Virat Kohli: ವಿರಾಟ್ ಕೊಹ್ಲಿ ಜೊತೆಗಿನ ಸಂಬಂಧದ ಕುರಿತು ಮೌನ ಮುರಿದ ಗೌತಮ್ ಗಂಭೀರ್

Gautam Gambhir - Virat Kohli: ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ಮುಖಾಮುಖಿಯಾದರೆ ಅಲ್ಲೊಂದಷ್ಟು ಕಿರಿಕ್, ಒಂದಷ್ಟು ದ್ವೇಷ ಮತ್ತೊಂದಷ್ಟು ವಾಗ್ವಾದ ಎಂಬುದು ಸಾಮಾನ್ಯವಾಗಿತ್ತು. ಹೀಗಾಗಿಯೇ RCB vs KKR ನಡುವಣ ಪಂದ್ಯವು ಎಲ್ ಪ್ರೈಮೆರೊ ಮ್ಯಾಚ್ ಆಗಿ ಗುರುತಿಸಿಕೊಂಡಿತ್ತು. ಈ ಹಿಂದೆ ಆರ್​ಸಿಬಿ-ಕೆಕೆಆರ್ ನಡುವಣ ಪಂದ್ಯದ ವೇಳೆ ಗಂಭೀರ್ ಹಾಗೂ ವಿರಾಟ್ ಕೊಹ್ಲಿ ಮೈದಾನದಲ್ಲೇ ಮಾತಿನ ಚಕಮಕಿ ನಡೆಸಿದ್ದರು. ಆದರೆ ಈ ಬಾರಿ ಇಬ್ಬರು ಅನೋನ್ಯವಾಗಿ ಕಾಣಿಸಿಕೊಳ್ಳುವ ಮೂಲಕ ಎಲ್ಲಾ ಊಹಾಪೋಹಗಳಿಗೆ ಬ್ರೇಕ್ ಹಾಕಿದ್ದಾರೆ.

|

Updated on: May 30, 2024 | 2:02 PM

ವಿರಾಟ್ ಕೊಹ್ಲಿ (Virat Kohli) ಮತ್ತು ನನ್ನ ನಡುವಣ ಸಂಬಂಧ ಏನು ಎಂಬುದು ದೇಶಕ್ಕೆ ತಿಳಿಯಬೇಕಿಲ್ಲ. ಅದು ನಮ್ಮಿಬ್ಬರ ನಡುವಣ ಸಂಬಂಧ. ಅದನ್ನು ಇಡೀ ದೇಶದ ಮುಂದೆ ತೆರೆದಿಡಬೇಕಾದ ಅಗತ್ಯತೆಯು ಇಲ್ಲ ಎಂಬುದು ನನ್ನ ಅನಿಸಿಕೆ. ಹೀಗೆ ಹೇಳಿದ್ದು ಮತ್ಯಾರೂ ಅಲ್ಲ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ (Gautam Gambhir).

ವಿರಾಟ್ ಕೊಹ್ಲಿ (Virat Kohli) ಮತ್ತು ನನ್ನ ನಡುವಣ ಸಂಬಂಧ ಏನು ಎಂಬುದು ದೇಶಕ್ಕೆ ತಿಳಿಯಬೇಕಿಲ್ಲ. ಅದು ನಮ್ಮಿಬ್ಬರ ನಡುವಣ ಸಂಬಂಧ. ಅದನ್ನು ಇಡೀ ದೇಶದ ಮುಂದೆ ತೆರೆದಿಡಬೇಕಾದ ಅಗತ್ಯತೆಯು ಇಲ್ಲ ಎಂಬುದು ನನ್ನ ಅನಿಸಿಕೆ. ಹೀಗೆ ಹೇಳಿದ್ದು ಮತ್ಯಾರೂ ಅಲ್ಲ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ (Gautam Gambhir).

