AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್ ಪ್ಲೇಆಫ್​ಗೆ 4 ತಂಡಗಳು ಫೈನಲ್

IPL 2025 Playoffs: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 63 ಪಂದ್ಯಗಳು ಮುಗಿದಿದ್ದು, ಇನ್ನುಳಿದಿರುವುದು ಕೇವಲ 7 ಮ್ಯಾಚ್​ಗಳು ಮಾತ್ರ. ಈ ಪಂದ್ಯಗಳಿಗೂ ಮುನ್ನವೇ 4 ತಂಡಗಳು ದ್ವಿತೀಯ ಸುತ್ತಿಗೆ ಪ್ರವೇಶಿಸಿದೆ. ಹಾಗೆಯೇ 6 ತಂಡಗಳು ಈಗಾಗಲೇ ಐಪಿಎಲ್​ನಿಂದ ಹೊರಬಿದ್ದಿದೆ.

ಝಾಹಿರ್ ಯೂಸುಫ್
|

Updated on: May 22, 2025 | 7:42 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 63ನೇ ಪಂದ್ಯದ ಮುಕ್ತಾಯದೊಂದಿಗೆ 4 ತಂಡಗಳು ಪ್ಲೇಆಫ್​ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸೋಲುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಇದರೊಂದಿಗೆ 4 ತಂಡಗಳು ಮುಂದಿನ ಹಂತಕ್ಕೇರಿದರೆ, 6 ತಂಡಗಳ ಐಪಿಎಲ್ ಅಭಿಯಾನ ಅಂತ್ಯಗೊಂಡಂತಾಗಿದೆ.  ಅದರಂತೆ ಪ್ಲೇಆಫ್ ಆಡಲಿರುವ ನಾಲ್ಕು ತಂಡಗಳು ಈ ಕೆಳಗಿನಂತಿದೆ...

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 63ನೇ ಪಂದ್ಯದ ಮುಕ್ತಾಯದೊಂದಿಗೆ 4 ತಂಡಗಳು ಪ್ಲೇಆಫ್​ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸೋಲುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಇದರೊಂದಿಗೆ 4 ತಂಡಗಳು ಮುಂದಿನ ಹಂತಕ್ಕೇರಿದರೆ, 6 ತಂಡಗಳ ಐಪಿಎಲ್ ಅಭಿಯಾನ ಅಂತ್ಯಗೊಂಡಂತಾಗಿದೆ.  ಅದರಂತೆ ಪ್ಲೇಆಫ್ ಆಡಲಿರುವ ನಾಲ್ಕು ತಂಡಗಳು ಈ ಕೆಳಗಿನಂತಿದೆ...

1 / 6
ಗುಜರಾತ್ ಟೈಟಾನ್ಸ್ ತಂಡವು 18 ಅಂಕಗಳೊಂದಿಗೆ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ. ಶುಭ್​​ಮನ್ ಗಿಲ್ ನೇತೃತ್ವದ ಜಿಟಿ ಪಡೆಯು ಈವರೆಗೆ 12 ಪಂದ್ಯಗಳನ್ನಾಡಿದ್ದು, ಈ ವೇಳೆ 9 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿ ಇದೀಗ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ.

ಗುಜರಾತ್ ಟೈಟಾನ್ಸ್ ತಂಡವು 18 ಅಂಕಗಳೊಂದಿಗೆ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ. ಶುಭ್​​ಮನ್ ಗಿಲ್ ನೇತೃತ್ವದ ಜಿಟಿ ಪಡೆಯು ಈವರೆಗೆ 12 ಪಂದ್ಯಗಳನ್ನಾಡಿದ್ದು, ಈ ವೇಳೆ 9 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿ ಇದೀಗ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ.

2 / 6
ಹಾಗೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ ಆಡಿದ 12 ಪಂದ್ಯಗಳಲ್ಲಿ 8 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ, ಒಂದು ಪಂದ್ಯವು ರದ್ದಾಗಿದೆ. ಈ ಮೂಲಕ ಒಟ್ಟಿ 17 ಅಂಕಗಳನ್ನು ಪಡೆದಿರುವ ಆರ್​ಸಿಬಿ ತಂಡವು ಪಾಯಿಂಟ್ಸ್ ಟೇಬಲ್​ನಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿ ಮುಂದಿನ ಹಂತಕ್ಕೇರಿದೆ.

ಹಾಗೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ ಆಡಿದ 12 ಪಂದ್ಯಗಳಲ್ಲಿ 8 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ, ಒಂದು ಪಂದ್ಯವು ರದ್ದಾಗಿದೆ. ಈ ಮೂಲಕ ಒಟ್ಟಿ 17 ಅಂಕಗಳನ್ನು ಪಡೆದಿರುವ ಆರ್​ಸಿಬಿ ತಂಡವು ಪಾಯಿಂಟ್ಸ್ ಟೇಬಲ್​ನಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿ ಮುಂದಿನ ಹಂತಕ್ಕೇರಿದೆ.

