Sign In

By signing in or creating an account, you agree with Associated Broadcasting Company's Terms & Conditions and Privacy Policy.

GT vs CSK Weather Report: ಅಹ್ಮದಾಬಾದ್​ನಲ್ಲಿ ಭಾರೀ ಮಳೆ: ಗುಜರಾತ್-ಚೆನ್ನೈ ಪಂದ್ಯ ನಡೆಯುತ್ತಾ?: ಇಲ್ಲಿದೆ ಹವಾಮಾನ ವರದಿ

IPL 2023, GT vs CSK: ನರೇಂದ್ರ ಮೋದಿ ಕ್ರೀಡಾಂಗಣ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಮೊದಲ ಪಂದ್ಯಕ್ಕೆ ಸಜ್ಜಾಗಿ ನಿಂತಿದೆ. ಆದರೆ, ಅಹ್ಮದಾಬಾದ್​ನಲ್ಲಿ ಗುರುವಾರ ಸಂಜೆ ಭಾರೀ ಮಳೆ ಆಗಿದ್ದು ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.

Vinay Bhat
|

Updated on:Mar 31, 2023 | 10:05 AM

ಇಂಡಿಯನ್ ಪ್ರೀಮಿಯರ್ ಲೀಗ್ ಫೀವರ್ ಈಗಾಗಲೇ ಶುರುವಾಗಿದೆ. 16ನೇ ಆವೃತ್ತಿಯ ಐಪಿಎಲ್​ಗೆ ಇಂದು ಚಾಲನೆ ಸಿಗಲಿದ್ದು ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಖಾಮುಖಿ ಆಗಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಫೀವರ್ ಈಗಾಗಲೇ ಶುರುವಾಗಿದೆ. 16ನೇ ಆವೃತ್ತಿಯ ಐಪಿಎಲ್​ಗೆ ಇಂದು ಚಾಲನೆ ಸಿಗಲಿದ್ದು ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಖಾಮುಖಿ ಆಗಲಿದೆ.

1 / 7
ನರೇಂದ್ರ ಮೋದಿ ಕ್ರೀಡಾಂಗಣ ಮೊದಲ ಪಂದ್ಯಕ್ಕೆ ಸಂಪೂರ್ಣ ಸಜ್ಜಾಗಿ ನಿಂತಿದೆ. ಆದರೆ, ಅಹ್ಮದಾಬಾದ್​ನಲ್ಲಿ ಗುರುವಾರ ಸಂಜೆ ಭಾರೀ ಮಳೆ ಆಗಿದ್ದು ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.

ನರೇಂದ್ರ ಮೋದಿ ಕ್ರೀಡಾಂಗಣ ಮೊದಲ ಪಂದ್ಯಕ್ಕೆ ಸಂಪೂರ್ಣ ಸಜ್ಜಾಗಿ ನಿಂತಿದೆ. ಆದರೆ, ಅಹ್ಮದಾಬಾದ್​ನಲ್ಲಿ ಗುರುವಾರ ಸಂಜೆ ಭಾರೀ ಮಳೆ ಆಗಿದ್ದು ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.

2 / 7
ಗುಜರಾತ್-ಚೆನ್ನೈ ಆಟಗಾರರು ಮೈದಾನದಲ್ಲಿ ಅಭ್ಯಾಸ ನಡೆಸುತ್ತಿರುವಾಗ ದಿಢೀರ್ ಮಳೆ ಸುರಿದಿದೆ. ನಂತರ ಆಟಗಾರರು ಮಳೆಗೆ ಒದ್ದೆಯಾಗಿಕೊಂಡು ಡ್ರೆಸ್ಸಿಂಗ್ ರೂಮ್​ಗೆ ತೆರಳುವುದು ಕಂಡುಬಂತು.

