AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿಯಾದ ಆತ್ಮ ವಿಶ್ವಾಸ… ನೋಡಿ ಎಂಜಾಯ್ ಮಾಡು ಎಂದ ಹಾರ್ದಿಕ್ ಪಾಂಡ್ಯ ಕಲೆಹಾಕಿದ್ದು ಕೇವಲ 6 ರನ್

South Africa vs India: ಭಾರತದ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 124 ರನ್​ ಕಲೆಹಾಕಿದರೆ, ಸೌತ್ ಆಫ್ರಿಕಾ ತಂಡವು ಈ ಗುರಿಯನ್ನು 19 ಓವರ್​ಗಳಲ್ಲಿ ಚೇಸ್ ಮಾಡಿ 3 ವಿಕೆಟ್​ಗಳ ಗೆಲುವು ದಾಖಲಿಸಿತು.

ಝಾಹಿರ್ ಯೂಸುಫ್
|

Updated on: Nov 11, 2024 | 10:53 AM

Share
ಗೆಬಾಹದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲಿಗೆ ಪ್ರಮುಖ ಕಾರಣ ಬ್ಯಾಟಿಂಗ್ ವೈಫಲ್ಯ. ಅದರಲ್ಲೂ ಡೆತ್ ಓವರ್​ಗಳಲ್ಲಿ ರನ್​ಗಳಿಸಲು ಭಾರತೀಯ ಬ್ಯಾಟರ್​ಗಳು ಪರದಾಡಿದರು. ಇದರ ನಡುವೆ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಅರ್ಷದೀಪ್ ಸಿಂಗ್ ಒಂದು ಸಿಕ್ಸ್ ಸಿಡಿಸಿ ಗಮನ ಸೆಳೆದಿದ್ದರು. ಆದರೆ ಪಾಂಡ್ಯ ನಡೆಯಿಂದಾಗಿ ಅರ್ಷದೀಪ್​ಗೆ ಹೆಚ್ಚಿನ ಬಾಲ್​ಗಳನ್ನು ಎದುರಿಸಲು ಅವಕಾಶ ಸಿಕ್ಕಿರಲಿಲ್ಲ.

ಗೆಬಾಹದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲಿಗೆ ಪ್ರಮುಖ ಕಾರಣ ಬ್ಯಾಟಿಂಗ್ ವೈಫಲ್ಯ. ಅದರಲ್ಲೂ ಡೆತ್ ಓವರ್​ಗಳಲ್ಲಿ ರನ್​ಗಳಿಸಲು ಭಾರತೀಯ ಬ್ಯಾಟರ್​ಗಳು ಪರದಾಡಿದರು. ಇದರ ನಡುವೆ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಅರ್ಷದೀಪ್ ಸಿಂಗ್ ಒಂದು ಸಿಕ್ಸ್ ಸಿಡಿಸಿ ಗಮನ ಸೆಳೆದಿದ್ದರು. ಆದರೆ ಪಾಂಡ್ಯ ನಡೆಯಿಂದಾಗಿ ಅರ್ಷದೀಪ್​ಗೆ ಹೆಚ್ಚಿನ ಬಾಲ್​ಗಳನ್ನು ಎದುರಿಸಲು ಅವಕಾಶ ಸಿಕ್ಕಿರಲಿಲ್ಲ.

1 / 5
ಕೊನೆಯ ಮೂರು ಓವರ್​ಗಳ ವೇಳೆ ಸ್ಟ್ರೈಕ್ ಬದಲಿಸಲು ಹಾರ್ದಿಕ್ ಪಾಂಡ್ಯ ನಿರಾಕರಿಸಿದ್ದರು. ಅದರಲ್ಲೂ 19ನೇ ಓವರ್​ನ 2ನೇ ಎಸೆತದಲ್ಲಿ ಅರ್ಷದೀಪ್ ಸಿಂಗ್ ಸಿಂಗಲ್ ತೆಗೆಯುವ ಮೂಲಕ ಪಾಂಡ್ಯಗೆ ಸ್ಟ್ರೈಕ್ ನೀಡಿದ್ದರು. ಈ ವೇಳೆ ಹಾರ್ದಿಕ್ ಆಡಿದ ಮಾತುಗಳೇ ಈಗ ಟ್ರೋಲಿಗರಿಗೆ ಆಹಾರವಾಗಿದೆ.

