AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ಬಾಂಗ್ಲಾದೇಶ ಪ್ರವಾಸವನ್ನು ಮತ್ತೆ ಮುಂದೂಡಿದ ಬಿಸಿಸಿಐ

Team India Bangladesh Tour Postponed: ಬಾಂಗ್ಲಾದೇಶದಲ್ಲಿ ಹೆಚ್ಚಿದ ಹಿಂಸಾಚಾರ ಮತ್ತು ಅಸ್ಥಿರ ಪರಿಸ್ಥಿತಿಯಿಂದಾಗಿ ಟೀಂ ಇಂಡಿಯಾದ ಬಾಂಗ್ಲಾದೇಶ ಪ್ರವಾಸವನ್ನು ಬಿಸಿಸಿಐ ಮತ್ತೆ ಮುಂದೂಡಿದೆ. ಈ ಹಿಂದೆ 2025ಕ್ಕೆ ನಿಗದಿಯಾಗಿದ್ದ ಪ್ರವಾಸವನ್ನು ಈಗ ಮತ್ತೊಮ್ಮೆ ಮುಂದೂಡಲಾಗಿದ್ದು, ಭಾರತ ಸರ್ಕಾರದಿಂದ ಸಲಹೆ ಪಡೆದ ನಂತರವೇ ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ಬಿಸಿಸಿಐ ತಿಳಿಸಿದೆ. ಭಾರತೀಯ ಆಟಗಾರರ ಸುರಕ್ಷತೆಯ ಕಾರಣದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಪೃಥ್ವಿಶಂಕರ
|

Updated on: Jan 03, 2026 | 4:26 PM

Share
ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಟೀಂ ಇಂಡಿಯಾ ಬಾಂಗ್ಲಾದೇಶ ಪ್ರವಾಸವನ್ನು 2025 ರಲ್ಲೇ ಮಾಡಬೇಕಿತ್ತು. ಆ ಪ್ರವಾಸದಲ್ಲಿ ಭಾರತ ತಂಡ ಏಕದಿನ ಹಾಗೂ ಟಿ20 ಸರಣಿಯನ್ನು ಆಡಬೇಕಿತ್ತು. ಆದರೆ ಆ ಸಮಯದಲ್ಲಿ ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರದಿಂದಾಗಿ ಟೀಂ ಇಂಡಿಯಾದ ಪ್ರವಾಸವನ್ನು ಬಿಸಿಸಿಐ ಮುಂದೂಡಿತ್ತು.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಟೀಂ ಇಂಡಿಯಾ ಬಾಂಗ್ಲಾದೇಶ ಪ್ರವಾಸವನ್ನು 2025 ರಲ್ಲೇ ಮಾಡಬೇಕಿತ್ತು. ಆ ಪ್ರವಾಸದಲ್ಲಿ ಭಾರತ ತಂಡ ಏಕದಿನ ಹಾಗೂ ಟಿ20 ಸರಣಿಯನ್ನು ಆಡಬೇಕಿತ್ತು. ಆದರೆ ಆ ಸಮಯದಲ್ಲಿ ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರದಿಂದಾಗಿ ಟೀಂ ಇಂಡಿಯಾದ ಪ್ರವಾಸವನ್ನು ಬಿಸಿಸಿಐ ಮುಂದೂಡಿತ್ತು.

