Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಇಂಗ್ಲೆಂಡ್​ಗೆ ಹೀನಾಯ ಸೋಲುಣಿಸಿ ಹೊಸ ಇತಿಹಾಸ ಬರೆದ ಟೀಮ್ ಇಂಡಿಯಾ

India vs England 1st Odi: ಟೀಮ್ ಇಂಡಿಯಾ ಪರ 7.2 ಓವರ್​ಗಳಲ್ಲಿ ಕೇವಲ 19 ರನ್​ ನೀಡಿ 6 ವಿಕೆಟ್ ಉರುಳಿಸಿದ ಜಸ್​ಪ್ರೀತ್ ಬುಮ್ರಾ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

TV9 Web
| Updated By: ಝಾಹಿರ್ ಯೂಸುಫ್

Updated on: Jul 12, 2022 | 10:05 PM

ಭಾರತ-ಇಂಗ್ಲೆಂಡ್ ನಡುವಣ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 10 ವಿಕೆಟ್​ಗಳಿಂದ ಭರ್ಜರಿ ಜಯ ಸಾಧಿಸಿದೆ. ಕಿಯಾ ಓವಲ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು.

ಭಾರತ-ಇಂಗ್ಲೆಂಡ್ ನಡುವಣ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 10 ವಿಕೆಟ್​ಗಳಿಂದ ಭರ್ಜರಿ ಜಯ ಸಾಧಿಸಿದೆ. ಕಿಯಾ ಓವಲ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು.

1 / 8
 ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಬೌಲಿಂಗ್ ದಾಳಿ ಸಂಘಟಿಸಿದ ಟೀಮ್ ಇಂಡಿಯಾ ವೇಗಿಗಳು ಇಂಗ್ಲೆಂಡ್ ಬ್ಯಾಟ್ಸ್​ಮನ್​ಗಳಿಗೆ ಬ್ಯಾಕ್ ಟು ಬ್ಯಾಕ್ ಶಾಕ್ ನೀಡಿದ್ದರು. ಪರಿಣಾಮ ಕೇವಲ 26 ರನ್​ಗಳಿಸುವಷ್ಟರಲ್ಲಿ ಇಂಗ್ಲೆಂಡ್ ತಂಡದ 5 ಪ್ರಮುಖ ಬ್ಯಾಟ್ಸ್​​ಮನ್​ಗಳು ಪೆವಿಲಿಯನ್​ಗೆ ಮರಳಿದ್ದರು.

ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಬೌಲಿಂಗ್ ದಾಳಿ ಸಂಘಟಿಸಿದ ಟೀಮ್ ಇಂಡಿಯಾ ವೇಗಿಗಳು ಇಂಗ್ಲೆಂಡ್ ಬ್ಯಾಟ್ಸ್​ಮನ್​ಗಳಿಗೆ ಬ್ಯಾಕ್ ಟು ಬ್ಯಾಕ್ ಶಾಕ್ ನೀಡಿದ್ದರು. ಪರಿಣಾಮ ಕೇವಲ 26 ರನ್​ಗಳಿಸುವಷ್ಟರಲ್ಲಿ ಇಂಗ್ಲೆಂಡ್ ತಂಡದ 5 ಪ್ರಮುಖ ಬ್ಯಾಟ್ಸ್​​ಮನ್​ಗಳು ಪೆವಿಲಿಯನ್​ಗೆ ಮರಳಿದ್ದರು.

2 / 8
 ಇದಾಗ್ಯೂ ನಾಯಕ ಜೋಸ್ ಬಟ್ಲರ್ 30 ರನ್​ಗಳಿಸುವ ಮೂಲಕ ತಂಡಕ್ಕೆ ಆಸರೆಯಾಗಿದ್ದರು. ಆದರೆ ಮೊಹಮ್ಮದ್ ಶಮಿ ಎಸೆತಕ್ಕೆ ಭರ್ಜರಿ ಉತ್ತರ ನೀಡಲು ಹೋದ ಬಟ್ಲರ್ ಕೂಡ ಔಟಾದರು. ಒಂದು ಹಂತದಲ್ಲಿ ಕೇವಲ 68 ರನ್​ಗಳಿಗೆ 8 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ತಂಡಕ್ಕೆ ಡೇವಿಡ್ ವಿಲ್ಲಿ ಆಸರೆಯಾಗಿ ನಿಂತರು.

