AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌತಮ್ ಗಂಭೀರ್ ಮಾರ್ಮಿಕ ಉತ್ತರ: ರೋಹಿತ್ ಶರ್ಮಾಗೆ ಕಿಕ್ ಔಟ್ ಭೀತಿ

Australia vs India: 2024 ರಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 26 ಟೆಸ್ಟ್ ಇನಿಂಗ್ಸ್ ಆಡಿದ್ದಾರೆ. ಈ ವೇಳೆ ಕಲೆಹಾಕಿರುವುದು ಕೇವಲ 619 ರನ್​ಗಳು ಮಾತ್ರ. ಅಂದರೆ 24.76ರ ಸರಾಸರಿಯಲ್ಲಿ ಮಾತ್ರ ಹಿಟ್​ಮ್ಯಾನ್ ರನ್​ಗಳಿಸಿದ್ದಾರೆ. ಅದರಲ್ಲೂ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಈವರೆಗೆ ಕಲೆಹಾಕಿರುವ ಒಟ್ಟು ರನ್​ಗಳು ಕೇವಲ 31 ಮಾತ್ರ. ಹೀಗಾಗಿ ಸಿಡ್ನಿ ಟೆಸ್ಟ್​ ಪಂದ್ಯದಿಂದ ರೋಹಿತ್ ಶರ್ಮಾ ಅವರನ್ನು ಕೈ ಬಿಡಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಝಾಹಿರ್ ಯೂಸುಫ್
|

Updated on:Jan 02, 2025 | 10:55 AM

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 5ನೇ ಪಂದ್ಯವು ನಾಳೆಯಿಂದ (ಜ.3) ಶುರುವಾಗಲಿದೆ. ಸಿಡ್ನಿಯ ಎಸ್​ಸಿಜಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಕಣಕ್ಕಿಳಿಯುವುದಿಲ್ಲವೇ? ಇಂತಹದೊಂದು ಪ್ರಶ್ನೆ ಮೂಡಲು ಮುಖ್ಯ ಕಾರಣ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ನೀಡಿರುವ ಹೇಳಿಕೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 5ನೇ ಪಂದ್ಯವು ನಾಳೆಯಿಂದ (ಜ.3) ಶುರುವಾಗಲಿದೆ. ಸಿಡ್ನಿಯ ಎಸ್​ಸಿಜಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಕಣಕ್ಕಿಳಿಯುವುದಿಲ್ಲವೇ? ಇಂತಹದೊಂದು ಪ್ರಶ್ನೆ ಮೂಡಲು ಮುಖ್ಯ ಕಾರಣ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ನೀಡಿರುವ ಹೇಳಿಕೆ.

1 / 6
ಸಿಡ್ನಿ ಟೆಸ್ಟ್ ಪಂದ್ಯಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಗೌತಮ್ ಗಂಭಿರ್​ಗೆ ನಾಳಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಭಾರತ ತಂಡದ ಭಾಗವಾಗಲಿದ್ದಾರಾ ಎಂಬ ಪ್ರಶ್ನೆಯನ್ನು ಕೇಳಲಾಗಿತ್ತು. ಈ ಪ್ರಶ್ನೆಗೆ ಗಂಭೀರ್ ನೀಡಿರುವ ಉತ್ತರ... ಪಿಚ್ ನೋಡಿದ ಬಳಿಕ ಪ್ಲೇಯಿಂಗ್ ಇಲೆವೆನ್ ರೂಪಿಸುತ್ತೇನೆ ಎಂದು.

ಸಿಡ್ನಿ ಟೆಸ್ಟ್ ಪಂದ್ಯಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಗೌತಮ್ ಗಂಭಿರ್​ಗೆ ನಾಳಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಭಾರತ ತಂಡದ ಭಾಗವಾಗಲಿದ್ದಾರಾ ಎಂಬ ಪ್ರಶ್ನೆಯನ್ನು ಕೇಳಲಾಗಿತ್ತು. ಈ ಪ್ರಶ್ನೆಗೆ ಗಂಭೀರ್ ನೀಡಿರುವ ಉತ್ತರ... ಪಿಚ್ ನೋಡಿದ ಬಳಿಕ ಪ್ಲೇಯಿಂಗ್ ಇಲೆವೆನ್ ರೂಪಿಸುತ್ತೇನೆ ಎಂದು.

