AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುಭ್​ಮನ್ ಗಿಲ್ ನಾಯಕತ್ವ ಸೋಲಿನೊಂದಿಗೆ ಆರಂಭವಾಗುತ್ತದೆ; ಭವಿಷ್ಯ ನುಡಿದ ಮಾಜಿ ನಾಯಕ

Shubman Gill Captaincy: ಭಾರತೀಯ ಕ್ರಿಕೆಟ್‌ನಲ್ಲಿ ಶುಭ್​ಮನ್ ಗಿಲ್ ಯುಗ ಆರಂಭವಾಗಿದೆ, ಆಸ್ಟ್ರೇಲಿಯಾ ಪ್ರವಾಸಕ್ಕೆ ಏಕದಿನ ತಂಡದ ನಾಯಕರಾಗಿ ನೇಮಕಗೊಂಡಿದ್ದಾರೆ. ಅಕ್ಟೋಬರ್ 19 ರಿಂದ ಆರಂಭವಾಗುವ ಈ ಪ್ರವಾಸದಲ್ಲಿ ಗಿಲ್ ಭಾರತವನ್ನು ಗೆಲುವಿನತ್ತ ಕೊಂಡೊಯ್ಯುವರೇ ಎಂಬುದು ಪ್ರಶ್ನೆ. ಆಸ್ಟ್ರೇಲಿಯಾದ ಮಾಜಿ ನಾಯಕ ಆರನ್ ಫಿಂಚ್, ಗಿಲ್‌ಗೆ ಸೋಲಿನ ಆರಂಭ ಸಿಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಗಿಲ್ ಸವಾಲುಗಳನ್ನು ಹೇಗೆ ಎದುರಿಸುತ್ತಾರೆ ಎಂಬ ಕುತೂಹಲ ಹೆಚ್ಚಿದೆ.

ಪೃಥ್ವಿಶಂಕರ
|

Updated on: Oct 06, 2025 | 9:29 PM

Share
ಭಾರತೀಯ ಕ್ರಿಕೆಟ್‌ನಲ್ಲಿ ಶುಭ್​ಮನ್ ಗಿಲ್ ಯುಗ ಅಧಿಕೃತವಾಗಿ ಆರಂಭವಾಗಿದೆ. ಇಂಗ್ಲೆಂಡ್‌ ಪ್ರವಾಸಕ್ಕೂ ಮುನ್ನ ಟೆಸ್ಟ್ ತಂಡದ ಜವಾಬ್ದಾರಿ ವಹಿಸಿಕೊಂಡಿದ್ದ ಗಿಲ್, ಇದೀಗ ಆಸ್ಟ್ರೇಲಿಯಾ ಪ್ರವಾಸಕ್ಕೆ ಏಕದಿನ ತಂಡದ ನಾಯಕರನ್ನಾಗಿ ನೇಮಿಸಲಾಗಿದೆ. ಹಾಗೆಯೇ ಗಿಲ್​ಗೆ ಟಿ20 ತಂಡದ ಉಪನಾಯಕರನ್ನಾಗಿ ನೇಮಿಸಲಾಗಿದೆ.

ಭಾರತೀಯ ಕ್ರಿಕೆಟ್‌ನಲ್ಲಿ ಶುಭ್​ಮನ್ ಗಿಲ್ ಯುಗ ಅಧಿಕೃತವಾಗಿ ಆರಂಭವಾಗಿದೆ. ಇಂಗ್ಲೆಂಡ್‌ ಪ್ರವಾಸಕ್ಕೂ ಮುನ್ನ ಟೆಸ್ಟ್ ತಂಡದ ಜವಾಬ್ದಾರಿ ವಹಿಸಿಕೊಂಡಿದ್ದ ಗಿಲ್, ಇದೀಗ ಆಸ್ಟ್ರೇಲಿಯಾ ಪ್ರವಾಸಕ್ಕೆ ಏಕದಿನ ತಂಡದ ನಾಯಕರನ್ನಾಗಿ ನೇಮಿಸಲಾಗಿದೆ. ಹಾಗೆಯೇ ಗಿಲ್​ಗೆ ಟಿ20 ತಂಡದ ಉಪನಾಯಕರನ್ನಾಗಿ ನೇಮಿಸಲಾಗಿದೆ.

1 / 7
ಆದರೆ ಆಸ್ಟ್ರೇಲಿಯಾ ಪ್ರವಾಸದಲ್ಲಿ ಗಿಲ್ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗುತ್ತದೆಯೇ? ಎಂಬುದು ಕೋಟ್ಯಾಂತರ ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ. ಇದೆಲ್ಲದರ ನಡುವೆ ಆಸ್ಟ್ರೇಲಿಯಾ ಪ್ರವಾಸಕ್ಕೂ ಮುಂಚೆಯೇ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಗಿಲ್ ನಾಯಕತ್ವದ ಬಗ್ಗೆ ಭವಿಷ್ಯ ನುಡಿದಿದ್ದಾರೆ.

