Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಗಾಬಾ ಟೆಸ್ಟ್ ಮಳೆಗಾಹುತಿಯಾದರೆ ಟೀಂ ಇಂಡಿಯಾಕ್ಕಾಗುವ ನಷ್ಟವೇನು?

India's chances WTC final: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಗಾಬಾ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸಿದೆ. ಡಬ್ಲ್ಯುಟಿಸಿ ಫೈನಲ್‌ಗೆ ಭಾರತದ ಅರ್ಹತೆ ಈ ಪಂದ್ಯದ ಫಲಿತಾಂಶವನ್ನು ಅವಲಂಬಿಸಿದೆ. ಪಂದ್ಯ ಡ್ರಾ ಆದರೆ ಭಾರತದ ಸ್ಥಾನ ಬದಲಾಗುವುದಿಲ್ಲ, ಆದರೆ ಗೆದ್ದರೆ ಎರಡನೇ ಸ್ಥಾನಕ್ಕೆ ಏರಬಹುದು.ಒಂದು ವೇಳೆ ಈ ಪಂದ್ಯವನ್ನು ಟೀಂ ಇಂಡಿಯಾ ಸೋತರೆ ಅದರ ಫೈನಲ್ ಹಾದಿ ಮತ್ತಷ್ಟು ಕಠಿಣವಾಗಲಿದೆ.

ಪೃಥ್ವಿಶಂಕರ
|

Updated on: Dec 14, 2024 | 4:08 PM

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಸರಣಿಯ ಮೂರನೇ ಟೆಸ್ಟ್ ಪಂದ್ಯ ಬ್ರಿಸ್ಬೇನ್‌ನ ಗಬ್ಬಾ ಮೈದಾನದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಬೌಲಿಂಗ್ ಮಾಡಲು ನಿರ್ಧರಿಸಿ ಕಾಂಗರೂ ತಂಡವನ್ನು ಮೊದಲು ಬ್ಯಾಟಿಂಗ್​ಗೆ ಆಹ್ವಾನಿಸಿದರು. ಆದರೆ, ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ ಕಾರಣ ಮೊದಲ ದಿನದಾಟವನ್ನು ರದ್ದುಗೊಳಿಸಬೇಕಾಯಿತು.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಸರಣಿಯ ಮೂರನೇ ಟೆಸ್ಟ್ ಪಂದ್ಯ ಬ್ರಿಸ್ಬೇನ್‌ನ ಗಬ್ಬಾ ಮೈದಾನದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಬೌಲಿಂಗ್ ಮಾಡಲು ನಿರ್ಧರಿಸಿ ಕಾಂಗರೂ ತಂಡವನ್ನು ಮೊದಲು ಬ್ಯಾಟಿಂಗ್​ಗೆ ಆಹ್ವಾನಿಸಿದರು. ಆದರೆ, ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ ಕಾರಣ ಮೊದಲ ದಿನದಾಟವನ್ನು ರದ್ದುಗೊಳಿಸಬೇಕಾಯಿತು.

1 / 6
ಇದೀಗ ಉಳಿದ ನಾಲ್ಕು ದಿನಗಳಲ್ಲಿಯೂ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವುದು ಟೀಂ ಇಂಡಿಯಾಕ್ಕೆ ಸಂಕಷ್ಟ ತಂದೊಡಿದೆ. ಏಕೆಂದರೆ ರೋಹಿತ ಪಡೆ ಡಬ್ಲ್ಯುಟಿಸಿ ಫೈನಲ್​ಗೇರಬೇಕೆಂದರೆ ಆಸ್ಟ್ರೇಲಿಯಾ ವಿರುದ್ಧ ಉಳಿದ ಮೂರು ಪಂದ್ಯಗಳನ್ನು ಗೆಲ್ಲಲೇಬೇಕಾಗಿದೆ. ಹೀಗಾಗಿ ಗಾಬಾ ಟೆಸ್ಟ್​ ನಡೆಯುವುದು ಭಾರತಕ್ಕೆ ಅನಿವಾರ್ಯವಾಗಿದೆ.

ಇದೀಗ ಉಳಿದ ನಾಲ್ಕು ದಿನಗಳಲ್ಲಿಯೂ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವುದು ಟೀಂ ಇಂಡಿಯಾಕ್ಕೆ ಸಂಕಷ್ಟ ತಂದೊಡಿದೆ. ಏಕೆಂದರೆ ರೋಹಿತ ಪಡೆ ಡಬ್ಲ್ಯುಟಿಸಿ ಫೈನಲ್​ಗೇರಬೇಕೆಂದರೆ ಆಸ್ಟ್ರೇಲಿಯಾ ವಿರುದ್ಧ ಉಳಿದ ಮೂರು ಪಂದ್ಯಗಳನ್ನು ಗೆಲ್ಲಲೇಬೇಕಾಗಿದೆ. ಹೀಗಾಗಿ ಗಾಬಾ ಟೆಸ್ಟ್​ ನಡೆಯುವುದು ಭಾರತಕ್ಕೆ ಅನಿವಾರ್ಯವಾಗಿದೆ.