ಕೊನೆಯ ಮೂರು ಓವರ್​ಗಳ ವೇಳೆ ಸ್ಟ್ರೈಕ್ ಬದಲಿಸಲು ಹಾರ್ದಿಕ್ ಪಾಂಡ್ಯ ನಿರಾಕರಿಸಿದ್ದರು. ಅದರಲ್ಲೂ 19ನೇ ಓವರ್​ನ 2ನೇ ಎಸೆತದಲ್ಲಿ ಅರ್ಷದೀಪ್ ಸಿಂಗ್ ಸಿಂಗಲ್ ತೆಗೆಯುವ ಮೂಲಕ ಪಾಂಡ್ಯಗೆ ಸ್ಟ್ರೈಕ್ ನೀಡಿದ್ದರು. ಈ ವೇಳೆ ಹಾರ್ದಿಕ್ ಆಡಿದ ಮಾತುಗಳೇ ಈಗ ಟ್ರೋಲಿಗರಿಗೆ ಆಹಾರವಾಗಿದೆ.

2 / 5
ಅರ್ಷದೀಪ್ ಸಿಂಗ್ ಸಿಂಗಲ್ ತೆಗೆಯುತ್ತಿದ್ದಂತೆ ಹಾರ್ದಿಕ್ ಪಾಂಡ್ಯ, ಇನ್ನು ನಾನ್ ಸ್ಟ್ರೈಕ್​ನಲ್ಲಿ ನಿಂತು ಎಂಜಾಯ್ ಮಾಡು ಎಂದಿದ್ದರು. ಅತೀ ಆತ್ಮವಿಶ್ವಾಸದ ಈ ಹೇಳಿಕೆಯು ಸ್ಟಂಪ್ ಮೈಕ್​ನಲ್ಲಿ ಕೇಳಿ ಬಂದಿತ್ತು. ಆದರೆ ಇದಾದ ಬಳಿಕ 10 ಎಸೆತಗಳನ್ನು ಎದುರಿಸಿದ ಪಾಂಡ್ಯ ರನ್​ಗಳಿಸಲು ಒದ್ದಾಡಿದರು.

ಅರ್ಷದೀಪ್ ಸಿಂಗ್ ಸಿಂಗಲ್ ತೆಗೆಯುತ್ತಿದ್ದಂತೆ ಹಾರ್ದಿಕ್ ಪಾಂಡ್ಯ, ಇನ್ನು ನಾನ್ ಸ್ಟ್ರೈಕ್​ನಲ್ಲಿ ನಿಂತು ಎಂಜಾಯ್ ಮಾಡು ಎಂದಿದ್ದರು. ಅತೀ ಆತ್ಮವಿಶ್ವಾಸದ ಈ ಹೇಳಿಕೆಯು ಸ್ಟಂಪ್ ಮೈಕ್​ನಲ್ಲಿ ಕೇಳಿ ಬಂದಿತ್ತು. ಆದರೆ ಇದಾದ ಬಳಿಕ 10 ಎಸೆತಗಳನ್ನು ಎದುರಿಸಿದ ಪಾಂಡ್ಯ ರನ್​ಗಳಿಸಲು ಒದ್ದಾಡಿದರು.

3 / 5
19ನೇ ಓವರ್​ನ ಮೂರನೇ ಎಸೆತದಿಂದ ಸ್ಟ್ರೈಕ್ ಪಡೆದ ಹಾರ್ದಿಕ್ ಪಾಂಡ್ಯ ನಾಲ್ಕು ಎಸೆತಗಳಲ್ಲಿ 1 ಬೈಸ್ ರನ್ ಮಾತ್ರ ಕಲೆಹಾಕಿದ್ದರು. ಅಲ್ಲದೆ ಕೊನೆಯ ಓವರ್​ನಲ್ಲಿ ಮತ್ತೆ ಸ್ಟ್ರೈಕ್​ಗೆ ಬಂದ ಹಾರ್ದಿಕ್ ಮೊದಲ 4 ಎಸೆತಗಳಲ್ಲಿ ಯಾವುದೇ ರನ್​ಗಳಿಸಲು ಸಾಧ್ಯವಾಗಿರಲಿಲ್ಲ. ಇನ್ನು 5ನೇ ಎಸೆತದಲ್ಲಿ 2 ರನ್​​ಗಳಿಸಿದರೆ, ಇನಿಂಗ್ಸ್​ನ ಕೊನೆಯ ಎಸೆತದಲ್ಲಿ ಫೋರ್ ಬಾರಿಸಿದರು.

