AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gautam Gambhir: ಜಯ್ ಶಾ – ಗಂಭೀರ್ ಭೇಟಿ: ಜಿಜಿ ಟೀಮ್ ಇಂಡಿಯಾದ ಮುಂದಿನ ಕೋಚ್?

IPL 2024: ಐಪಿಎಲ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಮೂರನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂರು ಬಾರಿ ಕೂಡ ಗೌತಮ್ ಗಂಭೀರ್ ಕೆಕೆಆರ್ ತಂಡದ ಭಾಗವಾಗಿದ್ದರು ಎಂಬುದು ವಿಶೇಷ. ಅಂದರೆ 2012 ಮತ್ತು 2014 ರಲ್ಲಿ ಗಂಭೀರ್ ನಾಯಕತ್ವದಲ್ಲಿ ಕೆಕೆಆರ್ ಚಾಂಪಿಯನ್ ಪಟ್ಟಕ್ಕೇರಿದರೆ, 2024 ರಲ್ಲಿ ಗೌತಿ ಅವರ ಮಾರ್ಗದರ್ಶನದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಟ್ರೋಫಿ ಮುಡಿಗೇರಿಸಿಕೊಂಡಿದೆ.

ಝಾಹಿರ್ ಯೂಸುಫ್
|

Updated on: May 27, 2024 | 12:58 PM

Share
ಐಪಿಎಲ್ ಸೀಸನ್ 17 ರ ಫೈನಲ್ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಭೇಟಿಯಾಗಿದ್ದಾರೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಜಯ್ ಶಾ ವಿಶೇಷ ಅತಿಥಿಯಾಗಿ ಕಾಣಿಸಿಕೊಂಡಿದ್ದರು.

ಐಪಿಎಲ್ ಸೀಸನ್ 17 ರ ಫೈನಲ್ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಭೇಟಿಯಾಗಿದ್ದಾರೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಜಯ್ ಶಾ ವಿಶೇಷ ಅತಿಥಿಯಾಗಿ ಕಾಣಿಸಿಕೊಂಡಿದ್ದರು.

1 / 5
ಅಲ್ಲದೆ ಪಂದ್ಯದ ಬಳಿಕ ಕೆಕೆಆರ್ ತಂಡದ ಮೆಂಟರ್ ಗೌತಮ್ ಗಂಭೀರ್ ಅವರೊಂದಿಗೆ ಜಯ್ ಶಾ ಮಾತುಕತೆ ನಡೆಸಿದರು. ಈ ಮಾತುಕತೆಯ ಬೆನ್ನಲ್ಲೇ ಗಂಭೀರ್ ಅವರು ಟೀಮ್ ಇಂಡಿಯಾದ ಮುಂದಿನ ಕೋಚ್ ಆಗಲಿದ್ದಾರೆ ಎಂಬ ಚರ್ಚೆಗಳು ಕೂಡ ಶುರುವಾಗಿದೆ. ಇದಕ್ಕೆ ಮುಖ್ಯ ಕಾರಣ ಇತ್ತೀಚೆಗೆ ಜಯ್ ಶಾ ನೀಡಿದ್ದ ಹೇಳಿಕೆ.

ಅಲ್ಲದೆ ಪಂದ್ಯದ ಬಳಿಕ ಕೆಕೆಆರ್ ತಂಡದ ಮೆಂಟರ್ ಗೌತಮ್ ಗಂಭೀರ್ ಅವರೊಂದಿಗೆ ಜಯ್ ಶಾ ಮಾತುಕತೆ ನಡೆಸಿದರು. ಈ ಮಾತುಕತೆಯ ಬೆನ್ನಲ್ಲೇ ಗಂಭೀರ್ ಅವರು ಟೀಮ್ ಇಂಡಿಯಾದ ಮುಂದಿನ ಕೋಚ್ ಆಗಲಿದ್ದಾರೆ ಎಂಬ ಚರ್ಚೆಗಳು ಕೂಡ ಶುರುವಾಗಿದೆ. ಇದಕ್ಕೆ ಮುಖ್ಯ ಕಾರಣ ಇತ್ತೀಚೆಗೆ ಜಯ್ ಶಾ ನೀಡಿದ್ದ ಹೇಳಿಕೆ.