ಇದಾಗ್ಯೂ ನಾಯಕ ಜೋಸ್ ಬಟ್ಲರ್ 30 ರನ್​ಗಳಿಸುವ ಮೂಲಕ ತಂಡಕ್ಕೆ ಆಸರೆಯಾಗಿದ್ದರು. ಆದರೆ ಮೊಹಮ್ಮದ್ ಶಮಿ ಎಸೆತಕ್ಕೆ ಭರ್ಜರಿ ಉತ್ತರ ನೀಡಲು ಹೋದ ಬಟ್ಲರ್ ಕೂಡ ಔಟಾದರು. ಒಂದು ಹಂತದಲ್ಲಿ ಕೇವಲ 68 ರನ್​ಗಳಿಗೆ 8 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ತಂಡಕ್ಕೆ ಡೇವಿಡ್ ವಿಲ್ಲಿ ಆಸರೆಯಾಗಿ ನಿಂತರು.

3 / 8
ಅದರಂತೆ ವಿಲ್ಲಿ 21 ರನ್​ಗಳ ಉಪಯುಕ್ತ ಕಾಣಿಕೆ ನೀಡಿದರು. ಪರಿಣಾಮ ಇಂಗ್ಲೆಂಡ್ ತಂಡದ ಮೊತ್ತ ನೂರರ ಗಡಿದಾಟಿತು. ಇದಾಗ್ಯೂ ಟೀಮ್ ಇಂಡಿಯಾ ಬೌಲರ್​ಗಳ ಮುಂದೆ 26 ಓವರ್​ಗಳನ್ನು ದಾಟಲು ಆಂಗ್ಲ ಆಟಗಾರರಿಗೆ ಸಾಧ್ಯವಾಗಿಲ್ಲ. ಅಂತಿಮವಾಗಿ ಕೇವಲ 25.2 ಓವರ್​ಗಳಲ್ಲಿ 110 ರನ್​ಗಳಿಗೆ ಸರ್ವಪತನ ಕಂಡಿತು. ಟೀಮ್ ಇಂಡಿಯಾ ಪರ ಬುಮ್ರಾ ಕೇವಲ 19 ರನ್​ ನೀಡಿ 6 ವಿಕೆಟ್ ಕಬಳಿಸಿ ಮಿಂಚಿದ್ದರು.

ಅದರಂತೆ ವಿಲ್ಲಿ 21 ರನ್​ಗಳ ಉಪಯುಕ್ತ ಕಾಣಿಕೆ ನೀಡಿದರು. ಪರಿಣಾಮ ಇಂಗ್ಲೆಂಡ್ ತಂಡದ ಮೊತ್ತ ನೂರರ ಗಡಿದಾಟಿತು. ಇದಾಗ್ಯೂ ಟೀಮ್ ಇಂಡಿಯಾ ಬೌಲರ್​ಗಳ ಮುಂದೆ 26 ಓವರ್​ಗಳನ್ನು ದಾಟಲು ಆಂಗ್ಲ ಆಟಗಾರರಿಗೆ ಸಾಧ್ಯವಾಗಿಲ್ಲ. ಅಂತಿಮವಾಗಿ ಕೇವಲ 25.2 ಓವರ್​ಗಳಲ್ಲಿ 110 ರನ್​ಗಳಿಗೆ ಸರ್ವಪತನ ಕಂಡಿತು. ಟೀಮ್ ಇಂಡಿಯಾ ಪರ ಬುಮ್ರಾ ಕೇವಲ 19 ರನ್​ ನೀಡಿ 6 ವಿಕೆಟ್ ಕಬಳಿಸಿ ಮಿಂಚಿದ್ದರು.

4 / 8
ವಿಶೇಷ ಎಂದರೆ ಕೇವಲ 110 ರನ್​ಗಳಿಗೆ ಆಲೌಟ್ ಮಾಡುವ ಮೂಲಕ ಟೀಮ್ ಇಂಡಿಯಾ ತನ್ನ ದಾಖಲೆಯನ್ನು ಪುನರ್​ನಿರ್ಮಿಸಿದರು. ಅಂದರೆ ಇದು ಟೀಮ್ ಇಂಡಿಯಾ ವಿರುದ್ದ ಏಕದಿನ ಕ್ರಿಕೆಟ್​ನಲ್ಲಿ ಇಂಗ್ಲೆಂಡ್ ತಂಡದ ಅತ್ಯಂತ ಕೆಟ್ಟ ಪ್ರದರ್ಶನವಾಗಿದೆ.

ವಿಶೇಷ ಎಂದರೆ ಕೇವಲ 110 ರನ್​ಗಳಿಗೆ ಆಲೌಟ್ ಮಾಡುವ ಮೂಲಕ ಟೀಮ್ ಇಂಡಿಯಾ ತನ್ನ ದಾಖಲೆಯನ್ನು ಪುನರ್​ನಿರ್ಮಿಸಿದರು. ಅಂದರೆ ಇದು ಟೀಮ್ ಇಂಡಿಯಾ ವಿರುದ್ದ ಏಕದಿನ ಕ್ರಿಕೆಟ್​ನಲ್ಲಿ ಇಂಗ್ಲೆಂಡ್ ತಂಡದ ಅತ್ಯಂತ ಕೆಟ್ಟ ಪ್ರದರ್ಶನವಾಗಿದೆ.