2 / 6
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಗಾಬಾ ಟೆಸ್ಟ್ ಮಳೆಯಿಂದ ಡ್ರಾಗೊಂಡರೆ, ಪಾಯಿಂಟ್ ಪಟ್ಟಿಯಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ. ಆದರೆ ಇದು ಡಬ್ಲ್ಯುಟಿಸಿ ಫೈನಲ್ ತಲುಪುವ ಭಾರತದ ಸಾಧ್ಯತೆಯ ಮೇಲೆ ಪರಿಣಾಮ ಬೀರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ತಂಡವು ಕಾಂಗರೂ ತಂಡದ ವಿರುದ್ಧ ಮುಂದಿನ ಎರಡು ಟೆಸ್ಟ್‌ಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಇದರ ಜೊತೆಗೆ ಇತರ ತಂಡಗಳ ಫಲಿತಾಂಶಗಳನ್ನು ಸಹ ಅವಲಂಬಿಸಬೇಕಾಗಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಗಾಬಾ ಟೆಸ್ಟ್ ಮಳೆಯಿಂದ ಡ್ರಾಗೊಂಡರೆ, ಪಾಯಿಂಟ್ ಪಟ್ಟಿಯಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ. ಆದರೆ ಇದು ಡಬ್ಲ್ಯುಟಿಸಿ ಫೈನಲ್ ತಲುಪುವ ಭಾರತದ ಸಾಧ್ಯತೆಯ ಮೇಲೆ ಪರಿಣಾಮ ಬೀರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ತಂಡವು ಕಾಂಗರೂ ತಂಡದ ವಿರುದ್ಧ ಮುಂದಿನ ಎರಡು ಟೆಸ್ಟ್‌ಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಇದರ ಜೊತೆಗೆ ಇತರ ತಂಡಗಳ ಫಲಿತಾಂಶಗಳನ್ನು ಸಹ ಅವಲಂಬಿಸಬೇಕಾಗಿದೆ.

3 / 6
ಒಂದು ವೇಳೆ ಗಾಬಾ ಟೆಸ್ಟ್ ಡ್ರಾ ಆದರೆ, ಆಸ್ಟ್ರೇಲಿಯಾದ ಗೆಲುವಿನ ಶೇಕಡಾವಾರು 58.89 ಆದರೆ, ಭಾರತದ ಗೆಲುವಿನ ಶೇಕಡಾವಾರು 55.88 ಆಗುತ್ತದೆ. ಹೀಗಾಗಿ ಭಾರತ 3ನೇ ಸ್ಥಾನದಲ್ಲೇ ಉಳಿಯಲಿದ್ದು, ಆಸ್ಟ್ರೇಲಿಯ 2ನೇ ಸ್ಥಾನದಲ್ಲೇ ಮುಂದುವರೆಯಲಿದೆ. ದಕ್ಷಿಣ ಆಫ್ರಿಕಾ ಎಂದಿನಂತೆ ಮೊದಲ ಸ್ಥಾನದಲ್ಲೇ ಮುಂದುವರೆಯಲಿದೆ.

ಒಂದು ವೇಳೆ ಗಾಬಾ ಟೆಸ್ಟ್ ಡ್ರಾ ಆದರೆ, ಆಸ್ಟ್ರೇಲಿಯಾದ ಗೆಲುವಿನ ಶೇಕಡಾವಾರು 58.89 ಆದರೆ, ಭಾರತದ ಗೆಲುವಿನ ಶೇಕಡಾವಾರು 55.88 ಆಗುತ್ತದೆ. ಹೀಗಾಗಿ ಭಾರತ 3ನೇ ಸ್ಥಾನದಲ್ಲೇ ಉಳಿಯಲಿದ್ದು, ಆಸ್ಟ್ರೇಲಿಯ 2ನೇ ಸ್ಥಾನದಲ್ಲೇ ಮುಂದುವರೆಯಲಿದೆ. ದಕ್ಷಿಣ ಆಫ್ರಿಕಾ ಎಂದಿನಂತೆ ಮೊದಲ ಸ್ಥಾನದಲ್ಲೇ ಮುಂದುವರೆಯಲಿದೆ.

