AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಪಿಂಕ್ ಜೆರ್ಸಿ ತೊಟ್ಟು ಹೈದರಾಬಾದ್ ವಿರುದ್ಧ ಕಣಕ್ಕಿಳಿಯಲಿದೆ ಗುಜರಾತ್; ಕಾರಣವೇನು ಗೊತ್ತಾ?

GT New Jersey 2023: ಸಾಮಾನ್ಯವಾಗಿ ಪ್ರತಿ ಪಂದ್ಯದಲ್ಲಿ ಬೂದು ಬಣ್ಣದ ಜರ್ಸಿಯನ್ನು ಧರಿಸಿ ಕಣಕ್ಕಿಳಿಯುವ ಗುಜರಾತ್ ತಂಡ ಇಂದು ರಾತ್ರಿ ಪಿಂಕ್ (ಲ್ಯಾವೆಂಡರ್) ಬಣ್ಣದ ಜೆರ್ಸಿ ತೊಟ್ಟು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ.

ಪೃಥ್ವಿಶಂಕರ
|

Updated on:May 15, 2023 | 4:51 PM

Share
ಇಂದು ತನ್ನ ತವರಿನಲ್ಲಿ ಸನ್​​ರೈಸರ್ಸ್​ ಹೈದರಾಬಾದ್ ತಂಡ ವಿರುದ್ಧ ಕಣಕ್ಕಿಳಿಯುತ್ತಿರುವ ಗುಜರಾತ್ ಟೈಟಾನ್ಸ್ ತಂಡಕ್ಕೆ ಇಂದಿನ ಪಂದ್ಯ ಬಹಳ ಮಹತ್ವದ್ದಾಗಿದೆ. ಈ ಪಂದ್ಯದಲ್ಲಿ ಗೆದ್ದರೆ ಹಾರ್ದಿಕ್ ಪಾಂಡ್ಯ ಪಡೆ ನೇರವಾಗಿ ಪ್ಲೇ ಆಫ್​ಗೆ ಎಂಟ್ರಿಕೊಡಲಿದೆ. ಸೋತರೆ ಇನ್ನೂ ಒಂದು ಪಂದ್ಯಕ್ಕಾಗಿ ಕಾಯಬೇಕಾಗುತ್ತದೆ.

ಇಂದು ತನ್ನ ತವರಿನಲ್ಲಿ ಸನ್​​ರೈಸರ್ಸ್​ ಹೈದರಾಬಾದ್ ತಂಡ ವಿರುದ್ಧ ಕಣಕ್ಕಿಳಿಯುತ್ತಿರುವ ಗುಜರಾತ್ ಟೈಟಾನ್ಸ್ ತಂಡಕ್ಕೆ ಇಂದಿನ ಪಂದ್ಯ ಬಹಳ ಮಹತ್ವದ್ದಾಗಿದೆ. ಈ ಪಂದ್ಯದಲ್ಲಿ ಗೆದ್ದರೆ ಹಾರ್ದಿಕ್ ಪಾಂಡ್ಯ ಪಡೆ ನೇರವಾಗಿ ಪ್ಲೇ ಆಫ್​ಗೆ ಎಂಟ್ರಿಕೊಡಲಿದೆ. ಸೋತರೆ ಇನ್ನೂ ಒಂದು ಪಂದ್ಯಕ್ಕಾಗಿ ಕಾಯಬೇಕಾಗುತ್ತದೆ.

1 / 7
ಹೀಗಾಗಿ ಇಂದಿನ ಪಂದ್ಯವನ್ನು ಗೆಲ್ಲಲೇಬೇಕಾದ ಹುಮ್ಮಸಿನ್ನೊಂದಿಗೆ ಕಣಕ್ಕಿಳಿಯುತ್ತಿರುವ ಗುಜರಾತ್ ಟೈಟಾನ್ಸ್ ತಂಡ ಇಂದಿನ ಪಂದ್ಯದಲ್ಲಿ ವಿಶೇಷ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದೆ.

ಹೀಗಾಗಿ ಇಂದಿನ ಪಂದ್ಯವನ್ನು ಗೆಲ್ಲಲೇಬೇಕಾದ ಹುಮ್ಮಸಿನ್ನೊಂದಿಗೆ ಕಣಕ್ಕಿಳಿಯುತ್ತಿರುವ ಗುಜರಾತ್ ಟೈಟಾನ್ಸ್ ತಂಡ ಇಂದಿನ ಪಂದ್ಯದಲ್ಲಿ ವಿಶೇಷ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದೆ.

2 / 7
ಸಾಮಾನ್ಯವಾಗಿ ಪ್ರತಿ ಪಂದ್ಯದಲ್ಲಿ ಬೂದು ಬಣ್ಣದ ಜರ್ಸಿಯನ್ನು ಧರಿಸಿ ಕಣಕ್ಕಿಳಿಯುವ ಗುಜರಾತ್ ತಂಡ ಇಂದು ರಾತ್ರಿ ಪಿಂಕ್ (ಲ್ಯಾವೆಂಡರ್) ಬಣ್ಣದ ಜೆರ್ಸಿ ತೊಟ್ಟು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ.

