AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾ ತಂಡದಿಂದ ಸ್ಟಾರ್ ವೇಗಿ ಔಟ್: ಸ್ಫೋಟಕ ದಾಂಡಿಗ ಎಂಟ್ರಿ..!

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟಿ20 ಸರಣಿಯ ಮೊದಲೆರಡು ಮ್ಯಾಚ್​​​ಗಳು ಮುಗಿದಿವೆ. ಕ್ಯಾನ್​​ಬೆರಾದಲ್ಲಿ ನಡೆದ ಮೊದಲ ಪಂದ್ಯವು ಮಳೆಗೆ ಆಹುತಿಯಾದರೆ, ಮೆಲ್ಬೋರ್ನ್​​ನಲ್ಲಿ ನಡೆದ ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 4 ವಿಕೆಟ್​​ಗಳ ಜಯ ಸಾಧಿಸಿದೆ. ಇದೀಗ ಮೂರನೇ ಪಂದ್ಯದ ಮೂಲಕ ಕಂಬ್ಯಾಕ್ ಮಾಡುವ ವಿಶ್ವಾಸದಲ್ಲಿದೆ ಟೀಮ್ ಇಂಡಿಯಾ.

ಝಾಹಿರ್ ಯೂಸುಫ್
|

Updated on: Nov 02, 2025 | 7:54 AM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೂರನೇ ಟಿ20 ಪಂದ್ಯ ಇಂದು (ನ.2) ನಡೆಯಲಿದೆ. ಹೋಬಾರ್ಟ್​ನ ಬೆಲ್ಲೆರಿವ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ತಂಡವು ತನ್ನ ಪ್ಲೇಯಿಂಗ್ ಇಲೆವೆನ್​​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೂರನೇ ಟಿ20 ಪಂದ್ಯ ಇಂದು (ನ.2) ನಡೆಯಲಿದೆ. ಹೋಬಾರ್ಟ್​ನ ಬೆಲ್ಲೆರಿವ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ತಂಡವು ತನ್ನ ಪ್ಲೇಯಿಂಗ್ ಇಲೆವೆನ್​​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳಲಿದೆ.

1 / 5
ಏಕೆಂದರೆ ಕಳೆದ ಎರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಪರ ಕಣಕ್ಕಿಳಿದಿದ್ದ ಜೋಶ್ ಹೇಝಲ್​​ವುಡ್ ಉಳಿದ ಮೂರು ಮ್ಯಾಚ್​​​ಗಳಿಂದ ಹೊರಗುಳಿದಿದ್ದಾರೆ. ಮುಂಬರುವ ಆ್ಯಶಸ್ ಟೆಸ್ಟ್ ಸರಣಿಗಾಗಿ ಹೇಝಲ್​​ವುಡ್​​ಗೆ ವಿಶ್ರಾಂತಿ ನೀಡಲಾಗಿದ್ದು, ಹೀಗಾಗಿ ಇಂದಿನ ಪಂದ್ಯದಲ್ಲಿ ಬಲಗೈ ವೇಗಿ ಕಣಕ್ಕಿಳಿಯುವುದಿಲ್ಲ.

ಏಕೆಂದರೆ ಕಳೆದ ಎರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಪರ ಕಣಕ್ಕಿಳಿದಿದ್ದ ಜೋಶ್ ಹೇಝಲ್​​ವುಡ್ ಉಳಿದ ಮೂರು ಮ್ಯಾಚ್​​​ಗಳಿಂದ ಹೊರಗುಳಿದಿದ್ದಾರೆ. ಮುಂಬರುವ ಆ್ಯಶಸ್ ಟೆಸ್ಟ್ ಸರಣಿಗಾಗಿ ಹೇಝಲ್​​ವುಡ್​​ಗೆ ವಿಶ್ರಾಂತಿ ನೀಡಲಾಗಿದ್ದು, ಹೀಗಾಗಿ ಇಂದಿನ ಪಂದ್ಯದಲ್ಲಿ ಬಲಗೈ ವೇಗಿ ಕಣಕ್ಕಿಳಿಯುವುದಿಲ್ಲ.

2 / 5
ಇತ್ತ ಜೋಶ್ ಹೇಝಲ್​​​ವುಡ್ ಹೊರಗುಳಿದರೆ, ಅತ್ತ ಗ್ಲೆನ್ ಮ್ಯಾಕ್ಸ್​​ವೆಲ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಫಿಟ್​​​ನೆಸ್ ಸಮಸ್ಯೆಯ ಕಾರಣ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದ ಮ್ಯಾಕ್ಸ್​​ವೆಲ್ ಇದೀಗ ಆಸ್ಟ್ರೇಲಿಯಾ ತಂಡವನ್ನು ಕೂಡಿಕೊಂಡಿದ್ದು, ಹೀಗಾಗಿ ಮೂರನೇ ಪಂದ್ಯದಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತ.