4 / 6
ಒಂದು ವೇಳೆ ಗಾಬಾ ಟೆಸ್ಟ್​ನಲ್ಲಿ ಫಲಿತಾಂಶ ಹೊರಬಿದ್ದು, ಟೀಂ ಇಂಡಿಯಾ ಪಂದ್ಯವನ್ನು ಗೆದ್ದರೆ, ಆಗ ಡಬ್ಲ್ಯುಟಿಸಿ ಪಾಯಿಂಟ್‌ಗಳ ಪಟ್ಟಿಯಲ್ಲಿ ಭಾರತ ಎರಡನೇ ಸ್ಥಾನಕ್ಕೆ ಏರಲಿದೆ. ಇದರ ಜೊತೆಗೆ ಸೋತ ಆಸ್ಟ್ರೇಲಿಯಾ 56.67 ರ ಗೆಲುವಿನ ಶೇಕಡಾವಾರುವಿನೊಂದಿಗೆ ಮೂರನೇ ಸ್ಥಾನಕ್ಕೆ ಜಾರಲಿದೆ.

ಒಂದು ವೇಳೆ ಗಾಬಾ ಟೆಸ್ಟ್​ನಲ್ಲಿ ಫಲಿತಾಂಶ ಹೊರಬಿದ್ದು, ಟೀಂ ಇಂಡಿಯಾ ಪಂದ್ಯವನ್ನು ಗೆದ್ದರೆ, ಆಗ ಡಬ್ಲ್ಯುಟಿಸಿ ಪಾಯಿಂಟ್‌ಗಳ ಪಟ್ಟಿಯಲ್ಲಿ ಭಾರತ ಎರಡನೇ ಸ್ಥಾನಕ್ಕೆ ಏರಲಿದೆ. ಇದರ ಜೊತೆಗೆ ಸೋತ ಆಸ್ಟ್ರೇಲಿಯಾ 56.67 ರ ಗೆಲುವಿನ ಶೇಕಡಾವಾರುವಿನೊಂದಿಗೆ ಮೂರನೇ ಸ್ಥಾನಕ್ಕೆ ಜಾರಲಿದೆ.

5 / 6
ಇದಕ್ಕೆ ತದ್ವಿರುದ್ದವಾಗಿ ಗಾಬಾದಲ್ಲಿ ಆಸ್ಟ್ರೇಲಿಯಾ ಗೆದ್ದರೆ, ಡಬ್ಲ್ಯುಟಿಸಿ ಪಾಯಿಂಟ್‌ ಪಟ್ಟಿಯಲ್ಲಿ ಅದು ಎರಡನೇ ಸ್ಥಾನದಲ್ಲೇ ಮುಂದುವರೆಯಲಿದೆ. ಆದರೆ ಅದರ ಗೆಲುವಿನ ಶೇಕಡಾವಾರು ದಕ್ಷಿಣ ಆಫ್ರಿಕಾದ ಅಗ್ರ ಸ್ಥಾನಕ್ಕೆ ಸಮಾನವಾಗಿರುತ್ತದೆ. ಆದಾಗ್ಯೂ ಭಾರತದ ವಿರುದ್ಧ ಕಾಂಗರೂ ಪಡೆ ಸೋತರೆ ಅದು ಡಬ್ಲ್ಯುಟಿಸಿ ಫೈನಲ್‌ಗೆ ಅರ್ಹತೆ ಪಡೆಯಲು ಇತರ ತಂಡಗಳ ಫಲಿತಾಂಶಗಳನ್ನು ಅವಲಂಬಿಸಬೇಕಾಗುತ್ತದೆ.

ಇದಕ್ಕೆ ತದ್ವಿರುದ್ದವಾಗಿ ಗಾಬಾದಲ್ಲಿ ಆಸ್ಟ್ರೇಲಿಯಾ ಗೆದ್ದರೆ, ಡಬ್ಲ್ಯುಟಿಸಿ ಪಾಯಿಂಟ್‌ ಪಟ್ಟಿಯಲ್ಲಿ ಅದು ಎರಡನೇ ಸ್ಥಾನದಲ್ಲೇ ಮುಂದುವರೆಯಲಿದೆ. ಆದರೆ ಅದರ ಗೆಲುವಿನ ಶೇಕಡಾವಾರು ದಕ್ಷಿಣ ಆಫ್ರಿಕಾದ ಅಗ್ರ ಸ್ಥಾನಕ್ಕೆ ಸಮಾನವಾಗಿರುತ್ತದೆ. ಆದಾಗ್ಯೂ ಭಾರತದ ವಿರುದ್ಧ ಕಾಂಗರೂ ಪಡೆ ಸೋತರೆ ಅದು ಡಬ್ಲ್ಯುಟಿಸಿ ಫೈನಲ್‌ಗೆ ಅರ್ಹತೆ ಪಡೆಯಲು ಇತರ ತಂಡಗಳ ಫಲಿತಾಂಶಗಳನ್ನು ಅವಲಂಬಿಸಬೇಕಾಗುತ್ತದೆ.

6 / 6
Follow us
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್