2 / 6
ಸಿಡ್ನಿ ಟೆಸ್ಟ್ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ? ರೋಹಿತ್ ಶರ್ಮಾ ಕೊನೆಯ ಟೆಸ್ಟ್ ಪಂದ್ಯವನ್ನು ಆಡುತ್ತಾರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಗಂಭೀರ್, ನಾಳೆ ಪಿಚ್ ನೋಡಿದ ನಂತರ ನಾವು ಪ್ಲೇಯಿಂಗ್ ಇಲೆವೆನ್ ಅನ್ನು ನಿರ್ಧರಿಸುತ್ತೇವೆ ಎಂದಿದ್ದಾರೆ. ಅಲ್ಲದೆ ಆಡುವ ಬಳಗವನ್ನು ಬಹಿರಂಗಪಡಿಸಲು ನಿರಾಕರಿಸಿದರು.

ಸಿಡ್ನಿ ಟೆಸ್ಟ್ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ? ರೋಹಿತ್ ಶರ್ಮಾ ಕೊನೆಯ ಟೆಸ್ಟ್ ಪಂದ್ಯವನ್ನು ಆಡುತ್ತಾರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಗಂಭೀರ್, ನಾಳೆ ಪಿಚ್ ನೋಡಿದ ನಂತರ ನಾವು ಪ್ಲೇಯಿಂಗ್ ಇಲೆವೆನ್ ಅನ್ನು ನಿರ್ಧರಿಸುತ್ತೇವೆ ಎಂದಿದ್ದಾರೆ. ಅಲ್ಲದೆ ಆಡುವ ಬಳಗವನ್ನು ಬಹಿರಂಗಪಡಿಸಲು ನಿರಾಕರಿಸಿದರು.

3 / 6
ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶವೆಂದರೆ ಗೌತಮ್ ಗಂಭೀರ್​ ನೇರವಾಗಿ ರೋಹಿತ್ ಶರ್ಮಾ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಬಹುದಿತ್ತು. ಅಥವಾ ನಾಯಕನಾಗಿರುವ ಕಾರಣ ಅವರು ಪ್ಲೇಯಿಂಗ್ ಇಲೆವೆನ್​ನಲ್ಲಿ ಇರಲಿದ್ದಾರೆ ಎಂಬುದನ್ನು ಸಹ ಖಚಿತಪಡಿಸಬಹುದಿತ್ತು. ಆದರೆ ಇವರೆಡನ್ನೂ ಗಂಭೀರ್ ಹೇಳಿಲ್ಲ ಎಂಬುದು ಅಚ್ಚರಿ. ಹೀಗಾಗಿಯೇ ಇದೀಗ ಸಿಡ್ನಿ ಟೆಸ್ಟ್​ನಿಂದ ರೋಹಿತ್ ಶರ್ಮಾ ಹೊರಬೀಳಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶವೆಂದರೆ ಗೌತಮ್ ಗಂಭೀರ್​ ನೇರವಾಗಿ ರೋಹಿತ್ ಶರ್ಮಾ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಬಹುದಿತ್ತು. ಅಥವಾ ನಾಯಕನಾಗಿರುವ ಕಾರಣ ಅವರು ಪ್ಲೇಯಿಂಗ್ ಇಲೆವೆನ್​ನಲ್ಲಿ ಇರಲಿದ್ದಾರೆ ಎಂಬುದನ್ನು ಸಹ ಖಚಿತಪಡಿಸಬಹುದಿತ್ತು. ಆದರೆ ಇವರೆಡನ್ನೂ ಗಂಭೀರ್ ಹೇಳಿಲ್ಲ ಎಂಬುದು ಅಚ್ಚರಿ. ಹೀಗಾಗಿಯೇ ಇದೀಗ ಸಿಡ್ನಿ ಟೆಸ್ಟ್​ನಿಂದ ರೋಹಿತ್ ಶರ್ಮಾ ಹೊರಬೀಳಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

4 / 6
ಒಟ್ಟಿನಲ್ಲಿ ಕಳಪೆ ಫಾರ್ಮ್​ನಲ್ಲಿರುವ ರೋಹಿತ್ ಶರ್ಮಾ ಅವರನ್ನು ಸಿಡ್ನಿ ಟೆಸ್ಟ್ ಪಂದ್ಯದಿಂದ ಕೈ ಬಿಟ್ಟು, ಜಸ್​ಪ್ರೀತ್ ಬುಮ್ರಾಗೆ ಮತ್ತೆ ನಾಯಕತ್ವ ನೀಡಲಿದ್ದಾರಾ ಎಂಬುದೇ ಈಗ ಕುತೂಹಲ. ಏಕೆಂದರೆ ಈ ಬಾರಿಯ ಸರಣಿಯ ಮೊದಲ ಪಂದ್ಯದಲ್ಲಿ ರೋಹಿತ್ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾವನ್ನು ಬುಮ್ರಾ ಮುನ್ನಡೆಸಿದ್ದರು. ಅಲ್ಲದೆ ಆ ಪಂದ್ಯದಲ್ಲಿ ಭಾರತ ತಂಡ 295 ರನ್​​ಗಳ ಅಮೋಘ ಜಯ ಸಾಧಿಸಿತ್ತು.

