AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು

PSL 2025: ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ RCB ತಂಡದ ಮಾಜಿ ಆಟಗಾರರಾದ ಮೈಕೆಲ್ ಬ್ರೇಸ್​ವೆಲ್, ಫಿನ್ ಅಲೆನ್ ಸೇರಿದಂತೆ ಹಲವು ಆಟಗಾರರು ಅನ್​ಸೋಲ್ಡ್ ಆಗಿದ್ದರು. ಹೀಗೆ ಬಿಕರಿಯಾಗದೇ ಉಳಿದ ಕೆಲ ಸ್ಟಾರ್ ಆಟಗಾರರು ಇದೀಗ ಪಾಕಿಸ್ತಾನ್ ಸೂಪರ್ ಲೀಗ್​ನತ್ತ ಮುಖ ಮಾಡಿದ್ದಾರೆ.

ಝಾಹಿರ್ ಯೂಸುಫ್
|

Updated on: Apr 10, 2025 | 9:10 AM

Share
PSL 2025: ಪಾಕಿಸ್ತಾನ್ ಸೂಪರ್ ಲೀಗ್​ಗೆ ನಾಳೆಯಿಂದ (ಏಪ್ರಿಲ್ 11) ಚಾಲನೆ ದೊರೆಯಲಿದೆ. 6 ತಂಡಗಳ ನಡುವಣ ಈ ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಪ್ರತಿನಿಧಿಸಿದ 8 ಆಟಗಾರರು ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಅಂದರೆ ಈ ಬಾರಿಯ ಐಪಿಎಲ್​ನಲ್ಲಿ ಅವಕಾಶ ಸಿಗದ ಆರ್​ಸಿಬಿ ತಂಡದ ಮಾಜಿ ಆಟಗಾರರು ಇದೀಗ ಪಾಕಿಸ್ತಾನ್ ಸೂಪರ್ ಲೀಗ್​ನತ್ತ ಮುಖ ಮಾಡಿದ್ದಾರೆ. ಅವರೆಂದರೆ...

PSL 2025: ಪಾಕಿಸ್ತಾನ್ ಸೂಪರ್ ಲೀಗ್​ಗೆ ನಾಳೆಯಿಂದ (ಏಪ್ರಿಲ್ 11) ಚಾಲನೆ ದೊರೆಯಲಿದೆ. 6 ತಂಡಗಳ ನಡುವಣ ಈ ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಪ್ರತಿನಿಧಿಸಿದ 8 ಆಟಗಾರರು ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಅಂದರೆ ಈ ಬಾರಿಯ ಐಪಿಎಲ್​ನಲ್ಲಿ ಅವಕಾಶ ಸಿಗದ ಆರ್​ಸಿಬಿ ತಂಡದ ಮಾಜಿ ಆಟಗಾರರು ಇದೀಗ ಪಾಕಿಸ್ತಾನ್ ಸೂಪರ್ ಲೀಗ್​ನತ್ತ ಮುಖ ಮಾಡಿದ್ದಾರೆ. ಅವರೆಂದರೆ...

1 / 6
ಟಾಮ್ ಕರನ್ - ಡೇವಿಡ್ ವಿಲ್ಲಿ: ಇಂಗ್ಲೆಂಡ್ ತಂಡದ ಆಲ್​ರೌಂಡರ್​ಗಳಾದ ಟಾಮ್ ಕರನ್ ಹಾಗೂ ಡೇವಿಡ್ ವಿಲ್ಲಿ ಈ ಹಿಂದೆ ಆರ್​ಸಿಬಿ ತಂಡವನ್ನು ಪ್ರತಿನಿಧಿಸಿದ್ದರು. 2024 ರಲ್ಲಿ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಂಡಿದ್ದ ಕರನ್ ಒಂದೇ ಒಂದು ಪಂದ್ಯವಾಡದಿದ್ದರೂ, ಡೇವಿಡ್ ವಿಲ್ಲಿ RCB ಪರ 2023 ರಲ್ಲಿ 4 ಪಂದ್ಯಗಳನ್ನಾಡಿದ್ದರು.

ಟಾಮ್ ಕರನ್ - ಡೇವಿಡ್ ವಿಲ್ಲಿ: ಇಂಗ್ಲೆಂಡ್ ತಂಡದ ಆಲ್​ರೌಂಡರ್​ಗಳಾದ ಟಾಮ್ ಕರನ್ ಹಾಗೂ ಡೇವಿಡ್ ವಿಲ್ಲಿ ಈ ಹಿಂದೆ ಆರ್​ಸಿಬಿ ತಂಡವನ್ನು ಪ್ರತಿನಿಧಿಸಿದ್ದರು. 2024 ರಲ್ಲಿ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಂಡಿದ್ದ ಕರನ್ ಒಂದೇ ಒಂದು ಪಂದ್ಯವಾಡದಿದ್ದರೂ, ಡೇವಿಡ್ ವಿಲ್ಲಿ RCB ಪರ 2023 ರಲ್ಲಿ 4 ಪಂದ್ಯಗಳನ್ನಾಡಿದ್ದರು.

2 / 6
ಕ್ರಿಸ್ ಜೋರ್ಡಾನ್ - ಡೇವಿಡ್ ವೀಝ: ಇಂಗ್ಲೆಂಡ್ ತಂಡದ ಆಲ್​ರೌಂಡರ್ ಕ್ರಿಸ್ ಜೋರ್ಡನ್ 2016 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸಿದ್ದರು. ಹಾಗೆಯೇ 2015 ರಲ್ಲಿ ನಮೀಬಿಯಾ ಆಟಗಾರ ಡೇವಿಡ್ ವೀಝ ಆರ್​ಸಿಬಿ  ಪರ ಕಣಕ್ಕಿಳಿದಿದ್ದರು.

