AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್ ಆರಂಭಕ್ಕೂ ಮುನ್ನ ಹೊಸ ಮಾಲೀಕನ ಕೈಸೇರಿದ ಚಾಂಪಿಯನ್ ತಂಡ

Gujarat Titans IPL Ownership Change: ತನ್ನ ಚೊಚ್ಚಲ ಆವೃತ್ತಿಯಲ್ಲಿಯೇ ಐಪಿಎಲ್ ಚಾಂಪಿಯನ್ ಆಗಿದ್ದ ಗುಜರಾತ್ ಟೈಟನ್ಸ್ ತಂಡದ ಮಾಲೀಕತ್ವದಲ್ಲಿ ಬದಲಾವಣೆಯಾಗಿದೆ. ಸಿವಿಸಿ ಕ್ಯಾಪಿಟಲ್ಸ್ ನಿಂದ ಟೊರೆಂಟ್ ಗ್ರೂಪ್ ಶೇ. 67 ರಷ್ಟು ಪಾಲನ್ನು ಖರೀದಿಸಿದೆ. ಈ ಒಪ್ಪಂದದ ಮೊತ್ತವನ್ನು ಬಹಿರಂಗಪಡಿಸಿಲ್ಲ. ಆದರೂ, ತಂಡದ ನಿರ್ವಹಣೆ, ನಾಯಕ, ಹಾಗೂ ಕೋಚ್ ಯಥಾವತ್ತಾಗಿ ಮುಂದುವರಿಯಲಿದೆ ಎಂದು ತಿಳಿದುಬಂದಿದೆ.

ಪೃಥ್ವಿಶಂಕರ
|

Updated on: Mar 17, 2025 | 8:59 PM

Share
ಐಪಿಎಲ್ ಆರಂಭಕ್ಕೂ ಮುನ್ನ ಚೊಚ್ಚಲ ಆವೃತ್ತಿಯಲ್ಲೇ ಚಾಂಪಿಯನ್​ ಪಟ್ಟಕ್ಕೇರಿದ್ದ ಗುಜರಾತ್ ಟೈಟನ್ಸ್ ತಂಡದ ಮಾಲೀಕರು ಬದಲಾಗಿದ್ದಾರೆ. ವಾಸ್ತವವಾಗಿ ಕಳೆದು ಕೆಲವು ದಿನಗಳಿಂದ ಹರಿದಾಡುತ್ತಿದ್ದ ಸುದ್ದಿಯಂತೆ ಇದೀಗ ಗುಜರಾತ್ ಟೈಟನ್ಸ್ ತಂಡ ಟೊರೆಂಟ್ ಗ್ರೂಪ್​ ತೆಕ್ಕೆಗೆ ಸೇರಿದೆ. ಇದುವರೆಗೆ ಸಿವಿಸಿ ಕ್ಯಾಪಿಟಲ್ಸ್ ಒಡೆತನದಲ್ಲಿದ್ದ ಗುಜರಾತ್ ಟೈಟನ್ಸ್ ಫ್ರಾಂಚೈಸಿಯನ್ನು ತನ್ನ ಸ್ವಾಧೀನಕ್ಕೆ ತೆಗೆದುಕೊಂಡಿರುವುದಾಗಿ ಟೊರೆಂಟ್ ಗ್ರೂಪ್ ತಿಳಿಸಿದೆ.

