AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hardik Pandya: ವಿಚ್ಛೇದಿತ ಪತ್ನಿಗೆ ಆಸ್ತಿಯಲ್ಲಿ ಪಾಲು ಸಿಗದಿರಲು ಹಾರ್ದಿಕ್ ಪಾಂಡ್ಯ ಪ್ಲ್ಯಾನ್

Hardik pandya - Natasa Stankovic: ಹಾರ್ದಿಕ್ ಪಾಂಡ್ಯ ಹಾಗೂ ನತಾಶಾ ಸ್ಟಾಂಕೋವಿಕ್ 2020 ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇದಾದ ಬಳಿಕ ಪ್ರತಿ ಸೀಸನ್ ಐಪಿಎಲ್​ನಲ್ಲೂ ನತಾಶಾ ಕಾಣಿಸಿಕೊಂಡಿದ್ದರು. ಆದರೆ ಈ ಬಾರಿಯ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿ ಪಾಂಡ್ಯ ಪಾದಾರ್ಪಣೆ ಮಾಡಿದರೂ, ನತಾಶಾ ಮಾತ್ರ ಕಾಣಿಸಿಕೊಂಡಿರಲಿಲ್ಲ. ಇದರ ಬೆನ್ನಲ್ಲೇ ಇಬ್ಬರು ಬೇರೆಯಾಗುತ್ತಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು.

ಝಾಹಿರ್ ಯೂಸುಫ್
|

Updated on:Jul 20, 2024 | 11:37 AM

Share
ಟೀಮ್ ಇಂಡಿಯಾ ಆಟಗಾರ ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಸ್ಟಾಂಕೋವಿಕ್ ತಮ್ಮ ವಿಚ್ಛೇದನವನ್ನು ದೃಢಪಡಿಸಿದ್ದಾರೆ. ಇಬ್ಬರು ಸಹ ಸೋಷಿಯಲ್ ಮೀಡಿಯಾ ಮೂಲಕ 4 ವರ್ಷಗಳ ದಾಂಪತ್ಯ ಜೀವನಕ್ಕೆ ಗುಡ್ ಬೈ ಹೇಳುತ್ತಿರುವುದಾಗಿ ತಿಳಿಸಿದ್ದಾರೆ. ಇದರ ಬೆನ್ನಲ್ಲೇ ವಿಚ್ಛೇದಿತ ಪತ್ನಿ ನತಾಶಾಗೆ ಪಾಂಡ್ಯ ಕಡೆಯಿಂದ ಸಿಗುವ ಜೀವನಾಂಶ ಎಷ್ಟು ಎಂಬ ಚರ್ಚೆಗಳು ಶುರುವಾಗಿದೆ.

ಟೀಮ್ ಇಂಡಿಯಾ ಆಟಗಾರ ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಸ್ಟಾಂಕೋವಿಕ್ ತಮ್ಮ ವಿಚ್ಛೇದನವನ್ನು ದೃಢಪಡಿಸಿದ್ದಾರೆ. ಇಬ್ಬರು ಸಹ ಸೋಷಿಯಲ್ ಮೀಡಿಯಾ ಮೂಲಕ 4 ವರ್ಷಗಳ ದಾಂಪತ್ಯ ಜೀವನಕ್ಕೆ ಗುಡ್ ಬೈ ಹೇಳುತ್ತಿರುವುದಾಗಿ ತಿಳಿಸಿದ್ದಾರೆ. ಇದರ ಬೆನ್ನಲ್ಲೇ ವಿಚ್ಛೇದಿತ ಪತ್ನಿ ನತಾಶಾಗೆ ಪಾಂಡ್ಯ ಕಡೆಯಿಂದ ಸಿಗುವ ಜೀವನಾಂಶ ಎಷ್ಟು ಎಂಬ ಚರ್ಚೆಗಳು ಶುರುವಾಗಿದೆ.

1 / 6
ಈ ಹಿಂದೆ ಹಾರ್ದಿಕ್ ಪಾಂಡ್ಯ ಡೈವೋರ್ಸ್ ನೀಡಿದರೆ, ತನ್ನ ಆಸ್ತಿಯಲ್ಲಿ ಶೇ.70 ರಷ್ಟು ಪತ್ನಿಗೆ ನೀಡಬೇಕಾಗುತ್ತದೆ ಎಂಬ ವರದಿಗಳಾಗಿದ್ದವು. ಆದರೀಗ ನತಾಶಾಗೆ ಪಾಂಡ್ಯ ಕಡೆಯಿಂದ ಪರಿಹಾರವಾಗಿ ಬೃಹತ್ ಮೊತ್ತ ಸಿಗುವುದಿಲ್ಲ ಎಂಬುದು ದೃಢವಾಗಿದೆ. ಇದಕ್ಕೆ ಸಾಕ್ಷಿ ಪಾಂಡ್ಯರ ಹಳೆಯ ವಿಡಿಯೋ.

ಈ ಹಿಂದೆ ಹಾರ್ದಿಕ್ ಪಾಂಡ್ಯ ಡೈವೋರ್ಸ್ ನೀಡಿದರೆ, ತನ್ನ ಆಸ್ತಿಯಲ್ಲಿ ಶೇ.70 ರಷ್ಟು ಪತ್ನಿಗೆ ನೀಡಬೇಕಾಗುತ್ತದೆ ಎಂಬ ವರದಿಗಳಾಗಿದ್ದವು. ಆದರೀಗ ನತಾಶಾಗೆ ಪಾಂಡ್ಯ ಕಡೆಯಿಂದ ಪರಿಹಾರವಾಗಿ ಬೃಹತ್ ಮೊತ್ತ ಸಿಗುವುದಿಲ್ಲ ಎಂಬುದು ದೃಢವಾಗಿದೆ. ಇದಕ್ಕೆ ಸಾಕ್ಷಿ ಪಾಂಡ್ಯರ ಹಳೆಯ ವಿಡಿಯೋ.

2 / 6
2018 ರಲ್ಲಿ ಗೌರವ್ ಕಪೂರ್ ಅವರ ‘ ಬ್ರೇಕ್‌ಫಾಸ್ಟ್ ವಿತ್ ಚಾಂಪಿಯನ್ಸ್ ’ ಸಂದರ್ಶನದಲ್ಲಿ ಮಾತನಾಡಿದ್ದ ಪಾಂಡ್ಯ, ನಾನು ನನ್ನ ಪ್ರತಿಯೊಂದು ಆಸ್ತಿಗಳಲ್ಲೂ ತಾಯಿಯ ಹೆಸರಿನಲ್ಲಿ ರಿಜಿಸ್ಟರ್ ಮಾಡಿಕೊಂಡಿದ್ದೇನೆ. ನಾನು ನನ್ನ ಹೆಸರಿನಲ್ಲಿ ಏನನ್ನೂ ತೆಗೆದುಕೊಳ್ಳುವುದಿಲ್ಲ ಎಂದು ತಿಳಿಸಿದ್ದರು. ಇದಕ್ಕೆ ಕಾರಣವನ್ನು ಸಹ ಅವರೇ ಸ್ಪಷ್ಟಪಡಿಸಿದ್ದರು.

2018 ರಲ್ಲಿ ಗೌರವ್ ಕಪೂರ್ ಅವರ ‘ ಬ್ರೇಕ್‌ಫಾಸ್ಟ್ ವಿತ್ ಚಾಂಪಿಯನ್ಸ್ ’ ಸಂದರ್ಶನದಲ್ಲಿ ಮಾತನಾಡಿದ್ದ ಪಾಂಡ್ಯ, ನಾನು ನನ್ನ ಪ್ರತಿಯೊಂದು ಆಸ್ತಿಗಳಲ್ಲೂ ತಾಯಿಯ ಹೆಸರಿನಲ್ಲಿ ರಿಜಿಸ್ಟರ್ ಮಾಡಿಕೊಂಡಿದ್ದೇನೆ. ನಾನು ನನ್ನ ಹೆಸರಿನಲ್ಲಿ ಏನನ್ನೂ ತೆಗೆದುಕೊಳ್ಳುವುದಿಲ್ಲ ಎಂದು ತಿಳಿಸಿದ್ದರು. ಇದಕ್ಕೆ ಕಾರಣವನ್ನು ಸಹ ಅವರೇ ಸ್ಪಷ್ಟಪಡಿಸಿದ್ದರು.

