AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Faf Du Plessis: ಪಂದ್ಯ ಮುಗಿದ ಬಳಿಕ ನೋವು ತೋಡಿಕೊಂಡ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್: ಏನು ಹೇಳಿದ್ರು ನೋಡಿ

RCB vs GT, IPL 2023: ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯ ಮುಗಿದ ಬಳಿಕ ಮಾತನಾಡಿದ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಬೇಸರ ಹೊರಹಾಕಿದ್ದಾರೆ. ಈ ಸೋಲಿನಿಂದ ತುಂಬಾ ನಿರಾಸೆ ಆಗಿದೆ ಎಂದು ನೋವು ತೋಡಿಕೊಂಡಿದ್ದಾರೆ.

Vinay Bhat
|

Updated on: May 22, 2023 | 9:19 AM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಬಾರಿಗೆ ಐಪಿಎಲ್ ಟ್ರೋಫಿ ಎತ್ತಿ ಹಿಡಿಯುವ ಅವಕಾಶವನ್ನು ಈ ಬಾರಿ ಕೂಡ ಕಳೆದುಕೊಂಡಿದೆ. ಪ್ಲೇ ಆಫ್​ಗೇರಲು ಗುಜರಾತ್ ಟೈಟಾನ್ಸ್ ವಿರುದ್ಧ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಸೋಲು ಕಾಣುವ ಮೂಲಕ ಆರ್​ಸಿಬಿ ಐಪಿಎಲ್ 2023 ರಿಂದ ಹೊರಬಿದ್ದಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಬಾರಿಗೆ ಐಪಿಎಲ್ ಟ್ರೋಫಿ ಎತ್ತಿ ಹಿಡಿಯುವ ಅವಕಾಶವನ್ನು ಈ ಬಾರಿ ಕೂಡ ಕಳೆದುಕೊಂಡಿದೆ. ಪ್ಲೇ ಆಫ್​ಗೇರಲು ಗುಜರಾತ್ ಟೈಟಾನ್ಸ್ ವಿರುದ್ಧ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಸೋಲು ಕಾಣುವ ಮೂಲಕ ಆರ್​ಸಿಬಿ ಐಪಿಎಲ್ 2023 ರಿಂದ ಹೊರಬಿದ್ದಿದೆ.

1 / 8
ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ವಿರಾಟ್ ಕೊಹ್ಲಿ ಅವರ ಶತಕದ ನೆರವಿನಿಂದ 197 ರನ್ ಕಲೆಹಾಕಿದರೆ, ಟಾರ್ಗೆಟ್ ಬೆನ್ನಟ್ಟಿದ ಗುಜರಾತ್ 19.1 ಓವರ್​ನಲ್ಲಿ ದಡ ಮುಟ್ಟಿ 6 ವಿಕೆಟ್​ಗಳ ಜಯ ಸಾಧಿಸಿತು. ಜಿಟಿ ಪರ ಶುಭ್​ಮನ್ ಗಿಲ್ ಶತಕ ಬಾರಿಸಿದರೆ, ವಿಜಯ್ ಶಂಕರ್ ಅರ್ಧಶತಕ ಸಿಡಿಸಿದರು.

ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ವಿರಾಟ್ ಕೊಹ್ಲಿ ಅವರ ಶತಕದ ನೆರವಿನಿಂದ 197 ರನ್ ಕಲೆಹಾಕಿದರೆ, ಟಾರ್ಗೆಟ್ ಬೆನ್ನಟ್ಟಿದ ಗುಜರಾತ್ 19.1 ಓವರ್​ನಲ್ಲಿ ದಡ ಮುಟ್ಟಿ 6 ವಿಕೆಟ್​ಗಳ ಜಯ ಸಾಧಿಸಿತು. ಜಿಟಿ ಪರ ಶುಭ್​ಮನ್ ಗಿಲ್ ಶತಕ ಬಾರಿಸಿದರೆ, ವಿಜಯ್ ಶಂಕರ್ ಅರ್ಧಶತಕ ಸಿಡಿಸಿದರು.

2 / 8
ಪಂದ್ಯ ಮುಗಿದ ಬಳಿಕ ಮಾತನಾಡಿದ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಬೇಸರ ಹೊರಹಾಕಿದ್ದಾರೆ. ಈ ಸೋಲಿನಿಂದ ತುಂಬಾ ನಿರಾಸೆ ಆಗಿದೆ ಎಂದು ನೋವು ತೋಡಿಕೊಂಡಿದ್ದಾರೆ.

ಪಂದ್ಯ ಮುಗಿದ ಬಳಿಕ ಮಾತನಾಡಿದ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಬೇಸರ ಹೊರಹಾಕಿದ್ದಾರೆ. ಈ ಸೋಲಿನಿಂದ ತುಂಬಾ ನಿರಾಸೆ ಆಗಿದೆ ಎಂದು ನೋವು ತೋಡಿಕೊಂಡಿದ್ದಾರೆ.