2 / 5
ಭಾರತೀಯ ಕ್ರಿಕೆಟ್ ರಚನೆಯ ಬಗ್ಗೆ ಆಳವಾದ ತಿಳುವಳಿಕೆಯನ್ನು ಹೊಂದಿರುವ ವ್ಯಕ್ತಿಗಳನ್ನು ಗುರುತಿಸುವಲ್ಲಿ ನಾವು ಗಮನಹರಿಸಿದ್ದೇವೆ. ಟೀಮ್ ಇಂಡಿಯಾವನ್ನು ಮುಂದಿನ ಹಂತಕ್ಕೆ ಏರಿಸಲು ನಮ್ಮ ಕೋಚ್ ನಮ್ಮ ದೇಶೀಯ ಕ್ರಿಕೆಟ್ ಚೌಕಟ್ಟಿನ ಬಗ್ಗೆ ಆಳವಾದ ಜ್ಞಾನವನ್ನು ಹೊಂದಿರುವುದು ಬಹಳ ಮುಖ್ಯ. ಹೀಗಾಗಿ ಭಾರತೀಯರು ಕೋಚ್ ಆದರೆ ಉತ್ತಮ ಎಂದು ಜಯ್ ಶಾ ಹೇಳಿದ್ದರು.

ಭಾರತೀಯ ಕ್ರಿಕೆಟ್ ರಚನೆಯ ಬಗ್ಗೆ ಆಳವಾದ ತಿಳುವಳಿಕೆಯನ್ನು ಹೊಂದಿರುವ ವ್ಯಕ್ತಿಗಳನ್ನು ಗುರುತಿಸುವಲ್ಲಿ ನಾವು ಗಮನಹರಿಸಿದ್ದೇವೆ. ಟೀಮ್ ಇಂಡಿಯಾವನ್ನು ಮುಂದಿನ ಹಂತಕ್ಕೆ ಏರಿಸಲು ನಮ್ಮ ಕೋಚ್ ನಮ್ಮ ದೇಶೀಯ ಕ್ರಿಕೆಟ್ ಚೌಕಟ್ಟಿನ ಬಗ್ಗೆ ಆಳವಾದ ಜ್ಞಾನವನ್ನು ಹೊಂದಿರುವುದು ಬಹಳ ಮುಖ್ಯ. ಹೀಗಾಗಿ ಭಾರತೀಯರು ಕೋಚ್ ಆದರೆ ಉತ್ತಮ ಎಂದು ಜಯ್ ಶಾ ಹೇಳಿದ್ದರು.

3 / 5
ಇದರ ಬೆನ್ನಲ್ಲೇ ಗೌತಮ್ ಗಂಭೀರ್ ಅವರನ್ನು ಬಿಸಿಸಿಐ ಮುಖ್ಯ ಕೋಚ್ ಹುದ್ದೆಗೆ ಸಂಪರ್ಕಿಸಿದೆ ಎಂದು ವರದಿಯಾಗಿತ್ತು. ಇದೀಗ ಬಿಸಿಸಿಐ ಕಾರ್ಯದರ್ಶಿ ಹಾಗೂ ಜಯ್ ಶಾ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಅಲ್ಲದೆ ಇಬ್ಬರು ಖಾಸಗಿಯಾಗಿ ತುಸು ಹೊತ್ತು ಮಾತನಾಡಿಕೊಂಡಿದ್ದಾರೆ.

ಇದರ ಬೆನ್ನಲ್ಲೇ ಗೌತಮ್ ಗಂಭೀರ್ ಅವರನ್ನು ಬಿಸಿಸಿಐ ಮುಖ್ಯ ಕೋಚ್ ಹುದ್ದೆಗೆ ಸಂಪರ್ಕಿಸಿದೆ ಎಂದು ವರದಿಯಾಗಿತ್ತು. ಇದೀಗ ಬಿಸಿಸಿಐ ಕಾರ್ಯದರ್ಶಿ ಹಾಗೂ ಜಯ್ ಶಾ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಅಲ್ಲದೆ ಇಬ್ಬರು ಖಾಸಗಿಯಾಗಿ ತುಸು ಹೊತ್ತು ಮಾತನಾಡಿಕೊಂಡಿದ್ದಾರೆ.

4 / 5
ಇದೀಗ ಜಯ್ ಶಾ ಅವರು ಗಂಭೀರ್ ಅವರೊಂದಿಗೆ ಕೋಚ್ ಹುದ್ದೆ ಬಗ್ಗೆ ಚರ್ಚಿಸಿರುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಹೀಗಾಗಿ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಬಳಿಕ ಟೀಮ್ ಇಂಡಿಯಾದ ಮುಂದಿನ ಕೋಚ್ ಆಗಿ ಗೌತಮ್ ಗಂಭೀರ್ (GG) ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಇದೀಗ ಜಯ್ ಶಾ ಅವರು ಗಂಭೀರ್ ಅವರೊಂದಿಗೆ ಕೋಚ್ ಹುದ್ದೆ ಬಗ್ಗೆ ಚರ್ಚಿಸಿರುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಹೀಗಾಗಿ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಬಳಿಕ ಟೀಮ್ ಇಂಡಿಯಾದ ಮುಂದಿನ ಕೋಚ್ ಆಗಿ ಗೌತಮ್ ಗಂಭೀರ್ (GG) ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