AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಆಯ್ಕೆ ಸಮಿತಿಯಿಂದ ನಿರ್ಲಕ್ಷ; ತಂಡ ಬದಲಿಸಲು ಮುಂದಾದ ಟೆಸ್ಟ್ ಸ್ಪೆಷಲಿಸ್ಟ್..!

Team India: ಕಾಂಗರೂ ನಾಡಿನಲ್ಲಿ ಏಕಾಂಗಿಯಾಗಿ ನಿಂತು ಟೀಂ ಇಂಡಿಯಾವನ್ನು ಸೋಲಿನ ದವಡೆಯಿಂದ ಪಾರು ಮಾಡಿದ್ದ ಟೆಸ್ಟ್ ಸ್ಪೆಷಲಿಸ್ಟ್ ಖ್ಯಾತಿಯ ಹನುಮ ವಿಹಾರಿಗೆ ಭಾರತ ತಂಡದಲ್ಲಿ ಹೆಚ್ಚಿನ ಅವಕಾಶ ಸಿಗುತ್ತಿಲ್ಲ.

ಪೃಥ್ವಿಶಂಕರ
|

Updated on: Jul 02, 2023 | 12:23 PM

Share
ಕಾಂಗರೂ ನಾಡಿನಲ್ಲಿ ಏಕಾಂಗಿಯಾಗಿ ನಿಂತು ಟೀಂ ಇಂಡಿಯಾವನ್ನು ಸೋಲಿನ ದವಡೆಯಿಂದ ಪಾರು ಮಾಡಿದ್ದ ಟೆಸ್ಟ್ ಸ್ಪೆಷಲಿಸ್ಟ್ ಖ್ಯಾತಿಯ ಹನುಮ ವಿಹಾರಿಗೆ ಭಾರತ ತಂಡದಲ್ಲಿ ಹೆಚ್ಚಿನ ಅವಕಾಶ ಸಿಗುತ್ತಿಲ್ಲ. ಆಯ್ಕೆ ಮಂಡಳಿಯಿಂದ ತೀರ ನಿರ್ಲಕ್ಷ್ಯಕ್ಕೆ ಒಳಗಾಗಿರುವ ವಿಹಾರಿ ಇದೀಗ ದೇಶೀ ಕ್ರಿಕೆಟ್​ನತ್ತ ಮುಖಮಾಡಿದ್ದಾರೆ. ದೇಶೀ ಕ್ರಿಕೆಟ್​ನಲ್ಲಿ ಉತ್ತಮ ಪ್ರದರ್ಶನ ನೀಡಿ ಭಾರತ ತಂಡಕ್ಕೆ ಮತ್ತೆ ಆಯ್ಕೆಯಾಗುವ ಗುರಿ ಹೊಂದಿರುವ ವಿಹಾರಿ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದಾರೆ.

ಕಾಂಗರೂ ನಾಡಿನಲ್ಲಿ ಏಕಾಂಗಿಯಾಗಿ ನಿಂತು ಟೀಂ ಇಂಡಿಯಾವನ್ನು ಸೋಲಿನ ದವಡೆಯಿಂದ ಪಾರು ಮಾಡಿದ್ದ ಟೆಸ್ಟ್ ಸ್ಪೆಷಲಿಸ್ಟ್ ಖ್ಯಾತಿಯ ಹನುಮ ವಿಹಾರಿಗೆ ಭಾರತ ತಂಡದಲ್ಲಿ ಹೆಚ್ಚಿನ ಅವಕಾಶ ಸಿಗುತ್ತಿಲ್ಲ. ಆಯ್ಕೆ ಮಂಡಳಿಯಿಂದ ತೀರ ನಿರ್ಲಕ್ಷ್ಯಕ್ಕೆ ಒಳಗಾಗಿರುವ ವಿಹಾರಿ ಇದೀಗ ದೇಶೀ ಕ್ರಿಕೆಟ್​ನತ್ತ ಮುಖಮಾಡಿದ್ದಾರೆ. ದೇಶೀ ಕ್ರಿಕೆಟ್​ನಲ್ಲಿ ಉತ್ತಮ ಪ್ರದರ್ಶನ ನೀಡಿ ಭಾರತ ತಂಡಕ್ಕೆ ಮತ್ತೆ ಆಯ್ಕೆಯಾಗುವ ಗುರಿ ಹೊಂದಿರುವ ವಿಹಾರಿ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದಾರೆ.

1 / 6
ಪ್ರಸ್ತುತ ದುಲೀಪ್ ಟ್ರೋಫಿ ಟೂರ್ನಿಯಲ್ಲಿ ದಕ್ಷಿಣ ವಲಯ ತಂಡಗಳನ್ನು ಮುನ್ನಡೆಸುತ್ತಿರುವ ಹನುಮ ವಿಹಾರಿ ರಣಜಿ ಟ್ರೋಫಿಯಲ್ಲಿ ಹೊಸ ತಂಡದ ಪರ ಆಡಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಹನುಮ ವಿಹಾರಿ ಇದುವರೆಗೆ ದೇಶೀಯ ಕ್ರಿಕೆಟ್‌ನಲ್ಲಿ ಆಂಧ್ರಪ್ರದೇಶ ತಂಡದ ಪರ ಆಡುತ್ತಿದ್ದರು.