ಸಾಮಾನ್ಯವಾಗಿ ಪ್ರತಿ ಪಂದ್ಯದಲ್ಲಿ ಬೂದು ಬಣ್ಣದ ಜರ್ಸಿಯನ್ನು ಧರಿಸಿ ಕಣಕ್ಕಿಳಿಯುವ ಗುಜರಾತ್ ತಂಡ ಇಂದು ರಾತ್ರಿ ಪಿಂಕ್ (ಲ್ಯಾವೆಂಡರ್) ಬಣ್ಣದ ಜೆರ್ಸಿ ತೊಟ್ಟು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ.

3 / 7
ಈ ವಿಚಾರವನ್ನು ಫ್ರಾಂಚೈಸಿಯೇ ದೃಢಪಡಿಸಿದ್ದು, ನಾಯಕ ಹಾರ್ದಿಕ್ ಪಾಂಡ್ಯ, ಉಪನಾಯಕ ರಶೀದ್ ಖಾನ್, ಶುಬ್ಮನ್ ಗಿಲ್ ಮತ್ತು ಅಲ್ಜಾರಿ ಜೋಸೆಫ್ ಮತ್ತು ಶಿವಂ ಮಾವಿ ಲ್ಯಾವೆಂಡರ್ ಜೆರ್ಸಿ ಧರಿಸಿ ಫೋಸ್ ಕೊಟ್ಟಿರುವ ಫೋಟೋವನ್ನು ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ.

ಈ ವಿಚಾರವನ್ನು ಫ್ರಾಂಚೈಸಿಯೇ ದೃಢಪಡಿಸಿದ್ದು, ನಾಯಕ ಹಾರ್ದಿಕ್ ಪಾಂಡ್ಯ, ಉಪನಾಯಕ ರಶೀದ್ ಖಾನ್, ಶುಬ್ಮನ್ ಗಿಲ್ ಮತ್ತು ಅಲ್ಜಾರಿ ಜೋಸೆಫ್ ಮತ್ತು ಶಿವಂ ಮಾವಿ ಲ್ಯಾವೆಂಡರ್ ಜೆರ್ಸಿ ಧರಿಸಿ ಫೋಸ್ ಕೊಟ್ಟಿರುವ ಫೋಟೋವನ್ನು ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ.

4 / 7
ಗುಜರಾತ್ ತಂಡ ಈ​ ಲ್ಯಾವೆಂಡರ್ ಬಣ್ಣದ ಜೆರ್ಸಿ ಧರಿಸುವ ಹಿಂದೆ ಒಂದು ಸದುದ್ದೇಶವೂ ಇದ್ದು, ಇದರ ಮೂಲಕ ಕ್ಯಾನ್ಸರ್ ವಿರುದ್ಧದ ಹೋರಾಟವನ್ನು ಬೆಂಬಲಿಸಲು ಫ್ರಾಂಚೈಸಿ ಮುಂದಾಗಿದೆ. ಈ ಉಪಕ್ರಮದ ಮೂಲಕ, ಕ್ಯಾನ್ಸರ್ ವಿರುದ್ಧದ ಹೋರಾಟ, ಸಾಮಾನ್ಯ ಆರೋಗ್ಯ ಮತ್ತು ಯೋಗಕ್ಷೇಮದ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ನಾವು ಹೊಂದಿದ್ದೇವೆ ಎಂದು ಫ್ರಾಂಚೈಸಿಯ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಮಾಡಿದ ಪ್ರತ್ಯೇಕ ವೀಡಿಯೊದಲ್ಲಿ ಪಾಂಡ್ಯ ಹೇಳಿದ್ದಾರೆ.

ಗುಜರಾತ್ ತಂಡ ಈ​ ಲ್ಯಾವೆಂಡರ್ ಬಣ್ಣದ ಜೆರ್ಸಿ ಧರಿಸುವ ಹಿಂದೆ ಒಂದು ಸದುದ್ದೇಶವೂ ಇದ್ದು, ಇದರ ಮೂಲಕ ಕ್ಯಾನ್ಸರ್ ವಿರುದ್ಧದ ಹೋರಾಟವನ್ನು ಬೆಂಬಲಿಸಲು ಫ್ರಾಂಚೈಸಿ ಮುಂದಾಗಿದೆ. ಈ ಉಪಕ್ರಮದ ಮೂಲಕ, ಕ್ಯಾನ್ಸರ್ ವಿರುದ್ಧದ ಹೋರಾಟ, ಸಾಮಾನ್ಯ ಆರೋಗ್ಯ ಮತ್ತು ಯೋಗಕ್ಷೇಮದ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ನಾವು ಹೊಂದಿದ್ದೇವೆ ಎಂದು ಫ್ರಾಂಚೈಸಿಯ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಮಾಡಿದ ಪ್ರತ್ಯೇಕ ವೀಡಿಯೊದಲ್ಲಿ ಪಾಂಡ್ಯ ಹೇಳಿದ್ದಾರೆ.