ಐಪಿಎಲ್ ಆರಂಭಕ್ಕೂ ಮುನ್ನ ಚೊಚ್ಚಲ ಆವೃತ್ತಿಯಲ್ಲೇ ಚಾಂಪಿಯನ್​ ಪಟ್ಟಕ್ಕೇರಿದ್ದ ಗುಜರಾತ್ ಟೈಟನ್ಸ್ ತಂಡದ ಮಾಲೀಕರು ಬದಲಾಗಿದ್ದಾರೆ. ವಾಸ್ತವವಾಗಿ ಕಳೆದು ಕೆಲವು ದಿನಗಳಿಂದ ಹರಿದಾಡುತ್ತಿದ್ದ ಸುದ್ದಿಯಂತೆ ಇದೀಗ ಗುಜರಾತ್ ಟೈಟನ್ಸ್ ತಂಡ ಟೊರೆಂಟ್ ಗ್ರೂಪ್​ ತೆಕ್ಕೆಗೆ ಸೇರಿದೆ. ಇದುವರೆಗೆ ಸಿವಿಸಿ ಕ್ಯಾಪಿಟಲ್ಸ್ ಒಡೆತನದಲ್ಲಿದ್ದ ಗುಜರಾತ್ ಟೈಟನ್ಸ್ ಫ್ರಾಂಚೈಸಿಯನ್ನು ತನ್ನ ಸ್ವಾಧೀನಕ್ಕೆ ತೆಗೆದುಕೊಂಡಿರುವುದಾಗಿ ಟೊರೆಂಟ್ ಗ್ರೂಪ್ ತಿಳಿಸಿದೆ.

1 / 5
ಅಹಮದಾಬಾದ್ ಮೂಲದ ಟೊರೆಂಟ್ ಗ್ರೂಪ್ ಭಾರತದ ವಿದ್ಯುತ್ ಮತ್ತು ಔಷಧ ವಲಯಗಳಲ್ಲಿ ಪ್ರಮುಖ ಕಂಪನಿಗಳಲ್ಲಿ ಒಂದಾಗಿದೆ. ಆದಾಗ್ಯೂ, ಈ ಕಂಪನಿಯು ಗುಜರಾತ್ ಫ್ರಾಂಚೈಸಿಯ 100 ಪ್ರತಿಶತ ಪಾಲನ್ನು ಖರೀದಿಸಿಲ್ಲ. ವರದಿಯ ಪ್ರಕಾರ, ಸಿವಿಸಿ ಕ್ಯಾಪಿಟಲ್ಸ್‌ನ ಅಂಗಸಂಸ್ಥೆ ಇರೇಲಿಯಾ ಸ್ಪೋರ್ಟ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಈ ಫ್ರಾಂಚೈಸಿಯನ್ನು ನಡೆಸುತ್ತಿತ್ತು. ಈಗ ಟೊರೆಂಟ್ ಗ್ರೂಪ್ ಶೇ. 67 ರಷ್ಟು ಪಾಲನ್ನು ಖರೀದಿಸುವ ಮೂಲಕ ಫ್ರಾಂಚೈಸಿಯ ಮೇಲೆ ಹಿಡಿತ ಸಾಧಿಸಿದೆ.

ಅಹಮದಾಬಾದ್ ಮೂಲದ ಟೊರೆಂಟ್ ಗ್ರೂಪ್ ಭಾರತದ ವಿದ್ಯುತ್ ಮತ್ತು ಔಷಧ ವಲಯಗಳಲ್ಲಿ ಪ್ರಮುಖ ಕಂಪನಿಗಳಲ್ಲಿ ಒಂದಾಗಿದೆ. ಆದಾಗ್ಯೂ, ಈ ಕಂಪನಿಯು ಗುಜರಾತ್ ಫ್ರಾಂಚೈಸಿಯ 100 ಪ್ರತಿಶತ ಪಾಲನ್ನು ಖರೀದಿಸಿಲ್ಲ. ವರದಿಯ ಪ್ರಕಾರ, ಸಿವಿಸಿ ಕ್ಯಾಪಿಟಲ್ಸ್‌ನ ಅಂಗಸಂಸ್ಥೆ ಇರೇಲಿಯಾ ಸ್ಪೋರ್ಟ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಈ ಫ್ರಾಂಚೈಸಿಯನ್ನು ನಡೆಸುತ್ತಿತ್ತು. ಈಗ ಟೊರೆಂಟ್ ಗ್ರೂಪ್ ಶೇ. 67 ರಷ್ಟು ಪಾಲನ್ನು ಖರೀದಿಸುವ ಮೂಲಕ ಫ್ರಾಂಚೈಸಿಯ ಮೇಲೆ ಹಿಡಿತ ಸಾಧಿಸಿದೆ.

