Faf Du Plessis: ಪಂದ್ಯ ಮುಗಿದ ಬಳಿಕ ನೋವು ತೋಡಿಕೊಂಡ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್: ಏನು ಹೇಳಿದ್ರು ನೋಡಿ

RCB vs GT, IPL 2023: ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯ ಮುಗಿದ ಬಳಿಕ ಮಾತನಾಡಿದ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಬೇಸರ ಹೊರಹಾಕಿದ್ದಾರೆ. ಈ ಸೋಲಿನಿಂದ ತುಂಬಾ ನಿರಾಸೆ ಆಗಿದೆ ಎಂದು ನೋವು ತೋಡಿಕೊಂಡಿದ್ದಾರೆ.

|

Updated on: May 22, 2023 | 9:19 AM

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಬಾರಿಗೆ ಐಪಿಎಲ್ ಟ್ರೋಫಿ ಎತ್ತಿ ಹಿಡಿಯುವ ಅವಕಾಶವನ್ನು ಈ ಬಾರಿ ಕೂಡ ಕಳೆದುಕೊಂಡಿದೆ. ಪ್ಲೇ ಆಫ್​ಗೇರಲು ಗುಜರಾತ್ ಟೈಟಾನ್ಸ್ ವಿರುದ್ಧ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಸೋಲು ಕಾಣುವ ಮೂಲಕ ಆರ್​ಸಿಬಿ ಐಪಿಎಲ್ 2023 ರಿಂದ ಹೊರಬಿದ್ದಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಬಾರಿಗೆ ಐಪಿಎಲ್ ಟ್ರೋಫಿ ಎತ್ತಿ ಹಿಡಿಯುವ ಅವಕಾಶವನ್ನು ಈ ಬಾರಿ ಕೂಡ ಕಳೆದುಕೊಂಡಿದೆ. ಪ್ಲೇ ಆಫ್​ಗೇರಲು ಗುಜರಾತ್ ಟೈಟಾನ್ಸ್ ವಿರುದ್ಧ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಸೋಲು ಕಾಣುವ ಮೂಲಕ ಆರ್​ಸಿಬಿ ಐಪಿಎಲ್ 2023 ರಿಂದ ಹೊರಬಿದ್ದಿದೆ.

1 / 8
ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ವಿರಾಟ್ ಕೊಹ್ಲಿ ಅವರ ಶತಕದ ನೆರವಿನಿಂದ 197 ರನ್ ಕಲೆಹಾಕಿದರೆ, ಟಾರ್ಗೆಟ್ ಬೆನ್ನಟ್ಟಿದ ಗುಜರಾತ್ 19.1 ಓವರ್​ನಲ್ಲಿ ದಡ ಮುಟ್ಟಿ 6 ವಿಕೆಟ್​ಗಳ ಜಯ ಸಾಧಿಸಿತು. ಜಿಟಿ ಪರ ಶುಭ್​ಮನ್ ಗಿಲ್ ಶತಕ ಬಾರಿಸಿದರೆ, ವಿಜಯ್ ಶಂಕರ್ ಅರ್ಧಶತಕ ಸಿಡಿಸಿದರು.

ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ವಿರಾಟ್ ಕೊಹ್ಲಿ ಅವರ ಶತಕದ ನೆರವಿನಿಂದ 197 ರನ್ ಕಲೆಹಾಕಿದರೆ, ಟಾರ್ಗೆಟ್ ಬೆನ್ನಟ್ಟಿದ ಗುಜರಾತ್ 19.1 ಓವರ್​ನಲ್ಲಿ ದಡ ಮುಟ್ಟಿ 6 ವಿಕೆಟ್​ಗಳ ಜಯ ಸಾಧಿಸಿತು. ಜಿಟಿ ಪರ ಶುಭ್​ಮನ್ ಗಿಲ್ ಶತಕ ಬಾರಿಸಿದರೆ, ವಿಜಯ್ ಶಂಕರ್ ಅರ್ಧಶತಕ ಸಿಡಿಸಿದರು.

