AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು

PSL 2025: ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ RCB ತಂಡದ ಮಾಜಿ ಆಟಗಾರರಾದ ಮೈಕೆಲ್ ಬ್ರೇಸ್​ವೆಲ್, ಫಿನ್ ಅಲೆನ್ ಸೇರಿದಂತೆ ಹಲವು ಆಟಗಾರರು ಅನ್​ಸೋಲ್ಡ್ ಆಗಿದ್ದರು. ಹೀಗೆ ಬಿಕರಿಯಾಗದೇ ಉಳಿದ ಕೆಲ ಸ್ಟಾರ್ ಆಟಗಾರರು ಇದೀಗ ಪಾಕಿಸ್ತಾನ್ ಸೂಪರ್ ಲೀಗ್​ನತ್ತ ಮುಖ ಮಾಡಿದ್ದಾರೆ.

ಝಾಹಿರ್ ಯೂಸುಫ್
|

Updated on: Apr 10, 2025 | 9:10 AM

Share
PSL 2025: ಪಾಕಿಸ್ತಾನ್ ಸೂಪರ್ ಲೀಗ್​ಗೆ ನಾಳೆಯಿಂದ (ಏಪ್ರಿಲ್ 11) ಚಾಲನೆ ದೊರೆಯಲಿದೆ. 6 ತಂಡಗಳ ನಡುವಣ ಈ ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಪ್ರತಿನಿಧಿಸಿದ 8 ಆಟಗಾರರು ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಅಂದರೆ ಈ ಬಾರಿಯ ಐಪಿಎಲ್​ನಲ್ಲಿ ಅವಕಾಶ ಸಿಗದ ಆರ್​ಸಿಬಿ ತಂಡದ ಮಾಜಿ ಆಟಗಾರರು ಇದೀಗ ಪಾಕಿಸ್ತಾನ್ ಸೂಪರ್ ಲೀಗ್​ನತ್ತ ಮುಖ ಮಾಡಿದ್ದಾರೆ. ಅವರೆಂದರೆ...

PSL 2025: ಪಾಕಿಸ್ತಾನ್ ಸೂಪರ್ ಲೀಗ್​ಗೆ ನಾಳೆಯಿಂದ (ಏಪ್ರಿಲ್ 11) ಚಾಲನೆ ದೊರೆಯಲಿದೆ. 6 ತಂಡಗಳ ನಡುವಣ ಈ ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಪ್ರತಿನಿಧಿಸಿದ 8 ಆಟಗಾರರು ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಅಂದರೆ ಈ ಬಾರಿಯ ಐಪಿಎಲ್​ನಲ್ಲಿ ಅವಕಾಶ ಸಿಗದ ಆರ್​ಸಿಬಿ ತಂಡದ ಮಾಜಿ ಆಟಗಾರರು ಇದೀಗ ಪಾಕಿಸ್ತಾನ್ ಸೂಪರ್ ಲೀಗ್​ನತ್ತ ಮುಖ ಮಾಡಿದ್ದಾರೆ. ಅವರೆಂದರೆ...

1 / 6
ಟಾಮ್ ಕರನ್ - ಡೇವಿಡ್ ವಿಲ್ಲಿ: ಇಂಗ್ಲೆಂಡ್ ತಂಡದ ಆಲ್​ರೌಂಡರ್​ಗಳಾದ ಟಾಮ್ ಕರನ್ ಹಾಗೂ ಡೇವಿಡ್ ವಿಲ್ಲಿ ಈ ಹಿಂದೆ ಆರ್​ಸಿಬಿ ತಂಡವನ್ನು ಪ್ರತಿನಿಧಿಸಿದ್ದರು. 2024 ರಲ್ಲಿ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಂಡಿದ್ದ ಕರನ್ ಒಂದೇ ಒಂದು ಪಂದ್ಯವಾಡದಿದ್ದರೂ, ಡೇವಿಡ್ ವಿಲ್ಲಿ RCB ಪರ 2023 ರಲ್ಲಿ 4 ಪಂದ್ಯಗಳನ್ನಾಡಿದ್ದರು.

ಟಾಮ್ ಕರನ್ - ಡೇವಿಡ್ ವಿಲ್ಲಿ: ಇಂಗ್ಲೆಂಡ್ ತಂಡದ ಆಲ್​ರೌಂಡರ್​ಗಳಾದ ಟಾಮ್ ಕರನ್ ಹಾಗೂ ಡೇವಿಡ್ ವಿಲ್ಲಿ ಈ ಹಿಂದೆ ಆರ್​ಸಿಬಿ ತಂಡವನ್ನು ಪ್ರತಿನಿಧಿಸಿದ್ದರು. 2024 ರಲ್ಲಿ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಂಡಿದ್ದ ಕರನ್ ಒಂದೇ ಒಂದು ಪಂದ್ಯವಾಡದಿದ್ದರೂ, ಡೇವಿಡ್ ವಿಲ್ಲಿ RCB ಪರ 2023 ರಲ್ಲಿ 4 ಪಂದ್ಯಗಳನ್ನಾಡಿದ್ದರು.

2 / 6
ಕ್ರಿಸ್ ಜೋರ್ಡಾನ್ - ಡೇವಿಡ್ ವೀಝ: ಇಂಗ್ಲೆಂಡ್ ತಂಡದ ಆಲ್​ರೌಂಡರ್ ಕ್ರಿಸ್ ಜೋರ್ಡನ್ 2016 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸಿದ್ದರು. ಹಾಗೆಯೇ 2015 ರಲ್ಲಿ ನಮೀಬಿಯಾ ಆಟಗಾರ ಡೇವಿಡ್ ವೀಝ ಆರ್​ಸಿಬಿ  ಪರ ಕಣಕ್ಕಿಳಿದಿದ್ದರು.