1 / 6
ಈ ವರ್ಷವೂ ಟೀಂ ಇಂಡಿಯಾ ಬಾಂಗ್ಲಾದೇಶ ಪ್ರವಾಸ ಮಾಡುವುದು ಅಸಾಧ್ಯ ಎಂಬ ವರದಿಗಳಿದ್ದವು. ಏಕೆಂದರೆ, ಇತ್ತೀಚೆಗಷ್ಟೇ ಬಾಂಗ್ಲಾದೇಶದಲ್ಲಿ ಮತ್ತೆ ಹಿಂದೂಗಳ ಮೇಲಿನ ಹಿಂಸಾಚಾರ ಅತಿರೇಕಕ್ಕೆ ಹೋಗಿದೆ. ಹೀಗಾಗಿ ಬಾಂಗ್ಲಾದೇಶದೊಂದಿಗಿನ ಎಲ್ಲಾ ಸಂಬಂಧಗಳನ್ನು ಕಡಿದುಕೊಳ್ಳಬೇಕು ಎಂಬುದು ಭಾರತೀಯರ ಆಗ್ರಹವಾಗಿದೆ.

ಈ ವರ್ಷವೂ ಟೀಂ ಇಂಡಿಯಾ ಬಾಂಗ್ಲಾದೇಶ ಪ್ರವಾಸ ಮಾಡುವುದು ಅಸಾಧ್ಯ ಎಂಬ ವರದಿಗಳಿದ್ದವು. ಏಕೆಂದರೆ, ಇತ್ತೀಚೆಗಷ್ಟೇ ಬಾಂಗ್ಲಾದೇಶದಲ್ಲಿ ಮತ್ತೆ ಹಿಂದೂಗಳ ಮೇಲಿನ ಹಿಂಸಾಚಾರ ಅತಿರೇಕಕ್ಕೆ ಹೋಗಿದೆ. ಹೀಗಾಗಿ ಬಾಂಗ್ಲಾದೇಶದೊಂದಿಗಿನ ಎಲ್ಲಾ ಸಂಬಂಧಗಳನ್ನು ಕಡಿದುಕೊಳ್ಳಬೇಕು ಎಂಬುದು ಭಾರತೀಯರ ಆಗ್ರಹವಾಗಿದೆ.

2 / 6
ಇದೆಲ್ಲದರ ನಡುವೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯನ್ನು ಉಲ್ಲೇಖಿಸಿ, ಟೀಂ ಇಂಡಿಯಾ ಸೆಪ್ಟೆಂಬರ್ ತಿಂಗಳಲ್ಲಿ ಬಾಂಗ್ಲಾದೇಶ ಪ್ರವಾಸ ಮಾಡಲಿದ್ದು, ಈ ಪ್ರವಾಸದಲ್ಲಿ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದೆ ಎಂದು ಕ್ರಿಕ್​ಬಝ್ ವರದಿ ಮಾಡಿತ್ತು.

ಇದೆಲ್ಲದರ ನಡುವೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯನ್ನು ಉಲ್ಲೇಖಿಸಿ, ಟೀಂ ಇಂಡಿಯಾ ಸೆಪ್ಟೆಂಬರ್ ತಿಂಗಳಲ್ಲಿ ಬಾಂಗ್ಲಾದೇಶ ಪ್ರವಾಸ ಮಾಡಲಿದ್ದು, ಈ ಪ್ರವಾಸದಲ್ಲಿ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದೆ ಎಂದು ಕ್ರಿಕ್​ಬಝ್ ವರದಿ ಮಾಡಿತ್ತು.

3 / 6
ಆದರೆ ಈ ವರದಿ ಬಹಿರಂಗವಾದ ಒಂದು ದಿನದ ಬಳಿಕ ಬಿಸಿಸಿಐ, ಬಾಂಗ್ಲಾದೇಶ ಆಟಗಾರನನ್ನು ಐಪಿಎಲ್​ನಿಂದ ಹೊರಹಾಕಿತ್ತು. ಇದೀಗ ಇದರ ಜೊತೆಗೆ ಟೀಂ ಇಂಡಿಯಾದ ಬಾಂಗ್ಲಾದೇಶ ಪ್ರವಾಸವನ್ನು ಮತ್ತೆ ಮುಂದೂಡಲು ಬಿಸಿಸಿಐ ನಿರ್ಧರಿಸಿದೆ ಎಂದು ಇಂಡಿಯನ್ ಎಕ್ಸ್​ಪ್ರೆಸ್ ವರದಿ ಮಾಡಿದೆ.