ಇತ್ತ ಜೋಶ್ ಹೇಝಲ್​​​ವುಡ್ ಹೊರಗುಳಿದರೆ, ಅತ್ತ ಗ್ಲೆನ್ ಮ್ಯಾಕ್ಸ್​​ವೆಲ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಫಿಟ್​​​ನೆಸ್ ಸಮಸ್ಯೆಯ ಕಾರಣ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದ ಮ್ಯಾಕ್ಸ್​​ವೆಲ್ ಇದೀಗ ಆಸ್ಟ್ರೇಲಿಯಾ ತಂಡವನ್ನು ಕೂಡಿಕೊಂಡಿದ್ದು, ಹೀಗಾಗಿ ಮೂರನೇ ಪಂದ್ಯದಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತ.

3 / 5
ಇನ್ನು ಜೋಶ್ ಹೇಝಲ್​​ವುಡ್ ಹೊರಗುಳಿದಿರುವ ಕಾರಣ ಅವರ ಬದಲಿಗೆ ಘಾತಕ ವೇಗಿ ಶಾನ್ ಅಬಾಟ್ ಕಣಕ್ಕಿಳಿಯುವ ಸಾಧ್ಯತೆಯಿದೆ. ಹಾಗೆಯೇ ಮ್ಯಾಕ್ಸ್​ವೆಲ್​ಗಾಗಿ ಯುವ ಆಲ್​ರೌಂಡರ್ ಮಿಚೆಲ್ ಓವನ್ ಪ್ಲೇಯಿಂಗ್ ಇಲೆವೆನ್​​ನಿಂದ ಹೊರಗುಳಿಯಬಹುದು. ಈ ಎರಡು ಬದಲಾವಣೆಯೊಂದಿಗೆ ಇಂದು ಆಸ್ಟ್ರೇಲಿಯಾ ತಂಡ ಟೀಮ್ ಇಂಡಿಯಾವನ್ನು ಎದುರಿಸಲಿದೆ.

ಇನ್ನು ಜೋಶ್ ಹೇಝಲ್​​ವುಡ್ ಹೊರಗುಳಿದಿರುವ ಕಾರಣ ಅವರ ಬದಲಿಗೆ ಘಾತಕ ವೇಗಿ ಶಾನ್ ಅಬಾಟ್ ಕಣಕ್ಕಿಳಿಯುವ ಸಾಧ್ಯತೆಯಿದೆ. ಹಾಗೆಯೇ ಮ್ಯಾಕ್ಸ್​ವೆಲ್​ಗಾಗಿ ಯುವ ಆಲ್​ರೌಂಡರ್ ಮಿಚೆಲ್ ಓವನ್ ಪ್ಲೇಯಿಂಗ್ ಇಲೆವೆನ್​​ನಿಂದ ಹೊರಗುಳಿಯಬಹುದು. ಈ ಎರಡು ಬದಲಾವಣೆಯೊಂದಿಗೆ ಇಂದು ಆಸ್ಟ್ರೇಲಿಯಾ ತಂಡ ಟೀಮ್ ಇಂಡಿಯಾವನ್ನು ಎದುರಿಸಲಿದೆ.

4 / 5
ಆಸ್ಟ್ರೇಲಿಯಾ ಟಿ20 ತಂಡ: ಮಿಚೆಲ್ ಮಾರ್ಷ್ (ನಾಯಕ), ಶಾನ್ ಅಬಾಟ್, ಕ್ಸೇವಿಯರ್ ಬಾರ್ಟ್ಲೆಟ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, , ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಓವನ್, ಜೋಶ್ ಫಿಲಿಪ್, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ತನ್ವೀರ್ ಸಂಘ, ಆ್ಯಡಂ ಝಂಪಾ, ಮಹ್ಲಿ ಬಿಯರ್ಡ್‌ಮನ್, ಬೆನ್ ದ್ವಾರ್ಶುಯಿಸ್ (ಕೊನೆಯ ಎರಡು ಪಂದ್ಯಗಳಿಗೆ).

ಆಸ್ಟ್ರೇಲಿಯಾ ಟಿ20 ತಂಡ: ಮಿಚೆಲ್ ಮಾರ್ಷ್ (ನಾಯಕ), ಶಾನ್ ಅಬಾಟ್, ಕ್ಸೇವಿಯರ್ ಬಾರ್ಟ್ಲೆಟ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, , ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಓವನ್, ಜೋಶ್ ಫಿಲಿಪ್, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ತನ್ವೀರ್ ಸಂಘ, ಆ್ಯಡಂ ಝಂಪಾ, ಮಹ್ಲಿ ಬಿಯರ್ಡ್‌ಮನ್, ಬೆನ್ ದ್ವಾರ್ಶುಯಿಸ್ (ಕೊನೆಯ ಎರಡು ಪಂದ್ಯಗಳಿಗೆ).

5 / 5
Follow Us
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