ಒಟ್ಟಿನಲ್ಲಿ ಕಳಪೆ ಫಾರ್ಮ್​ನಲ್ಲಿರುವ ರೋಹಿತ್ ಶರ್ಮಾ ಅವರನ್ನು ಸಿಡ್ನಿ ಟೆಸ್ಟ್ ಪಂದ್ಯದಿಂದ ಕೈ ಬಿಟ್ಟು, ಜಸ್​ಪ್ರೀತ್ ಬುಮ್ರಾಗೆ ಮತ್ತೆ ನಾಯಕತ್ವ ನೀಡಲಿದ್ದಾರಾ ಎಂಬುದೇ ಈಗ ಕುತೂಹಲ. ಏಕೆಂದರೆ ಈ ಬಾರಿಯ ಸರಣಿಯ ಮೊದಲ ಪಂದ್ಯದಲ್ಲಿ ರೋಹಿತ್ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾವನ್ನು ಬುಮ್ರಾ ಮುನ್ನಡೆಸಿದ್ದರು. ಅಲ್ಲದೆ ಆ ಪಂದ್ಯದಲ್ಲಿ ಭಾರತ ತಂಡ 295 ರನ್​​ಗಳ ಅಮೋಘ ಜಯ ಸಾಧಿಸಿತ್ತು.

5 / 6
ಇದಾದ ಬಳಿಕ ರೋಹಿತ್ ಶರ್ಮಾ ನಾಯಕತ್ವದಲ್ಲಿ ಕಣಕ್ಕಿಳಿದ ಟೀಮ್ ಇಂಡಿಯಾ ಎರಡು ಪಂದ್ಯಗಳಲ್ಲಿ ಸೋಲನುಭವಿಸಿದೆ. ಇನ್ನು ಮಳೆಯ ಕಾರಣ ಒಂದು ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿತ್ತು. ಇದೀಗ ಕೊನೆಯ ಟೆಸ್ಟ್ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ಸರಣಿ ನಿರ್ಣಾಯಕ. ಈ ಮ್ಯಾಚ್​ನಲ್ಲಿ ಗೆದ್ದರೆ ಭಾರತ ತಂಡವು ಸರಣಿ ಸೋಲನ್ನು ತಪ್ಪಿಸಿಕೊಳ್ಳಬಹುದು. ಹೀಗಾಗಿ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್, ರೋಹಿತ್ ಶರ್ಮಾ ಅವರನ್ನು ಕೈ ಬಿಟ್ಟು ಮತ್ತೆ ಜಸ್​ಪ್ರೀತ್ ಬುಮ್ರಾಗೆ ಕ್ಯಾಪ್ಟನ್ಸಿ ನೀಡುತ್ತಾರಾ ಎಂಬುದೇ ಈಗ ಕುತೂಹಲ.

ಇದಾದ ಬಳಿಕ ರೋಹಿತ್ ಶರ್ಮಾ ನಾಯಕತ್ವದಲ್ಲಿ ಕಣಕ್ಕಿಳಿದ ಟೀಮ್ ಇಂಡಿಯಾ ಎರಡು ಪಂದ್ಯಗಳಲ್ಲಿ ಸೋಲನುಭವಿಸಿದೆ. ಇನ್ನು ಮಳೆಯ ಕಾರಣ ಒಂದು ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿತ್ತು. ಇದೀಗ ಕೊನೆಯ ಟೆಸ್ಟ್ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ಸರಣಿ ನಿರ್ಣಾಯಕ. ಈ ಮ್ಯಾಚ್​ನಲ್ಲಿ ಗೆದ್ದರೆ ಭಾರತ ತಂಡವು ಸರಣಿ ಸೋಲನ್ನು ತಪ್ಪಿಸಿಕೊಳ್ಳಬಹುದು. ಹೀಗಾಗಿ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್, ರೋಹಿತ್ ಶರ್ಮಾ ಅವರನ್ನು ಕೈ ಬಿಟ್ಟು ಮತ್ತೆ ಜಸ್​ಪ್ರೀತ್ ಬುಮ್ರಾಗೆ ಕ್ಯಾಪ್ಟನ್ಸಿ ನೀಡುತ್ತಾರಾ ಎಂಬುದೇ ಈಗ ಕುತೂಹಲ.

6 / 6

Published On - 10:53 am, Thu, 2 January 25

Follow us
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