3 / 8
ನಿಜ ಹೇಳಬೇಕೆಂದರೆ ಈ ಸೋಲು ತುಂಬಾ ನಿರಾಸೆ ತಂದಿದೆ. ಇಂದು ನಾವು ನಮ್ಮ ಬಲಿಷ್ಠ ತಂಡವನ್ನು ಕಣಕ್ಕಿಳಿಸಿದ್ದೆವು. ಆದರೆ, ಶುಭ್​ಮನ್ ಗಿಲ್ ಕಡೆಯಿಂದ ಅದ್ಭುತವಾದ ಶತಕ ಮೂಡಿಬಂತು. ಎರಡನೇ ಇನ್ನಿಂಗ್ಸ್ ವೇಳೆ ತುಂಬಾ ಒದ್ದೆ ಇತ್ತು. ಮೊದಲ ಇನ್ನಿಂಗ್ಸ್​ನಲ್ಲಿ ಕೂಡ ಇತ್ತು. ಎರಡನೇ ಇನ್ನಿಂಗ್ಸ್‌ನಲ್ಲಿ ಸಾಕಷ್ಟು ಹಿಡಿತ ಇರಲಿಲ್ಲ ಮತ್ತು ನಾವು ಕೆಲವು ಬಾರಿ ಚೆಂಡನ್ನು ಬದಲಾಯಿಸಬೇಕಾಗಿತ್ತು ಎಂದು ಹೇಳಿದ್ದಾರೆ.

ನಿಜ ಹೇಳಬೇಕೆಂದರೆ ಈ ಸೋಲು ತುಂಬಾ ನಿರಾಸೆ ತಂದಿದೆ. ಇಂದು ನಾವು ನಮ್ಮ ಬಲಿಷ್ಠ ತಂಡವನ್ನು ಕಣಕ್ಕಿಳಿಸಿದ್ದೆವು. ಆದರೆ, ಶುಭ್​ಮನ್ ಗಿಲ್ ಕಡೆಯಿಂದ ಅದ್ಭುತವಾದ ಶತಕ ಮೂಡಿಬಂತು. ಎರಡನೇ ಇನ್ನಿಂಗ್ಸ್ ವೇಳೆ ತುಂಬಾ ಒದ್ದೆ ಇತ್ತು. ಮೊದಲ ಇನ್ನಿಂಗ್ಸ್​ನಲ್ಲಿ ಕೂಡ ಇತ್ತು. ಎರಡನೇ ಇನ್ನಿಂಗ್ಸ್‌ನಲ್ಲಿ ಸಾಕಷ್ಟು ಹಿಡಿತ ಇರಲಿಲ್ಲ ಮತ್ತು ನಾವು ಕೆಲವು ಬಾರಿ ಚೆಂಡನ್ನು ಬದಲಾಯಿಸಬೇಕಾಗಿತ್ತು ಎಂದು ಹೇಳಿದ್ದಾರೆ.

4 / 8
ವಿರಾಟ್ ಕೊಹ್ಲಿ ಕಡೆಯಿಂದ ಊಹಿಸಲಾಗದ ಶತಕ ಬಂತು. ಅವರು ಸೆಂಚುರಿ ಬಾರಿಸಿ ಕಠಿಣ ಟಾರ್ಗೆಟ್ ನೀಡಿದರು. ಆದರೆ, ಗಿಲ್ ಅದ್ಭುತ ಆಟ ಪ್ರದರ್ಶಿಸಿ ಗೆಲುವನ್ನು ನಮ್ಮಿಂದ ಕಸಿದುಕೊಂಡರು. ನಮ್ಮ ಅಗ್ರ ನಾಲ್ಕು ಬ್ಯಾಟರ್​ಗಳ ಕಡೆಯಿಂದ ಉತ್ತಮ ಕೊಡುಗೆ ಬಂದಿದೆ - ಫಾಫ್ ಡುಪ್ಲೆಸಿಸ್.

ವಿರಾಟ್ ಕೊಹ್ಲಿ ಕಡೆಯಿಂದ ಊಹಿಸಲಾಗದ ಶತಕ ಬಂತು. ಅವರು ಸೆಂಚುರಿ ಬಾರಿಸಿ ಕಠಿಣ ಟಾರ್ಗೆಟ್ ನೀಡಿದರು. ಆದರೆ, ಗಿಲ್ ಅದ್ಭುತ ಆಟ ಪ್ರದರ್ಶಿಸಿ ಗೆಲುವನ್ನು ನಮ್ಮಿಂದ ಕಸಿದುಕೊಂಡರು. ನಮ್ಮ ಅಗ್ರ ನಾಲ್ಕು ಬ್ಯಾಟರ್​ಗಳ ಕಡೆಯಿಂದ ಉತ್ತಮ ಕೊಡುಗೆ ಬಂದಿದೆ - ಫಾಫ್ ಡುಪ್ಲೆಸಿಸ್.

