AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2026: ಇಬ್ಬರಿಲ್ಲದ ಮೊದಲ ಟಿ20 ವಿಶ್ವಕಪ್​

T20 World Cup 2026: ಬಹುನಿರೀಕ್ಷಿತ ಟಿ20 ವಿಶ್ವಕಪ್ 2026 ಫೆಬ್ರವರಿ 7 ರಿಂದ ಶುರುವಾಗಲಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಈ ವಿಶ್ವಕಪ್​ನಲ್ಲಿ ಇಬ್ಬರು ಹಿರಿಯ ಆಟಗಾರರು ಕಾಣಿಸಿಕೊಳ್ಳುವುದಿಲ್ಲ. ಅಂದರೆ ಕಳೆದ 9 ಆವೃತ್ತಿಗಳಲ್ಲಿ ಕಣಕ್ಕಿಳಿದಿದ್ದ ಇಬ್ಬರು ಆಟಗಾರರು ಈ ಬಾರಿಯ ಟಿ20 ವಿಶ್ವಕಪ್​ ತಂಡಗಳಲ್ಲಿಲ್ಲ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Feb 05, 2026 | 2:17 PM

Share
T20 World Cup 2026: ಟಿ20 ವಿಶ್ವಕಪ್ ಶುರುವಾಗಿ 18 ವರ್ಷಗಳು ಕಳೆದಿವೆ. ಈ ಹದಿನೆಂಟು ವರ್ಷಗಳಲ್ಲಿ 9 ಟಿ20 ವಿಶ್ವಕಪ್ ಟೂರ್ನಿಗಳು ನಡೆದಿವೆ. ಈ ಒಂಭತ್ತು ಟೂರ್ನಿಗಳಲ್ಲೂ ಇಬ್ಬರು ಆಟಗಾರರು ಕಾಣಿಸಿಕೊಂಡಿದ್ದಾರೆ. ಅಂದರೆ ಈವರೆಗಿನ ಎಲ್ಲಾ ವಿಶ್ವಕಪ್​ಗಳಲ್ಲೂ ಕಣಕ್ಕಿಳಿದಿರುವುದು ಕೇವಲ ಇಬ್ಬರು ಮಾತ್ರ. ಆದರೆ ಆ ಇಬ್ಬರಿಲ್ಲದೆ ಇದೇ ಮೊದಲ ಬಾರಿಗೆ ಟಿ20 ವಿಶ್ವಕಪ್ ಆಯೋಜನೆಗೊಳ್ಳುತ್ತಿರುವುದು ವಿಶೇಷ.

T20 World Cup 2026: ಟಿ20 ವಿಶ್ವಕಪ್ ಶುರುವಾಗಿ 18 ವರ್ಷಗಳು ಕಳೆದಿವೆ. ಈ ಹದಿನೆಂಟು ವರ್ಷಗಳಲ್ಲಿ 9 ಟಿ20 ವಿಶ್ವಕಪ್ ಟೂರ್ನಿಗಳು ನಡೆದಿವೆ. ಈ ಒಂಭತ್ತು ಟೂರ್ನಿಗಳಲ್ಲೂ ಇಬ್ಬರು ಆಟಗಾರರು ಕಾಣಿಸಿಕೊಂಡಿದ್ದಾರೆ. ಅಂದರೆ ಈವರೆಗಿನ ಎಲ್ಲಾ ವಿಶ್ವಕಪ್​ಗಳಲ್ಲೂ ಕಣಕ್ಕಿಳಿದಿರುವುದು ಕೇವಲ ಇಬ್ಬರು ಮಾತ್ರ. ಆದರೆ ಆ ಇಬ್ಬರಿಲ್ಲದೆ ಇದೇ ಮೊದಲ ಬಾರಿಗೆ ಟಿ20 ವಿಶ್ವಕಪ್ ಆಯೋಜನೆಗೊಳ್ಳುತ್ತಿರುವುದು ವಿಶೇಷ.

