AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾ ತಂಡದಿಂದ ಸ್ಟಾರ್ ವೇಗಿ ಔಟ್: ಸ್ಫೋಟಕ ದಾಂಡಿಗ ಎಂಟ್ರಿ..!

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟಿ20 ಸರಣಿಯ ಮೊದಲೆರಡು ಮ್ಯಾಚ್​​​ಗಳು ಮುಗಿದಿವೆ. ಕ್ಯಾನ್​​ಬೆರಾದಲ್ಲಿ ನಡೆದ ಮೊದಲ ಪಂದ್ಯವು ಮಳೆಗೆ ಆಹುತಿಯಾದರೆ, ಮೆಲ್ಬೋರ್ನ್​​ನಲ್ಲಿ ನಡೆದ ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 4 ವಿಕೆಟ್​​ಗಳ ಜಯ ಸಾಧಿಸಿದೆ. ಇದೀಗ ಮೂರನೇ ಪಂದ್ಯದ ಮೂಲಕ ಕಂಬ್ಯಾಕ್ ಮಾಡುವ ವಿಶ್ವಾಸದಲ್ಲಿದೆ ಟೀಮ್ ಇಂಡಿಯಾ.

ಝಾಹಿರ್ ಯೂಸುಫ್
|

Updated on: Nov 02, 2025 | 7:54 AM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೂರನೇ ಟಿ20 ಪಂದ್ಯ ಇಂದು (ನ.2) ನಡೆಯಲಿದೆ. ಹೋಬಾರ್ಟ್​ನ ಬೆಲ್ಲೆರಿವ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ತಂಡವು ತನ್ನ ಪ್ಲೇಯಿಂಗ್ ಇಲೆವೆನ್​​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೂರನೇ ಟಿ20 ಪಂದ್ಯ ಇಂದು (ನ.2) ನಡೆಯಲಿದೆ. ಹೋಬಾರ್ಟ್​ನ ಬೆಲ್ಲೆರಿವ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ತಂಡವು ತನ್ನ ಪ್ಲೇಯಿಂಗ್ ಇಲೆವೆನ್​​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳಲಿದೆ.

1 / 5
ಏಕೆಂದರೆ ಕಳೆದ ಎರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಪರ ಕಣಕ್ಕಿಳಿದಿದ್ದ ಜೋಶ್ ಹೇಝಲ್​​ವುಡ್ ಉಳಿದ ಮೂರು ಮ್ಯಾಚ್​​​ಗಳಿಂದ ಹೊರಗುಳಿದಿದ್ದಾರೆ. ಮುಂಬರುವ ಆ್ಯಶಸ್ ಟೆಸ್ಟ್ ಸರಣಿಗಾಗಿ ಹೇಝಲ್​​ವುಡ್​​ಗೆ ವಿಶ್ರಾಂತಿ ನೀಡಲಾಗಿದ್ದು, ಹೀಗಾಗಿ ಇಂದಿನ ಪಂದ್ಯದಲ್ಲಿ ಬಲಗೈ ವೇಗಿ ಕಣಕ್ಕಿಳಿಯುವುದಿಲ್ಲ.

ಏಕೆಂದರೆ ಕಳೆದ ಎರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಪರ ಕಣಕ್ಕಿಳಿದಿದ್ದ ಜೋಶ್ ಹೇಝಲ್​​ವುಡ್ ಉಳಿದ ಮೂರು ಮ್ಯಾಚ್​​​ಗಳಿಂದ ಹೊರಗುಳಿದಿದ್ದಾರೆ. ಮುಂಬರುವ ಆ್ಯಶಸ್ ಟೆಸ್ಟ್ ಸರಣಿಗಾಗಿ ಹೇಝಲ್​​ವುಡ್​​ಗೆ ವಿಶ್ರಾಂತಿ ನೀಡಲಾಗಿದ್ದು, ಹೀಗಾಗಿ ಇಂದಿನ ಪಂದ್ಯದಲ್ಲಿ ಬಲಗೈ ವೇಗಿ ಕಣಕ್ಕಿಳಿಯುವುದಿಲ್ಲ.

2 / 5
ಇತ್ತ ಜೋಶ್ ಹೇಝಲ್​​​ವುಡ್ ಹೊರಗುಳಿದರೆ, ಅತ್ತ ಗ್ಲೆನ್ ಮ್ಯಾಕ್ಸ್​​ವೆಲ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಫಿಟ್​​​ನೆಸ್ ಸಮಸ್ಯೆಯ ಕಾರಣ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದ ಮ್ಯಾಕ್ಸ್​​ವೆಲ್ ಇದೀಗ ಆಸ್ಟ್ರೇಲಿಯಾ ತಂಡವನ್ನು ಕೂಡಿಕೊಂಡಿದ್ದು, ಹೀಗಾಗಿ ಮೂರನೇ ಪಂದ್ಯದಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತ.

