AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuvraj Singh: ಮತ್ತೊಮ್ಮೆ ಟೀಂ ಇಂಡಿಯಾ ಸೇರುವ ಇಚ್ಛೆ ವ್ಯಕ್ತಪಡಿಸಿದ ಯುವರಾಜ್ ಸಿಂಗ್..!

Yuvraj Singh: ಟೀಂ ಇಂಡಿಯಾ 2007 ರ ಟಿ20 ವಿಶ್ವಕಪ್ ಹಾಗೂ 2011 ರ ಏಕದಿನ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಆಲ್​ರೌಂಡರ್ ಯುವರಾಜ್ ಸಿಂಗ್ ಕ್ರಿಕೆಟ್​ಗೆ ವಿದಾಯ ಹೇಳಿ ವರ್ಷಗಳೇ ಕಳೆದಿವೆ. ಆದರೀಗ ಟೀಂ ಇಂಡಿಯಾದ ಭವಿಷ್ಯದ ದೃಷ್ಟಿಯಿಂದ ಮತ್ತೆ ತಂಡ ಸೇರಿಕೊಳ್ಳುವ ಇಂಗಿತವನ್ನು ಸಿಕ್ಸರ್ ಕಿಂಗ್ ಯುವರಾಜ್ ವ್ಯಕ್ತಪಡಿಸಿದ್ದಾರೆ.

ಪೃಥ್ವಿಶಂಕರ
|

Updated on: Jan 14, 2024 | 3:30 PM

ಟೀಂ ಇಂಡಿಯಾ 2007 ರ ಟಿ20 ವಿಶ್ವಕಪ್ ಹಾಗೂ 2011 ರ ಏಕದಿನ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಆಲ್​ರೌಂಡರ್ ಯುವರಾಜ್ ಸಿಂಗ್ ಕ್ರಿಕೆಟ್​ಗೆ ವಿದಾಯ ಹೇಳಿ ವರ್ಷಗಳೇ ಕಳೆದಿವೆ. ಆದರೀಗ ಟೀಂ ಇಂಡಿಯಾದ ಭವಿಷ್ಯದ ದೃಷ್ಟಿಯಿಂದ ಮತ್ತೆ ತಂಡ ಸೇರಿಕೊಳ್ಳುವ ಇಂಗಿತವನ್ನು ಸಿಕ್ಸರ್ ಕಿಂಗ್ ಯುವರಾಜ್ ವ್ಯಕ್ತಪಡಿಸಿದ್ದಾರೆ.

ಟೀಂ ಇಂಡಿಯಾ 2007 ರ ಟಿ20 ವಿಶ್ವಕಪ್ ಹಾಗೂ 2011 ರ ಏಕದಿನ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಆಲ್​ರೌಂಡರ್ ಯುವರಾಜ್ ಸಿಂಗ್ ಕ್ರಿಕೆಟ್​ಗೆ ವಿದಾಯ ಹೇಳಿ ವರ್ಷಗಳೇ ಕಳೆದಿವೆ. ಆದರೀಗ ಟೀಂ ಇಂಡಿಯಾದ ಭವಿಷ್ಯದ ದೃಷ್ಟಿಯಿಂದ ಮತ್ತೆ ತಂಡ ಸೇರಿಕೊಳ್ಳುವ ಇಂಗಿತವನ್ನು ಸಿಕ್ಸರ್ ಕಿಂಗ್ ಯುವರಾಜ್ ವ್ಯಕ್ತಪಡಿಸಿದ್ದಾರೆ.

1 / 8
ಯುವರಾಜ್ ಸೆಂಟರ್ ಆಫ್ ಎಕ್ಸಲೆನ್ಸ್ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಯುವರಾಜ್ ಸಿಂಗ್ ಟೀಂ ಇಂಡಿಯಾದ ಕಳೆದ ಕೆಲವು ವರ್ಷಗಳ ಪ್ರದರ್ಶನ, ಐಸಿಸಿ ಈವೆಂಟ್​ಗಳ ಫೈನಲ್​ ಪಂದ್ಯಗಳಲ್ಲಿ ತಂಡದ ಸೋಲು ಇದೆಲ್ಲವನ್ನು ಮನನ ಮಾಡಿಕೊಂಡರು. ಹಾಗೆಯೇ ಕೊನೆಯ ಹಂತದಲ್ಲಿ ತಂಡ ಎಡವುತ್ತಿರುವುದಕ್ಕೆ ಕಾರಣ ಏನು ಎಂಬುದನ್ನು ಬಹಿರಂಗಪಡಿಸಿದರು.

