Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್ ಆರಂಭಕ್ಕೂ ಮುನ್ನ ಹೊಸ ಮಾಲೀಕನ ಕೈಸೇರಿದ ಚಾಂಪಿಯನ್ ತಂಡ

Gujarat Titans IPL Ownership Change: ತನ್ನ ಚೊಚ್ಚಲ ಆವೃತ್ತಿಯಲ್ಲಿಯೇ ಐಪಿಎಲ್ ಚಾಂಪಿಯನ್ ಆಗಿದ್ದ ಗುಜರಾತ್ ಟೈಟನ್ಸ್ ತಂಡದ ಮಾಲೀಕತ್ವದಲ್ಲಿ ಬದಲಾವಣೆಯಾಗಿದೆ. ಸಿವಿಸಿ ಕ್ಯಾಪಿಟಲ್ಸ್ ನಿಂದ ಟೊರೆಂಟ್ ಗ್ರೂಪ್ ಶೇ. 67 ರಷ್ಟು ಪಾಲನ್ನು ಖರೀದಿಸಿದೆ. ಈ ಒಪ್ಪಂದದ ಮೊತ್ತವನ್ನು ಬಹಿರಂಗಪಡಿಸಿಲ್ಲ. ಆದರೂ, ತಂಡದ ನಿರ್ವಹಣೆ, ನಾಯಕ, ಹಾಗೂ ಕೋಚ್ ಯಥಾವತ್ತಾಗಿ ಮುಂದುವರಿಯಲಿದೆ ಎಂದು ತಿಳಿದುಬಂದಿದೆ.

ಪೃಥ್ವಿಶಂಕರ
|

Updated on: Mar 17, 2025 | 8:59 PM

ಐಪಿಎಲ್ ಆರಂಭಕ್ಕೂ ಮುನ್ನ ಚೊಚ್ಚಲ ಆವೃತ್ತಿಯಲ್ಲೇ ಚಾಂಪಿಯನ್​ ಪಟ್ಟಕ್ಕೇರಿದ್ದ ಗುಜರಾತ್ ಟೈಟನ್ಸ್ ತಂಡದ ಮಾಲೀಕರು ಬದಲಾಗಿದ್ದಾರೆ. ವಾಸ್ತವವಾಗಿ ಕಳೆದು ಕೆಲವು ದಿನಗಳಿಂದ ಹರಿದಾಡುತ್ತಿದ್ದ ಸುದ್ದಿಯಂತೆ ಇದೀಗ ಗುಜರಾತ್ ಟೈಟನ್ಸ್ ತಂಡ ಟೊರೆಂಟ್ ಗ್ರೂಪ್​ ತೆಕ್ಕೆಗೆ ಸೇರಿದೆ. ಇದುವರೆಗೆ ಸಿವಿಸಿ ಕ್ಯಾಪಿಟಲ್ಸ್ ಒಡೆತನದಲ್ಲಿದ್ದ ಗುಜರಾತ್ ಟೈಟನ್ಸ್ ಫ್ರಾಂಚೈಸಿಯನ್ನು ತನ್ನ ಸ್ವಾಧೀನಕ್ಕೆ ತೆಗೆದುಕೊಂಡಿರುವುದಾಗಿ ಟೊರೆಂಟ್ ಗ್ರೂಪ್ ತಿಳಿಸಿದೆ.

