AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

GT vs CSK: ಇಂದಿನ ಮ್ಯಾಚ್​ನಲ್ಲಿ RCB ಪಾಲಿಗೆ ಯಾರು ಗೆಲ್ಲಬೇಕು?

IPL 2026, GT vs CSK: ಐಪಿಎಲ್​ನ 66ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕಣಕ್ಕಿಳಿಯಲಿವೆ. ಅಹಮದಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯವು ಸಿಎಸ್​ಕೆ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಚೆನ್ನೈ ಪಡೆ ಸೋತರೆ ಐಪಿಎಲ್ ಪ್ಲೇಆಫ್​ ರೇಸ್​ನಿಂದ ಹೊರಬೀಳಲಿದೆ.

ಝಾಹಿರ್ ಯೂಸುಫ್
|

Updated on:May 21, 2026 | 10:50 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 66ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ತುಂಬಾ ಮಹತ್ವದ್ದು. (PC: IPL)

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 66ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ತುಂಬಾ ಮಹತ್ವದ್ದು. (PC: IPL)

1 / 6
ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಗುಜರಾತ್ ಟೈಟಾನ್ಸ್ 18 ಅಂಕಗಳನ್ನು ಪಡೆಯಲಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಕಾಯ್ದುಕೊಳ್ಳುವ ಮೂಲಕ ಮೊದಲ ಕ್ವಾಲಿಫೈಯರ್ ಆಡುವ ಅವಕಾಶವನ್ನು ಹೆಚ್ಚಿಸಿಕೊಳ್ಳಬಹುದು. ಅತ್ತ ಪ್ಲೇಆಫ್ ರೇಸ್​ನಲ್ಲಿ ಉಳಿಯಬೇಕಿದ್ದರೆ ಈ ಮ್ಯಾಚ್​ನಲ್ಲಿ ಸಿಎಸ್​ಕೆ ತಂಡ ಗೆಲ್ಲಲೇಬೇಕು. (PC: IPL)

ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಗುಜರಾತ್ ಟೈಟಾನ್ಸ್ 18 ಅಂಕಗಳನ್ನು ಪಡೆಯಲಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಕಾಯ್ದುಕೊಳ್ಳುವ ಮೂಲಕ ಮೊದಲ ಕ್ವಾಲಿಫೈಯರ್ ಆಡುವ ಅವಕಾಶವನ್ನು ಹೆಚ್ಚಿಸಿಕೊಳ್ಳಬಹುದು. ಅತ್ತ ಪ್ಲೇಆಫ್ ರೇಸ್​ನಲ್ಲಿ ಉಳಿಯಬೇಕಿದ್ದರೆ ಈ ಮ್ಯಾಚ್​ನಲ್ಲಿ ಸಿಎಸ್​ಕೆ ತಂಡ ಗೆಲ್ಲಲೇಬೇಕು. (PC: IPL)

2 / 6
ಹೀಗಾಗಿ ಎರಡೂ ತಂಡಗಳಿಂದ ಈ ಮ್ಯಾಚ್​ನಲ್ಲಿ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು. ಈ ಪೈಪೋಟಿ ನಡುವೆ ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಿಗೆ ಯಾರು ಗೆಲ್ಲಬೇಕು ಎಂದು ನೋಡುವುದಾದರೆ... ಚೆನ್ನೈ ಸೂಪರ್ ಕಿಂಗ್ಸ್. (PC: IPL)

ಹೀಗಾಗಿ ಎರಡೂ ತಂಡಗಳಿಂದ ಈ ಮ್ಯಾಚ್​ನಲ್ಲಿ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು. ಈ ಪೈಪೋಟಿ ನಡುವೆ ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಿಗೆ ಯಾರು ಗೆಲ್ಲಬೇಕು ಎಂದು ನೋಡುವುದಾದರೆ... ಚೆನ್ನೈ ಸೂಪರ್ ಕಿಂಗ್ಸ್. (PC: IPL)

3 / 6
ಅಂದರೆ ಗುಜರಾತ್ ಟೈಟಾನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆದ್ದರೆ ಆರ್​ಸಿಬಿ ತಂಡವು ಮೊದಲ ಕ್ವಾಲಿಫೈಯರ್ ಆಡುವುದು ಖಚಿತವಾಗಲಿದೆ. ಏಕೆಂದರೆ ಇಂದಿನ ಪಂದ್ಯದಲ್ಲಿ 16 ಅಂಕಗಳನ್ನು ಹೊಂದಿರುವ ಗುಜರಾತ್ ಟೈಟಾನ್ಸ್ ಸೋತರೆ,  18 ಅಂಕಗಳನ್ನು ಹೊಂದಿರುವ ಆರ್​ಸಿಬಿ ಮೊದಲ ಕ್ವಾಲಿಫೈಯರ್​ಗೆ ನೇರ ಅರ್ಹತೆ ಪಡೆಯಲಿದೆ. (PC: IPL)

ಅಂದರೆ ಗುಜರಾತ್ ಟೈಟಾನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆದ್ದರೆ ಆರ್​ಸಿಬಿ ತಂಡವು ಮೊದಲ ಕ್ವಾಲಿಫೈಯರ್ ಆಡುವುದು ಖಚಿತವಾಗಲಿದೆ. ಏಕೆಂದರೆ ಇಂದಿನ ಪಂದ್ಯದಲ್ಲಿ 16 ಅಂಕಗಳನ್ನು ಹೊಂದಿರುವ ಗುಜರಾತ್ ಟೈಟಾನ್ಸ್ ಸೋತರೆ,  18 ಅಂಕಗಳನ್ನು ಹೊಂದಿರುವ ಆರ್​ಸಿಬಿ ಮೊದಲ ಕ್ವಾಲಿಫೈಯರ್​ಗೆ ನೇರ ಅರ್ಹತೆ ಪಡೆಯಲಿದೆ. (PC: IPL)

