AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರ್ದಿಕ್ ಪಾಂಡ್ಯ ಸಿಕ್ಸರ್​ಗೆ ಕೆಳಗೆ ಬಿದ್ದ ವಿರಾಟ್ ಕೊಹ್ಲಿಯ ದಾಖಲೆ

India vs Bangladesh, 1st T20I: ಬಾಂಗ್ಲಾದೇಶ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಮ್ಯಾಚ್​ನಲ್ಲಿ ಭಾರತ ತಂಡವು 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದ್ದು, ದೆಹಲಿಯಲ್ಲಿ ನಡೆಯಲಿರುವ 2ನೇ ಪಂದ್ಯದಲ್ಲಿ ಗೆದ್ದರೆ ಸರಣಿಯನ್ನು ವಶಪಡಿಸಿಕೊಳ್ಳಬಹುದು.

ಝಾಹಿರ್ ಯೂಸುಫ್
|

Updated on: Oct 07, 2024 | 8:30 AM

Share
ಬಾಂಗ್ಲಾದೇಶ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ (Hardik Pandya) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಗ್ವಾಲಿಯರ್​​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು 19.5 ಓವರ್​ಗಳಲ್ಲಿ 127 ರನ್​ಗಳಿಸಿ ಆಲೌಟ್ ಆಗಿತ್ತು. 128 ರನ್​ಗಳ ಗುರಿ ಪಡೆದ ಟೀಮ್ ಇಂಡಿಯಾ ಉತ್ತಮ ಪಡೆದಿರಲಿಲ್ಲ.

ಬಾಂಗ್ಲಾದೇಶ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ (Hardik Pandya) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಗ್ವಾಲಿಯರ್​​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು 19.5 ಓವರ್​ಗಳಲ್ಲಿ 127 ರನ್​ಗಳಿಸಿ ಆಲೌಟ್ ಆಗಿತ್ತು. 128 ರನ್​ಗಳ ಗುರಿ ಪಡೆದ ಟೀಮ್ ಇಂಡಿಯಾ ಉತ್ತಮ ಪಡೆದಿರಲಿಲ್ಲ.

1 / 7
ಯುವ ಸ್ಪೋಟಕ ಆರಂಭಿಕ ದಾಂಡಿಗ ಅಭಿಷೇಕ್ ಶರ್ಮಾ 16 ರನ್​ಗಳಿಸಿ ರನೌಟ್​ಗೆ ಬಲಿಯಾದರು. ಆ ಬಳಿಕ ಬಂದ ಸೂರ್ಯಕುಮಾರ್ ಯಾದವ್ ಕೇವಲ 14 ಎಸೆತಗಳಲ್ಲಿ 29 ರನ್ ಸಿಡಿಸಿ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಆರಂಭಿಕನಾಗಿ ಕಣಕ್ಕಿಳಿದ ಸಂಜು ಸ್ಯಾಮ್ಸನ್ (29) ಸಹ ಪೆವಿಲಿಯನ್​ನತ್ತ ಮುಖ ಮಾಡಿದರು.

ಯುವ ಸ್ಪೋಟಕ ಆರಂಭಿಕ ದಾಂಡಿಗ ಅಭಿಷೇಕ್ ಶರ್ಮಾ 16 ರನ್​ಗಳಿಸಿ ರನೌಟ್​ಗೆ ಬಲಿಯಾದರು. ಆ ಬಳಿಕ ಬಂದ ಸೂರ್ಯಕುಮಾರ್ ಯಾದವ್ ಕೇವಲ 14 ಎಸೆತಗಳಲ್ಲಿ 29 ರನ್ ಸಿಡಿಸಿ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಆರಂಭಿಕನಾಗಿ ಕಣಕ್ಕಿಳಿದ ಸಂಜು ಸ್ಯಾಮ್ಸನ್ (29) ಸಹ ಪೆವಿಲಿಯನ್​ನತ್ತ ಮುಖ ಮಾಡಿದರು.

