AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಭೀರ್ ಲೆಕ್ಕಾಚಾರಗಳನ್ನು ಉಲ್ಟಾ ಮಾಡಿದ ರೋಹಿತ್ ಶರ್ಮಾ

India squad for 2025 Champions Trophy: ಚಾಂಪಿಯನ್ಸ್ ಟ್ರೋಫಿ ಟೂರ್ನಿಗಾಗಿ ಆಯ್ಕೆ ಮಾಡಲಾದ ಭಾರತ ತಂಡದ ವಿಷಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಕೋಚ್ ಗೌತಮ್ ಗಂಭೀರ್ ನಡುವೆ ಭಿನ್ನಾಭಿಪ್ರಾಯ ಏರ್ಪಟ್ಟಿರುವ ವಿಷಯ ಬಹಿರಂಗವಾಗಿದೆ. ಇಲ್ಲಿ ಗಂಭೀರ್​ಗಿಂತ ಆಯ್ಕೆ ಸಮಿತಿ ರೋಹಿತ್ ಶರ್ಮಾ ಅವರ ನಿಲುವಿಗೆ ಹೆಚ್ಚಿನ ಮಣೆ ನೀಡಿರುವುದು ಸ್ಪಷ್ಟ.

ಝಾಹಿರ್ ಯೂಸುಫ್
|

Updated on: Jan 19, 2025 | 11:53 AM

Share
ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. ಟೀಮ್ ಇಂಡಿಯಾ ಪ್ರಕಟಣೆಗೆ ಶನಿವಾರ ಮಧ್ಯಾಹ್ನ 12.30 ಕ್ಕೆ ಸುದ್ದಿಗೋಷ್ಠಿ ಕರೆದಿದ್ದರೂ, ಭಾರತ ತಂಡದ ಘೋಷಣೆಯಾಗಿದ್ದು 3 ಗಂಟೆಗೆ. ಹೀಗೆ ಟೀಮ್ ಇಂಡಿಯಾ ಘೋಷಣೆ ವಿಳಂಬವಾಗಲು ಮುಖ್ಯ ಕಾರಣ ರೋಹಿತ್ ಶರ್ಮಾ ಹಾಗೂ ಕೋಚ್ ಗೌತಮ್ ಗಂಭೀರ್ ನಡುವಣ ಭಿನ್ನಾಭಿಪ್ರಾಯ ಎಂಬುದು ಇದೀಗ ಬಹಿರಂಗವಾಗಿದೆ.

ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. ಟೀಮ್ ಇಂಡಿಯಾ ಪ್ರಕಟಣೆಗೆ ಶನಿವಾರ ಮಧ್ಯಾಹ್ನ 12.30 ಕ್ಕೆ ಸುದ್ದಿಗೋಷ್ಠಿ ಕರೆದಿದ್ದರೂ, ಭಾರತ ತಂಡದ ಘೋಷಣೆಯಾಗಿದ್ದು 3 ಗಂಟೆಗೆ. ಹೀಗೆ ಟೀಮ್ ಇಂಡಿಯಾ ಘೋಷಣೆ ವಿಳಂಬವಾಗಲು ಮುಖ್ಯ ಕಾರಣ ರೋಹಿತ್ ಶರ್ಮಾ ಹಾಗೂ ಕೋಚ್ ಗೌತಮ್ ಗಂಭೀರ್ ನಡುವಣ ಭಿನ್ನಾಭಿಪ್ರಾಯ ಎಂಬುದು ಇದೀಗ ಬಹಿರಂಗವಾಗಿದೆ.

1 / 6
ಆಯ್ಕೆ ಸಮಿತಿಯೊಂದಿಗೆ ಚರ್ಚಿಸಿ ರೋಹಿತ್ ಶರ್ಮಾ ಭಾರತ ತಂಡವನ್ನು ಆಯ್ಕೆ ಮಾಡಿದ್ದರು. ಈ ಪಟ್ಟಿಯೊಂದಿಗೆ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಹಾಗೂ ರೋಹಿತ್ ಶರ್ಮಾ ವಾಂಖೆಡೆ ಸ್ಟೇಡಿಯಂನಲ್ಲಿ ಪ್ರೆಸ್​ ಕಾನ್ಫರೆನ್ಸ್ ರೂಮ್​ಗೆ 12 ಗಂಟೆಗೆ ಆಗಮಿಸಿದ್ದರು. ಆದರೆ ಇನ್ನೇನು ಟೀಮ್ ಇಂಡಿಯಾ ಘೋಷಣೆಯಾಗಲಿದೆ ಅನ್ನುವಷ್ಟರಲ್ಲಿ ತೆರೆಮರೆಯಲ್ಲಿ ಗಂಭೀರ ಚರ್ಚೆ ನಡೆದಿದೆ.