ಆದರೆ ಈ ವರದಿ ಬಹಿರಂಗವಾದ ಒಂದು ದಿನದ ಬಳಿಕ ಬಿಸಿಸಿಐ, ಬಾಂಗ್ಲಾದೇಶ ಆಟಗಾರನನ್ನು ಐಪಿಎಲ್​ನಿಂದ ಹೊರಹಾಕಿತ್ತು. ಇದೀಗ ಇದರ ಜೊತೆಗೆ ಟೀಂ ಇಂಡಿಯಾದ ಬಾಂಗ್ಲಾದೇಶ ಪ್ರವಾಸವನ್ನು ಮತ್ತೆ ಮುಂದೂಡಲು ಬಿಸಿಸಿಐ ನಿರ್ಧರಿಸಿದೆ ಎಂದು ಇಂಡಿಯನ್ ಎಕ್ಸ್​ಪ್ರೆಸ್ ವರದಿ ಮಾಡಿದೆ.

4 / 6
ಬಾಂಗ್ಲಾದೇಶದಲ್ಲಿನ ಪ್ರಸ್ತುತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಬಿಸಿಸಿಐ, ಆಗಸ್ಟ್-ಸೆಪ್ಟೆಂಬರ್‌ನಲ್ಲಿ ನಿಗದಿಯಾಗಿದ್ದ ಬಾಂಗ್ಲಾ ಪ್ರವಾಸವನ್ನು ತಾತ್ಕಾಲಿಕವಾಗಿ ಮುಂದೂಡಿದೆ ಎಂದು ಬಿಸಿಸಿಐ ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. ಮಂಡಳಿಯು ಈಗ ಈ ವಿಷಯವನ್ನು ಭಾರತ ಸರ್ಕಾರದೊಂದಿಗೆ ಚರ್ಚಿಸಿ ಅವರ ಸಲಹೆಯ ಆಧಾರದ ಮೇಲೆ ಮುಂದಿನ ನಿರ್ಧಾರಗಳನ್ನು ತೆಗೆದುಕೊಳ್ಳಲ್ಲಿದ್ದು, ಆ ನಂತರ ತನ್ನ ನಿರ್ಧಾರವನ್ನು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ತಿಳಿಸಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಬಾಂಗ್ಲಾದೇಶದಲ್ಲಿನ ಪ್ರಸ್ತುತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಬಿಸಿಸಿಐ, ಆಗಸ್ಟ್-ಸೆಪ್ಟೆಂಬರ್‌ನಲ್ಲಿ ನಿಗದಿಯಾಗಿದ್ದ ಬಾಂಗ್ಲಾ ಪ್ರವಾಸವನ್ನು ತಾತ್ಕಾಲಿಕವಾಗಿ ಮುಂದೂಡಿದೆ ಎಂದು ಬಿಸಿಸಿಐ ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. ಮಂಡಳಿಯು ಈಗ ಈ ವಿಷಯವನ್ನು ಭಾರತ ಸರ್ಕಾರದೊಂದಿಗೆ ಚರ್ಚಿಸಿ ಅವರ ಸಲಹೆಯ ಆಧಾರದ ಮೇಲೆ ಮುಂದಿನ ನಿರ್ಧಾರಗಳನ್ನು ತೆಗೆದುಕೊಳ್ಳಲ್ಲಿದ್ದು, ಆ ನಂತರ ತನ್ನ ನಿರ್ಧಾರವನ್ನು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ತಿಳಿಸಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