2 / 8
ಪಂದ್ಯ ಮುಗಿದ ಬಳಿಕ ಮಾತನಾಡಿದ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಬೇಸರ ಹೊರಹಾಕಿದ್ದಾರೆ. ಈ ಸೋಲಿನಿಂದ ತುಂಬಾ ನಿರಾಸೆ ಆಗಿದೆ ಎಂದು ನೋವು ತೋಡಿಕೊಂಡಿದ್ದಾರೆ.

ಪಂದ್ಯ ಮುಗಿದ ಬಳಿಕ ಮಾತನಾಡಿದ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಬೇಸರ ಹೊರಹಾಕಿದ್ದಾರೆ. ಈ ಸೋಲಿನಿಂದ ತುಂಬಾ ನಿರಾಸೆ ಆಗಿದೆ ಎಂದು ನೋವು ತೋಡಿಕೊಂಡಿದ್ದಾರೆ.

3 / 8
ನಿಜ ಹೇಳಬೇಕೆಂದರೆ ಈ ಸೋಲು ತುಂಬಾ ನಿರಾಸೆ ತಂದಿದೆ. ಇಂದು ನಾವು ನಮ್ಮ ಬಲಿಷ್ಠ ತಂಡವನ್ನು ಕಣಕ್ಕಿಳಿಸಿದ್ದೆವು. ಆದರೆ, ಶುಭ್​ಮನ್ ಗಿಲ್ ಕಡೆಯಿಂದ ಅದ್ಭುತವಾದ ಶತಕ ಮೂಡಿಬಂತು. ಎರಡನೇ ಇನ್ನಿಂಗ್ಸ್ ವೇಳೆ ತುಂಬಾ ಒದ್ದೆ ಇತ್ತು. ಮೊದಲ ಇನ್ನಿಂಗ್ಸ್​ನಲ್ಲಿ ಕೂಡ ಇತ್ತು. ಎರಡನೇ ಇನ್ನಿಂಗ್ಸ್‌ನಲ್ಲಿ ಸಾಕಷ್ಟು ಹಿಡಿತ ಇರಲಿಲ್ಲ ಮತ್ತು ನಾವು ಕೆಲವು ಬಾರಿ ಚೆಂಡನ್ನು ಬದಲಾಯಿಸಬೇಕಾಗಿತ್ತು ಎಂದು ಹೇಳಿದ್ದಾರೆ.

ನಿಜ ಹೇಳಬೇಕೆಂದರೆ ಈ ಸೋಲು ತುಂಬಾ ನಿರಾಸೆ ತಂದಿದೆ. ಇಂದು ನಾವು ನಮ್ಮ ಬಲಿಷ್ಠ ತಂಡವನ್ನು ಕಣಕ್ಕಿಳಿಸಿದ್ದೆವು. ಆದರೆ, ಶುಭ್​ಮನ್ ಗಿಲ್ ಕಡೆಯಿಂದ ಅದ್ಭುತವಾದ ಶತಕ ಮೂಡಿಬಂತು. ಎರಡನೇ ಇನ್ನಿಂಗ್ಸ್ ವೇಳೆ ತುಂಬಾ ಒದ್ದೆ ಇತ್ತು. ಮೊದಲ ಇನ್ನಿಂಗ್ಸ್​ನಲ್ಲಿ ಕೂಡ ಇತ್ತು. ಎರಡನೇ ಇನ್ನಿಂಗ್ಸ್‌ನಲ್ಲಿ ಸಾಕಷ್ಟು ಹಿಡಿತ ಇರಲಿಲ್ಲ ಮತ್ತು ನಾವು ಕೆಲವು ಬಾರಿ ಚೆಂಡನ್ನು ಬದಲಾಯಿಸಬೇಕಾಗಿತ್ತು ಎಂದು ಹೇಳಿದ್ದಾರೆ.

