AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಈ ಮೂರು ವಿಕೆಟ್ ಪಡೆದ್ರೆ RCB ಅರ್ಧ ಪಂದ್ಯ ಗೆದ್ದಂತೆ..!

IPL 2026 RCB vs GT: ಇಂಡಿಯನ್ ಪ್ರೀಮಿಯರ್ ಲೀಗ್​ನ ಹೈವೋಲ್ಟೇಜ್ ಕದನಕ್ಕೆ ವೇದಿಕೆ ಸಿದ್ಧವಾಗಿದೆ. ಧರ್ಮಶಾಲಾದ ಹೆಚ್​​ಪಿಸಿಎ ಮೈದಾನದಲ್ಲಿ ಇಂದು (ಮೇ 26) ನಡೆಯಲಿರುವ ಐಪಿಎಲ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ.

ಝಾಹಿರ್ ಯೂಸುಫ್
|

Updated on:May 26, 2026 | 2:12 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ಲೇಆಫ್ ಸುತ್ತಿನ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಧರ್ಮಶಾಲಾದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಗೆಲ್ಲಬೇಕಿದ್ದರೆ ಪವರ್​ಪ್ಲೇನಲ್ಲೇ ಮೂರು ವಿಕೆಟ್ ಕಬಳಿಸಬೇಕು. (PC: IPL)

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ಲೇಆಫ್ ಸುತ್ತಿನ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಧರ್ಮಶಾಲಾದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಗೆಲ್ಲಬೇಕಿದ್ದರೆ ಪವರ್​ಪ್ಲೇನಲ್ಲೇ ಮೂರು ವಿಕೆಟ್ ಕಬಳಿಸಬೇಕು. (PC: IPL)

1 / 6
ಒಂದು ವೇಳೆ ಗುಜರಾತ್ ಟೈಟಾನ್ಸ್ ತಂಡದ ಈ ಮೂವರು ಬ್ಯಾಟರ್​ಗಳ ವಿಕೆಟ್ ಮೊದಲ 6 ಓವರ್​​ಗಳಲ್ಲೇ ಸಿಕ್ಕರೆ ಆರ್​ಸಿಬಿ ತಂಡ ಅರ್ಧ ಪಂದ್ಯ ಗೆದ್ದಂತೆ. ಏಕೆಂದರೆ ಈ ಬಾರಿ ಗುಜರಾತ್ ಟೈಟಾನ್ಸ್ ಪರ ಅತ್ಯುತ್ತಮ ಪ್ರದರ್ಶನ ನೀಡಿರುವುದು ಈ ಮೂವರು ಬ್ಯಾಟರ್​ಗಳು ಮಾತ್ರ. ಅವರೆಂದರೆ... (PC: IPL)

ಒಂದು ವೇಳೆ ಗುಜರಾತ್ ಟೈಟಾನ್ಸ್ ತಂಡದ ಈ ಮೂವರು ಬ್ಯಾಟರ್​ಗಳ ವಿಕೆಟ್ ಮೊದಲ 6 ಓವರ್​​ಗಳಲ್ಲೇ ಸಿಕ್ಕರೆ ಆರ್​ಸಿಬಿ ತಂಡ ಅರ್ಧ ಪಂದ್ಯ ಗೆದ್ದಂತೆ. ಏಕೆಂದರೆ ಈ ಬಾರಿ ಗುಜರಾತ್ ಟೈಟಾನ್ಸ್ ಪರ ಅತ್ಯುತ್ತಮ ಪ್ರದರ್ಶನ ನೀಡಿರುವುದು ಈ ಮೂವರು ಬ್ಯಾಟರ್​ಗಳು ಮಾತ್ರ. ಅವರೆಂದರೆ... (PC: IPL)

2 / 6
ಸಾಯಿ ಸುದರ್ಶನ್: ಗುಜರಾತ್ ಟೈಟಾನ್ಸ್ ತಂಡದ ಆರಂಭಿಕ ದಾಂಡಿಗ ಸಾಯಿ ಸುದರ್ಶನ್ ಈ ಬಾರಿ 14 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 157.92ರ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿರುವ ಅವರು ಕಲೆಹಾಕಿರುವುದು ಬರೋಬ್ಬರಿ 638 ರನ್​ಗಳು. ಇದರ ನಡುವೆ 29 ಸಿಕ್ಸ್ ಹಾಗೂ 62 ಫೋರ್​ಗಳನ್ನು ಬಾರಿಸಿದ್ದಾರೆ. (PC: IPL)

