Gautam Gambhir: ಕೋಚ್ ರಾಹುಲ್ ದ್ರಾವಿಡ್ ಉತ್ತರಾಧಿಕಾರಿ ಗೌತಮ್ ಗಂಭೀರ್: ವರದಿ

Gautam Gambhir: ಐಪಿಎಲ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಮೂರನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂರು ಬಾರಿ ಕೂಡ ಗೌತಮ್ ಗಂಭೀರ್ ಕೆಕೆಆರ್ ತಂಡದ ಭಾಗವಾಗಿದ್ದರು ಎಂಬುದು ವಿಶೇಷ. ಅಂದರೆ 2012 ಮತ್ತು 2014 ರಲ್ಲಿ ಗಂಭೀರ್ ನಾಯಕತ್ವದಲ್ಲಿ ಕೆಕೆಆರ್ ಚಾಂಪಿಯನ್ ಪಟ್ಟಕ್ಕೇರಿದರೆ, 2024 ರಲ್ಲಿ ಗೌತಿ ಅವರ ಮಾರ್ಗದರ್ಶನದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಟ್ರೋಫಿ ಮುಡಿಗೇರಿಸಿಕೊಂಡಿದೆ.

|

Updated on: Jun 01, 2024 | 1:52 PM

ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ (Gautam Gambhir) ಭಾರತ ತಂಡದ ಕೋಚ್ ಆಗಲಿದ್ದಾರೆ ಎಂದು ವರದಿಯಾಗಿದೆ. ಟಿ20 ವಿಶ್ವಕಪ್ ಮುಕ್ತಾಯದೊಂದಿಗೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಮುಗಿಯಲಿದ್ದು, ಇದಾದ ಬಳಿಕ ಗಂಭೀರ್ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ (Gautam Gambhir) ಭಾರತ ತಂಡದ ಕೋಚ್ ಆಗಲಿದ್ದಾರೆ ಎಂದು ವರದಿಯಾಗಿದೆ. ಟಿ20 ವಿಶ್ವಕಪ್ ಮುಕ್ತಾಯದೊಂದಿಗೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಮುಗಿಯಲಿದ್ದು, ಇದಾದ ಬಳಿಕ ಗಂಭೀರ್ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

1 / 6
ಭಾರತ ತಂಡದ ಪ್ರಸ್ತುತ ತರಬೇತುದಾರ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿಯು ಜೂನ್‌ನಲ್ಲಿ ಕೊನೆಗೊಳ್ಳಲಿದ್ದು, ಹೀಗಾಗಿ ಕಳೆದ ತಿಂಗಳು ಕೋಚ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿತ್ತು. ಅದರಂತೆ ಇದೀಗ ಗೌತಮ್ ಗಂಭೀರ್ ಅವರ ಹೆಸರು ಫೈನಲ್ ಆಗಿದ್ದು, ಶೀಘ್ರದಲ್ಲೇ ಅವರು​ ಕೋಚ್ ಆಗಿ ನೇಮಕಗೊಳ್ಳಲಿದ್ದಾರೆಂದು ಬಲ್ಲಮೂಲಗಳು ತಿಳಿಸಿವೆ ಎಂದು ಇಂಡಿಯಾ ಟುಡೆ ವರದಿಯಲ್ಲಿ ಹೇಳಲಾಗಿದೆ.

ಭಾರತ ತಂಡದ ಪ್ರಸ್ತುತ ತರಬೇತುದಾರ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿಯು ಜೂನ್‌ನಲ್ಲಿ ಕೊನೆಗೊಳ್ಳಲಿದ್ದು, ಹೀಗಾಗಿ ಕಳೆದ ತಿಂಗಳು ಕೋಚ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿತ್ತು. ಅದರಂತೆ ಇದೀಗ ಗೌತಮ್ ಗಂಭೀರ್ ಅವರ ಹೆಸರು ಫೈನಲ್ ಆಗಿದ್ದು, ಶೀಘ್ರದಲ್ಲೇ ಅವರು​ ಕೋಚ್ ಆಗಿ ನೇಮಕಗೊಳ್ಳಲಿದ್ದಾರೆಂದು ಬಲ್ಲಮೂಲಗಳು ತಿಳಿಸಿವೆ ಎಂದು ಇಂಡಿಯಾ ಟುಡೆ ವರದಿಯಲ್ಲಿ ಹೇಳಲಾಗಿದೆ.

