AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಗಾಬಾ ಟೆಸ್ಟ್ ಮಳೆಗಾಹುತಿಯಾದರೆ ಟೀಂ ಇಂಡಿಯಾಕ್ಕಾಗುವ ನಷ್ಟವೇನು?

India's chances WTC final: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಗಾಬಾ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸಿದೆ. ಡಬ್ಲ್ಯುಟಿಸಿ ಫೈನಲ್‌ಗೆ ಭಾರತದ ಅರ್ಹತೆ ಈ ಪಂದ್ಯದ ಫಲಿತಾಂಶವನ್ನು ಅವಲಂಬಿಸಿದೆ. ಪಂದ್ಯ ಡ್ರಾ ಆದರೆ ಭಾರತದ ಸ್ಥಾನ ಬದಲಾಗುವುದಿಲ್ಲ, ಆದರೆ ಗೆದ್ದರೆ ಎರಡನೇ ಸ್ಥಾನಕ್ಕೆ ಏರಬಹುದು.ಒಂದು ವೇಳೆ ಈ ಪಂದ್ಯವನ್ನು ಟೀಂ ಇಂಡಿಯಾ ಸೋತರೆ ಅದರ ಫೈನಲ್ ಹಾದಿ ಮತ್ತಷ್ಟು ಕಠಿಣವಾಗಲಿದೆ.

ಪೃಥ್ವಿಶಂಕರ
|

Updated on: Dec 14, 2024 | 4:08 PM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಸರಣಿಯ ಮೂರನೇ ಟೆಸ್ಟ್ ಪಂದ್ಯ ಬ್ರಿಸ್ಬೇನ್‌ನ ಗಬ್ಬಾ ಮೈದಾನದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಬೌಲಿಂಗ್ ಮಾಡಲು ನಿರ್ಧರಿಸಿ ಕಾಂಗರೂ ತಂಡವನ್ನು ಮೊದಲು ಬ್ಯಾಟಿಂಗ್​ಗೆ ಆಹ್ವಾನಿಸಿದರು. ಆದರೆ, ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ ಕಾರಣ ಮೊದಲ ದಿನದಾಟವನ್ನು ರದ್ದುಗೊಳಿಸಬೇಕಾಯಿತು.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಸರಣಿಯ ಮೂರನೇ ಟೆಸ್ಟ್ ಪಂದ್ಯ ಬ್ರಿಸ್ಬೇನ್‌ನ ಗಬ್ಬಾ ಮೈದಾನದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಬೌಲಿಂಗ್ ಮಾಡಲು ನಿರ್ಧರಿಸಿ ಕಾಂಗರೂ ತಂಡವನ್ನು ಮೊದಲು ಬ್ಯಾಟಿಂಗ್​ಗೆ ಆಹ್ವಾನಿಸಿದರು. ಆದರೆ, ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ ಕಾರಣ ಮೊದಲ ದಿನದಾಟವನ್ನು ರದ್ದುಗೊಳಿಸಬೇಕಾಯಿತು.

1 / 6
ಇದೀಗ ಉಳಿದ ನಾಲ್ಕು ದಿನಗಳಲ್ಲಿಯೂ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವುದು ಟೀಂ ಇಂಡಿಯಾಕ್ಕೆ ಸಂಕಷ್ಟ ತಂದೊಡಿದೆ. ಏಕೆಂದರೆ ರೋಹಿತ ಪಡೆ ಡಬ್ಲ್ಯುಟಿಸಿ ಫೈನಲ್​ಗೇರಬೇಕೆಂದರೆ ಆಸ್ಟ್ರೇಲಿಯಾ ವಿರುದ್ಧ ಉಳಿದ ಮೂರು ಪಂದ್ಯಗಳನ್ನು ಗೆಲ್ಲಲೇಬೇಕಾಗಿದೆ. ಹೀಗಾಗಿ ಗಾಬಾ ಟೆಸ್ಟ್​ ನಡೆಯುವುದು ಭಾರತಕ್ಕೆ ಅನಿವಾರ್ಯವಾಗಿದೆ.

ಇದೀಗ ಉಳಿದ ನಾಲ್ಕು ದಿನಗಳಲ್ಲಿಯೂ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವುದು ಟೀಂ ಇಂಡಿಯಾಕ್ಕೆ ಸಂಕಷ್ಟ ತಂದೊಡಿದೆ. ಏಕೆಂದರೆ ರೋಹಿತ ಪಡೆ ಡಬ್ಲ್ಯುಟಿಸಿ ಫೈನಲ್​ಗೇರಬೇಕೆಂದರೆ ಆಸ್ಟ್ರೇಲಿಯಾ ವಿರುದ್ಧ ಉಳಿದ ಮೂರು ಪಂದ್ಯಗಳನ್ನು ಗೆಲ್ಲಲೇಬೇಕಾಗಿದೆ. ಹೀಗಾಗಿ ಗಾಬಾ ಟೆಸ್ಟ್​ ನಡೆಯುವುದು ಭಾರತಕ್ಕೆ ಅನಿವಾರ್ಯವಾಗಿದೆ.