ಯುವರಾಜ್ ಸೆಂಟರ್ ಆಫ್ ಎಕ್ಸಲೆನ್ಸ್ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಯುವರಾಜ್ ಸಿಂಗ್ ಟೀಂ ಇಂಡಿಯಾದ ಕಳೆದ ಕೆಲವು ವರ್ಷಗಳ ಪ್ರದರ್ಶನ, ಐಸಿಸಿ ಈವೆಂಟ್​ಗಳ ಫೈನಲ್​ ಪಂದ್ಯಗಳಲ್ಲಿ ತಂಡದ ಸೋಲು ಇದೆಲ್ಲವನ್ನು ಮನನ ಮಾಡಿಕೊಂಡರು. ಹಾಗೆಯೇ ಕೊನೆಯ ಹಂತದಲ್ಲಿ ತಂಡ ಎಡವುತ್ತಿರುವುದಕ್ಕೆ ಕಾರಣ ಏನು ಎಂಬುದನ್ನು ಬಹಿರಂಗಪಡಿಸಿದರು.

2 / 8
ಈ ಬಗ್ಗೆ ಮಾತನಾಡಿದ ಯುವರಾಜ್, ನಾವು (ಟೀಂ ಇಂಡಿಯಾ) ಕಳೆದ ಕೆಲವು ವರ್ಷಗಳಿಂದ ಸಾಕಷ್ಟು ಐಸಿಸಿ ಈವೆಂಟ್​ಗಳ ಫೈನಲ್‌ಗಳನ್ನು ಆಡಿದ್ದೇವೆ ಆದರೆ ಒಂದನ್ನು ಸಹ ಗೆಲ್ಲಲಿಲ್ಲ. 2017 ರಲ್ಲಿ, ನಾವು ಪಾಕಿಸ್ತಾನದ ವಿರುದ್ಧ ಸೋತ ಫೈನಲ್‌ನಲ್ಲಿ ನಾನು ಭಾಗವಾಗಿದ್ದೆ. ಮುಂಬರುವ ವರ್ಷಗಳಲ್ಲಿ ನಾವು ಖಂಡಿತವಾಗಿಯೂ ಈ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗುತ್ತದೆ.

ಈ ಬಗ್ಗೆ ಮಾತನಾಡಿದ ಯುವರಾಜ್, ನಾವು (ಟೀಂ ಇಂಡಿಯಾ) ಕಳೆದ ಕೆಲವು ವರ್ಷಗಳಿಂದ ಸಾಕಷ್ಟು ಐಸಿಸಿ ಈವೆಂಟ್​ಗಳ ಫೈನಲ್‌ಗಳನ್ನು ಆಡಿದ್ದೇವೆ ಆದರೆ ಒಂದನ್ನು ಸಹ ಗೆಲ್ಲಲಿಲ್ಲ. 2017 ರಲ್ಲಿ, ನಾವು ಪಾಕಿಸ್ತಾನದ ವಿರುದ್ಧ ಸೋತ ಫೈನಲ್‌ನಲ್ಲಿ ನಾನು ಭಾಗವಾಗಿದ್ದೆ. ಮುಂಬರುವ ವರ್ಷಗಳಲ್ಲಿ ನಾವು ಖಂಡಿತವಾಗಿಯೂ ಈ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗುತ್ತದೆ.

3 / 8
ಒಂದು ದೇಶವಾಗಿ ಮತ್ತು ಭಾರತೀಯ ತಂಡವಾಗಿ, ನಾವು ಒತ್ತಡದಲ್ಲಿ ಉತ್ತಮ ಪ್ರದರ್ಶನ ನೀಡಬೇಕಾಗಿದೆ. ನನ್ನ ಪ್ರಕಾರ ಏನೋ ತಪ್ಪಿದೆ, ದೊಡ್ಡ ಮ್ಯಾಚ್ ಇದ್ದಾಗ ನಾವು ದೈಹಿಕವಾಗಿ ಸಿದ್ಧರಾಗಿದ್ದೇವೆ ಆದರೆ ಮಾನಸಿಕವಾಗಿಯೂ ನಾವು ಬಲವಾಗಿರಬೇಕು. ಆಗ ಮಾತ್ರ ನಮಗೆ ಜಯ ದೊರೆಯುತ್ತದೆ.