1 / 6
ಸಂದರ್ಶನವೊಂದರಲ್ಲಿ ವಿರಾಟ್ ಕೊಹ್ಲಿ ಕುರಿತಾದ ಕೇಳಿದ ಪ್ರಶ್ನೆಗೆ ಉತ್ತರಿಸಿದ ಗಂಭೀರ್, ನನ್ನ ಮತ್ತು ಕೊಹ್ಲಿ ನಡುವೆ ಸಂಬಂಧ ಇಡೀ ದೇಶಕ್ಕೆ ತಿಳಿಯಬೇಕಿಲ್ಲ. ತಮ್ಮ ತಮ್ಮ ತಂಡಗಳನ್ನು ಗೆಲ್ಲುವಂತೆ ಮಾಡಲು ತನ್ನತನ ತೋರಿಸಲು ಇಬ್ಬರಿಗೂ ಹಕ್ಕಿದೆ. ಹೀಗಾಗಿ ಇಬ್ಬರೂ ಅಗ್ರೆಸಿವ್ ಆಗಿ ಕಾಣಿಸಿಕೊಂಡೆವು ಅಷ್ಟೇ ಎಂದು ಗಂಭೀರ್ ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ವಿರಾಟ್ ಕೊಹ್ಲಿ ಕುರಿತಾದ ಕೇಳಿದ ಪ್ರಶ್ನೆಗೆ ಉತ್ತರಿಸಿದ ಗಂಭೀರ್, ನನ್ನ ಮತ್ತು ಕೊಹ್ಲಿ ನಡುವೆ ಸಂಬಂಧ ಇಡೀ ದೇಶಕ್ಕೆ ತಿಳಿಯಬೇಕಿಲ್ಲ. ತಮ್ಮ ತಮ್ಮ ತಂಡಗಳನ್ನು ಗೆಲ್ಲುವಂತೆ ಮಾಡಲು ತನ್ನತನ ತೋರಿಸಲು ಇಬ್ಬರಿಗೂ ಹಕ್ಕಿದೆ. ಹೀಗಾಗಿ ಇಬ್ಬರೂ ಅಗ್ರೆಸಿವ್ ಆಗಿ ಕಾಣಿಸಿಕೊಂಡೆವು ಅಷ್ಟೇ ಎಂದು ಗಂಭೀರ್ ಹೇಳಿದ್ದಾರೆ.

2 / 6
ನಮ್ಮಿಬ್ಬರ ಸಂಬಂಧವು ನಿಮ್ಮೆಲ್ಲರ ಗ್ರಹಿಕೆಯ ವಾಸ್ತವದಿಂದ ತುಂಬಾ ದೂರವಿದೆ. ವಿರಾಟ್ ಕೊಹ್ಲಿಯೊಂದಿಗಿನ ನನ್ನ ಸಂಬಂಧಕ್ಕೆ ಸಾರ್ವಜನಿಕರು ಮಸಾಲಾ ಸೇರಿಸಿದರು. ಹಲವು ಸುದ್ದಿಗಳು ಸೃಷ್ಟಿಯಾದವು. ಆದರೆ ನಾವಿಬ್ಬರೂ ಹಾಗೆ ಇಲ್ಲ ಎಂದು ಗೌತಮ್ ಗಂಭೀರ್ ಹೇಳಿದ್ದಾರೆ.

ನಮ್ಮಿಬ್ಬರ ಸಂಬಂಧವು ನಿಮ್ಮೆಲ್ಲರ ಗ್ರಹಿಕೆಯ ವಾಸ್ತವದಿಂದ ತುಂಬಾ ದೂರವಿದೆ. ವಿರಾಟ್ ಕೊಹ್ಲಿಯೊಂದಿಗಿನ ನನ್ನ ಸಂಬಂಧಕ್ಕೆ ಸಾರ್ವಜನಿಕರು ಮಸಾಲಾ ಸೇರಿಸಿದರು. ಹಲವು ಸುದ್ದಿಗಳು ಸೃಷ್ಟಿಯಾದವು. ಆದರೆ ನಾವಿಬ್ಬರೂ ಹಾಗೆ ಇಲ್ಲ ಎಂದು ಗೌತಮ್ ಗಂಭೀರ್ ಹೇಳಿದ್ದಾರೆ.

3 / 6
ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ-ಕೆಕೆಆರ್ ನಡುವಣ ಪಂದ್ಯವು ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ಕಾರಣದಿಂದ ಕುತೂಹಲದ ಕೇಂದ್ರವಾಗಿತ್ತು. ಆದರೆ ಪಂದ್ಯದ ನಡುವೆ ಗೌತಮ್ ಗಂಭೀರ್ ವಿರಾಟ್ ಕೊಹ್ಲಿಯನ್ನು ತಬ್ಬಿಕೊಂಡಿದ್ದರು. ಅಲ್ಲದೆ ಇದಾದ ಬಳಿಕ ಕೊಲ್ಕತ್ತಾದಲ್ಲಿ ನಡೆದ ಪಂದ್ಯದ ವೇಳೆ ಗಂಭೀರ್ ಮತ್ತು ಕೊಹ್ಲಿ ಜೊತೆಯಾಗಿ ಹರಟೆ ಹೊಡೆಯುತ್ತಿರುವುದು ಕೂಡ ಕಂಡು ಬಂತು.

ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ-ಕೆಕೆಆರ್ ನಡುವಣ ಪಂದ್ಯವು ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ಕಾರಣದಿಂದ ಕುತೂಹಲದ ಕೇಂದ್ರವಾಗಿತ್ತು. ಆದರೆ ಪಂದ್ಯದ ನಡುವೆ ಗೌತಮ್ ಗಂಭೀರ್ ವಿರಾಟ್ ಕೊಹ್ಲಿಯನ್ನು ತಬ್ಬಿಕೊಂಡಿದ್ದರು. ಅಲ್ಲದೆ ಇದಾದ ಬಳಿಕ ಕೊಲ್ಕತ್ತಾದಲ್ಲಿ ನಡೆದ ಪಂದ್ಯದ ವೇಳೆ ಗಂಭೀರ್ ಮತ್ತು ಕೊಹ್ಲಿ ಜೊತೆಯಾಗಿ ಹರಟೆ ಹೊಡೆಯುತ್ತಿರುವುದು ಕೂಡ ಕಂಡು ಬಂತು.

4 / 6
ಈ ಎಲ್ಲಾ ಕಾರಣಗಳಿಂದಾಗಿಯೇ ಗೌತಮ್ ಗಂಭೀರ್, ನಿಮ್ಮ ಗ್ರಹಿಕೆಗಿಂತಲೂ ನಾನು ಮತ್ತು ವಿರಾಟ್ ಕೊಹ್ಲಿ ಉತ್ತಮ ಸಂಬಂಧ ಹೊಂದಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನು ಪುಷ್ಠೀಕರಿಸುವಂತೆ ಈ ಬಾರಿಯ ಐಪಿಎಲ್​ನಲ್ಲೂ ದೆಹಲಿಯ ಇಬ್ಬರು ಕ್ರಿಕೆಟಿಗರು ತುಂಬಾ ಅನೋನ್ಯವಾಗಿ ಕಾಣಿಸಿಕೊಂಡಿದ್ದರು.

ಈ ಎಲ್ಲಾ ಕಾರಣಗಳಿಂದಾಗಿಯೇ ಗೌತಮ್ ಗಂಭೀರ್, ನಿಮ್ಮ ಗ್ರಹಿಕೆಗಿಂತಲೂ ನಾನು ಮತ್ತು ವಿರಾಟ್ ಕೊಹ್ಲಿ ಉತ್ತಮ ಸಂಬಂಧ ಹೊಂದಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನು ಪುಷ್ಠೀಕರಿಸುವಂತೆ ಈ ಬಾರಿಯ ಐಪಿಎಲ್​ನಲ್ಲೂ ದೆಹಲಿಯ ಇಬ್ಬರು ಕ್ರಿಕೆಟಿಗರು ತುಂಬಾ ಅನೋನ್ಯವಾಗಿ ಕಾಣಿಸಿಕೊಂಡಿದ್ದರು.

5 / 6
ಇದೀಗ ಕೆಕೆಆರ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿರುವ ಗೌತಮ್ ಗಂಭೀರ್ ಶ್ರೀಘ್ರದಲ್ಲೇ ಟೀಮ್ ಇಂಡಿಯಾದ ಕೋಚ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಅದರಂತೆ ಗಂಭೀರ್-ಕೊಹ್ಲಿ ಜಗಲ್​ಬಂಧಿಯಲ್ಲಿ ಭಾರತ ತಂಡವು ಹೇಗೆ ಪ್ರದರ್ಶನ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇದೀಗ ಕೆಕೆಆರ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿರುವ ಗೌತಮ್ ಗಂಭೀರ್ ಶ್ರೀಘ್ರದಲ್ಲೇ ಟೀಮ್ ಇಂಡಿಯಾದ ಕೋಚ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಅದರಂತೆ ಗಂಭೀರ್-ಕೊಹ್ಲಿ ಜಗಲ್​ಬಂಧಿಯಲ್ಲಿ ಭಾರತ ತಂಡವು ಹೇಗೆ ಪ್ರದರ್ಶನ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

6 / 6
Follow us
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