1 / 5
ಹೌದು, ಟಿ20 ವಿಶ್ವಕಪ್​ನ ಎಲ್ಲಾ ಆವೃತ್ತಿಗಳಲ್ಲಿ ಕಾಣಿಸಿಕೊಂಡ ಆಟಗಾರರಲ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಒಬ್ಬರು. 2007ರ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ ಮೂಲಕ ಅಂತಾರಾಷ್ಟ್ರೀಯ ಕೆರಿಯರ್ ಆರಂಭಿಸಿದ್ದ ಹಿಟ್​ಮ್ಯಾನ್, ಆ ಬಳಿಕ 2009, 2010, 2012, 2014, 2016, 2021, 2022 ಮತ್ತು 2024 ರ ಟಿ20 ವಿಶ್ವಕಪ್​ ಟೂರ್ನಿಗಳಲ್ಲಿ ಕಣಕ್ಕಿಳಿದಿದ್ದರು.

ಹೌದು, ಟಿ20 ವಿಶ್ವಕಪ್​ನ ಎಲ್ಲಾ ಆವೃತ್ತಿಗಳಲ್ಲಿ ಕಾಣಿಸಿಕೊಂಡ ಆಟಗಾರರಲ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಒಬ್ಬರು. 2007ರ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ ಮೂಲಕ ಅಂತಾರಾಷ್ಟ್ರೀಯ ಕೆರಿಯರ್ ಆರಂಭಿಸಿದ್ದ ಹಿಟ್​ಮ್ಯಾನ್, ಆ ಬಳಿಕ 2009, 2010, 2012, 2014, 2016, 2021, 2022 ಮತ್ತು 2024 ರ ಟಿ20 ವಿಶ್ವಕಪ್​ ಟೂರ್ನಿಗಳಲ್ಲಿ ಕಣಕ್ಕಿಳಿದಿದ್ದರು.

2 / 5
ಆದರೆ ಕಳೆದ ಬಾರಿಯ ಟಿ20 ವಿಶ್ವಕಪ್​ನ ಫೈನಲ್​ನಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರಿದ ಬೆನ್ನಲ್ಲೇ ರೋಹಿತ್ ಶರ್ಮಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದರು. ಹೀಗಾಗಿ ಅವರು ಈ ಬಾರಿಯ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಕಾಣಿಸಿಕೊಳ್ಳುತ್ತಿಲ್ಲ. 

ಆದರೆ ಕಳೆದ ಬಾರಿಯ ಟಿ20 ವಿಶ್ವಕಪ್​ನ ಫೈನಲ್​ನಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರಿದ ಬೆನ್ನಲ್ಲೇ ರೋಹಿತ್ ಶರ್ಮಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದರು. ಹೀಗಾಗಿ ಅವರು ಈ ಬಾರಿಯ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಕಾಣಿಸಿಕೊಳ್ಳುತ್ತಿಲ್ಲ. 

3 / 5
ರೋಹಿತ್ ಶರ್ಮಾ ಅಲ್ಲದೆ,  2007, 2009, 2010, 2012, 2014, 2016, 2021, 2022 ಮತ್ತು 2024 ರ ಟಿ20 ವಿಶ್ವಕಪ್​ಗಳಲ್ಲಿ ಕಣಕ್ಕಿಳಿದ ಮತ್ತೋರ್ವ ಆಟಗಾರನೆಂದರೆ ಬಾಂಗ್ಲಾದೇಶದ ಶಾಹಿಬ್ ಅಲ್ ಹಸನ್. 2025 ರಲ್ಲಿ ಶಾಕಿಬ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಒಂದು ವೇಳೆ ಅವರು ನಿವೃತ್ತಿಯಾಗದೇ ಇದ್ದಿದ್ದರೂ ಈ ಬಾರಿ ಕಣಕ್ಕಿಳಿಯುತ್ತಿರಲಿಲ್ಲ. ಏಕೆಂದರೆ ಈ ಬಾರಿಯ ಟಿ20 ವಿಶ್ವಕಪ್ ಟೂರ್ನಿಯಿಂದ ಬಾಂಗ್ಲಾದೇಶ್ ತಂಡ ಹೊರಗುಳಿದಿದೆ. 