ಗುಜರಾತ್-ಚೆನ್ನೈ ಆಟಗಾರರು ಮೈದಾನದಲ್ಲಿ ಅಭ್ಯಾಸ ನಡೆಸುತ್ತಿರುವಾಗ ದಿಢೀರ್ ಮಳೆ ಸುರಿದಿದೆ. ನಂತರ ಆಟಗಾರರು ಮಳೆಗೆ ಒದ್ದೆಯಾಗಿಕೊಂಡು ಡ್ರೆಸ್ಸಿಂಗ್ ರೂಮ್​ಗೆ ತೆರಳುವುದು ಕಂಡುಬಂತು.

3 / 7
ಇಂದು ಪಂದ್ಯದ ದಿನ ಮಳೆ ಆಗಲಿದೆಯೇ ಎಂಬ ಅನುಮಾನ ಅಭಿಮಾನಿಗಳಲ್ಲಿ ಮೂಡಿದೆ. ಆದರೆ, ಅಕ್ವಾ ವೆದರ್ ಹೇಳುವ ಪ್ರಕಾರ, ಇಂದು ಜಿಟಿ-ಸಿಎಸ್​ಕೆ ನಡುವಣ ಪಂದ್ಯ ನಡೆಯುವಾಗ ಮಳೆಯ ಸಾಧ್ಯತೆ ಇಲ್ಲ ಎಂದು ಹೇಳಿದೆ.

ಇಂದು ಪಂದ್ಯದ ದಿನ ಮಳೆ ಆಗಲಿದೆಯೇ ಎಂಬ ಅನುಮಾನ ಅಭಿಮಾನಿಗಳಲ್ಲಿ ಮೂಡಿದೆ. ಆದರೆ, ಅಕ್ವಾ ವೆದರ್ ಹೇಳುವ ಪ್ರಕಾರ, ಇಂದು ಜಿಟಿ-ಸಿಎಸ್​ಕೆ ನಡುವಣ ಪಂದ್ಯ ನಡೆಯುವಾಗ ಮಳೆಯ ಸಾಧ್ಯತೆ ಇಲ್ಲ ಎಂದು ಹೇಳಿದೆ.

4 / 7
ಗುರುವಾರದ ರೀತಿ ಶುಕ್ರವಾರ ಸಂಜೆ ಮಳೆ ಆಗುವ ಸಾಧ್ಯತೆ ಇಲ್ಲ. ಅಹ್ಮದಾಬಾದ್​ನಲ್ಲಿ ಇಂದು 33 ಡಿಗ್ರಿ ತಾಪಮಾನ ಇರಲಿದೆ. ಸಂಜೆ ಹಾಗೂ ರಾತ್ರಿ ವೇಳೆಗೆ ಇದು 23 ಡಿಗ್ರಿಗೆ ಇಳಿಯಲಿದೆ. ಹೀಗಾಗಿ ಮಳೆ ಬರುವ ಯಾವುದೇ ಸಾಧ್ಯತೆ ಇಲ್ಲ ಎಂದು ಅಕ್ವಾ ವೆದರ್ ಹೇಳಿದೆ.

ಗುರುವಾರದ ರೀತಿ ಶುಕ್ರವಾರ ಸಂಜೆ ಮಳೆ ಆಗುವ ಸಾಧ್ಯತೆ ಇಲ್ಲ. ಅಹ್ಮದಾಬಾದ್​ನಲ್ಲಿ ಇಂದು 33 ಡಿಗ್ರಿ ತಾಪಮಾನ ಇರಲಿದೆ. ಸಂಜೆ ಹಾಗೂ ರಾತ್ರಿ ವೇಳೆಗೆ ಇದು 23 ಡಿಗ್ರಿಗೆ ಇಳಿಯಲಿದೆ. ಹೀಗಾಗಿ ಮಳೆ ಬರುವ ಯಾವುದೇ ಸಾಧ್ಯತೆ ಇಲ್ಲ ಎಂದು ಅಕ್ವಾ ವೆದರ್ ಹೇಳಿದೆ.