ಆದರೆ ಆಸ್ಟ್ರೇಲಿಯಾ ಪ್ರವಾಸದಲ್ಲಿ ಗಿಲ್ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗುತ್ತದೆಯೇ? ಎಂಬುದು ಕೋಟ್ಯಾಂತರ ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ. ಇದೆಲ್ಲದರ ನಡುವೆ ಆಸ್ಟ್ರೇಲಿಯಾ ಪ್ರವಾಸಕ್ಕೂ ಮುಂಚೆಯೇ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಗಿಲ್ ನಾಯಕತ್ವದ ಬಗ್ಗೆ ಭವಿಷ್ಯ ನುಡಿದಿದ್ದಾರೆ.

2 / 7
ಅಕ್ಟೋಬರ್ 19 ರಂದು ಭಾರತ ತಂಡದ ಆಸ್ಟ್ರೇಲಿಯಾ ಪ್ರವಾಸ ಆರಂಭವಾಗಲಿದೆ. ಈ ಪ್ರವಾಸವು ಮೂರು ಪಂದ್ಯಗಳ ಏಕದಿನ ಸರಣಿಯೊಂದಿಗೆ ಆರಂಭವಾಗಲಿದ್ದು, ನಂತರ ಟಿ20 ಸರಣಿ ನಡೆಯಲಿದೆ. ಈ ಸರಣಿಯೊಂದಿಗೆ ಗಿಲ್ ಅವರ ಏಕದಿನ ನಾಯಕನ ಅಧಿಕಾರಾವಧಿಯೂ ಪ್ರಾರಂಭವಾಗುತ್ತದೆ. ಆದ್ದರಿಂದ, ರೋಹಿತ್ ಮತ್ತು ವಿರಾಟ್ ಅವರ ಪ್ರದರ್ಶನದ ಜೊತೆಗೆ, ಗಿಲ್ ನಾಯಕತ್ವದಲ್ಲಿ ಭಾರತೀಯ ತಂಡದ ಪ್ರದರ್ಶನವನ್ನು ಸೂಕ್ಷ್ಮವಾಗಿ ಗಮನಿಸಲಾಗುವುದು.

ಅಕ್ಟೋಬರ್ 19 ರಂದು ಭಾರತ ತಂಡದ ಆಸ್ಟ್ರೇಲಿಯಾ ಪ್ರವಾಸ ಆರಂಭವಾಗಲಿದೆ. ಈ ಪ್ರವಾಸವು ಮೂರು ಪಂದ್ಯಗಳ ಏಕದಿನ ಸರಣಿಯೊಂದಿಗೆ ಆರಂಭವಾಗಲಿದ್ದು, ನಂತರ ಟಿ20 ಸರಣಿ ನಡೆಯಲಿದೆ. ಈ ಸರಣಿಯೊಂದಿಗೆ ಗಿಲ್ ಅವರ ಏಕದಿನ ನಾಯಕನ ಅಧಿಕಾರಾವಧಿಯೂ ಪ್ರಾರಂಭವಾಗುತ್ತದೆ. ಆದ್ದರಿಂದ, ರೋಹಿತ್ ಮತ್ತು ವಿರಾಟ್ ಅವರ ಪ್ರದರ್ಶನದ ಜೊತೆಗೆ, ಗಿಲ್ ನಾಯಕತ್ವದಲ್ಲಿ ಭಾರತೀಯ ತಂಡದ ಪ್ರದರ್ಶನವನ್ನು ಸೂಕ್ಷ್ಮವಾಗಿ ಗಮನಿಸಲಾಗುವುದು.

3 / 7
ಆದಾಗ್ಯೂ, ಸರಣಿ ಆರಂಭವಾಗುವ ಮೊದಲೇ ಆಸ್ಟ್ರೇಲಿಯಾದ ಮಾಜಿ ಆಟಗಾರರು ಈಗಾಗಲೇ ತಮ್ಮ ಹೇಳಿಕೆಗಳಿಂದ ಟೀಂ ಇಂಡಿಯಾವನ್ನು ಲೇವಡಿ ಮಾಡಲು ಆರಂಭಿಸಿದ್ದಾರೆ. ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮ್ಮಿನ್ಸ್ ಒಳಗೊಂಡ ಜಾಹೀರಾತು ಈಗಾಗಲೇ ಪ್ರಸಾರವಾಗುತ್ತಿದೆ, ಅದರಲ್ಲಿ ಅವರು ರೋಹಿತ್ ಮತ್ತು ವಿರಾಟ್ ಅವರನ್ನು ಟೀಕಿಸಿದ್ದಾರೆ.

