AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

GT vs MI, IPL 2025: ಪಂದ್ಯದ ಮಧ್ಯೆ ಬೌಂಡರಿ ಲೈನ್ ಬಳಿ ಬುಮ್ರಾ-ಜಯವರ್ಧನೆ ನಡುವೆ ಜಗಳ

Jasprit Bumrah: ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಣ ಐಪಿಎಲ್ 2025ರ ಎಲಿಮಿನೇಟರ್ ಪಂದ್ಯದ ಮಧ್ಯೆ ಬೌಂಡರಿಯಲ್ಲಿ ಮುಖ್ಯ ಕೋಚ್ ಮಹೇಲ ಜಯವರ್ಧನೆ ಮತ್ತು ಜಸ್ಪ್ರೀತ್ ಬುಮ್ರಾ ನಡುವೆ ವಾಗ್ವಾದ ನಡೆಯಿತು. ಈ ಘಟನೆ ಗುಜರಾತ್ ಟೈಟಾನ್ಸ್ ತಂಡದ ಇನ್ನಿಂಗ್ಸ್‌ನ 13 ನೇ ಓವರ್‌ನಲ್ಲಿ ಸಂಭವಿಸಿದೆ.

Vinay Bhat
|

Updated on: May 31, 2025 | 7:45 AM

Share
ಕಳೆದ ಶುಕ್ರವಾರ ರಾತ್ರಿ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಐದು ಬಾರಿಯ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸಿತು. ಗುಜರಾತ್ ಈ ಪಂದ್ಯವನ್ನು 20 ರನ್‌ಗಳಿಂದ ಸೋತು ಟೂರ್ನಿಯಿಂದ ಹೊರಬಿದ್ದಿದೆ. ಈಗ ಮುಂಬೈ ತಂಡವು ಜೂನ್ 1 ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ಎರಡನೇ ಕ್ವಾಲಿಫೈಯರ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ.

ಕಳೆದ ಶುಕ್ರವಾರ ರಾತ್ರಿ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಐದು ಬಾರಿಯ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸಿತು. ಗುಜರಾತ್ ಈ ಪಂದ್ಯವನ್ನು 20 ರನ್‌ಗಳಿಂದ ಸೋತು ಟೂರ್ನಿಯಿಂದ ಹೊರಬಿದ್ದಿದೆ. ಈಗ ಮುಂಬೈ ತಂಡವು ಜೂನ್ 1 ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ಎರಡನೇ ಕ್ವಾಲಿಫೈಯರ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ.

1 / 6
ಎಲಿಮಿನೇಟರ್ ಪಂದ್ಯದ ಬಗ್ಗೆ ಹೇಳುವುದಾದರೆ, ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಗುಜರಾತ್ ಟೈಟಾನ್ಸ್‌ಗಿಂತ ಉತ್ತಮವಾಗಿ ಕಂಡಿತು. ಆದರೆ, ಸಾಯಿ ಸುದರ್ಶನ್ ಮತ್ತು ವಾಷಿಂಗ್ಟನ್ ಸುಂದರ್ ಕ್ರೀಸ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಸಮಯವಿತ್ತು. ಆ ಸಮಯದಲ್ಲಿ ಮುಂಬೈಗೆ ಸೋಲಿನ ಭಯ ಕಾಡಿತ್ತು. ಹೇಗಾದರೂ ಮಾಡಿ ಇಬ್ಬರ ಜೊತೆಯಾಟವನ್ನು ಮುರಿಯಲು ಬಯಸಿದ್ದರು.

ಎಲಿಮಿನೇಟರ್ ಪಂದ್ಯದ ಬಗ್ಗೆ ಹೇಳುವುದಾದರೆ, ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಗುಜರಾತ್ ಟೈಟಾನ್ಸ್‌ಗಿಂತ ಉತ್ತಮವಾಗಿ ಕಂಡಿತು. ಆದರೆ, ಸಾಯಿ ಸುದರ್ಶನ್ ಮತ್ತು ವಾಷಿಂಗ್ಟನ್ ಸುಂದರ್ ಕ್ರೀಸ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಸಮಯವಿತ್ತು. ಆ ಸಮಯದಲ್ಲಿ ಮುಂಬೈಗೆ ಸೋಲಿನ ಭಯ ಕಾಡಿತ್ತು. ಹೇಗಾದರೂ ಮಾಡಿ ಇಬ್ಬರ ಜೊತೆಯಾಟವನ್ನು ಮುರಿಯಲು ಬಯಸಿದ್ದರು.

2 / 6
ಈ ವೇಳೆ, ಬೌಂಡರಿಯಲ್ಲಿ ಮುಖ್ಯ ಕೋಚ್ ಮಹೇಲ ಜಯವರ್ಧನೆ ಮತ್ತು ಜಸ್ಪ್ರೀತ್ ಬುಮ್ರಾ ನಡುವೆ ವಾಗ್ವಾದ ನಡೆಯಿತು. ಈ ಘಟನೆ ಗುಜರಾತ್ ಟೈಟಾನ್ಸ್ ತಂಡದ ಇನ್ನಿಂಗ್ಸ್‌ನ 13 ನೇ ಓವರ್‌ನಲ್ಲಿ ಸಂಭವಿಸಿದೆ. ಈ ಓವರ್ ಅನ್ನು ಟ್ರೆಂಟ್ ಬೌಲ್ಟ್ ಬೌಲಿಂಗ್ ಮಾಡುತ್ತಿದ್ದರು. ಆ ಓವರ್‌ನ ಮೊದಲ ಎಸೆತದ ನಂತರ, ಕ್ಯಾಮೆರಾ ಬೌಂಡರಿಯಲ್ಲಿ ನಿಂತಿದ್ದ ಜಸ್‌ಪ್ರೀತ್ ಬುಮ್ರಾ ಕಡೆಗೆ ಹೋಯಿತು.

ಈ ವೇಳೆ, ಬೌಂಡರಿಯಲ್ಲಿ ಮುಖ್ಯ ಕೋಚ್ ಮಹೇಲ ಜಯವರ್ಧನೆ ಮತ್ತು ಜಸ್ಪ್ರೀತ್ ಬುಮ್ರಾ ನಡುವೆ ವಾಗ್ವಾದ ನಡೆಯಿತು. ಈ ಘಟನೆ ಗುಜರಾತ್ ಟೈಟಾನ್ಸ್ ತಂಡದ ಇನ್ನಿಂಗ್ಸ್‌ನ 13 ನೇ ಓವರ್‌ನಲ್ಲಿ ಸಂಭವಿಸಿದೆ. ಈ ಓವರ್ ಅನ್ನು ಟ್ರೆಂಟ್ ಬೌಲ್ಟ್ ಬೌಲಿಂಗ್ ಮಾಡುತ್ತಿದ್ದರು. ಆ ಓವರ್‌ನ ಮೊದಲ ಎಸೆತದ ನಂತರ, ಕ್ಯಾಮೆರಾ ಬೌಂಡರಿಯಲ್ಲಿ ನಿಂತಿದ್ದ ಜಸ್‌ಪ್ರೀತ್ ಬುಮ್ರಾ ಕಡೆಗೆ ಹೋಯಿತು.

3 / 6
ಮುಖ್ಯ ಕೋಚ್ ಮಹೇಲ ಜಯವರ್ಧನೆ ಬೌಂಡರಿಯ ಹೊರಗೆ ಬುಮ್ರಾಗೆ ಏನೋ ಹೇಳುತ್ತಿರುವುದು ಕಂಡುಬಂದಿತು. ಆದರೆ, ಬುಮ್ರಾ ಅವರ ಮಾತನ್ನು ಒಪ್ಪಲಿಲ್ಲ. ಇದರಿಂದ ಜಯವರ್ಧನೆ ಕೂಡ ಅಸಮಾಧಾನಗೊಂಡಂತೆ ಕಂಡುಬಂದರು. ಇಬ್ಬರ ನಡುವೆ ಯಾವುದೋ ವಿಷಯದ ಬಗ್ಗೆ ವಾದ ನಡೆಯುತ್ತಿತ್ತು. ಆದರೆ, ಯಾವ ಏನೆಂಬುದರ ಬಗ್ಗೆ ಮಾಹಿತಿ ಇಲ್ಲ.

ಮುಖ್ಯ ಕೋಚ್ ಮಹೇಲ ಜಯವರ್ಧನೆ ಬೌಂಡರಿಯ ಹೊರಗೆ ಬುಮ್ರಾಗೆ ಏನೋ ಹೇಳುತ್ತಿರುವುದು ಕಂಡುಬಂದಿತು. ಆದರೆ, ಬುಮ್ರಾ ಅವರ ಮಾತನ್ನು ಒಪ್ಪಲಿಲ್ಲ. ಇದರಿಂದ ಜಯವರ್ಧನೆ ಕೂಡ ಅಸಮಾಧಾನಗೊಂಡಂತೆ ಕಂಡುಬಂದರು. ಇಬ್ಬರ ನಡುವೆ ಯಾವುದೋ ವಿಷಯದ ಬಗ್ಗೆ ವಾದ ನಡೆಯುತ್ತಿತ್ತು. ಆದರೆ, ಯಾವ ಏನೆಂಬುದರ ಬಗ್ಗೆ ಮಾಹಿತಿ ಇಲ್ಲ.

4 / 6
ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ರೋಹಿತ್ ಶರ್ಮಾ ಅವರ ಅಮೋಘ 81 ರನ್ ಮತ್ತು ಜಾನಿ ಬೈರ್‌ಸ್ಟೋವ್ ಅವರ 47 ರನ್‌ಗಳ ನೆರವಿನಿಂದ ಮುಂಬೈ 5 ವಿಕೆಟ್‌ಗೆ 228 ರನ್ ಗಳಿಸಿತು. ಸೂರ್ಯಕುಮಾರ್ ಯಾದವ್ (33), ತಿಲಕ್ ವರ್ಮಾ (25) ಮತ್ತು ಹಾರ್ದಿಕ್ ಪಾಂಡ್ಯ (22*) ಕೂಡ ತ್ವರಿತ ಕೊಡುಗೆ ನೀಡಿದರು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ರೋಹಿತ್ ಶರ್ಮಾ ಅವರ ಅಮೋಘ 81 ರನ್ ಮತ್ತು ಜಾನಿ ಬೈರ್‌ಸ್ಟೋವ್ ಅವರ 47 ರನ್‌ಗಳ ನೆರವಿನಿಂದ ಮುಂಬೈ 5 ವಿಕೆಟ್‌ಗೆ 228 ರನ್ ಗಳಿಸಿತು. ಸೂರ್ಯಕುಮಾರ್ ಯಾದವ್ (33), ತಿಲಕ್ ವರ್ಮಾ (25) ಮತ್ತು ಹಾರ್ದಿಕ್ ಪಾಂಡ್ಯ (22*) ಕೂಡ ತ್ವರಿತ ಕೊಡುಗೆ ನೀಡಿದರು.

5 / 6
229 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಗುಜರಾತ್ 30 ಓವರ್‌ಗಳಲ್ಲಿ 6 ವಿಕೆಟ್‌ಗಳಿಗೆ 208 ರನ್‌ಗಳನ್ನು ಮಾತ್ರ ಗಳಿಸಲು ಶಕ್ತವಾಯಿತು ಮತ್ತು ಪಂದ್ಯವನ್ನು 20 ರನ್‌ಗಳಿಂದ ಸೋತಿತು. ಸಾಯಿ ಸುದರ್ಶನ್ 80 ರನ್ ಗಳಿಸಿ ಅದ್ಭುತ ಆಟವಾಡಿದರು. ವಾಷಿಂಗ್ಟನ್ ಸುಂದರ್ ಕೂಡ 48 ರನ್ ಗಳಿಸಿದರು.

229 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಗುಜರಾತ್ 30 ಓವರ್‌ಗಳಲ್ಲಿ 6 ವಿಕೆಟ್‌ಗಳಿಗೆ 208 ರನ್‌ಗಳನ್ನು ಮಾತ್ರ ಗಳಿಸಲು ಶಕ್ತವಾಯಿತು ಮತ್ತು ಪಂದ್ಯವನ್ನು 20 ರನ್‌ಗಳಿಂದ ಸೋತಿತು. ಸಾಯಿ ಸುದರ್ಶನ್ 80 ರನ್ ಗಳಿಸಿ ಅದ್ಭುತ ಆಟವಾಡಿದರು. ವಾಷಿಂಗ್ಟನ್ ಸುಂದರ್ ಕೂಡ 48 ರನ್ ಗಳಿಸಿದರು.

6 / 6
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!