4 / 6
ಏಕೆಂದರೆ ಪ್ರಸ್ತುತ ಸನ್ನಿವೇಶದಲ್ಲಿ 18 ಅಂಕಗಳನ್ನು ಪಡೆಯಲು ಅವಕಾಶ ಇರುವುದು ಸನ್​ರೈಸರ್ಸ್ ಹೈದರಾಬಾದ್ ಹಾಗು ಗುಜರಾತ್ ಟೈಟಾನ್ಸ್ ತಂಡಗಳಿಗೆ ಮಾತ್ರ. ಇಲ್ಲಿ ಗುಜರಾತ್ ಟೈಟಾನ್ಸ್ ಸೋತರೆ 16 ಅಂಕಗಳಲ್ಲೇ ಉಳಿಯಲಿದೆ. ಅತ್ತ ಆರ್​ಸಿಬಿ ತಂಡವು ಕೊನೆಯ ಮ್ಯಾಚ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಸೋತರೂ 18 ಅಂಕಗಳೊಂದಿಗೆ ಟಾಪ್-2 ನಲ್ಲೇ ಕಾಣಿಸಿಕೊಳ್ಳಲಿದೆ. (PC: IPL)

ಏಕೆಂದರೆ ಪ್ರಸ್ತುತ ಸನ್ನಿವೇಶದಲ್ಲಿ 18 ಅಂಕಗಳನ್ನು ಪಡೆಯಲು ಅವಕಾಶ ಇರುವುದು ಸನ್​ರೈಸರ್ಸ್ ಹೈದರಾಬಾದ್ ಹಾಗು ಗುಜರಾತ್ ಟೈಟಾನ್ಸ್ ತಂಡಗಳಿಗೆ ಮಾತ್ರ. ಇಲ್ಲಿ ಗುಜರಾತ್ ಟೈಟಾನ್ಸ್ ಸೋತರೆ 16 ಅಂಕಗಳಲ್ಲೇ ಉಳಿಯಲಿದೆ. ಅತ್ತ ಆರ್​ಸಿಬಿ ತಂಡವು ಕೊನೆಯ ಮ್ಯಾಚ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಸೋತರೂ 18 ಅಂಕಗಳೊಂದಿಗೆ ಟಾಪ್-2 ನಲ್ಲೇ ಕಾಣಿಸಿಕೊಳ್ಳಲಿದೆ. (PC: IPL)

5 / 6
ಹೀಗಾಗಿ ಗುಜರಾತ್ ಟೈಟಾನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆಲ್ಲುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಈ ಮೂಲಕ ಕೊನೆಯ ಲೀಗ್ ಪಂದ್ಯಕ್ಕೂ ಮುನ್ನ ಆರ್​ಸಿಬಿ ಪಡೆ ಮೊದಲ ಕ್ವಾಲಿಫೈಯರ್ ಪಂದ್ಯವಾಡುವುದನ್ನು ಖಚಿತಪಡಿಸಿಕೊಳ್ಳಬಹುದು. (PC: IPL)

ಹೀಗಾಗಿ ಗುಜರಾತ್ ಟೈಟಾನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆಲ್ಲುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಈ ಮೂಲಕ ಕೊನೆಯ ಲೀಗ್ ಪಂದ್ಯಕ್ಕೂ ಮುನ್ನ ಆರ್​ಸಿಬಿ ಪಡೆ ಮೊದಲ ಕ್ವಾಲಿಫೈಯರ್ ಪಂದ್ಯವಾಡುವುದನ್ನು ಖಚಿತಪಡಿಸಿಕೊಳ್ಳಬಹುದು. (PC: IPL)

6 / 6

Published On - 10:41 am, Thu, 21 May 26

Follow Us
ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ
ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!
ಆಗಸ್ಟ್ 10 ರಿಂದ 16 ರವರೆಗಿನ ದ್ವಾದಶ ರಾಶಿಗಳ ಸಂಪೂರ್ಣ ವಾರಭವಿಷ್ಯ ಇಲ್ಲಿದೆ
ಆಗಸ್ಟ್ 10 ರಿಂದ 16 ರವರೆಗಿನ ದ್ವಾದಶ ರಾಶಿಗಳ ಸಂಪೂರ್ಣ ವಾರಭವಿಷ್ಯ ಇಲ್ಲಿದೆ
ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್​​ಡಿಕೆ
ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್​​ಡಿಕೆ
ಇಂದು ಕಾಮಿಕಾ ಏಕಾದಶಿ; ಉಪವಾಸ ವೃತದಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ
ಇಂದು ಕಾಮಿಕಾ ಏಕಾದಶಿ; ಉಪವಾಸ ವೃತದಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ
ದೆಹಲಿಯಲ್ಲಿ ಭಾರೀ ಮಳೆ; ಪಾರ್ಕಿಂಗ್ ಗೋಡೆ ಕುಸಿದು 8 ಕಾರುಗಳು ಪೂರ್ತಿ ಜಖಂ
ದೆಹಲಿಯಲ್ಲಿ ಭಾರೀ ಮಳೆ; ಪಾರ್ಕಿಂಗ್ ಗೋಡೆ ಕುಸಿದು 8 ಕಾರುಗಳು ಪೂರ್ತಿ ಜಖಂ