5 / 8
ಈ ಸೀಸನ್​ನಲ್ಲಿ ನಮ್ಮ ಮಧ್ಯಮ ಕ್ರಮಾಂಕದಿಂದ ರನ್ ಬರಲಿಲ್ಲ. ಮುಖ್ಯವಾಗಿ ಇನ್ನಿಂಗ್ಸ್ ಅಂತಿಮ ಹಂತದಲ್ಲಿ ನಿರೀಕ್ಷೆಗೆ ತಕ್ಕಂತೆ ಬ್ಯಾಟಿಂಗ್ ಪ್ರದರ್ಶಿಸಿಲ್ಲ. ಜೊತೆಗೆ ಮಧ್ಯಮ ಓವರ್​ನಲ್ಲಿ ವಿಕೆಟ್ ಕೂಡ ಪಡೆದುಕೊಂಡಿಲ್ಲ ಎಂಬುದು ಫಾಫ್ ಅಭಿಪ್ರಾಯ.

ಈ ಸೀಸನ್​ನಲ್ಲಿ ನಮ್ಮ ಮಧ್ಯಮ ಕ್ರಮಾಂಕದಿಂದ ರನ್ ಬರಲಿಲ್ಲ. ಮುಖ್ಯವಾಗಿ ಇನ್ನಿಂಗ್ಸ್ ಅಂತಿಮ ಹಂತದಲ್ಲಿ ನಿರೀಕ್ಷೆಗೆ ತಕ್ಕಂತೆ ಬ್ಯಾಟಿಂಗ್ ಪ್ರದರ್ಶಿಸಿಲ್ಲ. ಜೊತೆಗೆ ಮಧ್ಯಮ ಓವರ್​ನಲ್ಲಿ ವಿಕೆಟ್ ಕೂಡ ಪಡೆದುಕೊಂಡಿಲ್ಲ ಎಂಬುದು ಫಾಫ್ ಅಭಿಪ್ರಾಯ.

6 / 8
ವಿರಾಟ್ ಕೊಹ್ಲಿ ಈ ಸೀಸನ್​ನಲ್ಲಿ ಅತ್ಯುತ್ತಮ ಬ್ಯಾಟಿಂಗ್ ಮಾಡಿದ್ದಾರೆ. ನಮ್ಮಿಬ್ಬರ ಜೊತೆಯಾಟ ಕೂಡ ಉತ್ತಮವಾಗಿತ್ತು. ಇಡೀ ಸೀಸನ್​ನಲ್ಲಿ 40ಕ್ಕಿಂತ ಕಡಿಮೆ ಜೊತೆಯಾಟ ನಾವು ಆಡಿಲ್ಲ. ಇನ್ನಿಂಗ್ಸ್​ನ ಕೊನೆಯ ಹಂತದಲ್ಲಿ ಪಂದ್ಯವನ್ನು ಫಿನಿಶ್ ಮಾಡುವ ವಿಚಾರದಲ್ಲಿ ನಾವಿನ್ನೂ ಬಲಿಷ್ಠವಾಗಬೇಕು - ಫಾಫ್ ಡುಪ್ಲೆಸಿಸ್.

ವಿರಾಟ್ ಕೊಹ್ಲಿ ಈ ಸೀಸನ್​ನಲ್ಲಿ ಅತ್ಯುತ್ತಮ ಬ್ಯಾಟಿಂಗ್ ಮಾಡಿದ್ದಾರೆ. ನಮ್ಮಿಬ್ಬರ ಜೊತೆಯಾಟ ಕೂಡ ಉತ್ತಮವಾಗಿತ್ತು. ಇಡೀ ಸೀಸನ್​ನಲ್ಲಿ 40ಕ್ಕಿಂತ ಕಡಿಮೆ ಜೊತೆಯಾಟ ನಾವು ಆಡಿಲ್ಲ. ಇನ್ನಿಂಗ್ಸ್​ನ ಕೊನೆಯ ಹಂತದಲ್ಲಿ ಪಂದ್ಯವನ್ನು ಫಿನಿಶ್ ಮಾಡುವ ವಿಚಾರದಲ್ಲಿ ನಾವಿನ್ನೂ ಬಲಿಷ್ಠವಾಗಬೇಕು - ಫಾಫ್ ಡುಪ್ಲೆಸಿಸ್.