5 / 7
ಇನ್ನು ಮೊದಲ ಬಾರಿಗೆ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಮುಂದಾಗಿರುವ ಗುಜರಾತ್ ಕೇವಲ ಈ ಸೀಸನ್​ಗೆ ಮಾತ್ರ ಇದನ್ನು ಸೀಮಿತಗೊಳಿಸುತ್ತದೋ ಅಥವಾ ಪ್ರತಿ ಆವೃತ್ತಿಯ ಕೊನೆಯ ಹೋಮ್ ಲೀಗ್ ಪಂದ್ಯದಲ್ಲಿ ಈ ರೀತಿಯ ಜಾಗೃತಿ ಕೆಲಸವನ್ನು ಮುಂದುವರೆಸುತ್ತದೋ ಎಂಬುದು ಅಸ್ಪಷ್ಟವಾಗಿ ಉಳಿದಿದೆ.

ಇನ್ನು ಮೊದಲ ಬಾರಿಗೆ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಮುಂದಾಗಿರುವ ಗುಜರಾತ್ ಕೇವಲ ಈ ಸೀಸನ್​ಗೆ ಮಾತ್ರ ಇದನ್ನು ಸೀಮಿತಗೊಳಿಸುತ್ತದೋ ಅಥವಾ ಪ್ರತಿ ಆವೃತ್ತಿಯ ಕೊನೆಯ ಹೋಮ್ ಲೀಗ್ ಪಂದ್ಯದಲ್ಲಿ ಈ ರೀತಿಯ ಜಾಗೃತಿ ಕೆಲಸವನ್ನು ಮುಂದುವರೆಸುತ್ತದೋ ಎಂಬುದು ಅಸ್ಪಷ್ಟವಾಗಿ ಉಳಿದಿದೆ.

6 / 7
ಇನ್ನು ಐಪಿಎಲ್​ನಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಆರ್​ಸಿಬಿ ಬಹಳ ಹಿಂದಿನಿಂದಲೇ ಮಾಡಿಕೊಂಡು ಬಂದಿದ್ದು,  2011 ರ ಐಪಿಎಲ್​ನಿಂದ ಆರ್​ಸಿಬಿ ಒಂದು ಪಂದ್ಯದಲ್ಲಿ ಗ್ರೀನ್ ಜೆರ್ಸಿ ತೊಟ್ಟು ಪಂದ್ಯವನ್ನಾಡಲು ಆರಂಭಿಸಿದೆ. ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕಾರಣದಿಂದ ಆರ್‌ಸಿಬಿ ತಂಡ ಈ ವಿಭಿನ್ನ ಹಾದಿಯನ್ನು ಹಿಡಿದಿದೆ. ಈ ಹಸಿರು ಜರ್ಸಿಯ ವಿಶೇಷತೆಯೆಂದರೆ 100 ಪ್ರತಿಶತ ಮರುಬಳಕೆಯ ವಸ್ತುಗಳಿಂದ ಈ ಜರ್ಸಿಯನ್ನು ತಯಾರಿಸಲಾಗಿರುತ್ತದೆ.

ಇನ್ನು ಐಪಿಎಲ್​ನಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಆರ್​ಸಿಬಿ ಬಹಳ ಹಿಂದಿನಿಂದಲೇ ಮಾಡಿಕೊಂಡು ಬಂದಿದ್ದು, 2011 ರ ಐಪಿಎಲ್​ನಿಂದ ಆರ್​ಸಿಬಿ ಒಂದು ಪಂದ್ಯದಲ್ಲಿ ಗ್ರೀನ್ ಜೆರ್ಸಿ ತೊಟ್ಟು ಪಂದ್ಯವನ್ನಾಡಲು ಆರಂಭಿಸಿದೆ. ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕಾರಣದಿಂದ ಆರ್‌ಸಿಬಿ ತಂಡ ಈ ವಿಭಿನ್ನ ಹಾದಿಯನ್ನು ಹಿಡಿದಿದೆ. ಈ ಹಸಿರು ಜರ್ಸಿಯ ವಿಶೇಷತೆಯೆಂದರೆ 100 ಪ್ರತಿಶತ ಮರುಬಳಕೆಯ ವಸ್ತುಗಳಿಂದ ಈ ಜರ್ಸಿಯನ್ನು ತಯಾರಿಸಲಾಗಿರುತ್ತದೆ.

7 / 7

Published On - 4:49 pm, Mon, 15 May 23

pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು