Sign In

By signing in or creating an account, you agree with Associated Broadcasting Company's Terms & Conditions and Privacy Policy.

Glenn Maxwell Vini Raman Wedding: ಮ್ಯಾಕ್ಸ್​ವೆಲ್ ವೆಡ್ಡಿಂಗ್ ಪಾರ್ಟಿಯಲ್ಲಿ ಆರ್​ಸಿಬಿ ಪ್ಲೇಯರ್ಸ್​ ಏನೆಲ್ಲ ಮಾಡಿದ್ರು?: ಫೋಟೋ ನೋಡಿ

IPL 2022: ಮ್ಯಾಕ್ಸ್ ವೆಲ್ ಅವರು ಭಾರತೀಯ ಮೂಲದ ವಿನಿ ರಾಮನ್ ಜೊತೆ ಮದುವೆಯಾಗಿ ಏಪ್ರಿಲ್ 27ಕ್ಕೆ ಒಂದು ತಿಂಗಳಾಗಿದೆ. ಈ ಪ್ರಯುಕ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬಯೋಬಬಲ್ ಅಡಿಯಲ್ಲಿ ಆಟಗಾರರಿಗೆ ಪಾರ್ಟಿ ಹಮ್ಮಿಕೊಂಡಿತ್ತು.

Vinay Bhat
|

Updated on:Apr 29, 2022 | 11:51 AM

ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಗ್ಲೆನ್ ಮ್ಯಾಕ್ಸ್ ವೆಲ್ ತಮಿಳುನಾಡಿನ ವಿನಿ ರಾಮನ್ ಅವರನ್ನು ಕಳೆದ ತಿಂಗಳು ಮಾರ್ಚ್ 27 ರಂದು ತಮಿಳು ಸಂಪ್ರದಾಯದಂತೆ ಮದುವೆಯಾಗಿದ್ದರು. ಇದಕ್ಕೂ ಮುನ್ನ ಮಾರ್ಚ್ 18 ರಂದು ಆಸ್ಟ್ರೇಲಿಯಾದಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ವಿವಾಹವಾಗಿದ್ದರು.

1 / 9
ಮ್ಯಾಕ್ಸ್ ವೆಲ್ ಅವರು ಭಾರತೀಯ ಮೂಲದ ವಿನಿ ರಾಮನ್ ಜೊತೆ ಮದುವೆಯಾಗಿ ಏಪ್ರಿಲ್ 27ಕ್ಕೆ ಒಂದು ತಿಂಗಳಾಗಿದೆ. ಈ ಪ್ರಯುಕ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬಯೋಬಬಲ್ ಅಡಿಯಲ್ಲಿ ಆಟಗಾರರಿಗೆ ಪಾರ್ಟಿ ಹಮ್ಮಿಕೊಂಡಿತ್ತು.

2 / 9
ಈ ವೇಳೆ ವಿರಾಟ್ ಕೊಹ್ಲಿ ಅವರು, ಅಲ್ಲು ಅರ್ಜುನ್ ಅಭಿನಯದ 'ಪುಷ್ಪ' ಸಿನಿಮಾದ ಹಾಡಿಗೆ ನೃತ್ಯ ಮಾಡಿದ್ದಾರೆ. ಕಪ್ಪು ಕುರ್ತಾ ಧರಿಸಿದ್ದ ವಿರಾಟ್, ಸಹ ಆಟಗಾರರೊಂದಿಗೆ 'ಹೂ ಅಂತಿಯಾ ಮಾಮ, ಊ ಹೂ ಅಂತಿಯಾ?' ಗೀತೆಗೆ ನೃತ್ಯ ಮಾಡಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

3 / 9
ಕಾರ್ಯಕ್ರಮದಲ್ಲಿ ಆರ್ಸಿಬಿ ಎಲ್ಲಾ ಆಟಗಾರರು ಭಾಗವಹಿಸಿದ್ದು, ವಿವಿಧ ಬಣ್ಣದ ಕುರ್ತಾದಲ್ಲಿ ಮಿಂಚುತ್ತಿದ್ದರು. ವಿರಾಟ್ ಕೊಹ್ಲಿ ಕಪ್ಪು ಬಣ್ಣದ ಕುರ್ತಾದಲ್ಲಿ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು.

4 / 9
ಮುಂಬೈ ಹೋಟೆಲ್ ವೊಂದರಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಕೊಹ್ಲಿ ಸೇರಿದಂತೆ ಬಹುತೇಕ ಪ್ಲೇಯರ್ಸ್ ಹಾಡಿಗೆ ಹೆಜ್ಜೆ ಹಾಕಿದ್ದಾರೆ.

5 / 9
ಆರ್ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಪಿಂಕ್ ಬಣ್ಣದ ಕುರ್ತಾದ ಜೊತೆಗೆ ಹೆಂಡತಿ ಮತ್ತು ಮಗುವಿನೊಂದಿಗೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

6 / 9
ಕೊಹ್ಲಿ ಪತ್ನಿ ಹಾಗೂ ನಟಿ ಅನುಷ್ಕಾ ಶರ್ಮಾ ಅವರು, ಪಾರ್ಟಿಯಲ್ಲಿ ಹಾಜರಾದ ಚಿತ್ರವನ್ನು ಇನ್ ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.

7 / 9
ವಿನಿ ರಾಮನ್ ತಮಿಳುನಾಡು ಮೂಲದವರಾದವರೂ ಹುಟ್ಟಿ ಬೆಳೆದದ್ದೆಲ್ಲಾ ಆಸ್ಟ್ರೇಲಿಯಾದಲ್ಲೇ. ಮೆಡಿಕಲ್ ಸೈನ್ಸ್ ಓದಿರುವ ಇವರು ಔಷಧ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ.

8 / 9
ಗ್ಲೆನ್ ಮತ್ತು ವಿನಿ ರಾಮನ್ ಮೊದಲು ಪರಿಚಯ ಆಗಿದ್ದು 2013ರಲ್ಲಿ. ಮೆಲ್ಬೋರ್ನ್ ಸ್ಟಾರ್ಸ್ ಕಾರ್ಯಕ್ರಮದಲ್ಲಿ ಇಬ್ಬರ ಪರಿಚಯ ಆಗಿದೆ. 2017 ರಿಂದ ಇಬ್ಬರೂ ಡೇಟಿಂಗ್ ಮಾಡುತ್ತಿದ್ದರು.

9 / 9

Published On - 11:31 am, Fri, 29 April 22

Follow us
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್