ಕ್ರಿಸ್ ಜೋರ್ಡಾನ್ - ಡೇವಿಡ್ ವೀಝ: ಇಂಗ್ಲೆಂಡ್ ತಂಡದ ಆಲ್​ರೌಂಡರ್ ಕ್ರಿಸ್ ಜೋರ್ಡನ್ 2016 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸಿದ್ದರು. ಹಾಗೆಯೇ 2015 ರಲ್ಲಿ ನಮೀಬಿಯಾ ಆಟಗಾರ ಡೇವಿಡ್ ವೀಝ ಆರ್​ಸಿಬಿ  ಪರ ಕಣಕ್ಕಿಳಿದಿದ್ದರು.

3 / 6
ಮೈಕೆಲ್ ಬ್ರೇಸ್​ವೆಲ್ - ಫಿನ್ ಅಲೆನ್: ನ್ಯೂಝಿಲೆಂಡ್ ಕ್ರಿಕೆಟಿಗರಾದ ಮೈಕೆಲ್ ಬ್ರೇಸ್​ವೆಲ್ ಆರ್​ಸಿಬಿ ಪರ 2023 ರಲ್ಲಿ 5 ಪಂದ್ಯಗಳನ್ನಾಡಿದ್ದಾರೆ. ಹಾಗೆಯೇ ಫಿನ್ ಅಲೆನ್ 2021 ರಿಂದ 3 ವರ್ಷಗಳ ಕಾಲ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕಾಣಿಸಿಕೊಂಡಿದ್ದರು.

ಮೈಕೆಲ್ ಬ್ರೇಸ್​ವೆಲ್ - ಫಿನ್ ಅಲೆನ್: ನ್ಯೂಝಿಲೆಂಡ್ ಕ್ರಿಕೆಟಿಗರಾದ ಮೈಕೆಲ್ ಬ್ರೇಸ್​ವೆಲ್ ಆರ್​ಸಿಬಿ ಪರ 2023 ರಲ್ಲಿ 5 ಪಂದ್ಯಗಳನ್ನಾಡಿದ್ದಾರೆ. ಹಾಗೆಯೇ ಫಿನ್ ಅಲೆನ್ 2021 ರಿಂದ 3 ವರ್ಷಗಳ ಕಾಲ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕಾಣಿಸಿಕೊಂಡಿದ್ದರು.

4 / 6
ಅಲ್ಝಾರಿ ಜೋಸೆಫ್ - ಕೈಲ್ ಜೇಮಿಸನ್: ವೆಸ್ಟ್ ಇಂಡೀಸ್ ವೇಗಿ ಅಲ್ಝಾರಿ ಜೋಸೆಫ್ ಕಳೆದ ಸೀಸನ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕಾಣಿಸಿಕೊಂಡಿದ್ದರು. ಹಾಗೆಯೇ ನ್ಯೂಝಿಲೆಂಡ್ ತಂಡದ ವೇಗದ ಬೌಲರ್ ಕೈಲ್ ಜೇಮಿಸನ್ 2021 ರಲ್ಲಿ ಆರ್​ಸಿಬಿ ತಂಡವನ್ನು ಪ್ರತಿನಿಧಿಸಿದ್ದರು.

ಅಲ್ಝಾರಿ ಜೋಸೆಫ್ - ಕೈಲ್ ಜೇಮಿಸನ್: ವೆಸ್ಟ್ ಇಂಡೀಸ್ ವೇಗಿ ಅಲ್ಝಾರಿ ಜೋಸೆಫ್ ಕಳೆದ ಸೀಸನ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕಾಣಿಸಿಕೊಂಡಿದ್ದರು. ಹಾಗೆಯೇ ನ್ಯೂಝಿಲೆಂಡ್ ತಂಡದ ವೇಗದ ಬೌಲರ್ ಕೈಲ್ ಜೇಮಿಸನ್ 2021 ರಲ್ಲಿ ಆರ್​ಸಿಬಿ ತಂಡವನ್ನು ಪ್ರತಿನಿಧಿಸಿದ್ದರು.

5 / 6
ಈ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭಾಗವಾಗಿದ್ದ ಈ ಆಟಗಾರರಿಗೆ ಈ ಬಾರಿ IPL ನಲ್ಲಿ ಅವಕಾಶ ದೊರೆತಿಲ್ಲ. ಹೀಗಾಗಿ ಈ 8 ಆಟಗಾರರು ಪಾಕಿಸ್ತಾನ್ ಸೂಪರ್ ಲೀಗ್​ನತ್ತ ಮುಖ ಮಾಡಿದ್ದಾರೆ. ಅದರಂತೆ ಪಿಎಸ್​ಎಲ್​ 2025 ರಲ್ಲಿ ಮಾಜಿ ಆರ್​ಸಿಬಿ ಆಟಗಾರರು ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

ಈ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭಾಗವಾಗಿದ್ದ ಈ ಆಟಗಾರರಿಗೆ ಈ ಬಾರಿ IPL ನಲ್ಲಿ ಅವಕಾಶ ದೊರೆತಿಲ್ಲ. ಹೀಗಾಗಿ ಈ 8 ಆಟಗಾರರು ಪಾಕಿಸ್ತಾನ್ ಸೂಪರ್ ಲೀಗ್​ನತ್ತ ಮುಖ ಮಾಡಿದ್ದಾರೆ. ಅದರಂತೆ ಪಿಎಸ್​ಎಲ್​ 2025 ರಲ್ಲಿ ಮಾಜಿ ಆರ್​ಸಿಬಿ ಆಟಗಾರರು ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

6 / 6
Follow Us
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್