3 / 6
ಇನ್ನು ಪಂಜಾಬ್ ಕಿಂಗ್ಸ್ ತಂಡ ಕೂಡ ಪ್ಲೇಆಫ್​ಗೆ ಅರ್ಹತೆ ಪಡೆದುಕೊಂಡಿದೆ. ಈ ಬಾರಿ ಆಡಿದ 12 ಪಂದ್ಯಗಳಲ್ಲಿ ಪಂಜಾಬ್ ಪಡೆ ಒಟ್ಟು 8 ಪಂದ್ಯಗಳಲ್ಲಿ ಜಯ ಸಾಧಿಸಿದ್ದು, ಒಂದು ಪಂದ್ಯವು ರದ್ದಾಗಿದೆ. ಈ ಮೂಲಕ 17 ಅಂಕಗಳನ್ನು ಪಡೆದಿರುವ ಪಂಜಾಬ್ ಕಿಂಗ್ಸ್ ಇದೀಗ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ.

ಇನ್ನು ಪಂಜಾಬ್ ಕಿಂಗ್ಸ್ ತಂಡ ಕೂಡ ಪ್ಲೇಆಫ್​ಗೆ ಅರ್ಹತೆ ಪಡೆದುಕೊಂಡಿದೆ. ಈ ಬಾರಿ ಆಡಿದ 12 ಪಂದ್ಯಗಳಲ್ಲಿ ಪಂಜಾಬ್ ಪಡೆ ಒಟ್ಟು 8 ಪಂದ್ಯಗಳಲ್ಲಿ ಜಯ ಸಾಧಿಸಿದ್ದು, ಒಂದು ಪಂದ್ಯವು ರದ್ದಾಗಿದೆ. ಈ ಮೂಲಕ 17 ಅಂಕಗಳನ್ನು ಪಡೆದಿರುವ ಪಂಜಾಬ್ ಕಿಂಗ್ಸ್ ಇದೀಗ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ.

4 / 6
ಇನ್ನು ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್, ಲಕ್ನೋ ಸೂಪರ್ ಜೈಂಟ್ಸ್, ಸನ್​ರೈಸರ್ಸ್ ಹೈದರಾಬಾದ್, ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈಗಾಗಲೇ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಹೀಗಾಗಿ ಈ ತಂಡಗಳು ದ್ವಿತೀಯ ಸುತ್ತಿನ ಪಂದ್ಯಗಳಲ್ಲಿ, ಅಂದರೆ ಪ್ಲೇಆಫ್ ಸುತ್ತಿನಲ್ಲಿ ಕಾಣಿಸಿಕೊಳ್ಳುವುದಿಲ್ಲ.

ಇನ್ನು ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್, ಲಕ್ನೋ ಸೂಪರ್ ಜೈಂಟ್ಸ್, ಸನ್​ರೈಸರ್ಸ್ ಹೈದರಾಬಾದ್, ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈಗಾಗಲೇ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಹೀಗಾಗಿ ಈ ತಂಡಗಳು ದ್ವಿತೀಯ ಸುತ್ತಿನ ಪಂದ್ಯಗಳಲ್ಲಿ, ಅಂದರೆ ಪ್ಲೇಆಫ್ ಸುತ್ತಿನಲ್ಲಿ ಕಾಣಿಸಿಕೊಳ್ಳುವುದಿಲ್ಲ.

5 / 6
ಇನ್ನು ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್, ಲಕ್ನೋ ಸೂಪರ್ ಜೈಂಟ್ಸ್, ಸನ್​ರೈಸರ್ಸ್ ಹೈದರಾಬಾದ್, ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈಗಾಗಲೇ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಹೀಗಾಗಿ ಈ ತಂಡಗಳು ದ್ವಿತೀಯ ಸುತ್ತಿನ ಪಂದ್ಯಗಳಲ್ಲಿ, ಅಂದರೆ ಪ್ಲೇಆಫ್ ಸುತ್ತಿನಲ್ಲಿ ಕಾಣಿಸಿಕೊಳ್ಳುವುದಿಲ್ಲ.

ಇನ್ನು ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್, ಲಕ್ನೋ ಸೂಪರ್ ಜೈಂಟ್ಸ್, ಸನ್​ರೈಸರ್ಸ್ ಹೈದರಾಬಾದ್, ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈಗಾಗಲೇ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಹೀಗಾಗಿ ಈ ತಂಡಗಳು ದ್ವಿತೀಯ ಸುತ್ತಿನ ಪಂದ್ಯಗಳಲ್ಲಿ, ಅಂದರೆ ಪ್ಲೇಆಫ್ ಸುತ್ತಿನಲ್ಲಿ ಕಾಣಿಸಿಕೊಳ್ಳುವುದಿಲ್ಲ.

6 / 6
Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