ಪ್ರಸ್ತುತ ದುಲೀಪ್ ಟ್ರೋಫಿ ಟೂರ್ನಿಯಲ್ಲಿ ದಕ್ಷಿಣ ವಲಯ ತಂಡಗಳನ್ನು ಮುನ್ನಡೆಸುತ್ತಿರುವ ಹನುಮ ವಿಹಾರಿ ರಣಜಿ ಟ್ರೋಫಿಯಲ್ಲಿ ಹೊಸ ತಂಡದ ಪರ ಆಡಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಹನುಮ ವಿಹಾರಿ ಇದುವರೆಗೆ ದೇಶೀಯ ಕ್ರಿಕೆಟ್‌ನಲ್ಲಿ ಆಂಧ್ರಪ್ರದೇಶ ತಂಡದ ಪರ ಆಡುತ್ತಿದ್ದರು.

2 / 6
ಆದರೆ ಇದೀಗ ಆಂಧ್ರಪ್ರದೇಶ ತಂಡ ತೊರೆಯಲು ಮುಂದಾಗಿರುವ ವಿಹಾರ ಮಧ್ಯಪ್ರದೇಶ ತಂಡದ ಪರ ಆಡಲು ಸಿದ್ಧರಾಗಿದ್ದಾರೆ. ಆದರೆ ಅದಕ್ಕೂ ಮುನ್ನ ತಂಡವನ್ನು ಬದಲಾಯಿಸಲು ಮುಂದಾಗಿರುವ ವಿಹಾರಿ ಆಂಧ್ರಪ್ರದೇಶ ಕ್ರಿಕೆಟ್ ಮಂಡಳಿಯಿಂದ ಎನ್‌ಒಸಿ ಅಥವಾ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಪಡೆಯಬೇಕಿದೆ.

ಆದರೆ ಇದೀಗ ಆಂಧ್ರಪ್ರದೇಶ ತಂಡ ತೊರೆಯಲು ಮುಂದಾಗಿರುವ ವಿಹಾರ ಮಧ್ಯಪ್ರದೇಶ ತಂಡದ ಪರ ಆಡಲು ಸಿದ್ಧರಾಗಿದ್ದಾರೆ. ಆದರೆ ಅದಕ್ಕೂ ಮುನ್ನ ತಂಡವನ್ನು ಬದಲಾಯಿಸಲು ಮುಂದಾಗಿರುವ ವಿಹಾರಿ ಆಂಧ್ರಪ್ರದೇಶ ಕ್ರಿಕೆಟ್ ಮಂಡಳಿಯಿಂದ ಎನ್‌ಒಸಿ ಅಥವಾ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಪಡೆಯಬೇಕಿದೆ.

3 / 6
ಹನುಮ ವಿಹಾರಿ ಹೊಸ ತಂಡ ಸೇರುವುದರೊಂದಿಗೆ ಭಾರತ ಕ್ರಿಕೆಟ್ ತಂಡದಲ್ಲಿ ಪುನರಾಗಮನ ಮಾಡಲು ಪ್ರಯತ್ನಿಸಲಿದ್ದಾರೆ. ಅಲ್ಲದೆ ವರದಿಯ ಪ್ರಕಾರ ಹನುಮ ವಿಹಾರಿ ಕೋಚ್ ಚಂದ್ರಕಾಂತ್ ಪಂಡಿತ್ ಅವರ ಮಾರ್ಗದರ್ಶನದಲ್ಲಿ ಆಡಲು ಬಯಸಿದ್ದಾರೆ. ಇದಕ್ಕಾಗಿ ವಿಹಾರಿ ತಂಡ ಬದಲಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಹನುಮ ವಿಹಾರಿ ಹೊಸ ತಂಡ ಸೇರುವುದರೊಂದಿಗೆ ಭಾರತ ಕ್ರಿಕೆಟ್ ತಂಡದಲ್ಲಿ ಪುನರಾಗಮನ ಮಾಡಲು ಪ್ರಯತ್ನಿಸಲಿದ್ದಾರೆ. ಅಲ್ಲದೆ ವರದಿಯ ಪ್ರಕಾರ ಹನುಮ ವಿಹಾರಿ ಕೋಚ್ ಚಂದ್ರಕಾಂತ್ ಪಂಡಿತ್ ಅವರ ಮಾರ್ಗದರ್ಶನದಲ್ಲಿ ಆಡಲು ಬಯಸಿದ್ದಾರೆ. ಇದಕ್ಕಾಗಿ ವಿಹಾರಿ ತಂಡ ಬದಲಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

