AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ ವಿರುದ್ಧದ ಮೂರನೇ ಟೆಸ್ಟ್‌ಗೆ ಇಂಗ್ಲೆಂಡ್ ತಂಡ ಪ್ರಕಟ

ಇಂಗ್ಲೆಂಡ್-ಪಾಕಿಸ್ತಾನ ಅಂತಿಮ ಟೆಸ್ಟ್ ಪಂದ್ಯಕ್ಕೆ ಬಲಿಷ್ಠ ಇಂಗ್ಲೆಂಡ್ ತಂಡ ಪ್ರಕಟವಾಗಿದೆ. ಸರಣಿ ಈಗಾಗಲೇ 2-0 ಅಂತರದಿಂದ ಗೆದ್ದಿದ್ದರೂ, ಬ್ರೈಡನ್ ಕಾರ್ಸೆ ಅವರನ್ನು ಶಿಸ್ತು ಭಂಗದ ಕಾರಣ ಕೈಬಿಡಲಾಗಿದೆ. ಹೆಡಿಂಗ್ಲೆ ಘಟನೆಯ ನಂತರ ಕಾರ್ಸೆ ಹೊರಗುಳಿದಿದ್ದು, ಮ್ಯಾಥ್ಯೂ ಫಿಶರ್ ಸಹ ಸ್ಥಾನ ಕಳೆದುಕೊಂಡಿದ್ದಾರೆ. ಮತ್ತೊಂದೆಡೆ, ಸರಣಿ ಸೋತ ಪಾಕಿಸ್ತಾನ ತಂಡದಲ್ಲಿ ಆಮೂಲಾಗ್ರ ಬದಲಾವಣೆಗಳಾಗಿವೆ. ಎಡ್ಜ್‌ಬಾಸ್ಟನ್​ನಲ್ಲಿ ಇಂಗ್ಲೆಂಡ್ ವೈಟ್‌ವಾಶ್‌ಗೆ ಸಿದ್ಧವಾಗಿದೆ.

ಪೃಥ್ವಿಶಂಕರ
|

Updated on: Sep 02, 2026 | 10:12 PM

Share
ಇಂಗ್ಲೆಂಡ್‌ ಹಾಗೂ ಪಾಕಿಸ್ತಾನ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಹಾಗೂ ಅಂತಿಮ ಟೆಸ್ಟ್ ಪಂದ್ಯ ಸೆಪ್ಟೆಂಬರ್ 9 ರಿಂದ ಎಡ್ಜ್‌ಬಾಸ್ಟನ್​ನಲ್ಲಿ ಆರಂಭವಾಗಲಿದೆ. ಈಗಾಗಲೇ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ. ಇದೀಗ ಕೊನೆಯ ಟೆಸ್ಟ್ ಪಂದ್ಯವನ್ನು ಗೆಲ್ಲುವ ಇರಾದೆಯೊಂದಿಗೆ ಬಲಿಷ್ಠ ಇಂಗ್ಲೆಂಡ್‌ ತಂಡವನ್ನು ಪ್ರಕಟಿಸಲಾಗಿದೆ(PC-PTI).

ಇಂಗ್ಲೆಂಡ್‌ ಹಾಗೂ ಪಾಕಿಸ್ತಾನ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಹಾಗೂ ಅಂತಿಮ ಟೆಸ್ಟ್ ಪಂದ್ಯ ಸೆಪ್ಟೆಂಬರ್ 9 ರಿಂದ ಎಡ್ಜ್‌ಬಾಸ್ಟನ್​ನಲ್ಲಿ ಆರಂಭವಾಗಲಿದೆ. ಈಗಾಗಲೇ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ. ಇದೀಗ ಕೊನೆಯ ಟೆಸ್ಟ್ ಪಂದ್ಯವನ್ನು ಗೆಲ್ಲುವ ಇರಾದೆಯೊಂದಿಗೆ ಬಲಿಷ್ಠ ಇಂಗ್ಲೆಂಡ್‌ ತಂಡವನ್ನು ಪ್ರಕಟಿಸಲಾಗಿದೆ(PC-PTI).