5 / 7
ಐಪಿಎಲ್​ 2023 ಉದ್ಘಾಟನಾ ಸಮಾರಂಭಕ್ಕೆ ನರೇಂದ್ರ ಮೋದಿ ಕ್ರೀಡಾಂಗಣ ಸಜ್ಜಾಗಿ ನಿಂತಿದ್ದು ಬಣ್ಣ ಬಣ್ಣಗಳ ಎಲ್​ಇಡಿ ಲೈಟ್​ನಿಂದ ಮೈದಾನ ಕಂಗೊಳಿಸುತ್ತಿದೆ. ವಿಶೇಷ ಲೇಸರ್ ಶೋ ನಡೆಯಲಿದ್ದು ಖ್ಯಾತ ಗಾಯಕ ಅರಿಜಿತ್ ಸಿಂಗ್, ನಟಿ ತಮನ್ನಾ ಭಾಟಿಯಾ, ರಶ್ಮಿಕಾ ಮಂದಣ್ಣ ಪ್ರದರ್ಶನ ನೀಡಲಿದ್ದಾರೆ.

ಐಪಿಎಲ್​ 2023 ಉದ್ಘಾಟನಾ ಸಮಾರಂಭಕ್ಕೆ ನರೇಂದ್ರ ಮೋದಿ ಕ್ರೀಡಾಂಗಣ ಸಜ್ಜಾಗಿ ನಿಂತಿದ್ದು ಬಣ್ಣ ಬಣ್ಣಗಳ ಎಲ್​ಇಡಿ ಲೈಟ್​ನಿಂದ ಮೈದಾನ ಕಂಗೊಳಿಸುತ್ತಿದೆ. ವಿಶೇಷ ಲೇಸರ್ ಶೋ ನಡೆಯಲಿದ್ದು ಖ್ಯಾತ ಗಾಯಕ ಅರಿಜಿತ್ ಸಿಂಗ್, ನಟಿ ತಮನ್ನಾ ಭಾಟಿಯಾ, ರಶ್ಮಿಕಾ ಮಂದಣ್ಣ ಪ್ರದರ್ಶನ ನೀಡಲಿದ್ದಾರೆ.

6 / 7
ಐಪಿಎಲ್​ ಉದ್ಘಾಟನಾ ಸಮಾರಂಭವು ಸಂಜೆ 6 ಗಂಟೆಗೆ ಪ್ರಾರಂಭವಾಗುವ ನಿರೀಕ್ಷೆಯಿದೆ ಮತ್ತು ಸುಮಾರು 45 ನಿಮಿಷಗಳ ಕಾಲ ನಡೆಯಲಿದೆ ಎಂಬ ಮಾಹಿತಿ ಇದೆ. ವಿಶೇಷ ಎಂದರೆ ನಾಲ್ಕು ವರ್ಷಗಳ ನಂತರ ಐಪಿಎಲ್ ಭಾರತದಲ್ಲಿ ಆಯೋಜನೆಯಾಗುತ್ತಿದೆ.

ಐಪಿಎಲ್​ ಉದ್ಘಾಟನಾ ಸಮಾರಂಭವು ಸಂಜೆ 6 ಗಂಟೆಗೆ ಪ್ರಾರಂಭವಾಗುವ ನಿರೀಕ್ಷೆಯಿದೆ ಮತ್ತು ಸುಮಾರು 45 ನಿಮಿಷಗಳ ಕಾಲ ನಡೆಯಲಿದೆ ಎಂಬ ಮಾಹಿತಿ ಇದೆ. ವಿಶೇಷ ಎಂದರೆ ನಾಲ್ಕು ವರ್ಷಗಳ ನಂತರ ಐಪಿಎಲ್ ಭಾರತದಲ್ಲಿ ಆಯೋಜನೆಯಾಗುತ್ತಿದೆ.