ಆದಾಗ್ಯೂ, ಸರಣಿ ಆರಂಭವಾಗುವ ಮೊದಲೇ ಆಸ್ಟ್ರೇಲಿಯಾದ ಮಾಜಿ ಆಟಗಾರರು ಈಗಾಗಲೇ ತಮ್ಮ ಹೇಳಿಕೆಗಳಿಂದ ಟೀಂ ಇಂಡಿಯಾವನ್ನು ಲೇವಡಿ ಮಾಡಲು ಆರಂಭಿಸಿದ್ದಾರೆ. ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮ್ಮಿನ್ಸ್ ಒಳಗೊಂಡ ಜಾಹೀರಾತು ಈಗಾಗಲೇ ಪ್ರಸಾರವಾಗುತ್ತಿದೆ, ಅದರಲ್ಲಿ ಅವರು ರೋಹಿತ್ ಮತ್ತು ವಿರಾಟ್ ಅವರನ್ನು ಟೀಕಿಸಿದ್ದಾರೆ.

4 / 7
ಇದರ ಜೊತೆಗೆ ಆಸ್ಟ್ರೇಲಿಯಾದ ಮಾಜಿ ನಾಯಕ ಆರನ್ ಫಿಂಚ್, ನಾಯಕನಾಗಿ ಗಿಲ್‌ಗೆ ಸೋಲಿನ ಆರಂಭ ಸಿಗಲಿದೆ ಎಂಬ ಭವಿಷ್ಯ ನುಡಿದಿದ್ದಾರೆ. ಐಸಿಸಿಗೆ ನೀಡಿದ ಸಂದರ್ಶನದಲ್ಲಿ ಫಿಂಚ್, ‘ಇದು ಉತ್ತಮ ಸರಣಿಯಾಗಲಿದೆ. ಭಾರತದ ವಿರುದ್ಧದ ಸರಣಿಯಿಂದರೇ ಅದಕ್ಕಿರುವ ಮಹತ್ವವೇ ಬೇರೆ. ಹಾಗೆಯೇ ಈ ಸರಣಿಯಲ್ಲಿ ವಿರಾಟ್ ಆಡುತ್ತಿದ್ದಾರೆ, ಅವರು ಯಾವಾಗಲೂ ಆಸ್ಟ್ರೇಲಿಯಾ ವಿರುದ್ಧ ಉತ್ತಮವಾಗಿ ಆಡುತ್ತಾರೆ.

ಇದರ ಜೊತೆಗೆ ಆಸ್ಟ್ರೇಲಿಯಾದ ಮಾಜಿ ನಾಯಕ ಆರನ್ ಫಿಂಚ್, ನಾಯಕನಾಗಿ ಗಿಲ್‌ಗೆ ಸೋಲಿನ ಆರಂಭ ಸಿಗಲಿದೆ ಎಂಬ ಭವಿಷ್ಯ ನುಡಿದಿದ್ದಾರೆ. ಐಸಿಸಿಗೆ ನೀಡಿದ ಸಂದರ್ಶನದಲ್ಲಿ ಫಿಂಚ್, ‘ಇದು ಉತ್ತಮ ಸರಣಿಯಾಗಲಿದೆ. ಭಾರತದ ವಿರುದ್ಧದ ಸರಣಿಯಿಂದರೇ ಅದಕ್ಕಿರುವ ಮಹತ್ವವೇ ಬೇರೆ. ಹಾಗೆಯೇ ಈ ಸರಣಿಯಲ್ಲಿ ವಿರಾಟ್ ಆಡುತ್ತಿದ್ದಾರೆ, ಅವರು ಯಾವಾಗಲೂ ಆಸ್ಟ್ರೇಲಿಯಾ ವಿರುದ್ಧ ಉತ್ತಮವಾಗಿ ಆಡುತ್ತಾರೆ.

5 / 7
ನೀವು ಕಾಗದದ ಮೇಲೆ ನೋಡಿದಾಗಲೆಲ್ಲಾ ಇದು ಯಾವಾಗಲೂ ಉತ್ತಮ ಸ್ಪರ್ಧೆಯಂತೆ ಕಾಣುತ್ತದೆ. ಆದರೆ ಆಸ್ಟ್ರೇಲಿಯಾ ಸರಣಿಯನ್ನು 2-1 ಅಂತರದಿಂದ ಗೆಲ್ಲುತ್ತದೆ ಎಂದು ನಾನು ಭಾವಿಸುತ್ತೇನೆ. ಆದಾಗ್ಯೂ, ಇದು ಸುಲಭವಲ್ಲ ಏಕೆಂದರೆ ಭಾರತ ಬಲಿಷ್ಠ ತಂಡವಾಗಿದೆ. ಹೀಗಾಗಿ ಇದು ಉತ್ತಮ ಸರಣಿಯಾಗಲಿದೆ ಎಂದಿದ್ದಾರೆ.