1 / 5
ಕೊನೆಯ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗಿರುವ 15 ಸದಸ್ಯರ ತಂಡದಿಂದ ಬ್ರೈಡನ್ ಕಾರ್ಸೆ ಅವರನ್ನು ಮತ್ತೊಮ್ಮೆ ಹೊರಗಿಡಲಾಗಿದೆ. ಹೆಡಿಂಗ್ಲೆ ಟೆಸ್ಟ್ ನಂತರ ಪಾರ್ಟಿಯಲ್ಲಿ ಭಾಗವಹಿಸಿದ್ದ ಕಾರ್ಸೆ ಜಗಳ ಮಾಡಿಕೊಂಡಿದ್ದರು. ಇದರಿಂದ ಅವರನ್ನು ಪೊಲೀಸರು ಕೈಕೋಳ ಹಾಕಿ ಬಂಧಿಸಿದ್ದರು. ಅವರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ಕಾರ್ಸೆ ಅವರನ್ನು ಲಾರ್ಡ್ಸ್ ಟೆಸ್ಟ್​ನಿಂದ ಕೈಬಿಡಲಾಗಿತ್ತು(PC-PTI).

ಕೊನೆಯ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗಿರುವ 15 ಸದಸ್ಯರ ತಂಡದಿಂದ ಬ್ರೈಡನ್ ಕಾರ್ಸೆ ಅವರನ್ನು ಮತ್ತೊಮ್ಮೆ ಹೊರಗಿಡಲಾಗಿದೆ. ಹೆಡಿಂಗ್ಲೆ ಟೆಸ್ಟ್ ನಂತರ ಪಾರ್ಟಿಯಲ್ಲಿ ಭಾಗವಹಿಸಿದ್ದ ಕಾರ್ಸೆ ಜಗಳ ಮಾಡಿಕೊಂಡಿದ್ದರು. ಇದರಿಂದ ಅವರನ್ನು ಪೊಲೀಸರು ಕೈಕೋಳ ಹಾಕಿ ಬಂಧಿಸಿದ್ದರು. ಅವರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ಕಾರ್ಸೆ ಅವರನ್ನು ಲಾರ್ಡ್ಸ್ ಟೆಸ್ಟ್​ನಿಂದ ಕೈಬಿಡಲಾಗಿತ್ತು(PC-PTI).

2 / 5
ಇದೀಗ ಅವರನ್ನು ಎಡ್ಜ್‌ಬಾಸ್ಟನ್ ಟೆಸ್ಟ್​ನಿಂದಲೂ ಕೈಬಿಡಲಾಗಿದೆ. ಬ್ರೈಡನ್ ಕಾರ್ಸೆ ಜೊತೆಗೆ, ವೇಗಿ ಮ್ಯಾಥ್ಯೂ ಫಿಶರ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಸೋನಿ ಬೇಕರ್ ಅವರನ್ನು 15 ಸದಸ್ಯರ ತಂಡದಲ್ಲಿ ಉಳಿಸಿಕೊಳ್ಳಲಾಗಿದೆ(PC-PTI).

ಇದೀಗ ಅವರನ್ನು ಎಡ್ಜ್‌ಬಾಸ್ಟನ್ ಟೆಸ್ಟ್​ನಿಂದಲೂ ಕೈಬಿಡಲಾಗಿದೆ. ಬ್ರೈಡನ್ ಕಾರ್ಸೆ ಜೊತೆಗೆ, ವೇಗಿ ಮ್ಯಾಥ್ಯೂ ಫಿಶರ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಸೋನಿ ಬೇಕರ್ ಅವರನ್ನು 15 ಸದಸ್ಯರ ತಂಡದಲ್ಲಿ ಉಳಿಸಿಕೊಳ್ಳಲಾಗಿದೆ(PC-PTI).

3 / 5
ಎಡ್ಜ್‌ಬಾಸ್ಟನ್ ಟೆಸ್ಟ್‌ಗೆ ಇಂಗ್ಲೆಂಡ್ ತಂಡ: ಜೋ ರೂಟ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಸೋನಿ ಬೇಕರ್, ಶೋಯೆಬ್ ಬಶೀರ್, ಹ್ಯಾರಿ ಬ್ರೂಕ್, ಸ್ಯಾಮ್ ಕುಕ್, ಜೋರ್ಡಾನ್ ಕಾಕ್ಸ್, ಬೆನ್ ಡಕೆಟ್, ಎಮಿಲಿಯೊ ಗೇ, ಡ್ಯಾನ್ ಲಾರೆನ್ಸ್, ಓಲಿ ಪೋಪ್, ಓಲಿ ರಾಬಿನ್ಸನ್, ಜೇಮಿ ಸ್ಮಿತ್, ಜೋಶ್ ಟಂಗ್(PC-PTI).