5 / 6
ಬಿಸಿಸಿಐ ಈ ಪ್ರವಾಸವನ್ನು ಮುಂದೂಡಿದರೆ, ಅದು ಬಿಸಿಬಿಗೆ ಸಾಕಷ್ಟು ನಷ್ಟವನ್ನುಂಟುಮಾಡಬಹುದು. ಈಗಾಗಲೇ ಆರ್ಥಿಕವಾಗಿ ದುರ್ಬಲವಾಗಿರುವ ಬಾಂಗ್ಲಾ ಮಂಡಳಿಯು, ಭಾರತ ಪ್ರವಾಸದಿಂದ ಆದಾಯ ಗಳಿಸುವ ನಿರೀಕ್ಷಿಸುತ್ತಿತ್ತು. ಆದರೆ ಈ ಪ್ರವಾಸವನ್ನು ರದ್ದುಗೊಳಿಸುವುದರಿಂದ ಬಾಂಗ್ಲಾದೇಶ ಮಂಡಳಿಗೆ ಪ್ರಾಯೋಜಕತ್ವ ಮತ್ತು ಪ್ರಸಾರ ಒಪ್ಪಂದಗಳಿಂದ ಲಕ್ಷಾಂತರ ರೂಪಾಯಿಗಳ ನಷ್ಟವಾಗಬಹುದು. ಇದಲ್ಲದೆ, ಈ ಸರಣಿಯು ಭವಿಷ್ಯದಲ್ಲೂ ನಡೆಯದಿದ್ದರೆ, ಮಂಡಳಿಯ ಆದಾಯದ ಮೇಲೆ ಪರಿಣಾಮ ಬೀರುವುದು ಖಚಿತ.

ಬಿಸಿಸಿಐ ಈ ಪ್ರವಾಸವನ್ನು ಮುಂದೂಡಿದರೆ, ಅದು ಬಿಸಿಬಿಗೆ ಸಾಕಷ್ಟು ನಷ್ಟವನ್ನುಂಟುಮಾಡಬಹುದು. ಈಗಾಗಲೇ ಆರ್ಥಿಕವಾಗಿ ದುರ್ಬಲವಾಗಿರುವ ಬಾಂಗ್ಲಾ ಮಂಡಳಿಯು, ಭಾರತ ಪ್ರವಾಸದಿಂದ ಆದಾಯ ಗಳಿಸುವ ನಿರೀಕ್ಷಿಸುತ್ತಿತ್ತು. ಆದರೆ ಈ ಪ್ರವಾಸವನ್ನು ರದ್ದುಗೊಳಿಸುವುದರಿಂದ ಬಾಂಗ್ಲಾದೇಶ ಮಂಡಳಿಗೆ ಪ್ರಾಯೋಜಕತ್ವ ಮತ್ತು ಪ್ರಸಾರ ಒಪ್ಪಂದಗಳಿಂದ ಲಕ್ಷಾಂತರ ರೂಪಾಯಿಗಳ ನಷ್ಟವಾಗಬಹುದು. ಇದಲ್ಲದೆ, ಈ ಸರಣಿಯು ಭವಿಷ್ಯದಲ್ಲೂ ನಡೆಯದಿದ್ದರೆ, ಮಂಡಳಿಯ ಆದಾಯದ ಮೇಲೆ ಪರಿಣಾಮ ಬೀರುವುದು ಖಚಿತ.