4 / 6
ಏತನ್ಮಧ್ಯೆ, ವಿಹಾರಿ ತಂಡವನ್ನು ಬದಲಾಯಿಸಿರುವುದು ಇದೇ ಮೊದಲಲ್ಲ. ತನ್ನ ವೃತ್ತಿಜೀವನವನ್ನು ಹೈದರಾಬಾದ್‌ ತಂಡದ ಪರ ಪ್ರಾರಂಭಿಸಿದ ವಿಹಾರಿ ನಂತರ 2015-16ರಲ್ಲಿ ಆಂಧ್ರಪ್ರದೇಶ ತಂಡವನ್ನು ಪ್ರತಿನಿಧಿಸಿದ್ದರು. ಆ ಬಳಿಕ 2021-11ರಲ್ಲಿ ಮತ್ತೆ ಹೈದರಾಬಾದ್‌ ತಂಡಕ್ಕೆ ಸೇರಿಕೊಂಡಿದ್ದರು. ನಂತರ ಕಳೆದ ಸೀಸನ್‌ನಲ್ಲಿ ಆಂಧ್ರಪ್ರದೇಶ ಪರ ಆಡಿದ್ದ ವಿಹಾರಿ ದೇಶೀಯ ಕ್ರಿಕೆಟ್‌ನಲ್ಲಿ ಆಂಧ್ರಪ್ರದೇಶ ತಂಡವನ್ನು ಮುನ್ನಡೆಸಿದ್ದರು.

ಏತನ್ಮಧ್ಯೆ, ವಿಹಾರಿ ತಂಡವನ್ನು ಬದಲಾಯಿಸಿರುವುದು ಇದೇ ಮೊದಲಲ್ಲ. ತನ್ನ ವೃತ್ತಿಜೀವನವನ್ನು ಹೈದರಾಬಾದ್‌ ತಂಡದ ಪರ ಪ್ರಾರಂಭಿಸಿದ ವಿಹಾರಿ ನಂತರ 2015-16ರಲ್ಲಿ ಆಂಧ್ರಪ್ರದೇಶ ತಂಡವನ್ನು ಪ್ರತಿನಿಧಿಸಿದ್ದರು. ಆ ಬಳಿಕ 2021-11ರಲ್ಲಿ ಮತ್ತೆ ಹೈದರಾಬಾದ್‌ ತಂಡಕ್ಕೆ ಸೇರಿಕೊಂಡಿದ್ದರು. ನಂತರ ಕಳೆದ ಸೀಸನ್‌ನಲ್ಲಿ ಆಂಧ್ರಪ್ರದೇಶ ಪರ ಆಡಿದ್ದ ವಿಹಾರಿ ದೇಶೀಯ ಕ್ರಿಕೆಟ್‌ನಲ್ಲಿ ಆಂಧ್ರಪ್ರದೇಶ ತಂಡವನ್ನು ಮುನ್ನಡೆಸಿದ್ದರು.

5 / 6
ವಿಹಾರಿ ಇದುವರೆಗೆ 113 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದು, ಈ 113 ಪಂದ್ಯಗಳಲ್ಲಿ 54.41 ಸರಾಸರಿಯಲ್ಲಿ 8600 ರನ್ ಕಲೆ ಹಾಕಿದ್ದಾರೆ. ಇದರಲ್ಲಿ 23 ಶತಕ ಮತ್ತು 45 ಅರ್ಧಶತಕಗಳು ಸೇರಿವೆ. ಅಲ್ಲದೆ ಟೀಂ ಇಂಡಿಯಾ ಪರ 16 ಟೆಸ್ಟ್ ಪಂದ್ಯಗಳನ್ನಾಡಿರುವ ವಿಹಾರಿ ಈ 16 ಟೆಸ್ಟ್ ಪಂದ್ಯಗಳಲ್ಲಿ 5 ಅರ್ಧಶತಕಗಳ ಸಹಾಯದಿಂದ 839 ರನ್ ಕಲೆ ಹಾಕಿದ್ದಾರೆ.

ವಿಹಾರಿ ಇದುವರೆಗೆ 113 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದು, ಈ 113 ಪಂದ್ಯಗಳಲ್ಲಿ 54.41 ಸರಾಸರಿಯಲ್ಲಿ 8600 ರನ್ ಕಲೆ ಹಾಕಿದ್ದಾರೆ. ಇದರಲ್ಲಿ 23 ಶತಕ ಮತ್ತು 45 ಅರ್ಧಶತಕಗಳು ಸೇರಿವೆ. ಅಲ್ಲದೆ ಟೀಂ ಇಂಡಿಯಾ ಪರ 16 ಟೆಸ್ಟ್ ಪಂದ್ಯಗಳನ್ನಾಡಿರುವ ವಿಹಾರಿ ಈ 16 ಟೆಸ್ಟ್ ಪಂದ್ಯಗಳಲ್ಲಿ 5 ಅರ್ಧಶತಕಗಳ ಸಹಾಯದಿಂದ 839 ರನ್ ಕಲೆ ಹಾಕಿದ್ದಾರೆ.

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