ಐಪಿಎಲ್ ಆರಂಭಕ್ಕೂ ಮುನ್ನ ಚೊಚ್ಚಲ ಆವೃತ್ತಿಯಲ್ಲೇ ಚಾಂಪಿಯನ್​ ಪಟ್ಟಕ್ಕೇರಿದ್ದ ಗುಜರಾತ್ ಟೈಟನ್ಸ್ ತಂಡದ ಮಾಲೀಕರು ಬದಲಾಗಿದ್ದಾರೆ. ವಾಸ್ತವವಾಗಿ ಕಳೆದು ಕೆಲವು ದಿನಗಳಿಂದ ಹರಿದಾಡುತ್ತಿದ್ದ ಸುದ್ದಿಯಂತೆ ಇದೀಗ ಗುಜರಾತ್ ಟೈಟನ್ಸ್ ತಂಡ ಟೊರೆಂಟ್ ಗ್ರೂಪ್​ ತೆಕ್ಕೆಗೆ ಸೇರಿದೆ. ಇದುವರೆಗೆ ಸಿವಿಸಿ ಕ್ಯಾಪಿಟಲ್ಸ್ ಒಡೆತನದಲ್ಲಿದ್ದ ಗುಜರಾತ್ ಟೈಟನ್ಸ್ ಫ್ರಾಂಚೈಸಿಯನ್ನು ತನ್ನ ಸ್ವಾಧೀನಕ್ಕೆ ತೆಗೆದುಕೊಂಡಿರುವುದಾಗಿ ಟೊರೆಂಟ್ ಗ್ರೂಪ್ ತಿಳಿಸಿದೆ.

1 / 5
ಅಹಮದಾಬಾದ್ ಮೂಲದ ಟೊರೆಂಟ್ ಗ್ರೂಪ್ ಭಾರತದ ವಿದ್ಯುತ್ ಮತ್ತು ಔಷಧ ವಲಯಗಳಲ್ಲಿ ಪ್ರಮುಖ ಕಂಪನಿಗಳಲ್ಲಿ ಒಂದಾಗಿದೆ. ಆದಾಗ್ಯೂ, ಈ ಕಂಪನಿಯು ಗುಜರಾತ್ ಫ್ರಾಂಚೈಸಿಯ 100 ಪ್ರತಿಶತ ಪಾಲನ್ನು ಖರೀದಿಸಿಲ್ಲ. ವರದಿಯ ಪ್ರಕಾರ, ಸಿವಿಸಿ ಕ್ಯಾಪಿಟಲ್ಸ್‌ನ ಅಂಗಸಂಸ್ಥೆ ಇರೇಲಿಯಾ ಸ್ಪೋರ್ಟ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಈ ಫ್ರಾಂಚೈಸಿಯನ್ನು ನಡೆಸುತ್ತಿತ್ತು. ಈಗ ಟೊರೆಂಟ್ ಗ್ರೂಪ್ ಶೇ. 67 ರಷ್ಟು ಪಾಲನ್ನು ಖರೀದಿಸುವ ಮೂಲಕ ಫ್ರಾಂಚೈಸಿಯ ಮೇಲೆ ಹಿಡಿತ ಸಾಧಿಸಿದೆ.

ಅಹಮದಾಬಾದ್ ಮೂಲದ ಟೊರೆಂಟ್ ಗ್ರೂಪ್ ಭಾರತದ ವಿದ್ಯುತ್ ಮತ್ತು ಔಷಧ ವಲಯಗಳಲ್ಲಿ ಪ್ರಮುಖ ಕಂಪನಿಗಳಲ್ಲಿ ಒಂದಾಗಿದೆ. ಆದಾಗ್ಯೂ, ಈ ಕಂಪನಿಯು ಗುಜರಾತ್ ಫ್ರಾಂಚೈಸಿಯ 100 ಪ್ರತಿಶತ ಪಾಲನ್ನು ಖರೀದಿಸಿಲ್ಲ. ವರದಿಯ ಪ್ರಕಾರ, ಸಿವಿಸಿ ಕ್ಯಾಪಿಟಲ್ಸ್‌ನ ಅಂಗಸಂಸ್ಥೆ ಇರೇಲಿಯಾ ಸ್ಪೋರ್ಟ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಈ ಫ್ರಾಂಚೈಸಿಯನ್ನು ನಡೆಸುತ್ತಿತ್ತು. ಈಗ ಟೊರೆಂಟ್ ಗ್ರೂಪ್ ಶೇ. 67 ರಷ್ಟು ಪಾಲನ್ನು ಖರೀದಿಸುವ ಮೂಲಕ ಫ್ರಾಂಚೈಸಿಯ ಮೇಲೆ ಹಿಡಿತ ಸಾಧಿಸಿದೆ.