19ನೇ ಓವರ್​ನ ಮೂರನೇ ಎಸೆತದಿಂದ ಸ್ಟ್ರೈಕ್ ಪಡೆದ ಹಾರ್ದಿಕ್ ಪಾಂಡ್ಯ ನಾಲ್ಕು ಎಸೆತಗಳಲ್ಲಿ 1 ಬೈಸ್ ರನ್ ಮಾತ್ರ ಕಲೆಹಾಕಿದ್ದರು. ಅಲ್ಲದೆ ಕೊನೆಯ ಓವರ್​ನಲ್ಲಿ ಮತ್ತೆ ಸ್ಟ್ರೈಕ್​ಗೆ ಬಂದ ಹಾರ್ದಿಕ್ ಮೊದಲ 4 ಎಸೆತಗಳಲ್ಲಿ ಯಾವುದೇ ರನ್​ಗಳಿಸಲು ಸಾಧ್ಯವಾಗಿರಲಿಲ್ಲ. ಇನ್ನು 5ನೇ ಎಸೆತದಲ್ಲಿ 2 ರನ್​​ಗಳಿಸಿದರೆ, ಇನಿಂಗ್ಸ್​ನ ಕೊನೆಯ ಎಸೆತದಲ್ಲಿ ಫೋರ್ ಬಾರಿಸಿದರು.

4 / 5
ಅಂದರೆ ಅರ್ಷದೀಪ್ ಸಿಂಗ್​ಗೆ, ನಾನ್ ಸ್ಟ್ರೈಕ್​ನಲ್ಲಿ ನಿಂತು ನನ್ನ ಬ್ಯಾಟಿಂಗ್ ಅನಂದಿಸುವ ಎಂದ ಹಾರ್ದಿಕ್ ಪಾಂಡ್ಯ ಕೊನೆಯ 10 ಎಸೆತಗಳಲ್ಲಿ ಕ್ರಮವಾಗಿ 0, 0, 0, 1B, 0, 0, 0, 0, 2, 4 ರನ್ ಮಾತ್ರ ಕಲೆಹಾಕಿದ್ದರು. ಹೀಗಾಗಿಯೇ ಇದೀಗ ಅತಿಯಾದ ಆತ್ಮ ವಿಶ್ವಾಸದಿಂದ ತೇಲಿದ ಹಾರ್ದಿಕ್ ಪಾಂಡ್ಯರನ್ನು ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಲಾಗುತ್ತ್ತಿದೆ.

ಅಂದರೆ ಅರ್ಷದೀಪ್ ಸಿಂಗ್​ಗೆ, ನಾನ್ ಸ್ಟ್ರೈಕ್​ನಲ್ಲಿ ನಿಂತು ನನ್ನ ಬ್ಯಾಟಿಂಗ್ ಅನಂದಿಸುವ ಎಂದ ಹಾರ್ದಿಕ್ ಪಾಂಡ್ಯ ಕೊನೆಯ 10 ಎಸೆತಗಳಲ್ಲಿ ಕ್ರಮವಾಗಿ 0, 0, 0, 1B, 0, 0, 0, 0, 2, 4 ರನ್ ಮಾತ್ರ ಕಲೆಹಾಕಿದ್ದರು. ಹೀಗಾಗಿಯೇ ಇದೀಗ ಅತಿಯಾದ ಆತ್ಮ ವಿಶ್ವಾಸದಿಂದ ತೇಲಿದ ಹಾರ್ದಿಕ್ ಪಾಂಡ್ಯರನ್ನು ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಲಾಗುತ್ತ್ತಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!