ಸಾಯಿ ಸುದರ್ಶನ್: ಗುಜರಾತ್ ಟೈಟಾನ್ಸ್ ತಂಡದ ಆರಂಭಿಕ ದಾಂಡಿಗ ಸಾಯಿ ಸುದರ್ಶನ್ ಈ ಬಾರಿ 14 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 157.92ರ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿರುವ ಅವರು ಕಲೆಹಾಕಿರುವುದು ಬರೋಬ್ಬರಿ 638 ರನ್​ಗಳು. ಇದರ ನಡುವೆ 29 ಸಿಕ್ಸ್ ಹಾಗೂ 62 ಫೋರ್​ಗಳನ್ನು ಬಾರಿಸಿದ್ದಾರೆ. (PC: IPL)

3 / 6
ಶುಭ್​​ಮನ್ ಗಿಲ್: ಸಾಯಿ ಸುದರ್ಶನ್ ಜೊತೆಗೂಡಿ ಇನಿಂಗ್ಸ್ ಆರಂಭಿಸುತ್ತಿರುವ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​ಮನ್ ಗಿಲ್ ಈ ಬಾರಿ 161.68 ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿರುವುದು ವಿಶೇಷ. ಈ ಮೂಲಕ 14 ಇನಿಂಗ್ಸ್​ಗಳಿಂದ 616 ರನ್ ಕಲೆಹಾಕಿದ್ದಾರೆ. ಇದರ ನಡುವೆ ಗಿಲ್ ಬ್ಯಾಟ್​ನಿಂದ 30 ಸಿಕ್ಸ್ ಹಾಗೂ 57 ಫೋರ್​ಗಳು ಮೂಡಿಬಂದಿವೆ. (PC: IPL)

ಶುಭ್​​ಮನ್ ಗಿಲ್: ಸಾಯಿ ಸುದರ್ಶನ್ ಜೊತೆಗೂಡಿ ಇನಿಂಗ್ಸ್ ಆರಂಭಿಸುತ್ತಿರುವ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​ಮನ್ ಗಿಲ್ ಈ ಬಾರಿ 161.68 ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿರುವುದು ವಿಶೇಷ. ಈ ಮೂಲಕ 14 ಇನಿಂಗ್ಸ್​ಗಳಿಂದ 616 ರನ್ ಕಲೆಹಾಕಿದ್ದಾರೆ. ಇದರ ನಡುವೆ ಗಿಲ್ ಬ್ಯಾಟ್​ನಿಂದ 30 ಸಿಕ್ಸ್ ಹಾಗೂ 57 ಫೋರ್​ಗಳು ಮೂಡಿಬಂದಿವೆ. (PC: IPL)

4 / 6
ಜೋಸ್ ಬಟ್ಲರ್: ಗುಜರಾತ್ ಟೈಟಾನ್ಸ್ ಪರ 14 ಇನಿಂಗ್ಸ್ ಆಡಿರುವ ಜೋಸ್ ಬಟ್ಲರ್ 155ರ ಸ್ಟ್ರೈಕ್ ರೇಟ್​ನಲ್ಲಿ ಒಟ್ಟು 469 ರನ್ ಕಲೆಹಾಕಿದ್ದಾರೆ. ಈ ವೇಳೆ 24 ಸಿಕ್ಸ್ ಹಾಗೂ 46 ಫೋರ್​ಗಳನ್ನು ಬಾರಿಸಿದ್ದಾರೆ. (PC: IPL)

ಜೋಸ್ ಬಟ್ಲರ್: ಗುಜರಾತ್ ಟೈಟಾನ್ಸ್ ಪರ 14 ಇನಿಂಗ್ಸ್ ಆಡಿರುವ ಜೋಸ್ ಬಟ್ಲರ್ 155ರ ಸ್ಟ್ರೈಕ್ ರೇಟ್​ನಲ್ಲಿ ಒಟ್ಟು 469 ರನ್ ಕಲೆಹಾಕಿದ್ದಾರೆ. ಈ ವೇಳೆ 24 ಸಿಕ್ಸ್ ಹಾಗೂ 46 ಫೋರ್​ಗಳನ್ನು ಬಾರಿಸಿದ್ದಾರೆ. (PC: IPL)