ಎಡ್ಜ್‌ಬಾಸ್ಟನ್ ಟೆಸ್ಟ್‌ಗೆ ಇಂಗ್ಲೆಂಡ್ ತಂಡ: ಜೋ ರೂಟ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಸೋನಿ ಬೇಕರ್, ಶೋಯೆಬ್ ಬಶೀರ್, ಹ್ಯಾರಿ ಬ್ರೂಕ್, ಸ್ಯಾಮ್ ಕುಕ್, ಜೋರ್ಡಾನ್ ಕಾಕ್ಸ್, ಬೆನ್ ಡಕೆಟ್, ಎಮಿಲಿಯೊ ಗೇ, ಡ್ಯಾನ್ ಲಾರೆನ್ಸ್, ಓಲಿ ಪೋಪ್, ಓಲಿ ರಾಬಿನ್ಸನ್, ಜೇಮಿ ಸ್ಮಿತ್, ಜೋಶ್ ಟಂಗ್(PC-PTI).

4 / 5
ಪಾಕಿಸ್ತಾನ ಈಗಾಗಲೇ ಟೆಸ್ಟ್ ಸರಣಿಯನ್ನು ಕಳೆದುಕೊಂಡಿದೆ. ಮೊದಲ ಟೆಸ್ಟ್‌ನಲ್ಲಿ ಇನ್ನಿಂಗ್ಸ್ ಮತ್ತು 103 ರನ್‌ಗಳಿಂದ ಸೋತಿದ್ದ ಪಾಕಿಸ್ತಾನ ಲಾರ್ಡ್ಸ್ ಟೆಸ್ಟ್‌ ಅನ್ನು 194 ರನ್‌ಗಳಿಂದ ಸೋತಿದೆ. ಈ ಸೋಲಿನ ನಂತರ, ಏಳು ಪಾಕಿಸ್ತಾನಿ ಆಟಗಾರರನ್ನು ಮನೆಗೆ ಕಳುಹಿಸಲಾಗಿದೆ. ಮುಖ್ಯ ಕೋಚ್ ಸರ್ಫ್ರಾಜ್ ಅಹ್ಮದ್ ಮತ್ತು ಬೌಲಿಂಗ್ ಕೋಚ್ ಉಮರ್ ಗುಲ್ ಅವರನ್ನು ಸಹ ವಜಾಗೊಳಿಸಲಾಗಿದೆ(PC-PTI).

ಪಾಕಿಸ್ತಾನ ಈಗಾಗಲೇ ಟೆಸ್ಟ್ ಸರಣಿಯನ್ನು ಕಳೆದುಕೊಂಡಿದೆ. ಮೊದಲ ಟೆಸ್ಟ್‌ನಲ್ಲಿ ಇನ್ನಿಂಗ್ಸ್ ಮತ್ತು 103 ರನ್‌ಗಳಿಂದ ಸೋತಿದ್ದ ಪಾಕಿಸ್ತಾನ ಲಾರ್ಡ್ಸ್ ಟೆಸ್ಟ್‌ ಅನ್ನು 194 ರನ್‌ಗಳಿಂದ ಸೋತಿದೆ. ಈ ಸೋಲಿನ ನಂತರ, ಏಳು ಪಾಕಿಸ್ತಾನಿ ಆಟಗಾರರನ್ನು ಮನೆಗೆ ಕಳುಹಿಸಲಾಗಿದೆ. ಮುಖ್ಯ ಕೋಚ್ ಸರ್ಫ್ರಾಜ್ ಅಹ್ಮದ್ ಮತ್ತು ಬೌಲಿಂಗ್ ಕೋಚ್ ಉಮರ್ ಗುಲ್ ಅವರನ್ನು ಸಹ ವಜಾಗೊಳಿಸಲಾಗಿದೆ(PC-PTI).

5 / 5
Follow Us
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