AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL ನಲ್ಲಿ ಫಾಫ್ ಡುಪ್ಲೆಸಿಸ್ ವಿಶ್ವಕಪ್​ ಭವಿಷ್ಯ ನಿರ್ಧಾರ..!

T20 World Cup 2024: ಈ ಬಾರಿಯ ಟಿ20 ವಿಶ್ವಕಪ್ ಜೂನ್ 1 ರಿಂದ ಶುರುವಾಗಲಿದೆ. ಈ ಟೂರ್ನಿಯಲ್ಲಿ ಸೌತ್ ಆಫ್ರಿಕಾ ಪರ ಫಾಫ್ ಡುಪ್ಲೆಸಿಸ್ ಕಣಕ್ಕಿಳಿಯಲಿದ್ದಾರಾ ಎಂಬುದೇ ಪ್ರಶ್ನೆ. ಏಕೆಂದರೆ ರಾಷ್ಟ್ರೀಯ ತಂಡಕ್ಕೆ ಮರಳಲು ಫಾಫ್ ಬಯಸಿದ್ದು, ಅದರಂತೆ ಟಿ20 ವಿಶ್ವಕಪ್ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳುವ ಇರಾದೆಯಲ್ಲಿದ್ದಾರೆ.

TV9 Web
| Edited By: |

Updated on: Feb 20, 2024 | 10:53 AM

Share
ಡಿಸೆಂಬರ್ 1, 2020 ರ ಬಳಿಕ ಫಾಫ್ ಡುಪ್ಲೆಸಿಸ್ (Faf du Plessis) ಸೌತ್ ಆಫ್ರಿಕಾ ಪರ ಯಾವುದೇ ಟಿ20 ಪಂದ್ಯವಾಡಿಲ್ಲ. ಕಳೆದ 2 ಟಿ20 ವಿಶ್ವಕಪ್​ನಲ್ಲೂ ಕಣಕ್ಕಿಳಿದಿರಲಿಲ್ಲ. ಇದೀಗ ಫಾಫ್ ಡುಪ್ಲೆಸಿಸ್​​ಗೆ ಕಂಬ್ಯಾಕ್ ಮಾಡಲು ಸೌತ್ ಆಫ್ರಿಕಾ ಕ್ರಿಕೆಟ್ ಬೋರ್ಡ್​ ರಹದಾರಿ ಒದಗಿಸಿದೆ. ಅದು ಕೂಡ ಇಂಡಿಯನ್ ಪ್ರೀಮಿಯರ್ ಲೀಗ್ ಮೂಲಕ ಎಂಬುದು ವಿಶೇಷ.

ಡಿಸೆಂಬರ್ 1, 2020 ರ ಬಳಿಕ ಫಾಫ್ ಡುಪ್ಲೆಸಿಸ್ (Faf du Plessis) ಸೌತ್ ಆಫ್ರಿಕಾ ಪರ ಯಾವುದೇ ಟಿ20 ಪಂದ್ಯವಾಡಿಲ್ಲ. ಕಳೆದ 2 ಟಿ20 ವಿಶ್ವಕಪ್​ನಲ್ಲೂ ಕಣಕ್ಕಿಳಿದಿರಲಿಲ್ಲ. ಇದೀಗ ಫಾಫ್ ಡುಪ್ಲೆಸಿಸ್​​ಗೆ ಕಂಬ್ಯಾಕ್ ಮಾಡಲು ಸೌತ್ ಆಫ್ರಿಕಾ ಕ್ರಿಕೆಟ್ ಬೋರ್ಡ್​ ರಹದಾರಿ ಒದಗಿಸಿದೆ. ಅದು ಕೂಡ ಇಂಡಿಯನ್ ಪ್ರೀಮಿಯರ್ ಲೀಗ್ ಮೂಲಕ ಎಂಬುದು ವಿಶೇಷ.

1 / 6
ಅಂದರೆ ಮುಂಬರುವ ಟಿ20 ವಿಶ್ವಕಪ್​ಗಾಗಿ ಫಾಫ್ ಡುಪ್ಲೆಸಿಸ್ ಅವರನ್ನು ಆಯ್ಕೆಗೆ ಪರಿಗಣಿಸಲಾಗುವುದು ಎಂದು ಸೌತ್ ಆಫ್ರಿಕಾ ತಂಡದ ಕೋಚ್ ರಾಬ್ ವಾಲ್ಟರ್ ತಿಳಿಸಿದ್ದಾರೆ. ಕಳೆದ ಕೆಲ ವರ್ಷಗಳಿಂದ ಫಾಫ್ ಟಿ20 ಕ್ರಿಕೆಟ್​ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಹೀಗಾಗಿ ಅವರು ಮುಂದಿನ ವಿಶ್ವಕಪ್​ಗೆ ಪರಿಗಣನೆಯಲ್ಲಿದ್ದಾರೆ ಎಂದು ವಾಲ್ಟರ್ ಹೇಳಿದ್ದಾರೆ.

