AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hardik Pandya: ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಿಂದಲೂ ಹೊರಬಿದ್ದ ಹಾರ್ದಿಕ್ ಪಾಂಡ್ಯ

India vs Australia T20I Series: ಆಸ್ಟ್ರೇಲಿಯಾ ವಿರುದ್ಧ ಭಾರತ ತವರಿನಲ್ಲಿ ಒಟ್ಟು ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಆದರೆ, ಇದಕ್ಕೂ ಮುನ್ನ ಟೀಮ್ ಇಂಡಿಯಾಕ್ಕೆ ದೊಡ್ಡ ಆಘಾತ ಉಂಟಾಗಿದೆ. ಗಾಯಗೊಂಡಿರುವ ಹಾರ್ದಿಕ್ ಪಾಂಡ್ಯ ಇದೀಗ ಈ ಸರಣಿಯಿಂದಲೂ ಹೊರಬಿದ್ದಿದ್ದಾರೆ.

Vinay Bhat
|

Updated on: Nov 15, 2023 | 8:27 AM

Share
ಭಾರತ ಕ್ರಿಕೆಟ್ ತಂಡ ಸದ್ಯ ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಬ್ಯುಸಿಯಾಗಿದೆ. ಇಂದು ಭಾರತ-ನ್ಯೂಝಿಲೆಂಡ್ ನಡುವೆ ಮೊದಲ ಸೆಮಿಫೈನಲ್ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ನೇರವಾಗಿ ಫೈನಲ್​ಗೆ ಪ್ರವೇಶಿಸಲಿದೆ. ವಿಶ್ವಕಪ್ ಮುಕ್ತಾಯವಾಗುತ್ತಿದ್ದಂತೆ, ಭಾರತ ತಂಡ ಆಸ್ಟ್ರೇಲಿಯಾ (India vs Australia) ವಿರುದ್ಧ ಟಿ20 ಸರಣಿ ಆಡಲಿದೆ.

ಭಾರತ ಕ್ರಿಕೆಟ್ ತಂಡ ಸದ್ಯ ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಬ್ಯುಸಿಯಾಗಿದೆ. ಇಂದು ಭಾರತ-ನ್ಯೂಝಿಲೆಂಡ್ ನಡುವೆ ಮೊದಲ ಸೆಮಿಫೈನಲ್ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ನೇರವಾಗಿ ಫೈನಲ್​ಗೆ ಪ್ರವೇಶಿಸಲಿದೆ. ವಿಶ್ವಕಪ್ ಮುಕ್ತಾಯವಾಗುತ್ತಿದ್ದಂತೆ, ಭಾರತ ತಂಡ ಆಸ್ಟ್ರೇಲಿಯಾ (India vs Australia) ವಿರುದ್ಧ ಟಿ20 ಸರಣಿ ಆಡಲಿದೆ.

1 / 6
ಆಸ್ಟ್ರೇಲಿಯಾ ವಿರುದ್ಧ ಭಾರತ ತವರಿನಲ್ಲಿ ಒಟ್ಟು ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಆದರೆ, ಇದಕ್ಕೂ ಮುನ್ನ ಟೀಮ್ ಇಂಡಿಯಾಕ್ಕೆ ದೊಡ್ಡ ಆಘಾತ ಉಂಟಾಗಿದೆ. ಗಾಯಗೊಂಡಿರುವ ಹಾರ್ದಿಕ್ ಪಾಂಡ್ಯ ಇದೀಗ ಈ ಸರಣಿಯಿಂದಲೂ ಹೊರಬಿದ್ದಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ಭಾರತ ತವರಿನಲ್ಲಿ ಒಟ್ಟು ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಆದರೆ, ಇದಕ್ಕೂ ಮುನ್ನ ಟೀಮ್ ಇಂಡಿಯಾಕ್ಕೆ ದೊಡ್ಡ ಆಘಾತ ಉಂಟಾಗಿದೆ. ಗಾಯಗೊಂಡಿರುವ ಹಾರ್ದಿಕ್ ಪಾಂಡ್ಯ ಇದೀಗ ಈ ಸರಣಿಯಿಂದಲೂ ಹೊರಬಿದ್ದಿದ್ದಾರೆ.

2 / 6
ಕ್ರಿಕೆಟ್ ವಿಶ್ವಕಪ್ ಫೈನಲ್‌ನ ನಾಲ್ಕು ದಿನಗಳ ನಂತರ ನವೆಂಬರ್ 23 ರಂದು ಭಾರತ-ಆಸೀಸ್ ಟಿ20 ಸರಣಿಯು ಪ್ರಾರಂಭವಾಗುತ್ತದೆ. ಆಯ್ಕೆದಾರರು ಇಷ್ಟು ದಿನ ಹಾರ್ದಿಕ್ ಚೇತರಿಕೆಗಾಗಿ ಕಾಯುತ್ತಿದ್ದರು. ಹೀಗಾಗಿ ತಂಡವನ್ನು ಪ್ರಕಟ ಮಾಡಿರಲಿಲ್ಲ. ಆದರೀಗ ಹಾರ್ದಿಕ್ ಬೇಗ ಗುಣಮುಖರಾಗುವುದಿಲ್ಲ ಎಂದು ತಿಳಿದಿದ್ದು, ತಂಡ ನವೆಂಬರ್ 15 ಬುಧವಾರ ಪ್ರಕಟವಾಗಲಿದೆ.

ಕ್ರಿಕೆಟ್ ವಿಶ್ವಕಪ್ ಫೈನಲ್‌ನ ನಾಲ್ಕು ದಿನಗಳ ನಂತರ ನವೆಂಬರ್ 23 ರಂದು ಭಾರತ-ಆಸೀಸ್ ಟಿ20 ಸರಣಿಯು ಪ್ರಾರಂಭವಾಗುತ್ತದೆ. ಆಯ್ಕೆದಾರರು ಇಷ್ಟು ದಿನ ಹಾರ್ದಿಕ್ ಚೇತರಿಕೆಗಾಗಿ ಕಾಯುತ್ತಿದ್ದರು. ಹೀಗಾಗಿ ತಂಡವನ್ನು ಪ್ರಕಟ ಮಾಡಿರಲಿಲ್ಲ. ಆದರೀಗ ಹಾರ್ದಿಕ್ ಬೇಗ ಗುಣಮುಖರಾಗುವುದಿಲ್ಲ ಎಂದು ತಿಳಿದಿದ್ದು, ತಂಡ ನವೆಂಬರ್ 15 ಬುಧವಾರ ಪ್ರಕಟವಾಗಲಿದೆ.

3 / 6
ಅಕ್ಟೋಬರ್ 19 ರಂದು ಬಾಂಗ್ಲಾದೇಶ ವಿರುದ್ಧದ ಕ್ರಿಕೆಟ್ ವಿಶ್ವಕಪ್ ಲೀಗ್ ಪಂದ್ಯದಲ್ಲಿ ಪಾಂಡ್ಯ ಗಾಯಗೊಂಡಿದ್ದರು. BCCI ವೈದ್ಯಕೀಯ ತಂಡ ಹಾರ್ದಿಕ್ ಪಾಂಡ್ಯಗೆ 6-8 ವಾರಗಳ ವಿಶ್ರಾಂತಿಗೆ ಸಲಹೆ ನೀಡಿದೆ. ಇವರ ಬದಲಿಯಾಗಿ ವಿಶ್ವಕಪ್​ಗೆ ಪ್ರಸಿದ್ಧ್ ಕೃಷ್ಣನನ್ನು ಕರೆತಂದಿದ್ದಾರೆ. ಡಿಸೆಂಬರ್‌ನಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ವೈಟ್ ಬಾಲ್ ಸರಣಿಯಲ್ಲಿ ಹಾರ್ದಿಕ್ ಪುನರಾಗಮನ ಆಗುವ ನಿರೀಕ್ಷೆ ಇದೆ.

ಅಕ್ಟೋಬರ್ 19 ರಂದು ಬಾಂಗ್ಲಾದೇಶ ವಿರುದ್ಧದ ಕ್ರಿಕೆಟ್ ವಿಶ್ವಕಪ್ ಲೀಗ್ ಪಂದ್ಯದಲ್ಲಿ ಪಾಂಡ್ಯ ಗಾಯಗೊಂಡಿದ್ದರು. BCCI ವೈದ್ಯಕೀಯ ತಂಡ ಹಾರ್ದಿಕ್ ಪಾಂಡ್ಯಗೆ 6-8 ವಾರಗಳ ವಿಶ್ರಾಂತಿಗೆ ಸಲಹೆ ನೀಡಿದೆ. ಇವರ ಬದಲಿಯಾಗಿ ವಿಶ್ವಕಪ್​ಗೆ ಪ್ರಸಿದ್ಧ್ ಕೃಷ್ಣನನ್ನು ಕರೆತಂದಿದ್ದಾರೆ. ಡಿಸೆಂಬರ್‌ನಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ವೈಟ್ ಬಾಲ್ ಸರಣಿಯಲ್ಲಿ ಹಾರ್ದಿಕ್ ಪುನರಾಗಮನ ಆಗುವ ನಿರೀಕ್ಷೆ ಇದೆ.