7 / 7

Published On - 10:05 am, Fri, 31 March 23

Follow us
ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕಾರ್ಯಾಚರಣೆ ನಡೆದ ಪ್ರಕರಣಗಳು ವಿರಳ
ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕಾರ್ಯಾಚರಣೆ ನಡೆದ ಪ್ರಕರಣಗಳು ವಿರಳ
ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂ​ನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ
ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂ​ನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ
ತುಮಕೂರು: ಓರ್ವ ವಿದ್ಯಾರ್ಥಿನಿಗಾಗಿ ಒಂದು ಸರ್ಕಾರಿ ಶಾಲೆ, ಓರ್ವ ಶಿಕ್ಷಕಿ
ತುಮಕೂರು: ಓರ್ವ ವಿದ್ಯಾರ್ಥಿನಿಗಾಗಿ ಒಂದು ಸರ್ಕಾರಿ ಶಾಲೆ, ಓರ್ವ ಶಿಕ್ಷಕಿ
ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಗೌರವ ನೀಡದಿದ್ದರೆ ಹೇಗೆ? ಯುಟಿ ಖಾದರ್
ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಗೌರವ ನೀಡದಿದ್ದರೆ ಹೇಗೆ? ಯುಟಿ ಖಾದರ್
ಇಡೀ ಜಗತ್ತು ಮಹಾ ಕುಂಭಮೇಳದ ರೂಪದಲ್ಲಿ ಭಾರತದ ಶ್ರೇಷ್ಠ ರೂಪ ನೋಡಿದೆ: ಮೋದಿ
ಇಡೀ ಜಗತ್ತು ಮಹಾ ಕುಂಭಮೇಳದ ರೂಪದಲ್ಲಿ ಭಾರತದ ಶ್ರೇಷ್ಠ ರೂಪ ನೋಡಿದೆ: ಮೋದಿ
ಕುಡಿದ ಮತ್ತಿನಲ್ಲಿ ಹೈಟೆನ್ಷನ್ ವಿದ್ಯುತ್​ ಕಂಬ ಏರಿದ ಯುವಕ!
ಕುಡಿದ ಮತ್ತಿನಲ್ಲಿ ಹೈಟೆನ್ಷನ್ ವಿದ್ಯುತ್​ ಕಂಬ ಏರಿದ ಯುವಕ!
ನಿಮ್ಮಪ್ಪಂದಾ ಪದ ಹುಟ್ಟುಹಾಕಿದ್ದು ಬಿಜೆಪಿ ನಾಯಕರು: ಪ್ರದೀಪ್ ಈಶ್ವರ್
ನಿಮ್ಮಪ್ಪಂದಾ ಪದ ಹುಟ್ಟುಹಾಕಿದ್ದು ಬಿಜೆಪಿ ನಾಯಕರು: ಪ್ರದೀಪ್ ಈಶ್ವರ್
ಹಣದ ಬದಲು ಅಕ್ಕಿ ಕೊಡುವುದೇ ಲೇಸು ಎನ್ನುತ್ತಾರೆ ಫಲಾನುಭವಿಗಳು
ಹಣದ ಬದಲು ಅಕ್ಕಿ ಕೊಡುವುದೇ ಲೇಸು ಎನ್ನುತ್ತಾರೆ ಫಲಾನುಭವಿಗಳು
ಕಾಂಗ್ರೆಸ್ ಮುಖಂಡರು ದೆಹಲಿಗೆ ಹೋದಾಗ ಕುತೂಹಲ ಹುಟ್ಟೋದು ಸಹಜ!
ಕಾಂಗ್ರೆಸ್ ಮುಖಂಡರು ದೆಹಲಿಗೆ ಹೋದಾಗ ಕುತೂಹಲ ಹುಟ್ಟೋದು ಸಹಜ!
ದಾವಣಗೆರೆ: ಇದ್ದಕ್ಕಿದ್ದಂತೆ ಒಡೆದು ಹೋದ ಭದ್ರಾ ಕಾಲುವೆ
ದಾವಣಗೆರೆ: ಇದ್ದಕ್ಕಿದ್ದಂತೆ ಒಡೆದು ಹೋದ ಭದ್ರಾ ಕಾಲುವೆ