ಸಾರ್ವಕಾಲಿಕ ಭಾರತೀಯ ಏಕದಿನ ಇಲೆವೆನ್ ಹೆಸರಿಸಿದ ಗೌತಮ್ ಗಂಭೀರ್: ರೋಹಿತ್ ಶರ್ಮಾಗೆ ಇಲ್ಲ ಸ್ಥಾನ
Gautam Gambhir: ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಸದ್ಯ ವಿಶ್ರಾಂತಿಯಲ್ಲಿದ್ದಾರೆ. ಸೆಪ್ಟೆಂಬರ್ 19ರವರೆಗೆ ಟೀಮ್ ಇಂಡಿಯಾಗೆ ಯಾವುದೇ ಪಂದ್ಯವಿಲ್ಲ. ಹೀಗಾಗಿ ಭಾರತೀಯ ಆಟಗಾರರು ಸೇರಿದಂತೆ ಕೋಚಿಂಗ್ ಸಿಬ್ಬಂದಿಗಳು ರಜಾವಧಿಯಲ್ಲಿದ್ದಾರೆ. ಇನ್ನು ಸೆಪ್ಟೆಂಬರ್ 19 ರಿಂದ ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಟೆಸ್ಟ್ ಸರಣಿ ಶುರುವಾಗಲಿದೆ. ಅದಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ಅಭ್ಯಾಸ ಶಿಬಿರದಲ್ಲಿ ಜೊತೆಗೂಡಲಿದ್ದಾರೆ.
Updated on:Sep 02, 2024 | 12:20 PM

ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಸಾರ್ವಕಾಲಿಕ ಭಾರತ ಏಕದಿನ ಇಲೆವೆನ್ ಅವರನ್ನು ಹೆಸರಿಸಿದ್ದಾರೆ. ಸ್ಪೋರ್ಟ್ಸ್ ವೆಬ್ಸೈಟ್ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಗಂಭೀರ್ ಆಲ್ಟೈಮ್ ಟೀಮ್ ಇಂಡಿಯಾ ಇಲೆವೆನ್ ಆಯ್ಕೆ ಮಾಡಿದ್ದಾರೆ. ಆದರೆ ಈ ಬಳಗದಲ್ಲಿ ಸೌರವ್ ಗಂಗೂಲಿ, ರೋಹಿತ್ ಶರ್ಮಾ ಹಾಗೂ ಜಸ್ಪ್ರೀತ್ ಬುಮ್ರಾಗೆ ಸ್ಥಾನ ನೀಡಲಾಗಿಲ್ಲ ಎಂಬುದು ವಿಶೇಷ.

ಇನ್ನು ಗೌತಮ್ ಗಂಭೀರ್ ಅವರು ಸಾರ್ವಕಾಲಿಕ ಏಕದಿನ ಇಲೆವೆನ್ನಲ್ಲಿ ವೀರೇಂದ್ರ ಸೆಹ್ವಾಗ್ ಅವರೊಂದಿಗೆ ಆರಂಭಿಕರಾಗಿ ತಮ್ಮನ್ನೇ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗೆಯೇ ಮೂರನೇ ಕ್ರಮಾಂಕಕ್ಕೆ ರಾಹುಲ್ ದ್ರಾವಿಡ್ ಅವರನ್ನು ಹೆಸರಿಸಿದರೆ, ನಾಲ್ಕನೇ ಕ್ರಮಾಂಕಕ್ಕೆ ಸಚಿನ್ ತೆಂಡೂಲ್ಕರ್ ಅವರನ್ನು ಆಯ್ಕೆ ಮಾಡಿದ್ದಾರೆ.

ಆರನೇ ಕ್ರಮಾಂಕಕ್ಕೆ ವಿರಾಟ್ ಕೊಹ್ಲಿಯನ್ನು ಆರಿಸಿಕೊಂಡರೆ, ಆಲ್ರೌಂಡರ್ ಆಗಿ ಯುವರಾಜ್ ಸಿಂಗ್ಗೆ ಸ್ಥಾನ ನೀಡಿದ್ದಾರೆ. ಇನ್ನು ವಿಕೆಟ್ ಕೀಪರ್ ಬ್ಯಾಟರ್ ಆಗಿ ಮಹೇಂದ್ರ ಸಿಂಗ್ ಧೋನಿ ಅವರನ್ನು ಆಯ್ಕೆ ಮಾಡಿಕೊಂಡಿರುವುದು ವಿಶೇಷ.

ಗಂಭೀರ್ ಇಲೆವೆನ್ನಲ್ಲಿ ಸ್ಪಿನ್ನರ್ಗಳಾಗಿ ಅನಿಲ್ ಕುಂಬ್ಳೆ ಹಾಗೂ ರವಿಚಂದ್ರನ್ ಅಶ್ವಿನ್ ಆಯ್ಕೆಯಾಗಿದ್ದರೆ, ವೇಗಿಗಳಾಗಿ ಇರ್ಫಾನ್ ಪಠಾಣ್ ಮತ್ತು ಝಹೀರ್ ಖಾನ್ ಅವರನ್ನು ಹೆಸರಿಸಿದ್ದಾರೆ. ಅದರಂತೆ ಗೌತಮ್ ಗಂಭೀರ್ ಅವರ ಸಾರ್ವಕಾಲಿಕ ಏಕದಿನ ಇಲೆವೆನ್ನಲ್ಲಿ ಸ್ಥಾನ ಪಡೆದಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಗೌತಮ್ ಗಂಭೀರ್ ಅವರ ಆಲ್ ಟೈಮ್ ಇಂಡಿಯಾ ಒಡಿಐ ಇಲೆವೆನ್: ವೀರೇಂದ್ರ ಸೆಹ್ವಾಗ್, ಗೌತಮ್ ಗಂಭೀರ್, ರಾಹುಲ್ ದ್ರಾವಿಡ್, ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಯುವರಾಜ್ ಸಿಂಗ್, ಮಹೇಂದ್ರ ಸಿಂಗ್ ಧೋನಿ, ಅನಿಲ್ ಕುಂಬ್ಳೆ, ರವಿಚಂದ್ರನ್ ಅಶ್ವಿನ್, ಇರ್ಫಾನ್ ಪಠಾಣ್, ಝಹೀರ್ ಖಾನ್.
Published On - 12:19 pm, Mon, 2 September 24

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