2 / 6
ಈ ಬಾರಿಯ ಐಪಿಎಲ್​ ಮುಕ್ತಾಯದ ಬೆನ್ನಲ್ಲೇ ಗಂಭೀರ್ ಅವರನ್ನು ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗುತ್ತಿದೆ ಎಂದು ಐಪಿಎಲ್ ಫ್ರಾಂಚೈಸಿ​ ಮಾಲೀಕರೊಬ್ಬರು ಬಹಿರಂಗಪಡಿಸಿದ್ದರು. ಇದರೊಂದಿಗೆ ಟೀಮ್ ಇಂಡಿಯಾ ಪರ ಗೌತಿ ಹೊಸ ಇನಿಂಗ್ಸ್ ಆರಂಭಿಸುವುದು ಖಚಿತವಾಗಿತ್ತು.

ಈ ಬಾರಿಯ ಐಪಿಎಲ್​ ಮುಕ್ತಾಯದ ಬೆನ್ನಲ್ಲೇ ಗಂಭೀರ್ ಅವರನ್ನು ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗುತ್ತಿದೆ ಎಂದು ಐಪಿಎಲ್ ಫ್ರಾಂಚೈಸಿ​ ಮಾಲೀಕರೊಬ್ಬರು ಬಹಿರಂಗಪಡಿಸಿದ್ದರು. ಇದರೊಂದಿಗೆ ಟೀಮ್ ಇಂಡಿಯಾ ಪರ ಗೌತಿ ಹೊಸ ಇನಿಂಗ್ಸ್ ಆರಂಭಿಸುವುದು ಖಚಿತವಾಗಿತ್ತು.

3 / 6
ಇದೀಗ ಗೌತಮ್ ಗಂಭೀರ್ ಹೆಡ್ ಕೋಚ್ ಆಗಿ ನೇಮಕಗೊಳ್ಳುವುದು ಬಹುತೇಕ ಖಚಿತ ಎಂದು ಇಂಡಿಯಾ ಟುಡೆ ಕೂಡ ವರದಿ ಮಾಡಿದೆ. ಹೀಗಾಗಿ ರಾಹುಲ್ ದ್ರಾವಿಡ್ ಅವರ ಉತ್ತರಾಧಿಕಾರಿಯಾಗಿ ಟೀಮ್ ಇಂಡಿಯಾದ ಜವಾಬ್ದಾರಿಯುತ ಹುದ್ದೆಯಲ್ಲಿ ಗಂಭೀರ್ ಕಾಣಿಸಿಕೊಳ್ಳುವುದು ಖಚಿತ ಎಂದೇ ಹೇಳಬಹುದು.

ಇದೀಗ ಗೌತಮ್ ಗಂಭೀರ್ ಹೆಡ್ ಕೋಚ್ ಆಗಿ ನೇಮಕಗೊಳ್ಳುವುದು ಬಹುತೇಕ ಖಚಿತ ಎಂದು ಇಂಡಿಯಾ ಟುಡೆ ಕೂಡ ವರದಿ ಮಾಡಿದೆ. ಹೀಗಾಗಿ ರಾಹುಲ್ ದ್ರಾವಿಡ್ ಅವರ ಉತ್ತರಾಧಿಕಾರಿಯಾಗಿ ಟೀಮ್ ಇಂಡಿಯಾದ ಜವಾಬ್ದಾರಿಯುತ ಹುದ್ದೆಯಲ್ಲಿ ಗಂಭೀರ್ ಕಾಣಿಸಿಕೊಳ್ಳುವುದು ಖಚಿತ ಎಂದೇ ಹೇಳಬಹುದು.

4 / 6
ಅಂದಹಾಗೆ ಗೌತಮ್ ಗಂಭೀರ್ ಇದುವರೆಗೆ ಯಾವುದೇ ತಂಡಕ್ಕೆ ಕೋಚಿಂಗ್ ನೀಡಿ ಅನುಭವ ಹೊಂದಿಲ್ಲ. ಇದಾಗ್ಯೂ ಐಪಿಎಲ್​ನಲ್ಲಿ ಮೂರು ಸೀಸನ್​ಗಳಲ್ಲಿ ಮೆಂಟರ್ ಆಗಿ ಕಾರ್ಯ ನಿರ್ವಹಿಸಿದ್ದರು. 2022 ಮತ್ತು 2023 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾರ್ಗದರ್ಶಕರಾಗಿ ಕಾರ್ಯ ನಿರ್ವಹಿಸಿದ್ದ ಗೌತಮ್ ಗಂಭೀರ್ ಈ ಬಾರಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮೆಂಟರ್ ಆಗಿ ಕಾಣಿಸಿಕೊಂಡಿದ್ದರು. ಅಲ್ಲದೆ ಗಂಭೀರ್ ಅವರ ಮಾರ್ಗದರ್ಶನದಲ್ಲೇ ಕೆಕೆಆರ್ ತಂಡ ಈ ಬಾರಿ ಚಾಂಪಿಯನ್ ಪಟ್ಟಕ್ಕೇರಿದ್ದು ವಿಶೇಷ.