7 / 8
ಕಳೆದ ವರ್ಷ ದಿನೇಶ್ ಕಾರ್ತಿಕ್ ಪಂದ್ಯವನ್ನು ಫಿನಿಶ್ ಮಾಡುತ್ತಿದ್ದರು. ಆದರೆ ಈ ಋತುವಿನಲ್ಲಿ ಅದು ಸಾಧ್ಯವಾಗಿಲ್ಲ. ನೀವು ಯಶಸ್ವಿಯಾದ ತಂಡಗಳನ್ನು ನೋಡಿದರೆ ಅವರು ಐದು, ಆರು ಮತ್ತು ಏಳನೇ ಕ್ರಮಾಂಕದಲ್ಲಿ ಉತ್ತಮ ಹಿಟ್ಟರ್​ಗಳನ್ನು ಹೊಂದಿದ್ದಾರೆ. ನಮ್ಮಲ್ಲಿ ಆರೀತಿಯ ಬ್ಯಾಟರ್ ಬೇಕು ಎಂದು ಫಾಫ್ ಹೇಳಿದ್ದಾರೆ.

ಕಳೆದ ವರ್ಷ ದಿನೇಶ್ ಕಾರ್ತಿಕ್ ಪಂದ್ಯವನ್ನು ಫಿನಿಶ್ ಮಾಡುತ್ತಿದ್ದರು. ಆದರೆ ಈ ಋತುವಿನಲ್ಲಿ ಅದು ಸಾಧ್ಯವಾಗಿಲ್ಲ. ನೀವು ಯಶಸ್ವಿಯಾದ ತಂಡಗಳನ್ನು ನೋಡಿದರೆ ಅವರು ಐದು, ಆರು ಮತ್ತು ಏಳನೇ ಕ್ರಮಾಂಕದಲ್ಲಿ ಉತ್ತಮ ಹಿಟ್ಟರ್​ಗಳನ್ನು ಹೊಂದಿದ್ದಾರೆ. ನಮ್ಮಲ್ಲಿ ಆರೀತಿಯ ಬ್ಯಾಟರ್ ಬೇಕು ಎಂದು ಫಾಫ್ ಹೇಳಿದ್ದಾರೆ.

8 / 8
Follow Us
ಇದೆಂಥಾ ಪ್ರಶ್ನೆ? ಪತ್ರಕರ್ತರ ಪ್ರಶ್ನೆಗೆ ಕೆರಳಿದ ಇಶಾನ್ ಕಿಶನ್
ಇದೆಂಥಾ ಪ್ರಶ್ನೆ? ಪತ್ರಕರ್ತರ ಪ್ರಶ್ನೆಗೆ ಕೆರಳಿದ ಇಶಾನ್ ಕಿಶನ್
ಒಳಮೀಸಲಾತಿ ಜಟಾಪಟಿ: ಸಭೆಯಲ್ಲಿ ಮಹತ್ವದ ತೀರ್ಮಾನ
ಒಳಮೀಸಲಾತಿ ಜಟಾಪಟಿ: ಸಭೆಯಲ್ಲಿ ಮಹತ್ವದ ತೀರ್ಮಾನ
ಅಶ್ಲೀಲ ಕಮೆಂಟ್ ಪ್ರಕರಣ: ರಮ್ಯಾ ಹಠ ಹಿಡಿದು ಕೇಸ್ ಹಾಕಿದ್ದಕ್ಕೆ ಇದೇ ಕಾರಣ
ಅಶ್ಲೀಲ ಕಮೆಂಟ್ ಪ್ರಕರಣ: ರಮ್ಯಾ ಹಠ ಹಿಡಿದು ಕೇಸ್ ಹಾಕಿದ್ದಕ್ಕೆ ಇದೇ ಕಾರಣ
ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ
ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ
ಅಶ್ಲೀಲ ಕಮೆಂಟ್ ಕೇಸು, ನ್ಯಾಯಾಲಯಕ್ಕೆ ಬಂದ ನಟಿ ರಮ್ಯಾ: ವಿಡಿಯೋ
ಅಶ್ಲೀಲ ಕಮೆಂಟ್ ಕೇಸು, ನ್ಯಾಯಾಲಯಕ್ಕೆ ಬಂದ ನಟಿ ರಮ್ಯಾ: ವಿಡಿಯೋ
ಯುಗಾದಿ ವರ್ಷ ಭವಿಷ್ಯ; ವೃಶ್ಚಿಕ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ವೃಶ್ಚಿಕ ರಾಶಿಗೆ ಈ ವರ್ಷ ಹೇಗಿರಲಿದೆ?
ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ
ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ
ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!
ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!
ಚಿನ್ನದ ಸರ ಕಸಿದು ಪರಾರಿಯಾಗಲು ಯತ್ನಿಸಿದ ಕಳ್ಳ; ಮುಂದೇನಾಯಿತು ನೋಡಿ
ಚಿನ್ನದ ಸರ ಕಸಿದು ಪರಾರಿಯಾಗಲು ಯತ್ನಿಸಿದ ಕಳ್ಳ; ಮುಂದೇನಾಯಿತು ನೋಡಿ