ಅಂದರೆ ಮುಂಬರುವ ಟಿ20 ವಿಶ್ವಕಪ್​ಗಾಗಿ ಫಾಫ್ ಡುಪ್ಲೆಸಿಸ್ ಅವರನ್ನು ಆಯ್ಕೆಗೆ ಪರಿಗಣಿಸಲಾಗುವುದು ಎಂದು ಸೌತ್ ಆಫ್ರಿಕಾ ತಂಡದ ಕೋಚ್ ರಾಬ್ ವಾಲ್ಟರ್ ತಿಳಿಸಿದ್ದಾರೆ. ಕಳೆದ ಕೆಲ ವರ್ಷಗಳಿಂದ ಫಾಫ್ ಟಿ20 ಕ್ರಿಕೆಟ್​ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಹೀಗಾಗಿ ಅವರು ಮುಂದಿನ ವಿಶ್ವಕಪ್​ಗೆ ಪರಿಗಣನೆಯಲ್ಲಿದ್ದಾರೆ ಎಂದು ವಾಲ್ಟರ್ ಹೇಳಿದ್ದಾರೆ.

2 / 6
ಇತ್ತ ಫಾಫ್ ಡುಪ್ಲೆಸಿಸ್ ಕೂಡ ರಾಷ್ಟ್ರೀಯ ತಂಡದಲ್ಲಿ ಕೊನೆಯ ಬಾರಿ ಕಾಣಿಸಿಕೊಳ್ಳಲು ಉತ್ಸುಕರಾಗಿದ್ದಾರೆ. ಆದರೆ ಅವರ ಕಂಬ್ಯಾಕ್ ಅಂದುಕೊಂಡಷ್ಟು ಸುಲಭವಲ್ಲ. ಏಕೆಂದರೆ ಈಗಾಗಲೇ ಸೌತ್ ಆಫ್ರಿಕಾ ಟಿ20 ತಂಡದಲ್ಲಿ ಯುವ ಆಟಗಾರರ ದಂಡೇ ಕಾಣಿಸಿಕೊಂಡಿದೆ. ಹೀಗಾಗಿ ಫಾಫ್​ಗೆ ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನ ಪಡೆಯಲು ಇರುವ ಏಕೈಕ ದಾರಿ ಐಪಿಎಲ್​.

ಇತ್ತ ಫಾಫ್ ಡುಪ್ಲೆಸಿಸ್ ಕೂಡ ರಾಷ್ಟ್ರೀಯ ತಂಡದಲ್ಲಿ ಕೊನೆಯ ಬಾರಿ ಕಾಣಿಸಿಕೊಳ್ಳಲು ಉತ್ಸುಕರಾಗಿದ್ದಾರೆ. ಆದರೆ ಅವರ ಕಂಬ್ಯಾಕ್ ಅಂದುಕೊಂಡಷ್ಟು ಸುಲಭವಲ್ಲ. ಏಕೆಂದರೆ ಈಗಾಗಲೇ ಸೌತ್ ಆಫ್ರಿಕಾ ಟಿ20 ತಂಡದಲ್ಲಿ ಯುವ ಆಟಗಾರರ ದಂಡೇ ಕಾಣಿಸಿಕೊಂಡಿದೆ. ಹೀಗಾಗಿ ಫಾಫ್​ಗೆ ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನ ಪಡೆಯಲು ಇರುವ ಏಕೈಕ ದಾರಿ ಐಪಿಎಲ್​.

3 / 6
ಅಂದರೆ ಮುಂಬರುವ ಐಪಿಎಲ್​ನಲ್ಲಿ ಆರ್​ಸಿಬಿ ಪರ ಭರ್ಜರಿ ಪ್ರದರ್ಶನ ನೀಡಿದರೆ ಫಾಫ್ ಡುಪ್ಲೆಸಿಸ್ ಅವರಿಗೆ ಟಿ20 ತಂಡದ ಬಾಗಿಲು ತೆರೆಯಲಿದೆ. ಇದನ್ನೇ ಮಾನದಂಡವಾಗಿಟ್ಟುಕೊಂಡು ಅನುಭವಿ ಆಟಗಾರನನ್ನು ತಂಡಕ್ಕೆ ಆಯ್ಕೆ ಮಾಡಲು ಸೌತ್ ಆಫ್ರಿಕಾ ಕ್ರಿಕೆಟ್ ಬೋರ್ಡ್ ಪ್ಲ್ಯಾನ್ ರೂಪಿಸಿದೆ.