3 / 6
ಕಾರುಗಳಿಂದ ಹಿಡಿದು ಮನೆಗಳವರೆಗೆ ಎಲ್ಲವೂ ಅಮ್ಮನ ಹೆಸರಿನಲ್ಲಿದೆ. ನನಗೆ ಯಾರ ಮೇಲೂ ನಂಬಿಕೆಯಿಲ್ಲ. ಹೀಗಾಗಿ ಎಲ್ಲವನ್ನೂ ತಾಯಿಯ ಹೆಸರಿನಲ್ಲೇ ಮಾಡಿಟ್ಟುಕೊಂಡಿದ್ದೇನೆ. ಏಕೆಂದರೆ ಭವಿಷ್ಯದಲ್ಲಿ ಯಾರಿಗೂ 50% ನೀಡಲು ನಾನು ಬಯಸುವುದಿಲ್ಲ ಎಂದು ಹಾರ್ದಿಕ್ ಪಾಂಡ್ಯ ಬಹಿರಂಗವಾಗಿಯೇ ತಿಳಿಸಿದ್ದರು.

ಕಾರುಗಳಿಂದ ಹಿಡಿದು ಮನೆಗಳವರೆಗೆ ಎಲ್ಲವೂ ಅಮ್ಮನ ಹೆಸರಿನಲ್ಲಿದೆ. ನನಗೆ ಯಾರ ಮೇಲೂ ನಂಬಿಕೆಯಿಲ್ಲ. ಹೀಗಾಗಿ ಎಲ್ಲವನ್ನೂ ತಾಯಿಯ ಹೆಸರಿನಲ್ಲೇ ಮಾಡಿಟ್ಟುಕೊಂಡಿದ್ದೇನೆ. ಏಕೆಂದರೆ ಭವಿಷ್ಯದಲ್ಲಿ ಯಾರಿಗೂ 50% ನೀಡಲು ನಾನು ಬಯಸುವುದಿಲ್ಲ ಎಂದು ಹಾರ್ದಿಕ್ ಪಾಂಡ್ಯ ಬಹಿರಂಗವಾಗಿಯೇ ತಿಳಿಸಿದ್ದರು.

4 / 6
ಅಂದರೆ ಭವಿಷ್ಯದಲ್ಲಿ ಮದುವೆಯಾಗಿ ವಿಚ್ಛೇದನವಾದರೆ, ಯಾರಿಗೂ ನಾನು ನನ್ನ ಆಸ್ತಿಯ ಶೇ.50 ರಷ್ಟು ನೀಡಲು ಇಚ್ಛಿಸುವುದಿಲ್ಲ. ಇದಕ್ಕಾಗಿಯೇ ತಾಯಿಯ ಹೆಸರಿನಲ್ಲಿ ಎಲ್ಲವನ್ನು ಖರೀದಿಸುತ್ತೇನೆ. ಹಾಗೆಯೇ ಆಸ್ತಿಯನ್ನು ತಾಯಿಯ ಹೆಸರಿನಲ್ಲಿಯೇ ಮಾಡಿಟ್ಟುಕೊಂಡಿದ್ದೇನೆ ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದರು.