ನೀವು ಕಾಗದದ ಮೇಲೆ ನೋಡಿದಾಗಲೆಲ್ಲಾ ಇದು ಯಾವಾಗಲೂ ಉತ್ತಮ ಸ್ಪರ್ಧೆಯಂತೆ ಕಾಣುತ್ತದೆ. ಆದರೆ ಆಸ್ಟ್ರೇಲಿಯಾ ಸರಣಿಯನ್ನು 2-1 ಅಂತರದಿಂದ ಗೆಲ್ಲುತ್ತದೆ ಎಂದು ನಾನು ಭಾವಿಸುತ್ತೇನೆ. ಆದಾಗ್ಯೂ, ಇದು ಸುಲಭವಲ್ಲ ಏಕೆಂದರೆ ಭಾರತ ಬಲಿಷ್ಠ ತಂಡವಾಗಿದೆ. ಹೀಗಾಗಿ ಇದು ಉತ್ತಮ ಸರಣಿಯಾಗಲಿದೆ ಎಂದಿದ್ದಾರೆ.

6 / 7
ಅಕ್ಟೋಬರ್ 19 ರಂದು ಪರ್ತ್‌ನಲ್ಲಿ ಏಕದಿನ ಸರಣಿ ಆರಂಭವಾಗಲಿದ್ದು, ಮುಂದಿನ ಪಂದ್ಯ ಅಕ್ಟೋಬರ್ 23 ರಂದು ಅಡಿಲೇಡ್‌ನಲ್ಲಿ ನಡೆಯಲಿದೆ. ಸರಣಿಯ ಅಂತಿಮ ಪಂದ್ಯ ಅಕ್ಟೋಬರ್ 25 ರಂದು ಸಿಡ್ನಿಯಲ್ಲಿ ನಡೆಯಲಿದೆ. 2019 ರ ನಂತರ ಭಾರತ ತಂಡ ಆಸ್ಟ್ರೇಲಿಯಾ ನೆಲದಲ್ಲಿ ಏಕದಿನ ಸರಣಿಯನ್ನು ಆಡುತ್ತಿರುವುದು ಇದೇ ಮೊದಲು. ಆ ಸಮಯದಲ್ಲಿ ವಿರಾಟ್ ಕೊಹ್ಲಿ ಟೀಂ ಇಂಡಿಯಾದ ನಾಯಕರಾಗಿದ್ದರು. ಶುಭ್​ಮನ್ ಗಿಲ್ ಆ ಸರಣಿಯಲ್ಲಿ ಕೇವಲ ಒಂದು ಪಂದ್ಯವನ್ನು ಮಾತ್ರ ಆಡಿದ್ದರು.

ಅಕ್ಟೋಬರ್ 19 ರಂದು ಪರ್ತ್‌ನಲ್ಲಿ ಏಕದಿನ ಸರಣಿ ಆರಂಭವಾಗಲಿದ್ದು, ಮುಂದಿನ ಪಂದ್ಯ ಅಕ್ಟೋಬರ್ 23 ರಂದು ಅಡಿಲೇಡ್‌ನಲ್ಲಿ ನಡೆಯಲಿದೆ. ಸರಣಿಯ ಅಂತಿಮ ಪಂದ್ಯ ಅಕ್ಟೋಬರ್ 25 ರಂದು ಸಿಡ್ನಿಯಲ್ಲಿ ನಡೆಯಲಿದೆ. 2019 ರ ನಂತರ ಭಾರತ ತಂಡ ಆಸ್ಟ್ರೇಲಿಯಾ ನೆಲದಲ್ಲಿ ಏಕದಿನ ಸರಣಿಯನ್ನು ಆಡುತ್ತಿರುವುದು ಇದೇ ಮೊದಲು. ಆ ಸಮಯದಲ್ಲಿ ವಿರಾಟ್ ಕೊಹ್ಲಿ ಟೀಂ ಇಂಡಿಯಾದ ನಾಯಕರಾಗಿದ್ದರು. ಶುಭ್​ಮನ್ ಗಿಲ್ ಆ ಸರಣಿಯಲ್ಲಿ ಕೇವಲ ಒಂದು ಪಂದ್ಯವನ್ನು ಮಾತ್ರ ಆಡಿದ್ದರು.

7 / 7
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!