4 / 8
ವಿರಾಟ್ ಕೊಹ್ಲಿ ಕಡೆಯಿಂದ ಊಹಿಸಲಾಗದ ಶತಕ ಬಂತು. ಅವರು ಸೆಂಚುರಿ ಬಾರಿಸಿ ಕಠಿಣ ಟಾರ್ಗೆಟ್ ನೀಡಿದರು. ಆದರೆ, ಗಿಲ್ ಅದ್ಭುತ ಆಟ ಪ್ರದರ್ಶಿಸಿ ಗೆಲುವನ್ನು ನಮ್ಮಿಂದ ಕಸಿದುಕೊಂಡರು. ನಮ್ಮ ಅಗ್ರ ನಾಲ್ಕು ಬ್ಯಾಟರ್​ಗಳ ಕಡೆಯಿಂದ ಉತ್ತಮ ಕೊಡುಗೆ ಬಂದಿದೆ - ಫಾಫ್ ಡುಪ್ಲೆಸಿಸ್.

ವಿರಾಟ್ ಕೊಹ್ಲಿ ಕಡೆಯಿಂದ ಊಹಿಸಲಾಗದ ಶತಕ ಬಂತು. ಅವರು ಸೆಂಚುರಿ ಬಾರಿಸಿ ಕಠಿಣ ಟಾರ್ಗೆಟ್ ನೀಡಿದರು. ಆದರೆ, ಗಿಲ್ ಅದ್ಭುತ ಆಟ ಪ್ರದರ್ಶಿಸಿ ಗೆಲುವನ್ನು ನಮ್ಮಿಂದ ಕಸಿದುಕೊಂಡರು. ನಮ್ಮ ಅಗ್ರ ನಾಲ್ಕು ಬ್ಯಾಟರ್​ಗಳ ಕಡೆಯಿಂದ ಉತ್ತಮ ಕೊಡುಗೆ ಬಂದಿದೆ - ಫಾಫ್ ಡುಪ್ಲೆಸಿಸ್.

5 / 8
ಈ ಸೀಸನ್​ನಲ್ಲಿ ನಮ್ಮ ಮಧ್ಯಮ ಕ್ರಮಾಂಕದಿಂದ ರನ್ ಬರಲಿಲ್ಲ. ಮುಖ್ಯವಾಗಿ ಇನ್ನಿಂಗ್ಸ್ ಅಂತಿಮ ಹಂತದಲ್ಲಿ ನಿರೀಕ್ಷೆಗೆ ತಕ್ಕಂತೆ ಬ್ಯಾಟಿಂಗ್ ಪ್ರದರ್ಶಿಸಿಲ್ಲ. ಜೊತೆಗೆ ಮಧ್ಯಮ ಓವರ್​ನಲ್ಲಿ ವಿಕೆಟ್ ಕೂಡ ಪಡೆದುಕೊಂಡಿಲ್ಲ ಎಂಬುದು ಫಾಫ್ ಅಭಿಪ್ರಾಯ.

ಈ ಸೀಸನ್​ನಲ್ಲಿ ನಮ್ಮ ಮಧ್ಯಮ ಕ್ರಮಾಂಕದಿಂದ ರನ್ ಬರಲಿಲ್ಲ. ಮುಖ್ಯವಾಗಿ ಇನ್ನಿಂಗ್ಸ್ ಅಂತಿಮ ಹಂತದಲ್ಲಿ ನಿರೀಕ್ಷೆಗೆ ತಕ್ಕಂತೆ ಬ್ಯಾಟಿಂಗ್ ಪ್ರದರ್ಶಿಸಿಲ್ಲ. ಜೊತೆಗೆ ಮಧ್ಯಮ ಓವರ್​ನಲ್ಲಿ ವಿಕೆಟ್ ಕೂಡ ಪಡೆದುಕೊಂಡಿಲ್ಲ ಎಂಬುದು ಫಾಫ್ ಅಭಿಪ್ರಾಯ.