2 / 5
ಆದಾಗ್ಯೂ ಎಷ್ಟು ಮೊತ್ತಕ್ಕೆ ಈ ಒಪ್ಪಂದ ನಡೆದಿದೆ ಎಂಬುದನ್ನು ಇದುವರೆಗೆ ಬಹಿರಂಗವಾಗಿಲ್ಲ. ಉಳಿದಂತೆ ಸಿವಿಸಿ ಕ್ಯಾಪಿಟಲ್ಸ್‌ ತನ್ನ ಬಳಿಯೇ ಫ್ರಾಂಚೈಸಿಯ ಶೇ 33 ರಷ್ಟು ಪಾಲನ್ನು ಉಳಿಸಿಕೊಂಡಿದೆ. ವಾಸ್ತವವಾಗಿ 2021 ರಲ್ಲಿ ಬಿಸಿಸಿಐ ನಡೆಸಿದ ಇ-ಹರಾಜಿನಲ್ಲಿ ಸಿವಿಸಿ ಕ್ಯಾಪಿಟಲ್ಸ್ ಅಹಮದಾಬಾದ್ ಫ್ರಾಂಚೈಸಿಗೆ ಅತಿ ಹೆಚ್ಚು ಬಿಡ್ ಮಾಡಿ ಬರೋಬ್ಬರಿ 5600 ಕೋಟಿ ರೂ.ಗೆ ಗುಜರಾತ್ ತಂಡದ ಮಾಲೀಕತ್ವ ಪಡೆದುಕೊಂಡಿತ್ತು.

ಆದಾಗ್ಯೂ ಎಷ್ಟು ಮೊತ್ತಕ್ಕೆ ಈ ಒಪ್ಪಂದ ನಡೆದಿದೆ ಎಂಬುದನ್ನು ಇದುವರೆಗೆ ಬಹಿರಂಗವಾಗಿಲ್ಲ. ಉಳಿದಂತೆ ಸಿವಿಸಿ ಕ್ಯಾಪಿಟಲ್ಸ್‌ ತನ್ನ ಬಳಿಯೇ ಫ್ರಾಂಚೈಸಿಯ ಶೇ 33 ರಷ್ಟು ಪಾಲನ್ನು ಉಳಿಸಿಕೊಂಡಿದೆ. ವಾಸ್ತವವಾಗಿ 2021 ರಲ್ಲಿ ಬಿಸಿಸಿಐ ನಡೆಸಿದ ಇ-ಹರಾಜಿನಲ್ಲಿ ಸಿವಿಸಿ ಕ್ಯಾಪಿಟಲ್ಸ್ ಅಹಮದಾಬಾದ್ ಫ್ರಾಂಚೈಸಿಗೆ ಅತಿ ಹೆಚ್ಚು ಬಿಡ್ ಮಾಡಿ ಬರೋಬ್ಬರಿ 5600 ಕೋಟಿ ರೂ.ಗೆ ಗುಜರಾತ್ ತಂಡದ ಮಾಲೀಕತ್ವ ಪಡೆದುಕೊಂಡಿತ್ತು.

3 / 5
ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಎರಡನೇ ಅತ್ಯಂತ ದುಬಾರಿ ಫ್ರಾಂಚೈಸಿ ಎನಿಸಿಕೊಂಡಿತ್ತು. ಅದೇ ವರ್ಷ ಅಂದರೆ 2021 ರಲ್ಲಿ ನಡೆದಿದ್ದ ಇ-ಹರಾಜಿನಲ್ಲಿ ಲಕ್ನೋ ಫ್ರಾಂಚೈಸಿಯನ್ನು ಗೋಯೆಂಕಾ ಗ್ರೂಪ್ 7 ಸಾವಿರ ಕೋಟಿ ರೂ.ಗಳಿಗಿಂತ ಹೆಚ್ಚು ಬಿಡ್ ಮಾಡುವ ಖರೀದಿಸಿತ್ತು. ಈ ಮೂಲಕ ಅತ್ಯಂತ ದುಬಾರಿ ಫ್ರಾಂಚೈಸಿ ಎಂಬ ದಾಖಲೆಯನ್ನು ಲಕ್ನೋ ಬರೆದಿತ್ತು.

ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಎರಡನೇ ಅತ್ಯಂತ ದುಬಾರಿ ಫ್ರಾಂಚೈಸಿ ಎನಿಸಿಕೊಂಡಿತ್ತು. ಅದೇ ವರ್ಷ ಅಂದರೆ 2021 ರಲ್ಲಿ ನಡೆದಿದ್ದ ಇ-ಹರಾಜಿನಲ್ಲಿ ಲಕ್ನೋ ಫ್ರಾಂಚೈಸಿಯನ್ನು ಗೋಯೆಂಕಾ ಗ್ರೂಪ್ 7 ಸಾವಿರ ಕೋಟಿ ರೂ.ಗಳಿಗಿಂತ ಹೆಚ್ಚು ಬಿಡ್ ಮಾಡುವ ಖರೀದಿಸಿತ್ತು. ಈ ಮೂಲಕ ಅತ್ಯಂತ ದುಬಾರಿ ಫ್ರಾಂಚೈಸಿ ಎಂಬ ದಾಖಲೆಯನ್ನು ಲಕ್ನೋ ಬರೆದಿತ್ತು.

4 / 5
ಐಪಿಎಲ್ ಆರಂಭಕ್ಕೂ ಮುನ್ನ ಮಾಲೀಕರು ಬದಲಾದರು ತಂಡದ ನಿರ್ವಹಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಕಳೆದ ಸೀಸನ್​ನಲ್ಲಿ ತಂಡದ ನಾಯಕರಾಗಿದ್ದ ಶುಭ್​ಮನ್ ಗಿಲ್ ಈ ಬಾರಿಯೂ ತಂಡವನ್ನು ಮುನ್ನಡೆಸಲಿದ್ದಾರೆ. ಹಾಗೆಯೇ ಮುಖ್ಯ ಕೋಚ್ ಆಗಿ ಆಶಿಶ್ ನೆಹ್ರಾ ಮುಂದುವರೆದರೆ, ವಿಕ್ರಮ್ ಸೋಲಂಕಿ ಫ್ರಾಂಚೈಸಿಯ ಕ್ರಿಕೆಟ್ ನಿರ್ದೇಶಕರಾಗಿ ಉಳಿಯಲಿದ್ದಾರೆ.

ಐಪಿಎಲ್ ಆರಂಭಕ್ಕೂ ಮುನ್ನ ಮಾಲೀಕರು ಬದಲಾದರು ತಂಡದ ನಿರ್ವಹಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಕಳೆದ ಸೀಸನ್​ನಲ್ಲಿ ತಂಡದ ನಾಯಕರಾಗಿದ್ದ ಶುಭ್​ಮನ್ ಗಿಲ್ ಈ ಬಾರಿಯೂ ತಂಡವನ್ನು ಮುನ್ನಡೆಸಲಿದ್ದಾರೆ. ಹಾಗೆಯೇ ಮುಖ್ಯ ಕೋಚ್ ಆಗಿ ಆಶಿಶ್ ನೆಹ್ರಾ ಮುಂದುವರೆದರೆ, ವಿಕ್ರಮ್ ಸೋಲಂಕಿ ಫ್ರಾಂಚೈಸಿಯ ಕ್ರಿಕೆಟ್ ನಿರ್ದೇಶಕರಾಗಿ ಉಳಿಯಲಿದ್ದಾರೆ.

5 / 5
Follow us
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!