ಒಂದು ದೇಶವಾಗಿ ಮತ್ತು ಭಾರತೀಯ ತಂಡವಾಗಿ, ನಾವು ಒತ್ತಡದಲ್ಲಿ ಉತ್ತಮ ಪ್ರದರ್ಶನ ನೀಡಬೇಕಾಗಿದೆ. ನನ್ನ ಪ್ರಕಾರ ಏನೋ ತಪ್ಪಿದೆ, ದೊಡ್ಡ ಮ್ಯಾಚ್ ಇದ್ದಾಗ ನಾವು ದೈಹಿಕವಾಗಿ ಸಿದ್ಧರಾಗಿದ್ದೇವೆ ಆದರೆ ಮಾನಸಿಕವಾಗಿಯೂ ನಾವು ಬಲವಾಗಿರಬೇಕು. ಆಗ ಮಾತ್ರ ನಮಗೆ ಜಯ ದೊರೆಯುತ್ತದೆ.

4 / 8
ಮುಂದುವರೆದು ಮಾತನಾಡಿದ ಯುವಿ, ಯುವ ಆಟಗಾರರಿಗೆ ಸ್ಫೂರ್ತಿ ನೀಡುವುದು, ಒತ್ತಡವನ್ನು ನಿಭಾಯಿಸುವುದು ಮತ್ತು ಅವರ ಆಟವನ್ನು ಹೇಗೆ ಸುಧಾರಿಸಬೇಕು ಎಂಬುದನ್ನು ಕಲಿಸುವುದು ಮುಖ್ಯ ಎಂದು ನಾನು ಭಾವಿಸುತ್ತೇನೆ. ಇದೊಂದು ಸವಾಲಾಗಿ ಪರಿಣಮಿಸಿದೆ. ನಮ್ಮಲ್ಲಿ ಪಂದ್ಯಗಳು ಮತ್ತು ಒತ್ತಡದಲ್ಲಿ ಬ್ಯಾಟಿಂಗ್ ಮಾಡುವ ಆಟಗಾರರಿದ್ದಾರೆ ಆದರೆ ಇಡೀ ತಂಡ ಇದನ್ನು ಮಾಡಬೇಕು, ಒಬ್ಬ ಅಥವಾ ಇಬ್ಬರು ಆಟಗಾರಿಂದ ಈ ರೀತಿಯ ಪ್ರದರ್ಶನ ಬಂದರೆ ಸಾಲದು.

ಮುಂದುವರೆದು ಮಾತನಾಡಿದ ಯುವಿ, ಯುವ ಆಟಗಾರರಿಗೆ ಸ್ಫೂರ್ತಿ ನೀಡುವುದು, ಒತ್ತಡವನ್ನು ನಿಭಾಯಿಸುವುದು ಮತ್ತು ಅವರ ಆಟವನ್ನು ಹೇಗೆ ಸುಧಾರಿಸಬೇಕು ಎಂಬುದನ್ನು ಕಲಿಸುವುದು ಮುಖ್ಯ ಎಂದು ನಾನು ಭಾವಿಸುತ್ತೇನೆ. ಇದೊಂದು ಸವಾಲಾಗಿ ಪರಿಣಮಿಸಿದೆ. ನಮ್ಮಲ್ಲಿ ಪಂದ್ಯಗಳು ಮತ್ತು ಒತ್ತಡದಲ್ಲಿ ಬ್ಯಾಟಿಂಗ್ ಮಾಡುವ ಆಟಗಾರರಿದ್ದಾರೆ ಆದರೆ ಇಡೀ ತಂಡ ಇದನ್ನು ಮಾಡಬೇಕು, ಒಬ್ಬ ಅಥವಾ ಇಬ್ಬರು ಆಟಗಾರಿಂದ ಈ ರೀತಿಯ ಪ್ರದರ್ಶನ ಬಂದರೆ ಸಾಲದು.

5 / 8
ಹೀಗಾಗಿ ತಂಡದ ಭವಿಷ್ಯದ ದೃಷ್ಟಿಯಿಂದ ನಾನು ಟೀಂ ಇಂಡಿಯಾಕ್ಕೆ ಮಾರ್ಗದರ್ಶನ ಮಾಡಲು ಇಷ್ಟಪಡುತ್ತೇನೆ. ಮುಂಬರುವ ವರ್ಷಗಳಲ್ಲಿ ನಾನು ಕ್ರಿಕೆಟ್‌ಗೆ ಹಿಂತಿರುಗಲು ಬಯಸುತ್ತೇನೆ. ಯುವ ಆಟಗಾರರಿಗೆ ಸಹಾಯ ಮಾಡಲು ಪ್ರಯತ್ನಿಸುತ್ತೇನೆ.