2 / 6
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಗಾಬಾ ಟೆಸ್ಟ್ ಮಳೆಯಿಂದ ಡ್ರಾಗೊಂಡರೆ, ಪಾಯಿಂಟ್ ಪಟ್ಟಿಯಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ. ಆದರೆ ಇದು ಡಬ್ಲ್ಯುಟಿಸಿ ಫೈನಲ್ ತಲುಪುವ ಭಾರತದ ಸಾಧ್ಯತೆಯ ಮೇಲೆ ಪರಿಣಾಮ ಬೀರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ತಂಡವು ಕಾಂಗರೂ ತಂಡದ ವಿರುದ್ಧ ಮುಂದಿನ ಎರಡು ಟೆಸ್ಟ್‌ಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಇದರ ಜೊತೆಗೆ ಇತರ ತಂಡಗಳ ಫಲಿತಾಂಶಗಳನ್ನು ಸಹ ಅವಲಂಬಿಸಬೇಕಾಗಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಗಾಬಾ ಟೆಸ್ಟ್ ಮಳೆಯಿಂದ ಡ್ರಾಗೊಂಡರೆ, ಪಾಯಿಂಟ್ ಪಟ್ಟಿಯಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ. ಆದರೆ ಇದು ಡಬ್ಲ್ಯುಟಿಸಿ ಫೈನಲ್ ತಲುಪುವ ಭಾರತದ ಸಾಧ್ಯತೆಯ ಮೇಲೆ ಪರಿಣಾಮ ಬೀರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ತಂಡವು ಕಾಂಗರೂ ತಂಡದ ವಿರುದ್ಧ ಮುಂದಿನ ಎರಡು ಟೆಸ್ಟ್‌ಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಇದರ ಜೊತೆಗೆ ಇತರ ತಂಡಗಳ ಫಲಿತಾಂಶಗಳನ್ನು ಸಹ ಅವಲಂಬಿಸಬೇಕಾಗಿದೆ.

3 / 6
ಒಂದು ವೇಳೆ ಗಾಬಾ ಟೆಸ್ಟ್ ಡ್ರಾ ಆದರೆ, ಆಸ್ಟ್ರೇಲಿಯಾದ ಗೆಲುವಿನ ಶೇಕಡಾವಾರು 58.89 ಆದರೆ, ಭಾರತದ ಗೆಲುವಿನ ಶೇಕಡಾವಾರು 55.88 ಆಗುತ್ತದೆ. ಹೀಗಾಗಿ ಭಾರತ 3ನೇ ಸ್ಥಾನದಲ್ಲೇ ಉಳಿಯಲಿದ್ದು, ಆಸ್ಟ್ರೇಲಿಯ 2ನೇ ಸ್ಥಾನದಲ್ಲೇ ಮುಂದುವರೆಯಲಿದೆ. ದಕ್ಷಿಣ ಆಫ್ರಿಕಾ ಎಂದಿನಂತೆ ಮೊದಲ ಸ್ಥಾನದಲ್ಲೇ ಮುಂದುವರೆಯಲಿದೆ.

ಒಂದು ವೇಳೆ ಗಾಬಾ ಟೆಸ್ಟ್ ಡ್ರಾ ಆದರೆ, ಆಸ್ಟ್ರೇಲಿಯಾದ ಗೆಲುವಿನ ಶೇಕಡಾವಾರು 58.89 ಆದರೆ, ಭಾರತದ ಗೆಲುವಿನ ಶೇಕಡಾವಾರು 55.88 ಆಗುತ್ತದೆ. ಹೀಗಾಗಿ ಭಾರತ 3ನೇ ಸ್ಥಾನದಲ್ಲೇ ಉಳಿಯಲಿದ್ದು, ಆಸ್ಟ್ರೇಲಿಯ 2ನೇ ಸ್ಥಾನದಲ್ಲೇ ಮುಂದುವರೆಯಲಿದೆ. ದಕ್ಷಿಣ ಆಫ್ರಿಕಾ ಎಂದಿನಂತೆ ಮೊದಲ ಸ್ಥಾನದಲ್ಲೇ ಮುಂದುವರೆಯಲಿದೆ.