ರೋಹಿತ್ ಶರ್ಮಾ ಅಲ್ಲದೆ,  2007, 2009, 2010, 2012, 2014, 2016, 2021, 2022 ಮತ್ತು 2024 ರ ಟಿ20 ವಿಶ್ವಕಪ್​ಗಳಲ್ಲಿ ಕಣಕ್ಕಿಳಿದ ಮತ್ತೋರ್ವ ಆಟಗಾರನೆಂದರೆ ಬಾಂಗ್ಲಾದೇಶದ ಶಾಹಿಬ್ ಅಲ್ ಹಸನ್. 2025 ರಲ್ಲಿ ಶಾಕಿಬ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಒಂದು ವೇಳೆ ಅವರು ನಿವೃತ್ತಿಯಾಗದೇ ಇದ್ದಿದ್ದರೂ ಈ ಬಾರಿ ಕಣಕ್ಕಿಳಿಯುತ್ತಿರಲಿಲ್ಲ. ಏಕೆಂದರೆ ಈ ಬಾರಿಯ ಟಿ20 ವಿಶ್ವಕಪ್ ಟೂರ್ನಿಯಿಂದ ಬಾಂಗ್ಲಾದೇಶ್ ತಂಡ ಹೊರಗುಳಿದಿದೆ. 

4 / 5
ಅಂದರೆ ಇದೇ ಮೊದಲ ಬಾರಿಗೆ ರೋಹಿತ್ ಶರ್ಮಾ ಹಾಗೂ ಶಾಕಿಬ್ ಅಲ್ ಹಸನ್ ಇಲ್ಲದೆ ವಿಶ್ವಕಪ್ ನಡೆಯಲಿರುವುದು ವಿಶೇಷ. ಇನ್ನು ಟಿ20 ವಿಶ್ವಕಪ್​ ಇತಿಹಾಸದಲ್ಲೇ ಅತ್ಯಧಿಕ ಪಂದ್ಯಗಳನ್ನಾಡಿದ ದಾಖಲೆ ರೋಹಿತ್ ಶರ್ಮಾ ಹಾಗೂ ಶಾಕಿಬ್ ಅಲ್ ಹಸನ್ ಹೆಸರಿನಲ್ಲಿದೆ. 9 ಸೀಸನ್​ಗಳಲ್ಲಿ 47 ಮ್ಯಾಚ್​ಗಳನ್ನಾಡುವ ಮೂಲಕ ರೋಹಿತ್ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, 43 ಪಂದ್ಯಗಳ ಮೂಲಕ ಶಾಕಿಬ್ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ.

ಅಂದರೆ ಇದೇ ಮೊದಲ ಬಾರಿಗೆ ರೋಹಿತ್ ಶರ್ಮಾ ಹಾಗೂ ಶಾಕಿಬ್ ಅಲ್ ಹಸನ್ ಇಲ್ಲದೆ ವಿಶ್ವಕಪ್ ನಡೆಯಲಿರುವುದು ವಿಶೇಷ. ಇನ್ನು ಟಿ20 ವಿಶ್ವಕಪ್​ ಇತಿಹಾಸದಲ್ಲೇ ಅತ್ಯಧಿಕ ಪಂದ್ಯಗಳನ್ನಾಡಿದ ದಾಖಲೆ ರೋಹಿತ್ ಶರ್ಮಾ ಹಾಗೂ ಶಾಕಿಬ್ ಅಲ್ ಹಸನ್ ಹೆಸರಿನಲ್ಲಿದೆ. 9 ಸೀಸನ್​ಗಳಲ್ಲಿ 47 ಮ್ಯಾಚ್​ಗಳನ್ನಾಡುವ ಮೂಲಕ ರೋಹಿತ್ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, 43 ಪಂದ್ಯಗಳ ಮೂಲಕ ಶಾಕಿಬ್ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ.

5 / 5
Follow Us
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!