5 / 6
ಈ ಮೂವರನ್ನು ಹೊರತುಪಡಿಸಿ ಗುಜರಾತ್ ಟೈಟಾನ್ಸ್ ತಂಡದ ಯಾವುದೇ ಬ್ಯಾಟರ್  350 ಕ್ಕಿಂತ ಹೆಚ್ಚಿನ ಸ್ಕೋರ್​ಗಳಿಸಿಲ್ಲ. ಅಂದರೆ ಗುಜರಾತ್ ಟೈಟಾನ್ಸ್ ತಂಡ ಬ್ಯಾಟಿಂಗ್ ಶಕ್ತಿ ಸಾಯಿ ಸುದರ್ಶನ್, ಜೋಸ್ ಬಟ್ಲರ್ ಹಾಗೂ ಶುಭ್​ಮನ್ ಗಿಲ್. ಈ ಮೂವರನ್ನು ಆರ್​ಸಿಬಿ ಬೇಗನೆ ಔಟ್ ಮಾಡಿದರೆ ಅರ್ಧ ಪಂದ್ಯ ಗೆದ್ದಂತೆ. (PC: IPL)

ಈ ಮೂವರನ್ನು ಹೊರತುಪಡಿಸಿ ಗುಜರಾತ್ ಟೈಟಾನ್ಸ್ ತಂಡದ ಯಾವುದೇ ಬ್ಯಾಟರ್  350 ಕ್ಕಿಂತ ಹೆಚ್ಚಿನ ಸ್ಕೋರ್​ಗಳಿಸಿಲ್ಲ. ಅಂದರೆ ಗುಜರಾತ್ ಟೈಟಾನ್ಸ್ ತಂಡ ಬ್ಯಾಟಿಂಗ್ ಶಕ್ತಿ ಸಾಯಿ ಸುದರ್ಶನ್, ಜೋಸ್ ಬಟ್ಲರ್ ಹಾಗೂ ಶುಭ್​ಮನ್ ಗಿಲ್. ಈ ಮೂವರನ್ನು ಆರ್​ಸಿಬಿ ಬೇಗನೆ ಔಟ್ ಮಾಡಿದರೆ ಅರ್ಧ ಪಂದ್ಯ ಗೆದ್ದಂತೆ. (PC: IPL)

6 / 6

Published On - 2:10 pm, Tue, 26 May 26

ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಹೆಚ್​​ಡಿಕೆ
ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಹೆಚ್​​ಡಿಕೆ
ಮಂತ್ರಾಲಯದಲ್ಲಿ ವರುಣನ ಅಬ್ಬರ: ಹೊಳೆಯಂತಾದ ರಸ್ತೆ, ತತ್ತರಿಸಿದ ಭಕ್ತರು
ಮಂತ್ರಾಲಯದಲ್ಲಿ ವರುಣನ ಅಬ್ಬರ: ಹೊಳೆಯಂತಾದ ರಸ್ತೆ, ತತ್ತರಿಸಿದ ಭಕ್ತರು
ಶಿವಮೊಗ್ಗ: ಆಟವಾಡುತ್ತಿದ್ದಾಗ ಆರು ವರ್ಷದ ಬಾಲಕ ಸಾವು, ಹೃದಯಾಘಾತ ಶಂಕೆ
ಶಿವಮೊಗ್ಗ: ಆಟವಾಡುತ್ತಿದ್ದಾಗ ಆರು ವರ್ಷದ ಬಾಲಕ ಸಾವು, ಹೃದಯಾಘಾತ ಶಂಕೆ
ಕಚ್ಚಾ ತೈಲ ಬೆಲೆ ಭಾರಿ ಕುಸಿತ! ಪೆಟ್ರೋಲ್, ಡೀಸೆಲ್ ದರ ಇಳಿಕೆ ನಿರೀಕ್ಷೆ
ಕಚ್ಚಾ ತೈಲ ಬೆಲೆ ಭಾರಿ ಕುಸಿತ! ಪೆಟ್ರೋಲ್, ಡೀಸೆಲ್ ದರ ಇಳಿಕೆ ನಿರೀಕ್ಷೆ