ಅಂದರೆ ಮುಂಬರುವ ಐಪಿಎಲ್​ನಲ್ಲಿ ಆರ್​ಸಿಬಿ ಪರ ಭರ್ಜರಿ ಪ್ರದರ್ಶನ ನೀಡಿದರೆ ಫಾಫ್ ಡುಪ್ಲೆಸಿಸ್ ಅವರಿಗೆ ಟಿ20 ತಂಡದ ಬಾಗಿಲು ತೆರೆಯಲಿದೆ. ಇದನ್ನೇ ಮಾನದಂಡವಾಗಿಟ್ಟುಕೊಂಡು ಅನುಭವಿ ಆಟಗಾರನನ್ನು ತಂಡಕ್ಕೆ ಆಯ್ಕೆ ಮಾಡಲು ಸೌತ್ ಆಫ್ರಿಕಾ ಕ್ರಿಕೆಟ್ ಬೋರ್ಡ್ ಪ್ಲ್ಯಾನ್ ರೂಪಿಸಿದೆ.

4 / 6
ಹೀಗಾಗಿ ಈ ಬಾರಿಯ ಐಪಿಎಲ್​ ಮೂಲಕ ಫಾಫ್ ಡುಪ್ಲೆಸಿಸ್ ಅವರ ಟಿ20 ವಿಶ್ವಕಪ್ ಭವಿಷ್ಯ ನಿರ್ಧಾರವಾಗಲಿದೆ. ಪ್ರಸ್ತುತ ಆರ್​ಸಿಬಿ ತಂಡದ ನಾಯಕರಾಗಿರುವ ಡುಪ್ಲೆಸಿಸ್ ಇತ್ತೀಚೆಗೆ ಮುಕ್ತಾಯಗೊಂಡ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲೂ ಅತ್ಯುತ್ತಮ ಪ್ರದರ್ಶನ ನೀಡಿದ್ದರು.

ಹೀಗಾಗಿ ಈ ಬಾರಿಯ ಐಪಿಎಲ್​ ಮೂಲಕ ಫಾಫ್ ಡುಪ್ಲೆಸಿಸ್ ಅವರ ಟಿ20 ವಿಶ್ವಕಪ್ ಭವಿಷ್ಯ ನಿರ್ಧಾರವಾಗಲಿದೆ. ಪ್ರಸ್ತುತ ಆರ್​ಸಿಬಿ ತಂಡದ ನಾಯಕರಾಗಿರುವ ಡುಪ್ಲೆಸಿಸ್ ಇತ್ತೀಚೆಗೆ ಮುಕ್ತಾಯಗೊಂಡ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲೂ ಅತ್ಯುತ್ತಮ ಪ್ರದರ್ಶನ ನೀಡಿದ್ದರು.

5 / 6
ಅದರಲ್ಲೂ ಕಳೆದ ಸೀಸನ್ ಐಪಿಎಲ್​ನಲ್ಲಿ 14 ಪಂದ್ಯಗಳಿಂದ ಒಟ್ಟು 730 ರನ್​ ಕಲೆಹಾಕಿದ್ದರು. ಅದರಂತೆ ಈ ಬಾರಿ ಕೂಡ ಆರ್​ಸಿಬಿ ಪರ ಅಬ್ಬರಿಸಿದರೆ ಫಾಫ್ ಡುಪ್ಲೆಸಿಸ್​ಗೆ ಸೌತ್ ಆಫ್ರಿಕಾ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗುವುದು ಖಚಿತ ಎಂದೇ ಹೇಳಬಹುದು.

ಅದರಲ್ಲೂ ಕಳೆದ ಸೀಸನ್ ಐಪಿಎಲ್​ನಲ್ಲಿ 14 ಪಂದ್ಯಗಳಿಂದ ಒಟ್ಟು 730 ರನ್​ ಕಲೆಹಾಕಿದ್ದರು. ಅದರಂತೆ ಈ ಬಾರಿ ಕೂಡ ಆರ್​ಸಿಬಿ ಪರ ಅಬ್ಬರಿಸಿದರೆ ಫಾಫ್ ಡುಪ್ಲೆಸಿಸ್​ಗೆ ಸೌತ್ ಆಫ್ರಿಕಾ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗುವುದು ಖಚಿತ ಎಂದೇ ಹೇಳಬಹುದು.

6 / 6
Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