4 / 6
ಒಂದು ವೇಳೆ ಗಾಬಾ ಟೆಸ್ಟ್​ನಲ್ಲಿ ಫಲಿತಾಂಶ ಹೊರಬಿದ್ದು, ಟೀಂ ಇಂಡಿಯಾ ಪಂದ್ಯವನ್ನು ಗೆದ್ದರೆ, ಆಗ ಡಬ್ಲ್ಯುಟಿಸಿ ಪಾಯಿಂಟ್‌ಗಳ ಪಟ್ಟಿಯಲ್ಲಿ ಭಾರತ ಎರಡನೇ ಸ್ಥಾನಕ್ಕೆ ಏರಲಿದೆ. ಇದರ ಜೊತೆಗೆ ಸೋತ ಆಸ್ಟ್ರೇಲಿಯಾ 56.67 ರ ಗೆಲುವಿನ ಶೇಕಡಾವಾರುವಿನೊಂದಿಗೆ ಮೂರನೇ ಸ್ಥಾನಕ್ಕೆ ಜಾರಲಿದೆ.

ಒಂದು ವೇಳೆ ಗಾಬಾ ಟೆಸ್ಟ್​ನಲ್ಲಿ ಫಲಿತಾಂಶ ಹೊರಬಿದ್ದು, ಟೀಂ ಇಂಡಿಯಾ ಪಂದ್ಯವನ್ನು ಗೆದ್ದರೆ, ಆಗ ಡಬ್ಲ್ಯುಟಿಸಿ ಪಾಯಿಂಟ್‌ಗಳ ಪಟ್ಟಿಯಲ್ಲಿ ಭಾರತ ಎರಡನೇ ಸ್ಥಾನಕ್ಕೆ ಏರಲಿದೆ. ಇದರ ಜೊತೆಗೆ ಸೋತ ಆಸ್ಟ್ರೇಲಿಯಾ 56.67 ರ ಗೆಲುವಿನ ಶೇಕಡಾವಾರುವಿನೊಂದಿಗೆ ಮೂರನೇ ಸ್ಥಾನಕ್ಕೆ ಜಾರಲಿದೆ.

5 / 6
ಇದಕ್ಕೆ ತದ್ವಿರುದ್ದವಾಗಿ ಗಾಬಾದಲ್ಲಿ ಆಸ್ಟ್ರೇಲಿಯಾ ಗೆದ್ದರೆ, ಡಬ್ಲ್ಯುಟಿಸಿ ಪಾಯಿಂಟ್‌ ಪಟ್ಟಿಯಲ್ಲಿ ಅದು ಎರಡನೇ ಸ್ಥಾನದಲ್ಲೇ ಮುಂದುವರೆಯಲಿದೆ. ಆದರೆ ಅದರ ಗೆಲುವಿನ ಶೇಕಡಾವಾರು ದಕ್ಷಿಣ ಆಫ್ರಿಕಾದ ಅಗ್ರ ಸ್ಥಾನಕ್ಕೆ ಸಮಾನವಾಗಿರುತ್ತದೆ. ಆದಾಗ್ಯೂ ಭಾರತದ ವಿರುದ್ಧ ಕಾಂಗರೂ ಪಡೆ ಸೋತರೆ ಅದು ಡಬ್ಲ್ಯುಟಿಸಿ ಫೈನಲ್‌ಗೆ ಅರ್ಹತೆ ಪಡೆಯಲು ಇತರ ತಂಡಗಳ ಫಲಿತಾಂಶಗಳನ್ನು ಅವಲಂಬಿಸಬೇಕಾಗುತ್ತದೆ.

ಇದಕ್ಕೆ ತದ್ವಿರುದ್ದವಾಗಿ ಗಾಬಾದಲ್ಲಿ ಆಸ್ಟ್ರೇಲಿಯಾ ಗೆದ್ದರೆ, ಡಬ್ಲ್ಯುಟಿಸಿ ಪಾಯಿಂಟ್‌ ಪಟ್ಟಿಯಲ್ಲಿ ಅದು ಎರಡನೇ ಸ್ಥಾನದಲ್ಲೇ ಮುಂದುವರೆಯಲಿದೆ. ಆದರೆ ಅದರ ಗೆಲುವಿನ ಶೇಕಡಾವಾರು ದಕ್ಷಿಣ ಆಫ್ರಿಕಾದ ಅಗ್ರ ಸ್ಥಾನಕ್ಕೆ ಸಮಾನವಾಗಿರುತ್ತದೆ. ಆದಾಗ್ಯೂ ಭಾರತದ ವಿರುದ್ಧ ಕಾಂಗರೂ ಪಡೆ ಸೋತರೆ ಅದು ಡಬ್ಲ್ಯುಟಿಸಿ ಫೈನಲ್‌ಗೆ ಅರ್ಹತೆ ಪಡೆಯಲು ಇತರ ತಂಡಗಳ ಫಲಿತಾಂಶಗಳನ್ನು ಅವಲಂಬಿಸಬೇಕಾಗುತ್ತದೆ.

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