ಅಂದರೆ ಭವಿಷ್ಯದಲ್ಲಿ ಮದುವೆಯಾಗಿ ವಿಚ್ಛೇದನವಾದರೆ, ಯಾರಿಗೂ ನಾನು ನನ್ನ ಆಸ್ತಿಯ ಶೇ.50 ರಷ್ಟು ನೀಡಲು ಇಚ್ಛಿಸುವುದಿಲ್ಲ. ಇದಕ್ಕಾಗಿಯೇ ತಾಯಿಯ ಹೆಸರಿನಲ್ಲಿ ಎಲ್ಲವನ್ನು ಖರೀದಿಸುತ್ತೇನೆ. ಹಾಗೆಯೇ ಆಸ್ತಿಯನ್ನು ತಾಯಿಯ ಹೆಸರಿನಲ್ಲಿಯೇ ಮಾಡಿಟ್ಟುಕೊಂಡಿದ್ದೇನೆ ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದರು.

5 / 6
ಇದೀಗ ಹಾರ್ದಿಕ್ ಪಾಂಡ್ಯ ನತಾಶಾ ಸ್ಟಾಂಕೋವಿಕ್​ಗೆ ವಿಚ್ಛೇದನ ನೀಡಿದ್ದಾರೆ. ಆದರೆ ಈ ವಿಚ್ಛೇದನದ ಪರಿಹಾರವಾಗಿ ಪಾಂಡ್ಯರ ಆಸ್ತಿಯ ಶೇ.50 ರಷ್ಟು ಪಾಲು ಸಿಗುವುದು ಅನುಮಾನ. ಒಂದು ವೇಳೆ ಸಿಕ್ಕರೂ ಅದು ಅತ್ಯಲ್ಪ ಪ್ರಮಾಣದಲ್ಲಿರುತ್ತದೆ. ಏಕೆಂದರೆ ಹಾರ್ದಿಕ್ ಪಾಂಡ್ಯ ಹೇಳಿದಂತೆ ಅವರೆಲ್ಲವನ್ನು ತಾಯಿಯ ಹೆಸರಿನಲ್ಲಿ ಮಾಡಿಟ್ಟುಕೊಂಡಿದ್ದಾರೆ. ಹೀಗಾಗಿ ಅವರ ಬಳಿಯಿರುವುದರಿಂದ ಮಾತ್ರ ನತಾಶಾ ಸ್ಟಾಂಕೋವಿಕ್ ಪಾಲು ಕೇಳಬಹುದಷ್ಟೇ.

ಇದೀಗ ಹಾರ್ದಿಕ್ ಪಾಂಡ್ಯ ನತಾಶಾ ಸ್ಟಾಂಕೋವಿಕ್​ಗೆ ವಿಚ್ಛೇದನ ನೀಡಿದ್ದಾರೆ. ಆದರೆ ಈ ವಿಚ್ಛೇದನದ ಪರಿಹಾರವಾಗಿ ಪಾಂಡ್ಯರ ಆಸ್ತಿಯ ಶೇ.50 ರಷ್ಟು ಪಾಲು ಸಿಗುವುದು ಅನುಮಾನ. ಒಂದು ವೇಳೆ ಸಿಕ್ಕರೂ ಅದು ಅತ್ಯಲ್ಪ ಪ್ರಮಾಣದಲ್ಲಿರುತ್ತದೆ. ಏಕೆಂದರೆ ಹಾರ್ದಿಕ್ ಪಾಂಡ್ಯ ಹೇಳಿದಂತೆ ಅವರೆಲ್ಲವನ್ನು ತಾಯಿಯ ಹೆಸರಿನಲ್ಲಿ ಮಾಡಿಟ್ಟುಕೊಂಡಿದ್ದಾರೆ. ಹೀಗಾಗಿ ಅವರ ಬಳಿಯಿರುವುದರಿಂದ ಮಾತ್ರ ನತಾಶಾ ಸ್ಟಾಂಕೋವಿಕ್ ಪಾಲು ಕೇಳಬಹುದಷ್ಟೇ.

6 / 6

Published On - 10:48 am, Sat, 20 July 24

ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