ಇತ್ತ ಜೋಶ್ ಹೇಝಲ್​​​ವುಡ್ ಹೊರಗುಳಿದರೆ, ಅತ್ತ ಗ್ಲೆನ್ ಮ್ಯಾಕ್ಸ್​​ವೆಲ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಫಿಟ್​​​ನೆಸ್ ಸಮಸ್ಯೆಯ ಕಾರಣ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದ ಮ್ಯಾಕ್ಸ್​​ವೆಲ್ ಇದೀಗ ಆಸ್ಟ್ರೇಲಿಯಾ ತಂಡವನ್ನು ಕೂಡಿಕೊಂಡಿದ್ದು, ಹೀಗಾಗಿ ಮೂರನೇ ಪಂದ್ಯದಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತ.

3 / 5
ಇನ್ನು ಜೋಶ್ ಹೇಝಲ್​​ವುಡ್ ಹೊರಗುಳಿದಿರುವ ಕಾರಣ ಅವರ ಬದಲಿಗೆ ಘಾತಕ ವೇಗಿ ಶಾನ್ ಅಬಾಟ್ ಕಣಕ್ಕಿಳಿಯುವ ಸಾಧ್ಯತೆಯಿದೆ. ಹಾಗೆಯೇ ಮ್ಯಾಕ್ಸ್​ವೆಲ್​ಗಾಗಿ ಯುವ ಆಲ್​ರೌಂಡರ್ ಮಿಚೆಲ್ ಓವನ್ ಪ್ಲೇಯಿಂಗ್ ಇಲೆವೆನ್​​ನಿಂದ ಹೊರಗುಳಿಯಬಹುದು. ಈ ಎರಡು ಬದಲಾವಣೆಯೊಂದಿಗೆ ಇಂದು ಆಸ್ಟ್ರೇಲಿಯಾ ತಂಡ ಟೀಮ್ ಇಂಡಿಯಾವನ್ನು ಎದುರಿಸಲಿದೆ.

ಇನ್ನು ಜೋಶ್ ಹೇಝಲ್​​ವುಡ್ ಹೊರಗುಳಿದಿರುವ ಕಾರಣ ಅವರ ಬದಲಿಗೆ ಘಾತಕ ವೇಗಿ ಶಾನ್ ಅಬಾಟ್ ಕಣಕ್ಕಿಳಿಯುವ ಸಾಧ್ಯತೆಯಿದೆ. ಹಾಗೆಯೇ ಮ್ಯಾಕ್ಸ್​ವೆಲ್​ಗಾಗಿ ಯುವ ಆಲ್​ರೌಂಡರ್ ಮಿಚೆಲ್ ಓವನ್ ಪ್ಲೇಯಿಂಗ್ ಇಲೆವೆನ್​​ನಿಂದ ಹೊರಗುಳಿಯಬಹುದು. ಈ ಎರಡು ಬದಲಾವಣೆಯೊಂದಿಗೆ ಇಂದು ಆಸ್ಟ್ರೇಲಿಯಾ ತಂಡ ಟೀಮ್ ಇಂಡಿಯಾವನ್ನು ಎದುರಿಸಲಿದೆ.

4 / 5
ಆಸ್ಟ್ರೇಲಿಯಾ ಟಿ20 ತಂಡ: ಮಿಚೆಲ್ ಮಾರ್ಷ್ (ನಾಯಕ), ಶಾನ್ ಅಬಾಟ್, ಕ್ಸೇವಿಯರ್ ಬಾರ್ಟ್ಲೆಟ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, , ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಓವನ್, ಜೋಶ್ ಫಿಲಿಪ್, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ತನ್ವೀರ್ ಸಂಘ, ಆ್ಯಡಂ ಝಂಪಾ, ಮಹ್ಲಿ ಬಿಯರ್ಡ್‌ಮನ್, ಬೆನ್ ದ್ವಾರ್ಶುಯಿಸ್ (ಕೊನೆಯ ಎರಡು ಪಂದ್ಯಗಳಿಗೆ).

ಆಸ್ಟ್ರೇಲಿಯಾ ಟಿ20 ತಂಡ: ಮಿಚೆಲ್ ಮಾರ್ಷ್ (ನಾಯಕ), ಶಾನ್ ಅಬಾಟ್, ಕ್ಸೇವಿಯರ್ ಬಾರ್ಟ್ಲೆಟ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, , ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಓವನ್, ಜೋಶ್ ಫಿಲಿಪ್, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ತನ್ವೀರ್ ಸಂಘ, ಆ್ಯಡಂ ಝಂಪಾ, ಮಹ್ಲಿ ಬಿಯರ್ಡ್‌ಮನ್, ಬೆನ್ ದ್ವಾರ್ಶುಯಿಸ್ (ಕೊನೆಯ ಎರಡು ಪಂದ್ಯಗಳಿಗೆ).

5 / 5
Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