4 / 6
ಈ ಸರಣಿಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಇತರೆ ಸ್ಟಾರ್ ಆಟಗಾರರು ಅಲಭ್ಯರಾಗಲಿದ್ದಾರೆ. ವಿಶ್ವಕಪ್ ನಂತರ ಇವರೆಲ್ಲ ವಿರಾಮವನ್ನು ಪಡೆಯಲಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ನಾಯಕ ಯಾರು ಎಂಬ ಪ್ರಶ್ನೆ ಕೂಡ ಎದ್ದಿದೆ. ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ, ಆಯ್ಕೆದಾರರು ಸೂರ್ಯಕುಮಾರ್ ಯಾದವ್ ಅಥವಾ ರುತುರಾಜ್ ಗಾಯಕ್ವಾಡ್ ಅವರನ್ನು ಸ್ಟ್ಯಾಂಡ್-ಬೈ ಕ್ಯಾಪ್ಟನ್ ಆಗಿ ಆಯ್ಕೆಮಾಡುವ ಸಾಧ್ಯತೆ ಇದೆ.

ಈ ಸರಣಿಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಇತರೆ ಸ್ಟಾರ್ ಆಟಗಾರರು ಅಲಭ್ಯರಾಗಲಿದ್ದಾರೆ. ವಿಶ್ವಕಪ್ ನಂತರ ಇವರೆಲ್ಲ ವಿರಾಮವನ್ನು ಪಡೆಯಲಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ನಾಯಕ ಯಾರು ಎಂಬ ಪ್ರಶ್ನೆ ಕೂಡ ಎದ್ದಿದೆ. ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ, ಆಯ್ಕೆದಾರರು ಸೂರ್ಯಕುಮಾರ್ ಯಾದವ್ ಅಥವಾ ರುತುರಾಜ್ ಗಾಯಕ್ವಾಡ್ ಅವರನ್ನು ಸ್ಟ್ಯಾಂಡ್-ಬೈ ಕ್ಯಾಪ್ಟನ್ ಆಗಿ ಆಯ್ಕೆಮಾಡುವ ಸಾಧ್ಯತೆ ಇದೆ.

5 / 6
ಸೂರ್ಯಕುಮಾರ್ ಅವರು ಟಿ20 ತಂಡದ ಉಪನಾಯಕರಾಗಿದ್ದಾರೆ, ಆದರೆ ರುತುರಾಜ್ ಗಾಯಕ್ವಾಡ್ ಅವರು ಏಷ್ಯನ್ ಗೇಮ್ಸ್​ನಲ್ಲಿ ಭಾರತ ತಂಡವನ್ನು ಮುನ್ನಡೆಸಿ ಚಿನ್ನದ ಪದಕ ಗೆಲ್ಲಿಸಿಕೊಟ್ಟಿದ್ದರು. ಇದರ ನಡುವೆ ಅನುಭವಿ ವೇಗಿ ಭುವನೇಶ್ವರ್ ಕುಮಾರ್ 12 ತಿಂಗಳ ನಂತರ ಭಾರತ ತಂಡಕ್ಕೆ ಮರಳಲಿದ್ದಾರೆ. ವಿಕೆಟ್-ಕೀಪರ್ ಸಂಜು ಸ್ಯಾಮ್ಸನ್ ಹಾಗೂ ರಿಯಾನ್ ಪರಾಗ್ ಕೂಡ ಆಯ್ಕೆ ಆಗಲಿದ್ದಾರೆ ಎಂಬ ಮಾತಿದೆ.

ಸೂರ್ಯಕುಮಾರ್ ಅವರು ಟಿ20 ತಂಡದ ಉಪನಾಯಕರಾಗಿದ್ದಾರೆ, ಆದರೆ ರುತುರಾಜ್ ಗಾಯಕ್ವಾಡ್ ಅವರು ಏಷ್ಯನ್ ಗೇಮ್ಸ್​ನಲ್ಲಿ ಭಾರತ ತಂಡವನ್ನು ಮುನ್ನಡೆಸಿ ಚಿನ್ನದ ಪದಕ ಗೆಲ್ಲಿಸಿಕೊಟ್ಟಿದ್ದರು. ಇದರ ನಡುವೆ ಅನುಭವಿ ವೇಗಿ ಭುವನೇಶ್ವರ್ ಕುಮಾರ್ 12 ತಿಂಗಳ ನಂತರ ಭಾರತ ತಂಡಕ್ಕೆ ಮರಳಲಿದ್ದಾರೆ. ವಿಕೆಟ್-ಕೀಪರ್ ಸಂಜು ಸ್ಯಾಮ್ಸನ್ ಹಾಗೂ ರಿಯಾನ್ ಪರಾಗ್ ಕೂಡ ಆಯ್ಕೆ ಆಗಲಿದ್ದಾರೆ ಎಂಬ ಮಾತಿದೆ.

6 / 6
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್