ಆಯ್ಕೆ ಸಮಿತಿಯೊಂದಿಗೆ ಚರ್ಚಿಸಿ ರೋಹಿತ್ ಶರ್ಮಾ ಭಾರತ ತಂಡವನ್ನು ಆಯ್ಕೆ ಮಾಡಿದ್ದರು. ಈ ಪಟ್ಟಿಯೊಂದಿಗೆ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಹಾಗೂ ರೋಹಿತ್ ಶರ್ಮಾ ವಾಂಖೆಡೆ ಸ್ಟೇಡಿಯಂನಲ್ಲಿ ಪ್ರೆಸ್​ ಕಾನ್ಫರೆನ್ಸ್ ರೂಮ್​ಗೆ 12 ಗಂಟೆಗೆ ಆಗಮಿಸಿದ್ದರು. ಆದರೆ ಇನ್ನೇನು ಟೀಮ್ ಇಂಡಿಯಾ ಘೋಷಣೆಯಾಗಲಿದೆ ಅನ್ನುವಷ್ಟರಲ್ಲಿ ತೆರೆಮರೆಯಲ್ಲಿ ಗಂಭೀರ ಚರ್ಚೆ ನಡೆದಿದೆ.

2 / 6
ಈ ಚರ್ಚೆಯ ನಡುವೆ ಗೌತಮ್ ಗಂಭೀರ್ ಟೀಮ್ ಇಂಡಿಯಾ ಉಪ ನಾಯಕನಾಗಿ ಹಾರ್ದಿಕ್ ಪಾಂಡ್ಯರನ್ನು ಆಯ್ಕೆ ಮಾಡುವಂತೆ ಪಟ್ಟು ಹಿಡಿರುವುದಾಗಿ ವರದಿಯಾಗಿದೆ. ಆದರೆ ಅಜಿತ್ ಅಗರ್ಕರ್ ಹಾಗೂ ರೋಹಿತ್ ಶರ್ಮಾ, ಶುಭ್​ಮನ್ ಗಿಲ್​ ಪರ ವಹಿಸಿದ್ದರು. ಅಲ್ಲದೆ ಅಗರ್ಕರ್ ತಮ್ಮ ನಿರ್ಧಾರವನ್ನು ಬದಲಿಸಲು ಸಿದ್ಧರಿರಲಿಲ್ಲ. ಹೀಗಾಗಿ ಗಿಲ್ ಅವರನ್ನೇ ವೈಸ್ ಕ್ಯಾಪ್ಟನ್ ಆಗಿ ಆಯ್ಕೆ ಮಾಡಲಾಗಿದೆ.

ಈ ಚರ್ಚೆಯ ನಡುವೆ ಗೌತಮ್ ಗಂಭೀರ್ ಟೀಮ್ ಇಂಡಿಯಾ ಉಪ ನಾಯಕನಾಗಿ ಹಾರ್ದಿಕ್ ಪಾಂಡ್ಯರನ್ನು ಆಯ್ಕೆ ಮಾಡುವಂತೆ ಪಟ್ಟು ಹಿಡಿರುವುದಾಗಿ ವರದಿಯಾಗಿದೆ. ಆದರೆ ಅಜಿತ್ ಅಗರ್ಕರ್ ಹಾಗೂ ರೋಹಿತ್ ಶರ್ಮಾ, ಶುಭ್​ಮನ್ ಗಿಲ್​ ಪರ ವಹಿಸಿದ್ದರು. ಅಲ್ಲದೆ ಅಗರ್ಕರ್ ತಮ್ಮ ನಿರ್ಧಾರವನ್ನು ಬದಲಿಸಲು ಸಿದ್ಧರಿರಲಿಲ್ಲ. ಹೀಗಾಗಿ ಗಿಲ್ ಅವರನ್ನೇ ವೈಸ್ ಕ್ಯಾಪ್ಟನ್ ಆಗಿ ಆಯ್ಕೆ ಮಾಡಲಾಗಿದೆ.

3 / 6
ಇನ್ನು ಟೀಮ್ ಇಂಡಿಯಾದ ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ ಅವರಿಗೆ ಸ್ಥಾನ ನೀಡಬೇಕೆಂದು ಗೌತಮ್ ಗಂಭೀರ್ ಆಗ್ರಹಿಸಿದ್ದರು. ಆದರೆ ರೋಹಿತ್ ಶರ್ಮಾ, ರಿಷಭ್ ಪಂತ್ ಪರ ನಿಂತಿದ್ದರು. ಪಂತ್​ಗಿಂತ ಸ್ಯಾಮ್ಸನ್ ಅವರ ಪ್ರದರ್ಶನ ಉತ್ತಮವಾಗಿದೆ ಎಂದು ಗಂಭೀರ್ ಮನವೊಲಿಸಲು ಯತ್ನಿಸಿದರೂ, ರೋಹಿತ್ ಶರ್ಮಾ ಹಾಗೂ ಅಜಿತ್ ಅಗರ್ಕರ್ ರಿಷಭ್ ಪಂತ್ ಅವರ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಇನ್ನು ಟೀಮ್ ಇಂಡಿಯಾದ ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ ಅವರಿಗೆ ಸ್ಥಾನ ನೀಡಬೇಕೆಂದು ಗೌತಮ್ ಗಂಭೀರ್ ಆಗ್ರಹಿಸಿದ್ದರು. ಆದರೆ ರೋಹಿತ್ ಶರ್ಮಾ, ರಿಷಭ್ ಪಂತ್ ಪರ ನಿಂತಿದ್ದರು. ಪಂತ್​ಗಿಂತ ಸ್ಯಾಮ್ಸನ್ ಅವರ ಪ್ರದರ್ಶನ ಉತ್ತಮವಾಗಿದೆ ಎಂದು ಗಂಭೀರ್ ಮನವೊಲಿಸಲು ಯತ್ನಿಸಿದರೂ, ರೋಹಿತ್ ಶರ್ಮಾ ಹಾಗೂ ಅಜಿತ್ ಅಗರ್ಕರ್ ರಿಷಭ್ ಪಂತ್ ಅವರ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

4 / 6
ಹೀಗೆ ಎರಡುವರೆ ಗಂಟೆಗಳ ಕಾಲ ನಡೆದ ಈ ಚರ್ಚೆಯಲ್ಲಿ ಕೊನೆಗೂ ರೋಹಿತ್ ಶರ್ಮಾ ತಮಗೆ ಬೇಕಾದಂತಹ ತಂಡವನ್ನು ಆಯ್ಕೆ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಹಿಟ್​ಮ್ಯಾನ್ ಬಯಕೆಯಂತೆ ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಬಲಿಷ್ಠ ತಂಡವನ್ನು ರೂಪಿಸಿದೆ. ಆದರೆ ದೀರ್ಘಕಾಲ ನಡೆದ ಈ ಚರ್ಚೆಯಿಂದಾಗಿ ಇದೀಗ ಕೋಚ್ ಗೌತಮ್ ಗಂಭೀರ್ ಹಾಗೂ ರೋಹಿತ್ ಶರ್ಮಾ ನಡುವೆ ಎಲ್ಲವೂ ಸರಿಯಿಲ್ಲವಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿರುವುದಂತು ಸುಳ್ಳಲ್ಲ.

ಹೀಗೆ ಎರಡುವರೆ ಗಂಟೆಗಳ ಕಾಲ ನಡೆದ ಈ ಚರ್ಚೆಯಲ್ಲಿ ಕೊನೆಗೂ ರೋಹಿತ್ ಶರ್ಮಾ ತಮಗೆ ಬೇಕಾದಂತಹ ತಂಡವನ್ನು ಆಯ್ಕೆ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಹಿಟ್​ಮ್ಯಾನ್ ಬಯಕೆಯಂತೆ ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಬಲಿಷ್ಠ ತಂಡವನ್ನು ರೂಪಿಸಿದೆ. ಆದರೆ ದೀರ್ಘಕಾಲ ನಡೆದ ಈ ಚರ್ಚೆಯಿಂದಾಗಿ ಇದೀಗ ಕೋಚ್ ಗೌತಮ್ ಗಂಭೀರ್ ಹಾಗೂ ರೋಹಿತ್ ಶರ್ಮಾ ನಡುವೆ ಎಲ್ಲವೂ ಸರಿಯಿಲ್ಲವಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿರುವುದಂತು ಸುಳ್ಳಲ್ಲ.

5 / 6
ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್​ ಪಂತ್, ರವೀಂದ್ರ ಜಡೇಜಾ.

ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್​ ಪಂತ್, ರವೀಂದ್ರ ಜಡೇಜಾ.

6 / 6
Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