2 / 7
ಈ ಹಂತದಲ್ಲಿ ಕಣಕ್ಕಿಳಿದ ಹಾರ್ದಿಕ್ ಪಾಂಡ್ಯ ಅತ್ಯಾಕರ್ಷಕ ಬ್ಯಾಟಿಂಗ್​​ನೊಂದಿಗೆ ಗಮನ ಸೆಳೆದರು. ಬಾಂಗ್ಲಾ ಬೌಲರ್​ಗಳನ್ನು ನಿರಾಯಾಸವಾಗಿ ಎದುರಿಸಿದ ಪಾಂಡ್ಯ ಕೇವಲ 16 ಎಸೆತಗಳಲ್ಲಿ 4 ಫೋರ್ ಹಾಗೂ 2 ಭರ್ಜರಿ ಸಿಕ್ಸ್​ನೊಂದಿಗೆ ಅಜೇಯ 39 ರನ್ ಚಚ್ಚಿದರು.

ಈ ಹಂತದಲ್ಲಿ ಕಣಕ್ಕಿಳಿದ ಹಾರ್ದಿಕ್ ಪಾಂಡ್ಯ ಅತ್ಯಾಕರ್ಷಕ ಬ್ಯಾಟಿಂಗ್​​ನೊಂದಿಗೆ ಗಮನ ಸೆಳೆದರು. ಬಾಂಗ್ಲಾ ಬೌಲರ್​ಗಳನ್ನು ನಿರಾಯಾಸವಾಗಿ ಎದುರಿಸಿದ ಪಾಂಡ್ಯ ಕೇವಲ 16 ಎಸೆತಗಳಲ್ಲಿ 4 ಫೋರ್ ಹಾಗೂ 2 ಭರ್ಜರಿ ಸಿಕ್ಸ್​ನೊಂದಿಗೆ ಅಜೇಯ 39 ರನ್ ಚಚ್ಚಿದರು.

3 / 7
ಅದರಲ್ಲೂ ತಂಡದ ಗೆಲುವಿಗೆ ಕೇವಲ 1 ರನ್​ ಅವಶ್ಯಕತೆಯಿದ್ದಾಗ ತಸ್ಕಿನ್ ಅಹ್ಮದ್ ಎಸೆತದಲ್ಲಿ ಹಾರ್ದಿಕ್ ಪಾಂಡ್ಯ ಭರ್ಜರಿ ಸಿಕ್ಸರ್ ಸಿಡಿಸಿ ಪಂದ್ಯವನ್ನು ಅಂತ್ಯಗೊಳಿಸಿದರು. ಇದರೊಂದಿಗೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದು ಪಾಂಡ್ಯ ಪಾಲಾಯಿತು.

ಅದರಲ್ಲೂ ತಂಡದ ಗೆಲುವಿಗೆ ಕೇವಲ 1 ರನ್​ ಅವಶ್ಯಕತೆಯಿದ್ದಾಗ ತಸ್ಕಿನ್ ಅಹ್ಮದ್ ಎಸೆತದಲ್ಲಿ ಹಾರ್ದಿಕ್ ಪಾಂಡ್ಯ ಭರ್ಜರಿ ಸಿಕ್ಸರ್ ಸಿಡಿಸಿ ಪಂದ್ಯವನ್ನು ಅಂತ್ಯಗೊಳಿಸಿದರು. ಇದರೊಂದಿಗೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದು ಪಾಂಡ್ಯ ಪಾಲಾಯಿತು.

4 / 7
ಅಂದರೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಸಿಕ್ಸ್ ಸಿಡಿಸಿ ಅತೀ ಹೆಚ್ಚು ಬಾರಿ ಪಂದ್ಯವನ್ನು ಕೊನೆಗೊಳಿಸಿದ ವಿಶೇಷ ದಾಖಲೆಯೊಂದು ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. ಕಿಂಗ್ ಕೊಹ್ಲಿ ಒಟ್ಟು 4 ಬಾರಿ ಸಿಕ್ಸ್ ಬಾರಿಸಿ ಪಂದ್ಯವನ್ನು ಅಂತ್ಯಗೊಳಿಸಿದ್ದರು.

ಅಂದರೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಸಿಕ್ಸ್ ಸಿಡಿಸಿ ಅತೀ ಹೆಚ್ಚು ಬಾರಿ ಪಂದ್ಯವನ್ನು ಕೊನೆಗೊಳಿಸಿದ ವಿಶೇಷ ದಾಖಲೆಯೊಂದು ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. ಕಿಂಗ್ ಕೊಹ್ಲಿ ಒಟ್ಟು 4 ಬಾರಿ ಸಿಕ್ಸ್ ಬಾರಿಸಿ ಪಂದ್ಯವನ್ನು ಅಂತ್ಯಗೊಳಿಸಿದ್ದರು.

5 / 7
ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಹಾರ್ದಿಕ್ ಪಾಂಡ್ಯ ಯಶಸ್ವಿಯಾಗಿದ್ದಾರೆ. ಬಾಂಗ್ಲಾ ವಿರುದ್ಧ ಸಿಕ್ಸ್​ ಸಿಡಿಸಿ ಪಂದ್ಯವನ್ನು ಅಂತ್ಯಗೊಳಿಸುವುದರೊಂದಿಗೆ, ಟೀಮ್ ಇಂಡಿಯಾ ಪರ ಅತ್ಯಧಿಕ ಬಾರಿ ಸಿಕ್ಸ್ ಬಾರಿಸಿ ಮ್ಯಾಚ್ ಕೊನೆಗೊಳಿಸಿದ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಕುಂಗ್​ಫು ಪಾಂಡ್ಯ ಈವರೆಗೆ 5 ಪಂದ್ಯಗಳನ್ನು ಸಿಕ್ಸ್​ನೊಂದಿಗೆ ಅಂತ್ಯಗೊಳಿಸಿದ್ದಾರೆ.

ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಹಾರ್ದಿಕ್ ಪಾಂಡ್ಯ ಯಶಸ್ವಿಯಾಗಿದ್ದಾರೆ. ಬಾಂಗ್ಲಾ ವಿರುದ್ಧ ಸಿಕ್ಸ್​ ಸಿಡಿಸಿ ಪಂದ್ಯವನ್ನು ಅಂತ್ಯಗೊಳಿಸುವುದರೊಂದಿಗೆ, ಟೀಮ್ ಇಂಡಿಯಾ ಪರ ಅತ್ಯಧಿಕ ಬಾರಿ ಸಿಕ್ಸ್ ಬಾರಿಸಿ ಮ್ಯಾಚ್ ಕೊನೆಗೊಳಿಸಿದ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಕುಂಗ್​ಫು ಪಾಂಡ್ಯ ಈವರೆಗೆ 5 ಪಂದ್ಯಗಳನ್ನು ಸಿಕ್ಸ್​ನೊಂದಿಗೆ ಅಂತ್ಯಗೊಳಿಸಿದ್ದಾರೆ.

6 / 7
ಈ ಮೂಲಕ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ಅಪರೂಪದ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಹಾರ್ದಿಕ್ ಪಾಂಡ್ಯ ಯಶಸ್ವಿಯಾಗಿದ್ದಾರೆ. ಇನ್ನು ಪಾಂಡ್ಯ ಅವರ ಈ ಸ್ಪೋಟಕ ಬ್ಯಾಟಿಂಗ್​ನೊಂದಿಗೆ ಟೀಮ್ ಇಂಡಿಯಾ 11.5 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 132 ರನ್ ಬಾರಿಸಿ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ.

ಈ ಮೂಲಕ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ಅಪರೂಪದ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಹಾರ್ದಿಕ್ ಪಾಂಡ್ಯ ಯಶಸ್ವಿಯಾಗಿದ್ದಾರೆ. ಇನ್ನು ಪಾಂಡ್ಯ ಅವರ ಈ ಸ್ಪೋಟಕ ಬ್ಯಾಟಿಂಗ್​ನೊಂದಿಗೆ ಟೀಮ್ ಇಂಡಿಯಾ 11.5 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 132 ರನ್ ಬಾರಿಸಿ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ.

7 / 7
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