6 / 8
ವಿರಾಟ್ ಕೊಹ್ಲಿ ಈ ಸೀಸನ್​ನಲ್ಲಿ ಅತ್ಯುತ್ತಮ ಬ್ಯಾಟಿಂಗ್ ಮಾಡಿದ್ದಾರೆ. ನಮ್ಮಿಬ್ಬರ ಜೊತೆಯಾಟ ಕೂಡ ಉತ್ತಮವಾಗಿತ್ತು. ಇಡೀ ಸೀಸನ್​ನಲ್ಲಿ 40ಕ್ಕಿಂತ ಕಡಿಮೆ ಜೊತೆಯಾಟ ನಾವು ಆಡಿಲ್ಲ. ಇನ್ನಿಂಗ್ಸ್​ನ ಕೊನೆಯ ಹಂತದಲ್ಲಿ ಪಂದ್ಯವನ್ನು ಫಿನಿಶ್ ಮಾಡುವ ವಿಚಾರದಲ್ಲಿ ನಾವಿನ್ನೂ ಬಲಿಷ್ಠವಾಗಬೇಕು - ಫಾಫ್ ಡುಪ್ಲೆಸಿಸ್.

ವಿರಾಟ್ ಕೊಹ್ಲಿ ಈ ಸೀಸನ್​ನಲ್ಲಿ ಅತ್ಯುತ್ತಮ ಬ್ಯಾಟಿಂಗ್ ಮಾಡಿದ್ದಾರೆ. ನಮ್ಮಿಬ್ಬರ ಜೊತೆಯಾಟ ಕೂಡ ಉತ್ತಮವಾಗಿತ್ತು. ಇಡೀ ಸೀಸನ್​ನಲ್ಲಿ 40ಕ್ಕಿಂತ ಕಡಿಮೆ ಜೊತೆಯಾಟ ನಾವು ಆಡಿಲ್ಲ. ಇನ್ನಿಂಗ್ಸ್​ನ ಕೊನೆಯ ಹಂತದಲ್ಲಿ ಪಂದ್ಯವನ್ನು ಫಿನಿಶ್ ಮಾಡುವ ವಿಚಾರದಲ್ಲಿ ನಾವಿನ್ನೂ ಬಲಿಷ್ಠವಾಗಬೇಕು - ಫಾಫ್ ಡುಪ್ಲೆಸಿಸ್.

7 / 8
ಕಳೆದ ವರ್ಷ ದಿನೇಶ್ ಕಾರ್ತಿಕ್ ಪಂದ್ಯವನ್ನು ಫಿನಿಶ್ ಮಾಡುತ್ತಿದ್ದರು. ಆದರೆ ಈ ಋತುವಿನಲ್ಲಿ ಅದು ಸಾಧ್ಯವಾಗಿಲ್ಲ. ನೀವು ಯಶಸ್ವಿಯಾದ ತಂಡಗಳನ್ನು ನೋಡಿದರೆ ಅವರು ಐದು, ಆರು ಮತ್ತು ಏಳನೇ ಕ್ರಮಾಂಕದಲ್ಲಿ ಉತ್ತಮ ಹಿಟ್ಟರ್​ಗಳನ್ನು ಹೊಂದಿದ್ದಾರೆ. ನಮ್ಮಲ್ಲಿ ಆರೀತಿಯ ಬ್ಯಾಟರ್ ಬೇಕು ಎಂದು ಫಾಫ್ ಹೇಳಿದ್ದಾರೆ.

ಕಳೆದ ವರ್ಷ ದಿನೇಶ್ ಕಾರ್ತಿಕ್ ಪಂದ್ಯವನ್ನು ಫಿನಿಶ್ ಮಾಡುತ್ತಿದ್ದರು. ಆದರೆ ಈ ಋತುವಿನಲ್ಲಿ ಅದು ಸಾಧ್ಯವಾಗಿಲ್ಲ. ನೀವು ಯಶಸ್ವಿಯಾದ ತಂಡಗಳನ್ನು ನೋಡಿದರೆ ಅವರು ಐದು, ಆರು ಮತ್ತು ಏಳನೇ ಕ್ರಮಾಂಕದಲ್ಲಿ ಉತ್ತಮ ಹಿಟ್ಟರ್​ಗಳನ್ನು ಹೊಂದಿದ್ದಾರೆ. ನಮ್ಮಲ್ಲಿ ಆರೀತಿಯ ಬ್ಯಾಟರ್ ಬೇಕು ಎಂದು ಫಾಫ್ ಹೇಳಿದ್ದಾರೆ.

8 / 8
Follow us
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್