ಅಂದಹಾಗೆ ಗೌತಮ್ ಗಂಭೀರ್ ಇದುವರೆಗೆ ಯಾವುದೇ ತಂಡಕ್ಕೆ ಕೋಚಿಂಗ್ ನೀಡಿ ಅನುಭವ ಹೊಂದಿಲ್ಲ. ಇದಾಗ್ಯೂ ಐಪಿಎಲ್​ನಲ್ಲಿ ಮೂರು ಸೀಸನ್​ಗಳಲ್ಲಿ ಮೆಂಟರ್ ಆಗಿ ಕಾರ್ಯ ನಿರ್ವಹಿಸಿದ್ದರು. 2022 ಮತ್ತು 2023 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾರ್ಗದರ್ಶಕರಾಗಿ ಕಾರ್ಯ ನಿರ್ವಹಿಸಿದ್ದ ಗೌತಮ್ ಗಂಭೀರ್ ಈ ಬಾರಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮೆಂಟರ್ ಆಗಿ ಕಾಣಿಸಿಕೊಂಡಿದ್ದರು. ಅಲ್ಲದೆ ಗಂಭೀರ್ ಅವರ ಮಾರ್ಗದರ್ಶನದಲ್ಲೇ ಕೆಕೆಆರ್ ತಂಡ ಈ ಬಾರಿ ಚಾಂಪಿಯನ್ ಪಟ್ಟಕ್ಕೇರಿದ್ದು ವಿಶೇಷ.

5 / 6
ಈ ಅಮೋಘ ಗೆಲುವಿನ ಬಳಿಕ ಕೆಕೆಆರ್ ತಂಡದ ಮೆಂಟರ್ ಅನ್ನೇ ಟೀಮ್ ಇಂಡಿಯಾದ ಕೋಚ್ ಹುದ್ದೆಗೆ ನೇಮಿಸಲು ಬಿಸಿಸಿಐ ಕೂಡ ಆಸಕ್ತಿವಹಿಸಿದೆ. ಅದರಂತೆ ಬಿಸಿಸಿಐ ಕ್ರಿಕೆಟ್ ಸಲಹಾ ಸಮಿತಿಯ ಮೂಲಕ ಮುಖ್ಯ ಕೋಚ್ ಪಾತ್ರಕ್ಕಾಗಿ ಗಂಭೀರ್ ಅವರ ಸಂದರ್ಶನ ನಡೆಸಲಿದೆಯಾ ಅಥವಾ ನೇರವಾಗಿ ಆಯ್ಕೆ ಮಾಡಲಿದೆಯಾ ಕಾದು ನೋಡಬೇಕಿದೆ.

ಈ ಅಮೋಘ ಗೆಲುವಿನ ಬಳಿಕ ಕೆಕೆಆರ್ ತಂಡದ ಮೆಂಟರ್ ಅನ್ನೇ ಟೀಮ್ ಇಂಡಿಯಾದ ಕೋಚ್ ಹುದ್ದೆಗೆ ನೇಮಿಸಲು ಬಿಸಿಸಿಐ ಕೂಡ ಆಸಕ್ತಿವಹಿಸಿದೆ. ಅದರಂತೆ ಬಿಸಿಸಿಐ ಕ್ರಿಕೆಟ್ ಸಲಹಾ ಸಮಿತಿಯ ಮೂಲಕ ಮುಖ್ಯ ಕೋಚ್ ಪಾತ್ರಕ್ಕಾಗಿ ಗಂಭೀರ್ ಅವರ ಸಂದರ್ಶನ ನಡೆಸಲಿದೆಯಾ ಅಥವಾ ನೇರವಾಗಿ ಆಯ್ಕೆ ಮಾಡಲಿದೆಯಾ ಕಾದು ನೋಡಬೇಕಿದೆ.

6 / 6
Follow us
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