6 / 6
ಕಾಂತಾರ, ಕೆಜಿಎಫ್ ಸಿನಿಮಾಗಳಿಂದ ಮಾತ್ರ ಚಿತ್ರರಂಗ ಬೆಳೆಯಲ್ಲ: ಪ್ರಿಯಾ ಹಾಸನ್
ಕಾಂತಾರ, ಕೆಜಿಎಫ್ ಸಿನಿಮಾಗಳಿಂದ ಮಾತ್ರ ಚಿತ್ರರಂಗ ಬೆಳೆಯಲ್ಲ: ಪ್ರಿಯಾ ಹಾಸನ್
ಜಮ್ಮು ಕಾಶ್ಮೀರದಲ್ಲಿ ಜೆಸಿಬಿ ಮೂಲಕ ಹಿಮಪಾತದ ತೆರವು
ಜಮ್ಮು ಕಾಶ್ಮೀರದಲ್ಲಿ ಜೆಸಿಬಿ ಮೂಲಕ ಹಿಮಪಾತದ ತೆರವು
15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಶಿವಂ ದುಬೆ
15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಶಿವಂ ದುಬೆ
ಪತಿ, ಸಹೋದರ ಮಾವ ಆತ್ಮಹತ್ಯೆ: ಬೇರೊಬ್ಬನೊಂದಿಗೆ ಓಡಿಹೋಗಿದ್ದ ಮಹಿಳೆ ಅರೆಸ್ಟ್
ಪತಿ, ಸಹೋದರ ಮಾವ ಆತ್ಮಹತ್ಯೆ: ಬೇರೊಬ್ಬನೊಂದಿಗೆ ಓಡಿಹೋಗಿದ್ದ ಮಹಿಳೆ ಅರೆಸ್ಟ್
ಅಜಿತ್ ಪವಾರ್​ ಸಾವಿಗೂ ಮುಂಚಿನ ಕೊನೆಯ ವಿಡಿಯೋ ಇಲ್ಲಿದೆ
ಅಜಿತ್ ಪವಾರ್​ ಸಾವಿಗೂ ಮುಂಚಿನ ಕೊನೆಯ ವಿಡಿಯೋ ಇಲ್ಲಿದೆ
ರಾಜಕೀಯಕ್ಕೆ ಬರಲು ಜೈ ಭೀಮ್ ಎನ್ನುತ್ತೀರಾ? ಉತ್ತರಿಸಿದ ದುನಿಯಾ ವಿಜಯ್
ರಾಜಕೀಯಕ್ಕೆ ಬರಲು ಜೈ ಭೀಮ್ ಎನ್ನುತ್ತೀರಾ? ಉತ್ತರಿಸಿದ ದುನಿಯಾ ವಿಜಯ್
ಮೆಡಿಕಲ್​​ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಕಾರಣ ಬಿಚ್ಚಿಟ್ಟ ತಾಯಿ
ಮೆಡಿಕಲ್​​ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಕಾರಣ ಬಿಚ್ಚಿಟ್ಟ ತಾಯಿ
ಉಡುಪಿ: ಅವಮಾನವಾದ ನಿವೃತ್ತ ಯೋಧನಿಗೆ ಕ್ಷಮೆ ಕೇಳಿದ ಟೋಲ್ ಸಿಬ್ಬಂದಿ
ಉಡುಪಿ: ಅವಮಾನವಾದ ನಿವೃತ್ತ ಯೋಧನಿಗೆ ಕ್ಷಮೆ ಕೇಳಿದ ಟೋಲ್ ಸಿಬ್ಬಂದಿ
ಬಾಲ್ಯದಲ್ಲಿ ಪಟ್ಟ ಕಷ್ಟಗಳ ನೆನಪಿಸಿಕೊಂಡ ದುನಿಯಾ ವಿಜಿ: ವಿಡಿಯೋ
ಬಾಲ್ಯದಲ್ಲಿ ಪಟ್ಟ ಕಷ್ಟಗಳ ನೆನಪಿಸಿಕೊಂಡ ದುನಿಯಾ ವಿಜಿ: ವಿಡಿಯೋ
ನನ್ನ 32 ವರ್ಷದ ಗಳಿಕೆಯನ್ನೆಲ್ಲ ದೋಚಿಬಿಟ್ಟರು ಸರ್​​, ಮನೆ ಮಾಲೀಕ ಭಾವುಕ
ನನ್ನ 32 ವರ್ಷದ ಗಳಿಕೆಯನ್ನೆಲ್ಲ ದೋಚಿಬಿಟ್ಟರು ಸರ್​​, ಮನೆ ಮಾಲೀಕ ಭಾವುಕ