ಕ್ರಿಸ್ ಜೋರ್ಡಾನ್ - ಡೇವಿಡ್ ವೀಝ: ಇಂಗ್ಲೆಂಡ್ ತಂಡದ ಆಲ್​ರೌಂಡರ್ ಕ್ರಿಸ್ ಜೋರ್ಡನ್ 2016 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸಿದ್ದರು. ಹಾಗೆಯೇ 2015 ರಲ್ಲಿ ನಮೀಬಿಯಾ ಆಟಗಾರ ಡೇವಿಡ್ ವೀಝ ಆರ್​ಸಿಬಿ  ಪರ ಕಣಕ್ಕಿಳಿದಿದ್ದರು.

3 / 6
ಮೈಕೆಲ್ ಬ್ರೇಸ್​ವೆಲ್ - ಫಿನ್ ಅಲೆನ್: ನ್ಯೂಝಿಲೆಂಡ್ ಕ್ರಿಕೆಟಿಗರಾದ ಮೈಕೆಲ್ ಬ್ರೇಸ್​ವೆಲ್ ಆರ್​ಸಿಬಿ ಪರ 2023 ರಲ್ಲಿ 5 ಪಂದ್ಯಗಳನ್ನಾಡಿದ್ದಾರೆ. ಹಾಗೆಯೇ ಫಿನ್ ಅಲೆನ್ 2021 ರಿಂದ 3 ವರ್ಷಗಳ ಕಾಲ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕಾಣಿಸಿಕೊಂಡಿದ್ದರು.

ಮೈಕೆಲ್ ಬ್ರೇಸ್​ವೆಲ್ - ಫಿನ್ ಅಲೆನ್: ನ್ಯೂಝಿಲೆಂಡ್ ಕ್ರಿಕೆಟಿಗರಾದ ಮೈಕೆಲ್ ಬ್ರೇಸ್​ವೆಲ್ ಆರ್​ಸಿಬಿ ಪರ 2023 ರಲ್ಲಿ 5 ಪಂದ್ಯಗಳನ್ನಾಡಿದ್ದಾರೆ. ಹಾಗೆಯೇ ಫಿನ್ ಅಲೆನ್ 2021 ರಿಂದ 3 ವರ್ಷಗಳ ಕಾಲ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕಾಣಿಸಿಕೊಂಡಿದ್ದರು.

4 / 6
ಅಲ್ಝಾರಿ ಜೋಸೆಫ್ - ಕೈಲ್ ಜೇಮಿಸನ್: ವೆಸ್ಟ್ ಇಂಡೀಸ್ ವೇಗಿ ಅಲ್ಝಾರಿ ಜೋಸೆಫ್ ಕಳೆದ ಸೀಸನ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕಾಣಿಸಿಕೊಂಡಿದ್ದರು. ಹಾಗೆಯೇ ನ್ಯೂಝಿಲೆಂಡ್ ತಂಡದ ವೇಗದ ಬೌಲರ್ ಕೈಲ್ ಜೇಮಿಸನ್ 2021 ರಲ್ಲಿ ಆರ್​ಸಿಬಿ ತಂಡವನ್ನು ಪ್ರತಿನಿಧಿಸಿದ್ದರು.

ಅಲ್ಝಾರಿ ಜೋಸೆಫ್ - ಕೈಲ್ ಜೇಮಿಸನ್: ವೆಸ್ಟ್ ಇಂಡೀಸ್ ವೇಗಿ ಅಲ್ಝಾರಿ ಜೋಸೆಫ್ ಕಳೆದ ಸೀಸನ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕಾಣಿಸಿಕೊಂಡಿದ್ದರು. ಹಾಗೆಯೇ ನ್ಯೂಝಿಲೆಂಡ್ ತಂಡದ ವೇಗದ ಬೌಲರ್ ಕೈಲ್ ಜೇಮಿಸನ್ 2021 ರಲ್ಲಿ ಆರ್​ಸಿಬಿ ತಂಡವನ್ನು ಪ್ರತಿನಿಧಿಸಿದ್ದರು.

5 / 6
ಈ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭಾಗವಾಗಿದ್ದ ಈ ಆಟಗಾರರಿಗೆ ಈ ಬಾರಿ IPL ನಲ್ಲಿ ಅವಕಾಶ ದೊರೆತಿಲ್ಲ. ಹೀಗಾಗಿ ಈ 8 ಆಟಗಾರರು ಪಾಕಿಸ್ತಾನ್ ಸೂಪರ್ ಲೀಗ್​ನತ್ತ ಮುಖ ಮಾಡಿದ್ದಾರೆ. ಅದರಂತೆ ಪಿಎಸ್​ಎಲ್​ 2025 ರಲ್ಲಿ ಮಾಜಿ ಆರ್​ಸಿಬಿ ಆಟಗಾರರು ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

ಈ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭಾಗವಾಗಿದ್ದ ಈ ಆಟಗಾರರಿಗೆ ಈ ಬಾರಿ IPL ನಲ್ಲಿ ಅವಕಾಶ ದೊರೆತಿಲ್ಲ. ಹೀಗಾಗಿ ಈ 8 ಆಟಗಾರರು ಪಾಕಿಸ್ತಾನ್ ಸೂಪರ್ ಲೀಗ್​ನತ್ತ ಮುಖ ಮಾಡಿದ್ದಾರೆ. ಅದರಂತೆ ಪಿಎಸ್​ಎಲ್​ 2025 ರಲ್ಲಿ ಮಾಜಿ ಆರ್​ಸಿಬಿ ಆಟಗಾರರು ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

6 / 6
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