ಹೀಗಾಗಿ ತಂಡದ ಭವಿಷ್ಯದ ದೃಷ್ಟಿಯಿಂದ ನಾನು ಟೀಂ ಇಂಡಿಯಾಕ್ಕೆ ಮಾರ್ಗದರ್ಶನ ಮಾಡಲು ಇಷ್ಟಪಡುತ್ತೇನೆ. ಮುಂಬರುವ ವರ್ಷಗಳಲ್ಲಿ ನಾನು ಕ್ರಿಕೆಟ್‌ಗೆ ಹಿಂತಿರುಗಲು ಬಯಸುತ್ತೇನೆ. ಯುವ ಆಟಗಾರರಿಗೆ ಸಹಾಯ ಮಾಡಲು ಪ್ರಯತ್ನಿಸುತ್ತೇನೆ.

6 / 8
ದೊಡ್ಡ ಪಂದ್ಯಾವಳಿಗಳಲ್ಲಿ ನಾವು ಸಾಕಷ್ಟು ಮಾನಸಿಕ ಸವಾಲುಗಳನ್ನು ಎದುರಿಸುತ್ತೇವೆ ಎಂದು ನಾನು ಭಾವಿಸುತ್ತೇನೆ. ಮಾನಸಿಕ ಅಂಶದಲ್ಲಿ ನಾನು ಭವಿಷ್ಯದಲ್ಲಿ ಈ ಆಟಗಾರರೊಂದಿಗೆ ಕೆಲಸ ಮಾಡಬಹುದು ಎಂದು ನಾನು ನಂಬುತ್ತೇನೆ. ವಿಶೇಷವಾಗಿ ಮಧ್ಯಮ ಕ್ರಮಾಂಕದಲ್ಲಿ ನಾನು ಕೊಡುಗೆ ನೀಡಬಹುದೆಂದು ನಾನು ಭಾವಿಸುತ್ತೇನೆ ಎಂದು ಯುವಿ ಹೇಳಿದ್ದಾರೆ.

ದೊಡ್ಡ ಪಂದ್ಯಾವಳಿಗಳಲ್ಲಿ ನಾವು ಸಾಕಷ್ಟು ಮಾನಸಿಕ ಸವಾಲುಗಳನ್ನು ಎದುರಿಸುತ್ತೇವೆ ಎಂದು ನಾನು ಭಾವಿಸುತ್ತೇನೆ. ಮಾನಸಿಕ ಅಂಶದಲ್ಲಿ ನಾನು ಭವಿಷ್ಯದಲ್ಲಿ ಈ ಆಟಗಾರರೊಂದಿಗೆ ಕೆಲಸ ಮಾಡಬಹುದು ಎಂದು ನಾನು ನಂಬುತ್ತೇನೆ. ವಿಶೇಷವಾಗಿ ಮಧ್ಯಮ ಕ್ರಮಾಂಕದಲ್ಲಿ ನಾನು ಕೊಡುಗೆ ನೀಡಬಹುದೆಂದು ನಾನು ಭಾವಿಸುತ್ತೇನೆ ಎಂದು ಯುವಿ ಹೇಳಿದ್ದಾರೆ.

7 / 8
ಭಾರತ ತಂಡ ಕೊನೆಯದಾಗಿ 2013ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದಿತ್ತು. ಅಂದಿನಿಂದ ಟೀಂ ಇಂಡಿಯಾ ಐಸಿಸಿ ಪ್ರಶಸ್ತಿ ಗೆದ್ದಿಲ್ಲ. 2023ರ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತ ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧ ಸೋಲನುಭವಿಸಿತ್ತು. ಇದರಿಂದಾಗಿ ಟೀಂ ಇಂಡಿಯಾದ ಐಸಿಸಿ ಪ್ರಶಸ್ತಿ ಬರ 11 ವರ್ಷಗಳಿಂದ ಮುಂದುವರೆದಿದೆ.

ಭಾರತ ತಂಡ ಕೊನೆಯದಾಗಿ 2013ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದಿತ್ತು. ಅಂದಿನಿಂದ ಟೀಂ ಇಂಡಿಯಾ ಐಸಿಸಿ ಪ್ರಶಸ್ತಿ ಗೆದ್ದಿಲ್ಲ. 2023ರ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತ ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧ ಸೋಲನುಭವಿಸಿತ್ತು. ಇದರಿಂದಾಗಿ ಟೀಂ ಇಂಡಿಯಾದ ಐಸಿಸಿ ಪ್ರಶಸ್ತಿ ಬರ 11 ವರ್ಷಗಳಿಂದ ಮುಂದುವರೆದಿದೆ.

8 / 8
Follow us
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