5 / 8
ಈ ಹಿಂದೆ 2006 ರಲ್ಲಿ ಜೈಪುರದಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು 125 ರನ್​ಗಳಿಗೆ ಆಲೌಟ್ ಆಗಿದ್ದು ಹೀನಾಯ ಪ್ರದರ್ಶನವಾಗಿತ್ತು. ಇದೀಗ ಕೇವಲ 110 ರನ್​ಗಳಿಗೆ ಆಲೌಟ್ ಆಗಿ ಮತ್ತೊಮ್ಮೆ ಕೆಟ್ಟ ಪ್ರದರ್ಶನ ನೀಡಿದೆ. ಅದರಲ್ಲೂ ಭಾರತದ ವಿರುದ್ದ ತವರಿನಲ್ಲೇ ಕೇವಲ 110 ರನ್​ಗಳಿಗೆ ಆಲೌಟ್ ಆಗಿ ಇಂಗ್ಲೆಂಡ್ ತಂಡ ಮುಖಭಂಗ ಅನುಭವಿಸಿದೆ.

ಈ ಹಿಂದೆ 2006 ರಲ್ಲಿ ಜೈಪುರದಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು 125 ರನ್​ಗಳಿಗೆ ಆಲೌಟ್ ಆಗಿದ್ದು ಹೀನಾಯ ಪ್ರದರ್ಶನವಾಗಿತ್ತು. ಇದೀಗ ಕೇವಲ 110 ರನ್​ಗಳಿಗೆ ಆಲೌಟ್ ಆಗಿ ಮತ್ತೊಮ್ಮೆ ಕೆಟ್ಟ ಪ್ರದರ್ಶನ ನೀಡಿದೆ. ಅದರಲ್ಲೂ ಭಾರತದ ವಿರುದ್ದ ತವರಿನಲ್ಲೇ ಕೇವಲ 110 ರನ್​ಗಳಿಗೆ ಆಲೌಟ್ ಆಗಿ ಇಂಗ್ಲೆಂಡ್ ತಂಡ ಮುಖಭಂಗ ಅನುಭವಿಸಿದೆ.

6 / 8
ಇನ್ನು ಇಂಗ್ಲೆಂಡ್ ನೀಡಿದ 111 ಟಾರ್ಗೆಟ್​ ಅನ್ನು ಟೀಮ್ ಇಂಡಿಯಾ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ವಿಕೆಟ್ ನಷ್ಟವಿಲ್ಲದೆ 18.4 ಓವರ್​ಗಳಲ್ಲಿ ಚೇಸ್ ಮಾಡಿ ಭರ್ಜರಿ ಜಯ ತಂದುಕೊಟ್ಟಿದ್ದಾರೆ.

ಇನ್ನು ಇಂಗ್ಲೆಂಡ್ ನೀಡಿದ 111 ಟಾರ್ಗೆಟ್​ ಅನ್ನು ಟೀಮ್ ಇಂಡಿಯಾ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ವಿಕೆಟ್ ನಷ್ಟವಿಲ್ಲದೆ 18.4 ಓವರ್​ಗಳಲ್ಲಿ ಚೇಸ್ ಮಾಡಿ ಭರ್ಜರಿ ಜಯ ತಂದುಕೊಟ್ಟಿದ್ದಾರೆ.

7 / 8
ವಿಶೇಷ ಎಂದರೆ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಂಗ್ಲೆಂಡ್ ತಂಡವು ಟೀಮ್ ಇಂಡಿಯಾ ವಿರುದ್ದ 10 ವಿಕೆಟ್​ಗಳಿಂದ ಸೋಲನುಭವಿಸಿದೆ. ಈ ಮೂಲಕ ಕ್ರಿಕೆಟ್ ಜನಕರಿಗೆ ತವರಿನಲ್ಲೇ ಹೀನಾಯ ಸೋಲುಣಿಸಿ ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿದೆ.

ವಿಶೇಷ ಎಂದರೆ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಂಗ್ಲೆಂಡ್ ತಂಡವು ಟೀಮ್ ಇಂಡಿಯಾ ವಿರುದ್ದ 10 ವಿಕೆಟ್​ಗಳಿಂದ ಸೋಲನುಭವಿಸಿದೆ. ಈ ಮೂಲಕ ಕ್ರಿಕೆಟ್ ಜನಕರಿಗೆ ತವರಿನಲ್ಲೇ ಹೀನಾಯ ಸೋಲುಣಿಸಿ ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿದೆ.

8 / 8
Follow us
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್