2 / 5
ಆದಾಗ್ಯೂ ಎಷ್ಟು ಮೊತ್ತಕ್ಕೆ ಈ ಒಪ್ಪಂದ ನಡೆದಿದೆ ಎಂಬುದನ್ನು ಇದುವರೆಗೆ ಬಹಿರಂಗವಾಗಿಲ್ಲ. ಉಳಿದಂತೆ ಸಿವಿಸಿ ಕ್ಯಾಪಿಟಲ್ಸ್‌ ತನ್ನ ಬಳಿಯೇ ಫ್ರಾಂಚೈಸಿಯ ಶೇ 33 ರಷ್ಟು ಪಾಲನ್ನು ಉಳಿಸಿಕೊಂಡಿದೆ. ವಾಸ್ತವವಾಗಿ 2021 ರಲ್ಲಿ ಬಿಸಿಸಿಐ ನಡೆಸಿದ ಇ-ಹರಾಜಿನಲ್ಲಿ ಸಿವಿಸಿ ಕ್ಯಾಪಿಟಲ್ಸ್ ಅಹಮದಾಬಾದ್ ಫ್ರಾಂಚೈಸಿಗೆ ಅತಿ ಹೆಚ್ಚು ಬಿಡ್ ಮಾಡಿ ಬರೋಬ್ಬರಿ 5600 ಕೋಟಿ ರೂ.ಗೆ ಗುಜರಾತ್ ತಂಡದ ಮಾಲೀಕತ್ವ ಪಡೆದುಕೊಂಡಿತ್ತು.

ಆದಾಗ್ಯೂ ಎಷ್ಟು ಮೊತ್ತಕ್ಕೆ ಈ ಒಪ್ಪಂದ ನಡೆದಿದೆ ಎಂಬುದನ್ನು ಇದುವರೆಗೆ ಬಹಿರಂಗವಾಗಿಲ್ಲ. ಉಳಿದಂತೆ ಸಿವಿಸಿ ಕ್ಯಾಪಿಟಲ್ಸ್‌ ತನ್ನ ಬಳಿಯೇ ಫ್ರಾಂಚೈಸಿಯ ಶೇ 33 ರಷ್ಟು ಪಾಲನ್ನು ಉಳಿಸಿಕೊಂಡಿದೆ. ವಾಸ್ತವವಾಗಿ 2021 ರಲ್ಲಿ ಬಿಸಿಸಿಐ ನಡೆಸಿದ ಇ-ಹರಾಜಿನಲ್ಲಿ ಸಿವಿಸಿ ಕ್ಯಾಪಿಟಲ್ಸ್ ಅಹಮದಾಬಾದ್ ಫ್ರಾಂಚೈಸಿಗೆ ಅತಿ ಹೆಚ್ಚು ಬಿಡ್ ಮಾಡಿ ಬರೋಬ್ಬರಿ 5600 ಕೋಟಿ ರೂ.ಗೆ ಗುಜರಾತ್ ತಂಡದ ಮಾಲೀಕತ್ವ ಪಡೆದುಕೊಂಡಿತ್ತು.

3 / 5
ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಎರಡನೇ ಅತ್ಯಂತ ದುಬಾರಿ ಫ್ರಾಂಚೈಸಿ ಎನಿಸಿಕೊಂಡಿತ್ತು. ಅದೇ ವರ್ಷ ಅಂದರೆ 2021 ರಲ್ಲಿ ನಡೆದಿದ್ದ ಇ-ಹರಾಜಿನಲ್ಲಿ ಲಕ್ನೋ ಫ್ರಾಂಚೈಸಿಯನ್ನು ಗೋಯೆಂಕಾ ಗ್ರೂಪ್ 7 ಸಾವಿರ ಕೋಟಿ ರೂ.ಗಳಿಗಿಂತ ಹೆಚ್ಚು ಬಿಡ್ ಮಾಡುವ ಖರೀದಿಸಿತ್ತು. ಈ ಮೂಲಕ ಅತ್ಯಂತ ದುಬಾರಿ ಫ್ರಾಂಚೈಸಿ ಎಂಬ ದಾಖಲೆಯನ್ನು ಲಕ್ನೋ ಬರೆದಿತ್ತು.

ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಎರಡನೇ ಅತ್ಯಂತ ದುಬಾರಿ ಫ್ರಾಂಚೈಸಿ ಎನಿಸಿಕೊಂಡಿತ್ತು. ಅದೇ ವರ್ಷ ಅಂದರೆ 2021 ರಲ್ಲಿ ನಡೆದಿದ್ದ ಇ-ಹರಾಜಿನಲ್ಲಿ ಲಕ್ನೋ ಫ್ರಾಂಚೈಸಿಯನ್ನು ಗೋಯೆಂಕಾ ಗ್ರೂಪ್ 7 ಸಾವಿರ ಕೋಟಿ ರೂ.ಗಳಿಗಿಂತ ಹೆಚ್ಚು ಬಿಡ್ ಮಾಡುವ ಖರೀದಿಸಿತ್ತು. ಈ ಮೂಲಕ ಅತ್ಯಂತ ದುಬಾರಿ ಫ್ರಾಂಚೈಸಿ ಎಂಬ ದಾಖಲೆಯನ್ನು ಲಕ್ನೋ ಬರೆದಿತ್ತು.

4 / 5
ಐಪಿಎಲ್ ಆರಂಭಕ್ಕೂ ಮುನ್ನ ಮಾಲೀಕರು ಬದಲಾದರು ತಂಡದ ನಿರ್ವಹಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಕಳೆದ ಸೀಸನ್​ನಲ್ಲಿ ತಂಡದ ನಾಯಕರಾಗಿದ್ದ ಶುಭ್​ಮನ್ ಗಿಲ್ ಈ ಬಾರಿಯೂ ತಂಡವನ್ನು ಮುನ್ನಡೆಸಲಿದ್ದಾರೆ. ಹಾಗೆಯೇ ಮುಖ್ಯ ಕೋಚ್ ಆಗಿ ಆಶಿಶ್ ನೆಹ್ರಾ ಮುಂದುವರೆದರೆ, ವಿಕ್ರಮ್ ಸೋಲಂಕಿ ಫ್ರಾಂಚೈಸಿಯ ಕ್ರಿಕೆಟ್ ನಿರ್ದೇಶಕರಾಗಿ ಉಳಿಯಲಿದ್ದಾರೆ.

ಐಪಿಎಲ್ ಆರಂಭಕ್ಕೂ ಮುನ್ನ ಮಾಲೀಕರು ಬದಲಾದರು ತಂಡದ ನಿರ್ವಹಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಕಳೆದ ಸೀಸನ್​ನಲ್ಲಿ ತಂಡದ ನಾಯಕರಾಗಿದ್ದ ಶುಭ್​ಮನ್ ಗಿಲ್ ಈ ಬಾರಿಯೂ ತಂಡವನ್ನು ಮುನ್ನಡೆಸಲಿದ್ದಾರೆ. ಹಾಗೆಯೇ ಮುಖ್ಯ ಕೋಚ್ ಆಗಿ ಆಶಿಶ್ ನೆಹ್ರಾ ಮುಂದುವರೆದರೆ, ವಿಕ್ರಮ್ ಸೋಲಂಕಿ ಫ್ರಾಂಚೈಸಿಯ ಕ್ರಿಕೆಟ್ ನಿರ್ದೇಶಕರಾಗಿ ಉಳಿಯಲಿದ್ದಾರೆ.

5 / 5
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?