್ದ ತಂಡವು 5 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಹಾಗೆಯೇ ಐಪಿಎಲ್​ನಲ್ಲಿ (2011, 2018, 2021) ಮೂರು ಬಾರಿ ಚಾಂಪಿಯನ್ ತಂಡದ ಭಾಗವಾಗಿದ್ದಾರೆ.

3 / 5
ಇನ್ನು ಐಸಿಸಿ ಚಾಂಪಿಯನ್ಸ್ ಟ್ರೋಫಿ (2004), ಸ್ಟಾನ್​ಫೋರ್ಡ್ ಟಿ20 ಲೀಗ್ (2008), ಚಾಂಪಿಯನ್ಸ್ ಲೀಗ್ ಟಿ20 (2014), ಸೌತ್ ಆಫ್ರಿಕಾ ರಾಮ್ ಸ್ಲಾಮ್ ಟಿ20 (2015), ಸೂಪರ್50 ಕಪ್ (2015) ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್ (2016), ಪಾಕಿಸ್ತಾನ್ ಸೂಪರ್ ಲೀಗ್ (2019), ಇಂಟರ್​ನ್ಯಾಷನಲ್ ಲೀಗ್ ಟಿ20 (2024) ಟೂರ್ನಿಗಳಲ್ಲಿ ಡ್ವೇನ್ ಬ್ರಾವೊ ಚಾಂಪಿಯನ್ ಪಟ್ಟದೊಂದಿಗೆ ಟ್ರೋಫಿಯನ್ನು ಎತ್ತಿ ಹಿಡಿದಿದ್ದಾರೆ.

ಇನ್ನು ಐಸಿಸಿ ಚಾಂಪಿಯನ್ಸ್ ಟ್ರೋಫಿ (2004), ಸ್ಟಾನ್​ಫೋರ್ಡ್ ಟಿ20 ಲೀಗ್ (2008), ಚಾಂಪಿಯನ್ಸ್ ಲೀಗ್ ಟಿ20 (2014), ಸೌತ್ ಆಫ್ರಿಕಾ ರಾಮ್ ಸ್ಲಾಮ್ ಟಿ20 (2015), ಸೂಪರ್50 ಕಪ್ (2015) ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್ (2016), ಪಾಕಿಸ್ತಾನ್ ಸೂಪರ್ ಲೀಗ್ (2019), ಇಂಟರ್​ನ್ಯಾಷನಲ್ ಲೀಗ್ ಟಿ20 (2024) ಟೂರ್ನಿಗಳಲ್ಲಿ ಡ್ವೇನ್ ಬ್ರಾವೊ ಚಾಂಪಿಯನ್ ಪಟ್ಟದೊಂದಿಗೆ ಟ್ರೋಫಿಯನ್ನು ಎತ್ತಿ ಹಿಡಿದಿದ್ದಾರೆ.

4 / 5
ಇದೀಗ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಬಾರಿ (17) ಟ್ರೋಫಿ ಗೆದ್ದ ಆಟಗಾರನಾಗಿ ಡ್ವೇನ್ ಬ್ರಾವೊ ವಿದಾಯ ಹೇಳಿದ್ದಾರೆ. ಈ ವಿದಾಯದ ಬೆನ್ನಲ್ಲೇ ವೆಸ್ಟ್ ಇಂಡೀಸ್ ಚಾಂಪಿಯನ್ ಪ್ಲೇಯರ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮೆಂಟರ್ ಆಗಿ ಆಯ್ಕೆಯಾಗಿದ್ದಾರೆ. ಅದರಂತೆ ಮುಂಬರುವ ದಿನಗಳಲ್ಲಿ ಮೆಂಟರ್ ಆಗಿಯೂ ಬ್ರಾವೊ ಟ್ರೋಫಿ ಗೆಲ್ಲಲಿದ್ದಾರಾ ಕಾದು ನೋಡಬೇಕಿದೆ.

ಇದೀಗ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಬಾರಿ (17) ಟ್ರೋಫಿ ಗೆದ್ದ ಆಟಗಾರನಾಗಿ ಡ್ವೇನ್ ಬ್ರಾವೊ ವಿದಾಯ ಹೇಳಿದ್ದಾರೆ. ಈ ವಿದಾಯದ ಬೆನ್ನಲ್ಲೇ ವೆಸ್ಟ್ ಇಂಡೀಸ್ ಚಾಂಪಿಯನ್ ಪ್ಲೇಯರ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮೆಂಟರ್ ಆಗಿ ಆಯ್ಕೆಯಾಗಿದ್ದಾರೆ. ಅದರಂತೆ ಮುಂಬರುವ ದಿನಗಳಲ್ಲಿ ಮೆಂಟರ್ ಆಗಿಯೂ ಬ್ರಾವೊ ಟ್ರೋಫಿ ಗೆಲ್ಲಲಿದ್ದಾರಾ ಕಾದು ನೋಡಬೇಕಿದೆ.

5 / 5
Follow us
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು