Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಭೀರ್ ಲೆಕ್ಕಾಚಾರಗಳನ್ನು ಉಲ್ಟಾ ಮಾಡಿದ ರೋಹಿತ್ ಶರ್ಮಾ

India squad for 2025 Champions Trophy: ಚಾಂಪಿಯನ್ಸ್ ಟ್ರೋಫಿ ಟೂರ್ನಿಗಾಗಿ ಆಯ್ಕೆ ಮಾಡಲಾದ ಭಾರತ ತಂಡದ ವಿಷಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಕೋಚ್ ಗೌತಮ್ ಗಂಭೀರ್ ನಡುವೆ ಭಿನ್ನಾಭಿಪ್ರಾಯ ಏರ್ಪಟ್ಟಿರುವ ವಿಷಯ ಬಹಿರಂಗವಾಗಿದೆ. ಇಲ್ಲಿ ಗಂಭೀರ್​ಗಿಂತ ಆಯ್ಕೆ ಸಮಿತಿ ರೋಹಿತ್ ಶರ್ಮಾ ಅವರ ನಿಲುವಿಗೆ ಹೆಚ್ಚಿನ ಮಣೆ ನೀಡಿರುವುದು ಸ್ಪಷ್ಟ.

ಝಾಹಿರ್ ಯೂಸುಫ್
|

Updated on: Jan 19, 2025 | 11:53 AM

ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. ಟೀಮ್ ಇಂಡಿಯಾ ಪ್ರಕಟಣೆಗೆ ಶನಿವಾರ ಮಧ್ಯಾಹ್ನ 12.30 ಕ್ಕೆ ಸುದ್ದಿಗೋಷ್ಠಿ ಕರೆದಿದ್ದರೂ, ಭಾರತ ತಂಡದ ಘೋಷಣೆಯಾಗಿದ್ದು 3 ಗಂಟೆಗೆ. ಹೀಗೆ ಟೀಮ್ ಇಂಡಿಯಾ ಘೋಷಣೆ ವಿಳಂಬವಾಗಲು ಮುಖ್ಯ ಕಾರಣ ರೋಹಿತ್ ಶರ್ಮಾ ಹಾಗೂ ಕೋಚ್ ಗೌತಮ್ ಗಂಭೀರ್ ನಡುವಣ ಭಿನ್ನಾಭಿಪ್ರಾಯ ಎಂಬುದು ಇದೀಗ ಬಹಿರಂಗವಾಗಿದೆ.

ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. ಟೀಮ್ ಇಂಡಿಯಾ ಪ್ರಕಟಣೆಗೆ ಶನಿವಾರ ಮಧ್ಯಾಹ್ನ 12.30 ಕ್ಕೆ ಸುದ್ದಿಗೋಷ್ಠಿ ಕರೆದಿದ್ದರೂ, ಭಾರತ ತಂಡದ ಘೋಷಣೆಯಾಗಿದ್ದು 3 ಗಂಟೆಗೆ. ಹೀಗೆ ಟೀಮ್ ಇಂಡಿಯಾ ಘೋಷಣೆ ವಿಳಂಬವಾಗಲು ಮುಖ್ಯ ಕಾರಣ ರೋಹಿತ್ ಶರ್ಮಾ ಹಾಗೂ ಕೋಚ್ ಗೌತಮ್ ಗಂಭೀರ್ ನಡುವಣ ಭಿನ್ನಾಭಿಪ್ರಾಯ ಎಂಬುದು ಇದೀಗ ಬಹಿರಂಗವಾಗಿದೆ.

1 / 6
ಆಯ್ಕೆ ಸಮಿತಿಯೊಂದಿಗೆ ಚರ್ಚಿಸಿ ರೋಹಿತ್ ಶರ್ಮಾ ಭಾರತ ತಂಡವನ್ನು ಆಯ್ಕೆ ಮಾಡಿದ್ದರು. ಈ ಪಟ್ಟಿಯೊಂದಿಗೆ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಹಾಗೂ ರೋಹಿತ್ ಶರ್ಮಾ ವಾಂಖೆಡೆ ಸ್ಟೇಡಿಯಂನಲ್ಲಿ ಪ್ರೆಸ್​ ಕಾನ್ಫರೆನ್ಸ್ ರೂಮ್​ಗೆ 12 ಗಂಟೆಗೆ ಆಗಮಿಸಿದ್ದರು. ಆದರೆ ಇನ್ನೇನು ಟೀಮ್ ಇಂಡಿಯಾ ಘೋಷಣೆಯಾಗಲಿದೆ ಅನ್ನುವಷ್ಟರಲ್ಲಿ ತೆರೆಮರೆಯಲ್ಲಿ ಗಂಭೀರ ಚರ್ಚೆ ನಡೆದಿದೆ.

ಆಯ್ಕೆ ಸಮಿತಿಯೊಂದಿಗೆ ಚರ್ಚಿಸಿ ರೋಹಿತ್ ಶರ್ಮಾ ಭಾರತ ತಂಡವನ್ನು ಆಯ್ಕೆ ಮಾಡಿದ್ದರು. ಈ ಪಟ್ಟಿಯೊಂದಿಗೆ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಹಾಗೂ ರೋಹಿತ್ ಶರ್ಮಾ ವಾಂಖೆಡೆ ಸ್ಟೇಡಿಯಂನಲ್ಲಿ ಪ್ರೆಸ್​ ಕಾನ್ಫರೆನ್ಸ್ ರೂಮ್​ಗೆ 12 ಗಂಟೆಗೆ ಆಗಮಿಸಿದ್ದರು. ಆದರೆ ಇನ್ನೇನು ಟೀಮ್ ಇಂಡಿಯಾ ಘೋಷಣೆಯಾಗಲಿದೆ ಅನ್ನುವಷ್ಟರಲ್ಲಿ ತೆರೆಮರೆಯಲ್ಲಿ ಗಂಭೀರ ಚರ್ಚೆ ನಡೆದಿದೆ.

2 / 6
ಈ ಚರ್ಚೆಯ ನಡುವೆ ಗೌತಮ್ ಗಂಭೀರ್ ಟೀಮ್ ಇಂಡಿಯಾ ಉಪ ನಾಯಕನಾಗಿ ಹಾರ್ದಿಕ್ ಪಾಂಡ್ಯರನ್ನು ಆಯ್ಕೆ ಮಾಡುವಂತೆ ಪಟ್ಟು ಹಿಡಿರುವುದಾಗಿ ವರದಿಯಾಗಿದೆ. ಆದರೆ ಅಜಿತ್ ಅಗರ್ಕರ್ ಹಾಗೂ ರೋಹಿತ್ ಶರ್ಮಾ, ಶುಭ್​ಮನ್ ಗಿಲ್​ ಪರ ವಹಿಸಿದ್ದರು. ಅಲ್ಲದೆ ಅಗರ್ಕರ್ ತಮ್ಮ ನಿರ್ಧಾರವನ್ನು ಬದಲಿಸಲು ಸಿದ್ಧರಿರಲಿಲ್ಲ. ಹೀಗಾಗಿ ಗಿಲ್ ಅವರನ್ನೇ ವೈಸ್ ಕ್ಯಾಪ್ಟನ್ ಆಗಿ ಆಯ್ಕೆ ಮಾಡಲಾಗಿದೆ.

ಈ ಚರ್ಚೆಯ ನಡುವೆ ಗೌತಮ್ ಗಂಭೀರ್ ಟೀಮ್ ಇಂಡಿಯಾ ಉಪ ನಾಯಕನಾಗಿ ಹಾರ್ದಿಕ್ ಪಾಂಡ್ಯರನ್ನು ಆಯ್ಕೆ ಮಾಡುವಂತೆ ಪಟ್ಟು ಹಿಡಿರುವುದಾಗಿ ವರದಿಯಾಗಿದೆ. ಆದರೆ ಅಜಿತ್ ಅಗರ್ಕರ್ ಹಾಗೂ ರೋಹಿತ್ ಶರ್ಮಾ, ಶುಭ್​ಮನ್ ಗಿಲ್​ ಪರ ವಹಿಸಿದ್ದರು. ಅಲ್ಲದೆ ಅಗರ್ಕರ್ ತಮ್ಮ ನಿರ್ಧಾರವನ್ನು ಬದಲಿಸಲು ಸಿದ್ಧರಿರಲಿಲ್ಲ. ಹೀಗಾಗಿ ಗಿಲ್ ಅವರನ್ನೇ ವೈಸ್ ಕ್ಯಾಪ್ಟನ್ ಆಗಿ ಆಯ್ಕೆ ಮಾಡಲಾಗಿದೆ.

3 / 6
ಇನ್ನು ಟೀಮ್ ಇಂಡಿಯಾದ ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ ಅವರಿಗೆ ಸ್ಥಾನ ನೀಡಬೇಕೆಂದು ಗೌತಮ್ ಗಂಭೀರ್ ಆಗ್ರಹಿಸಿದ್ದರು. ಆದರೆ ರೋಹಿತ್ ಶರ್ಮಾ, ರಿಷಭ್ ಪಂತ್ ಪರ ನಿಂತಿದ್ದರು. ಪಂತ್​ಗಿಂತ ಸ್ಯಾಮ್ಸನ್ ಅವರ ಪ್ರದರ್ಶನ ಉತ್ತಮವಾಗಿದೆ ಎಂದು ಗಂಭೀರ್ ಮನವೊಲಿಸಲು ಯತ್ನಿಸಿದರೂ, ರೋಹಿತ್ ಶರ್ಮಾ ಹಾಗೂ ಅಜಿತ್ ಅಗರ್ಕರ್ ರಿಷಭ್ ಪಂತ್ ಅವರ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಇನ್ನು ಟೀಮ್ ಇಂಡಿಯಾದ ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ ಅವರಿಗೆ ಸ್ಥಾನ ನೀಡಬೇಕೆಂದು ಗೌತಮ್ ಗಂಭೀರ್ ಆಗ್ರಹಿಸಿದ್ದರು. ಆದರೆ ರೋಹಿತ್ ಶರ್ಮಾ, ರಿಷಭ್ ಪಂತ್ ಪರ ನಿಂತಿದ್ದರು. ಪಂತ್​ಗಿಂತ ಸ್ಯಾಮ್ಸನ್ ಅವರ ಪ್ರದರ್ಶನ ಉತ್ತಮವಾಗಿದೆ ಎಂದು ಗಂಭೀರ್ ಮನವೊಲಿಸಲು ಯತ್ನಿಸಿದರೂ, ರೋಹಿತ್ ಶರ್ಮಾ ಹಾಗೂ ಅಜಿತ್ ಅಗರ್ಕರ್ ರಿಷಭ್ ಪಂತ್ ಅವರ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

4 / 6
ಹೀಗೆ ಎರಡುವರೆ ಗಂಟೆಗಳ ಕಾಲ ನಡೆದ ಈ ಚರ್ಚೆಯಲ್ಲಿ ಕೊನೆಗೂ ರೋಹಿತ್ ಶರ್ಮಾ ತಮಗೆ ಬೇಕಾದಂತಹ ತಂಡವನ್ನು ಆಯ್ಕೆ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಹಿಟ್​ಮ್ಯಾನ್ ಬಯಕೆಯಂತೆ ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಬಲಿಷ್ಠ ತಂಡವನ್ನು ರೂಪಿಸಿದೆ. ಆದರೆ ದೀರ್ಘಕಾಲ ನಡೆದ ಈ ಚರ್ಚೆಯಿಂದಾಗಿ ಇದೀಗ ಕೋಚ್ ಗೌತಮ್ ಗಂಭೀರ್ ಹಾಗೂ ರೋಹಿತ್ ಶರ್ಮಾ ನಡುವೆ ಎಲ್ಲವೂ ಸರಿಯಿಲ್ಲವಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿರುವುದಂತು ಸುಳ್ಳಲ್ಲ.

ಹೀಗೆ ಎರಡುವರೆ ಗಂಟೆಗಳ ಕಾಲ ನಡೆದ ಈ ಚರ್ಚೆಯಲ್ಲಿ ಕೊನೆಗೂ ರೋಹಿತ್ ಶರ್ಮಾ ತಮಗೆ ಬೇಕಾದಂತಹ ತಂಡವನ್ನು ಆಯ್ಕೆ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಹಿಟ್​ಮ್ಯಾನ್ ಬಯಕೆಯಂತೆ ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಬಲಿಷ್ಠ ತಂಡವನ್ನು ರೂಪಿಸಿದೆ. ಆದರೆ ದೀರ್ಘಕಾಲ ನಡೆದ ಈ ಚರ್ಚೆಯಿಂದಾಗಿ ಇದೀಗ ಕೋಚ್ ಗೌತಮ್ ಗಂಭೀರ್ ಹಾಗೂ ರೋಹಿತ್ ಶರ್ಮಾ ನಡುವೆ ಎಲ್ಲವೂ ಸರಿಯಿಲ್ಲವಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿರುವುದಂತು ಸುಳ್ಳಲ್ಲ.

5 / 6
ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್​ ಪಂತ್, ರವೀಂದ್ರ ಜಡೇಜಾ.

ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್​ ಪಂತ್, ರವೀಂದ್ರ ಜಡೇಜಾ.

6 / 6
Follow us
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ನಿ ಅವಘಡ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ನಿ ಅವಘಡ
Video: ತ್ರಿವೇಣಿ ಸಂಗಮದಲ್ಲಿ ತಾನು ಮುಳುಗೇಳುವ ಬದಲು ಮೊಬೈಲ್ ಮುಳುಗಿಸಿದ ಯು
Video: ತ್ರಿವೇಣಿ ಸಂಗಮದಲ್ಲಿ ತಾನು ಮುಳುಗೇಳುವ ಬದಲು ಮೊಬೈಲ್ ಮುಳುಗಿಸಿದ ಯು
ಹಾವೇರಿ: ದನದ ಕೊಟ್ಟಿಗೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ವಸತಿ ನಿಲಯ
ಹಾವೇರಿ: ದನದ ಕೊಟ್ಟಿಗೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ವಸತಿ ನಿಲಯ
ಮದುವೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ಡಾಲಿ ಧನಂಜಯ
ಮದುವೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ಡಾಲಿ ಧನಂಜಯ
Video: ಮದುವೆ ಮನೆಗೆ ಕುದುರೆ ಮೇಲೆ ಬಂದ ವರ, ಅಲ್ಲೇ ಕುಸಿದು ಸಾವು
Video: ಮದುವೆ ಮನೆಗೆ ಕುದುರೆ ಮೇಲೆ ಬಂದ ವರ, ಅಲ್ಲೇ ಕುಸಿದು ಸಾವು
ಬಿಮ್ಸ್​​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಮೊಬೈಲ್ ಟಾರ್ಚ್​ನಲ್ಲಿ ಚಿಕಿತ್ಸೆ
ಬಿಮ್ಸ್​​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಮೊಬೈಲ್ ಟಾರ್ಚ್​ನಲ್ಲಿ ಚಿಕಿತ್ಸೆ
ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ?
ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ?
ಧನಂಜಯ ಕಟ್ಟಿದ ತಾಳಿ ಕಣ್ಣಿಗೆ ಒತ್ತಿಕೊಂಡ ಧನ್ಯತಾ; ಇದು ಭಾವುಕ ಕ್ಷಣ
ಧನಂಜಯ ಕಟ್ಟಿದ ತಾಳಿ ಕಣ್ಣಿಗೆ ಒತ್ತಿಕೊಂಡ ಧನ್ಯತಾ; ಇದು ಭಾವುಕ ಕ್ಷಣ
ಮೆರಿಕದಿಂದ ಅಮೃತಸರಕ್ಕೆ ಬಂದಿಳಿದ 116 ಅಕ್ರಮ ವಲಸಿಗರನ್ನು ಹೊತ್ತ ವಿಮಾನ
ಮೆರಿಕದಿಂದ ಅಮೃತಸರಕ್ಕೆ ಬಂದಿಳಿದ 116 ಅಕ್ರಮ ವಲಸಿಗರನ್ನು ಹೊತ್ತ ವಿಮಾನ